Homeಅಂತರಾಷ್ಟ್ರೀಯಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

- Advertisement -
- Advertisement -

ಉತ್ತರಪ್ರದೇಶದ ಬಾರಾಬಂಕಿ ಜಿಲ್ಲೆಯಿಂದ ಸುಮಾರು 20ರಿಂದ 25 ಯುವಕರು ಇಸ್ರೇಲ್‌ನಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಈಗ ಅವರು ಇಸ್ರೇಲ್ -ಇರಾನ್ ಸಂಘರ್ಷದಿಂದಾಗಿ ಪ್ರತಿದಿನ ಕ್ಷಿಪಣಿ ದಾಳಿಯ ಅಪಾಯವನ್ನು ಎದುರಿಸಬೇಕಾಗಿದೆ. ಭಾರತದಲ್ಲಿರುವ ಈ ಕಾರ್ಮಿಕರ ಕುಟುಂಬಗಳು ಕೂಡ ಈಗ ಆತಂಕದೊಂದಿಗೆ ಬದುಕು ದೂಡುವಂತಾಗಿದೆ.

ಪ್ರತಿ ಬಾರಿ ಇಸ್ರೆಲ್‌ನಲ್ಲಿರುವ ತಮ್ಮವರಿಗೆ ಕರೆ ಮಾಡುವಾಗ ಅಲ್ಲಿನ ಸೈರನ್‌ಗಳು ಅಥವಾ ಸ್ಫೋಟಗಳು ಕೇಳುತ್ತವೆ. ಇದರಿಂದಾಗಿ ನಮಗೆ ಭಯವಾಗುತ್ತಿದೆ ಎಂದು ದಿವಾನ್ ಪೊಲೀಸ್‌ ಠಾಣೆ ವ್ಯಾಪ್ತಿಯ ಸಾಲೆಹ್ ನಗರ ಕಾಲೋನಿಯ ನಿವಾಸಿ ರಾಜು ಸಿಂಗ್ ಹೇಳಿದರು.

ಇಸ್ರೇಲ್‌ನಲ್ಲಿ ಕೆಲಸಮಾಡುತ್ತಿರುವವರಲ್ಲಿ ಸಾಲೆಹ್ ನಗರದಿಂದ ರಾಜು ಸಿಂಗ್ ಅವರ ಸೋದರಳಿಯ ಕೆ.ಪಿ.ಸಿಂಗ್, ಜನೀಂದ್ರ ಪ್ರತಾಪ್‌ ಸಿಂಗ್ (ಅವರ ಚಿಕ್ಕಪ್ಪನ ಮಗ), ಲಲಿತ್ ಸಿಂಗ್ (ಅವರ ಅಣ್ಣನ ಮಗ), ಮತ್ತು ನೆರೆಹೊರೆಯವರಾದ ಮೋನೋ, ಸಂಜಯ್, ಮಂಗಳ್ ಸಿಂಗ್ ಮತ್ತು ದಿನೇಶ್ ಸಿಂಗ್‌ ಸೇರಿದಂತೆ ಇತರರು ಇದ್ದಾರೆ. ಒಟ್ಟಾರೆ ಗ್ರಾಮದಿಂದ ಸುಮಾರು 20ರಿಂದ 25 ಯುವಕರು ಕಳೆದ ಒಂದು ವರ್ಷದಿಂದ ಕಾರ್ಮಿಕರಾಗಿ ಇಸ್ರೇಲ್‌ನಲ್ಲಿದ್ದಾರೆ.

ಅವರ ಮಾಸಿಕ ಸಂಬಳ 1 ಲಕ್ಷದಿಂದ 1.5 ಲಕ್ಷ ರೂಪಾಯಿಗಳವರೆಗೆ ಇದೆ. ಸಂಪಾದನೆ ಚೆನ್ನಾಗಿದೆ. ಆದರೆ ಪರಿಸ್ಥಿತಿ ತುಂಬಾ ಅಪಾಯಕಾರಿಯಾಗಿದೆ ಎಂದು ರಾಜು ಸಿಂಗ್ ವಿವರಿಸುತ್ತಾರೆ.

ತಮ್ಮ ಮಗ ರಾಕೇಶ್ ಕೂಡ ಸುಮಾರು ಒಂದು ವರ್ಷದಿಂದ ಇಸ್ರೇಲ್‌ನಲ್ಲಿದ್ದಾನೆ ಎಂದು ಕಾಲೋನಿಯ ಮತ್ತೊಬ್ಬ ನಿವಾಸಿ ವಿನೋದ್ ಸಿಂಗ್‌ ಹೇಳಿದರು.

