Homeಅಂತರಾಷ್ಟ್ರೀಯಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

- Advertisement -
- Advertisement -

ಉತ್ತರಪ್ರದೇಶದ ಬಾರಾಬಂಕಿ ಜಿಲ್ಲೆಯಿಂದ ಸುಮಾರು 20ರಿಂದ 25 ಯುವಕರು ಇಸ್ರೇಲ್‌ನಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಈಗ ಅವರು ಇಸ್ರೇಲ್ -ಇರಾನ್ ಸಂಘರ್ಷದಿಂದಾಗಿ ಪ್ರತಿದಿನ ಕ್ಷಿಪಣಿ ದಾಳಿಯ ಅಪಾಯವನ್ನು ಎದುರಿಸಬೇಕಾಗಿದೆ. ಭಾರತದಲ್ಲಿರುವ ಈ ಕಾರ್ಮಿಕರ ಕುಟುಂಬಗಳು ಕೂಡ ಈಗ ಆತಂಕದೊಂದಿಗೆ ಬದುಕು ದೂಡುವಂತಾಗಿದೆ.

ಪ್ರತಿ ಬಾರಿ ಇಸ್ರೆಲ್‌ನಲ್ಲಿರುವ ತಮ್ಮವರಿಗೆ ಕರೆ ಮಾಡುವಾಗ ಅಲ್ಲಿನ ಸೈರನ್‌ಗಳು ಅಥವಾ ಸ್ಫೋಟಗಳು ಕೇಳುತ್ತವೆ. ಇದರಿಂದಾಗಿ ನಮಗೆ ಭಯವಾಗುತ್ತಿದೆ ಎಂದು ದಿವಾನ್ ಪೊಲೀಸ್‌ ಠಾಣೆ ವ್ಯಾಪ್ತಿಯ ಸಾಲೆಹ್ ನಗರ ಕಾಲೋನಿಯ ನಿವಾಸಿ ರಾಜು ಸಿಂಗ್ ಹೇಳಿದರು.

ಇಸ್ರೇಲ್‌ನಲ್ಲಿ ಕೆಲಸಮಾಡುತ್ತಿರುವವರಲ್ಲಿ ಸಾಲೆಹ್ ನಗರದಿಂದ ರಾಜು ಸಿಂಗ್ ಅವರ ಸೋದರಳಿಯ ಕೆ.ಪಿ.ಸಿಂಗ್, ಜನೀಂದ್ರ ಪ್ರತಾಪ್‌ ಸಿಂಗ್ (ಅವರ ಚಿಕ್ಕಪ್ಪನ ಮಗ), ಲಲಿತ್ ಸಿಂಗ್ (ಅವರ ಅಣ್ಣನ ಮಗ), ಮತ್ತು ನೆರೆಹೊರೆಯವರಾದ ಮೋನೋ, ಸಂಜಯ್, ಮಂಗಳ್ ಸಿಂಗ್ ಮತ್ತು ದಿನೇಶ್ ಸಿಂಗ್‌ ಸೇರಿದಂತೆ ಇತರರು ಇದ್ದಾರೆ. ಒಟ್ಟಾರೆ ಗ್ರಾಮದಿಂದ ಸುಮಾರು 20ರಿಂದ 25 ಯುವಕರು ಕಳೆದ ಒಂದು ವರ್ಷದಿಂದ ಕಾರ್ಮಿಕರಾಗಿ ಇಸ್ರೇಲ್‌ನಲ್ಲಿದ್ದಾರೆ.

ಅವರ ಮಾಸಿಕ ಸಂಬಳ 1 ಲಕ್ಷದಿಂದ 1.5 ಲಕ್ಷ ರೂಪಾಯಿಗಳವರೆಗೆ ಇದೆ. ಸಂಪಾದನೆ ಚೆನ್ನಾಗಿದೆ. ಆದರೆ ಪರಿಸ್ಥಿತಿ ತುಂಬಾ ಅಪಾಯಕಾರಿಯಾಗಿದೆ ಎಂದು ರಾಜು ಸಿಂಗ್ ವಿವರಿಸುತ್ತಾರೆ.

ತಮ್ಮ ಮಗ ರಾಕೇಶ್ ಕೂಡ ಸುಮಾರು ಒಂದು ವರ್ಷದಿಂದ ಇಸ್ರೇಲ್‌ನಲ್ಲಿದ್ದಾನೆ ಎಂದು ಕಾಲೋನಿಯ ಮತ್ತೊಬ್ಬ ನಿವಾಸಿ ವಿನೋದ್ ಸಿಂಗ್‌ ಹೇಳಿದರು.

