Homeಅಂತರಾಷ್ಟ್ರೀಯಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

- Advertisement -
- Advertisement -

ಉತ್ತರಪ್ರದೇಶದ ಬಾರಾಬಂಕಿ ಜಿಲ್ಲೆಯಿಂದ ಸುಮಾರು 20ರಿಂದ 25 ಯುವಕರು ಇಸ್ರೇಲ್‌ನಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಈಗ ಅವರು ಇಸ್ರೇಲ್ -ಇರಾನ್ ಸಂಘರ್ಷದಿಂದಾಗಿ ಪ್ರತಿದಿನ ಕ್ಷಿಪಣಿ ದಾಳಿಯ ಅಪಾಯವನ್ನು ಎದುರಿಸಬೇಕಾಗಿದೆ. ಭಾರತದಲ್ಲಿರುವ ಈ ಕಾರ್ಮಿಕರ ಕುಟುಂಬಗಳು ಕೂಡ ಈಗ ಆತಂಕದೊಂದಿಗೆ ಬದುಕು ದೂಡುವಂತಾಗಿದೆ.

ಪ್ರತಿ ಬಾರಿ ಇಸ್ರೆಲ್‌ನಲ್ಲಿರುವ ತಮ್ಮವರಿಗೆ ಕರೆ ಮಾಡುವಾಗ ಅಲ್ಲಿನ ಸೈರನ್‌ಗಳು ಅಥವಾ ಸ್ಫೋಟಗಳು ಕೇಳುತ್ತವೆ. ಇದರಿಂದಾಗಿ ನಮಗೆ ಭಯವಾಗುತ್ತಿದೆ ಎಂದು ದಿವಾನ್ ಪೊಲೀಸ್‌ ಠಾಣೆ ವ್ಯಾಪ್ತಿಯ ಸಾಲೆಹ್ ನಗರ ಕಾಲೋನಿಯ ನಿವಾಸಿ ರಾಜು ಸಿಂಗ್ ಹೇಳಿದರು.

ಇಸ್ರೇಲ್‌ನಲ್ಲಿ ಕೆಲಸಮಾಡುತ್ತಿರುವವರಲ್ಲಿ ಸಾಲೆಹ್ ನಗರದಿಂದ ರಾಜು ಸಿಂಗ್ ಅವರ ಸೋದರಳಿಯ ಕೆ.ಪಿ.ಸಿಂಗ್, ಜನೀಂದ್ರ ಪ್ರತಾಪ್‌ ಸಿಂಗ್ (ಅವರ ಚಿಕ್ಕಪ್ಪನ ಮಗ), ಲಲಿತ್ ಸಿಂಗ್ (ಅವರ ಅಣ್ಣನ ಮಗ), ಮತ್ತು ನೆರೆಹೊರೆಯವರಾದ ಮೋನೋ, ಸಂಜಯ್, ಮಂಗಳ್ ಸಿಂಗ್ ಮತ್ತು ದಿನೇಶ್ ಸಿಂಗ್‌ ಸೇರಿದಂತೆ ಇತರರು ಇದ್ದಾರೆ. ಒಟ್ಟಾರೆ ಗ್ರಾಮದಿಂದ ಸುಮಾರು 20ರಿಂದ 25 ಯುವಕರು ಕಳೆದ ಒಂದು ವರ್ಷದಿಂದ ಕಾರ್ಮಿಕರಾಗಿ ಇಸ್ರೇಲ್‌ನಲ್ಲಿದ್ದಾರೆ.

ಅವರ ಮಾಸಿಕ ಸಂಬಳ 1 ಲಕ್ಷದಿಂದ 1.5 ಲಕ್ಷ ರೂಪಾಯಿಗಳವರೆಗೆ ಇದೆ. ಸಂಪಾದನೆ ಚೆನ್ನಾಗಿದೆ. ಆದರೆ ಪರಿಸ್ಥಿತಿ ತುಂಬಾ ಅಪಾಯಕಾರಿಯಾಗಿದೆ ಎಂದು ರಾಜು ಸಿಂಗ್ ವಿವರಿಸುತ್ತಾರೆ.