ನನ್ನ ಮಗ ರಾಕೇಶ್ ನನಗೆ ಕರೆ ಮಾಡಿ ತಾವು ಎಲ್ಲರೂ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾನೆ ಎಂದು ವಿನೋದ್ ಸಿಂಗ್‌ ಹೇಳಿದರು. “ಸೈರನ್‌ಗಳು ಮೊಳಗಿದಾಗಲೆಲ್ಲಾ ನಾವು ತಕ್ಷಣ ಬಂಕರ್‌ಗಳಿಗೆ ಓಡುತ್ತೇವೆ. ಇಲ್ಲಿ ಪ್ರತಿದಿನ ಸುಮಾರು150ರಿಂದ 200 ಕ್ಷಿಪಣಿಗಳು ಬೀಳುತ್ತಿವೆ ಎಂದು ತನ್ನ ಮಗ ತಿಳಿಸಿದ್ದಾನೆ” ಎಂದು ವಿನೋದ್‌ ಮಾಹಿತಿ ನೀಡಿದರು.

ರಾಕೇಶ್‌ ಅವರು ಭಾರತದಲ್ಲಿರುವ ತನ್ನ ಕುಟುಂಬದೊಂದಿಗೆ ಕೆಲವು ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಅವರ ಇಸ್ರೇಲ್‌ನ ಉದ್ಯೋಗದಾತರು ಕೆಲಸ ಸ್ಥಳದಿಂದ ವಿಡಿಯೋಗಳನ್ನು ಕಳುಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದ್ದಾರೆ. ಇವರು ಕಳುಹಿಸಿರುವ ಕೆಲ ವಿಡಿಯೋಗಳಲ್ಲಿ ಬಾಂಬ್‌ ದಾಳಿಗಳು ಮತ್ತು ಕ್ಷಿಪಣಿ ದಾಳಿ ನಡೆಯುತ್ತಿರುವುದು ನೋಡಬಹುದಾಗಿದೆ.

ಇವರೆಲ್ಲಾ ಕಳೆದ 4 ದಿನಗಳಿಂದ ಕೆಲಸಕ್ಕೆ ಹೋಗುವುದನ್ನು ನಿಲ್ಲಿಸಿದ್ದಾರೆ. ಯುದ್ದ ಎಂದರೆ ಯುದ್ಧ. ಅವರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದರೂ, ನಮಗೆ ನಮ್ಮದೆ ಆದ ಭಯವಿದೆ ಎಂದು ರಾಜು ಸಿಂಗ್ ಹೇಳಿದರು.

ಇಸ್ರೇಲ್‌ಗೆ ಭಾರತದ ಈ ಯುವ ಕಾರ್ಮಿಕರು ಹೋಗಿರುವುದು ಭಾರತ ಮತ್ತು ಇಸ್ರೇಲ್‌ ಸರಕಾರಗಳ ನಡುವಿನ ದೊಡ್ಡ ಒಪ್ಪಂದದ ಭಾಗವಾಗಿದೆ. ಇಸ್ರೇಲ್‌ನಲ್ಲಿ ಭಾರತೀಯ ನಿರ್ಮಾಣ ಕಾರ್ಮಿಕರನ್ನುನೇಮಿಸಿಕೊಳ್ಳಲು ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಭಾರತದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ಉತ್ತರಪ್ರದೇಶದ ಹಲವಾರು ಜಿಲ್ಲೆಗಳಿಂದ ನುರಿತ ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಿದೆ.

ತಮ್ಮ ಮಕ್ಕಳು ಅಲ್ಲಿ ಉತ್ತಮ ಸಂಬಳವನ್ನು ಗಳಿಸುತ್ತಾರೆ ಎಂದು ಕುಟಂಬಗಳು ಹೆಮ್ಮೆಪಡುತ್ತಿದ್ದರೂ, ನಡೆಯುತ್ತಿರುವ ಸಂಘರ್ಷದ ನಡುವೆ ಅವರ ಸುರಕ್ಷತೆಯ ಬಗ್ಗೆ ಚಿಂತಿಸುತ್ತಿದ್ದಾರೆ.

ಇಸ್ರೇಲ್-ಇರಾನ್ ಯುದ್ಧಕ್ಕೆ ಕಾರಣವೇನು? ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...