ನನ್ನ ಮಗ ರಾಕೇಶ್ ನನಗೆ ಕರೆ ಮಾಡಿ ತಾವು ಎಲ್ಲರೂ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾನೆ ಎಂದು ವಿನೋದ್ ಸಿಂಗ್‌ ಹೇಳಿದರು. “ಸೈರನ್‌ಗಳು ಮೊಳಗಿದಾಗಲೆಲ್ಲಾ ನಾವು ತಕ್ಷಣ ಬಂಕರ್‌ಗಳಿಗೆ ಓಡುತ್ತೇವೆ. ಇಲ್ಲಿ ಪ್ರತಿದಿನ ಸುಮಾರು150ರಿಂದ 200 ಕ್ಷಿಪಣಿಗಳು ಬೀಳುತ್ತಿವೆ ಎಂದು ತನ್ನ ಮಗ ತಿಳಿಸಿದ್ದಾನೆ” ಎಂದು ವಿನೋದ್‌ ಮಾಹಿತಿ ನೀಡಿದರು.

ರಾಕೇಶ್‌ ಅವರು ಭಾರತದಲ್ಲಿರುವ ತನ್ನ ಕುಟುಂಬದೊಂದಿಗೆ ಕೆಲವು ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಅವರ ಇಸ್ರೇಲ್‌ನ ಉದ್ಯೋಗದಾತರು ಕೆಲಸ ಸ್ಥಳದಿಂದ ವಿಡಿಯೋಗಳನ್ನು ಕಳುಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದ್ದಾರೆ. ಇವರು ಕಳುಹಿಸಿರುವ ಕೆಲ ವಿಡಿಯೋಗಳಲ್ಲಿ ಬಾಂಬ್‌ ದಾಳಿಗಳು ಮತ್ತು ಕ್ಷಿಪಣಿ ದಾಳಿ ನಡೆಯುತ್ತಿರುವುದು ನೋಡಬಹುದಾಗಿದೆ.

ಇವರೆಲ್ಲಾ ಕಳೆದ 4 ದಿನಗಳಿಂದ ಕೆಲಸಕ್ಕೆ ಹೋಗುವುದನ್ನು ನಿಲ್ಲಿಸಿದ್ದಾರೆ. ಯುದ್ದ ಎಂದರೆ ಯುದ್ಧ. ಅವರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದರೂ, ನಮಗೆ ನಮ್ಮದೆ ಆದ ಭಯವಿದೆ ಎಂದು ರಾಜು ಸಿಂಗ್ ಹೇಳಿದರು.

ಇಸ್ರೇಲ್‌ಗೆ ಭಾರತದ ಈ ಯುವ ಕಾರ್ಮಿಕರು ಹೋಗಿರುವುದು ಭಾರತ ಮತ್ತು ಇಸ್ರೇಲ್‌ ಸರಕಾರಗಳ ನಡುವಿನ ದೊಡ್ಡ ಒಪ್ಪಂದದ ಭಾಗವಾಗಿದೆ. ಇಸ್ರೇಲ್‌ನಲ್ಲಿ ಭಾರತೀಯ ನಿರ್ಮಾಣ ಕಾರ್ಮಿಕರನ್ನುನೇಮಿಸಿಕೊಳ್ಳಲು ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಭಾರತದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ಉತ್ತರಪ್ರದೇಶದ ಹಲವಾರು ಜಿಲ್ಲೆಗಳಿಂದ ನುರಿತ ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಿದೆ.

ತಮ್ಮ ಮಕ್ಕಳು ಅಲ್ಲಿ ಉತ್ತಮ ಸಂಬಳವನ್ನು ಗಳಿಸುತ್ತಾರೆ ಎಂದು ಕುಟಂಬಗಳು ಹೆಮ್ಮೆಪಡುತ್ತಿದ್ದರೂ, ನಡೆಯುತ್ತಿರುವ ಸಂಘರ್ಷದ ನಡುವೆ ಅವರ ಸುರಕ್ಷತೆಯ ಬಗ್ಗೆ ಚಿಂತಿಸುತ್ತಿದ್ದಾರೆ.

ಇಸ್ರೇಲ್-ಇರಾನ್ ಯುದ್ಧಕ್ಕೆ ಕಾರಣವೇನು? ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...