ತಮ್ಮ ಮಗ ರಾಕೇಶ್ ಕೂಡ ಸುಮಾರು ಒಂದು ವರ್ಷದಿಂದ ಇಸ್ರೇಲ್‌ನಲ್ಲಿದ್ದಾನೆ ಎಂದು ಕಾಲೋನಿಯ ಮತ್ತೊಬ್ಬ ನಿವಾಸಿ ವಿನೋದ್ ಸಿಂಗ್‌ ಹೇಳಿದರು.

ನನ್ನ ಮಗ ರಾಕೇಶ್ ನನಗೆ ಕರೆ ಮಾಡಿ ತಾವು ಎಲ್ಲರೂ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾನೆ ಎಂದು ವಿನೋದ್ ಸಿಂಗ್‌ ಹೇಳಿದರು. “ಸೈರನ್‌ಗಳು ಮೊಳಗಿದಾಗಲೆಲ್ಲಾ ನಾವು ತಕ್ಷಣ ಬಂಕರ್‌ಗಳಿಗೆ ಓಡುತ್ತೇವೆ. ಇಲ್ಲಿ ಪ್ರತಿದಿನ ಸುಮಾರು150ರಿಂದ 200 ಕ್ಷಿಪಣಿಗಳು ಬೀಳುತ್ತಿವೆ ಎಂದು ತನ್ನ ಮಗ ತಿಳಿಸಿದ್ದಾನೆ” ಎಂದು ವಿನೋದ್‌ ಮಾಹಿತಿ ನೀಡಿದರು.

ರಾಕೇಶ್‌ ಅವರು ಭಾರತದಲ್ಲಿರುವ ತನ್ನ ಕುಟುಂಬದೊಂದಿಗೆ ಕೆಲವು ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಅವರ ಇಸ್ರೇಲ್‌ನ ಉದ್ಯೋಗದಾತರು ಕೆಲಸ ಸ್ಥಳದಿಂದ ವಿಡಿಯೋಗಳನ್ನು ಕಳುಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದ್ದಾರೆ. ಇವರು ಕಳುಹಿಸಿರುವ ಕೆಲ ವಿಡಿಯೋಗಳಲ್ಲಿ ಬಾಂಬ್‌ ದಾಳಿಗಳು ಮತ್ತು ಕ್ಷಿಪಣಿ ದಾಳಿ ನಡೆಯುತ್ತಿರುವುದು ನೋಡಬಹುದಾಗಿದೆ.

ಇವರೆಲ್ಲಾ ಕಳೆದ 4 ದಿನಗಳಿಂದ ಕೆಲಸಕ್ಕೆ ಹೋಗುವುದನ್ನು ನಿಲ್ಲಿಸಿದ್ದಾರೆ. ಯುದ್ದ ಎಂದರೆ ಯುದ್ಧ. ಅವರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದರೂ, ನಮಗೆ ನಮ್ಮದೆ ಆದ ಭಯವಿದೆ ಎಂದು ರಾಜು ಸಿಂಗ್ ಹೇಳಿದರು.

ಇಸ್ರೇಲ್‌ಗೆ ಭಾರತದ ಈ ಯುವ ಕಾರ್ಮಿಕರು ಹೋಗಿರುವುದು ಭಾರತ ಮತ್ತು ಇಸ್ರೇಲ್‌ ಸರಕಾರಗಳ ನಡುವಿನ ದೊಡ್ಡ ಒಪ್ಪಂದದ ಭಾಗವಾಗಿದೆ. ಇಸ್ರೇಲ್‌ನಲ್ಲಿ ಭಾರತೀಯ ನಿರ್ಮಾಣ ಕಾರ್ಮಿಕರನ್ನುನೇಮಿಸಿಕೊಳ್ಳಲು ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಭಾರತದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ಉತ್ತರಪ್ರದೇಶದ ಹಲವಾರು ಜಿಲ್ಲೆಗಳಿಂದ ನುರಿತ ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಿದೆ.

ತಮ್ಮ ಮಕ್ಕಳು ಅಲ್ಲಿ ಉತ್ತಮ ಸಂಬಳವನ್ನು ಗಳಿಸುತ್ತಾರೆ ಎಂದು ಕುಟಂಬಗಳು ಹೆಮ್ಮೆಪಡುತ್ತಿದ್ದರೂ, ನಡೆಯುತ್ತಿರುವ ಸಂಘರ್ಷದ ನಡುವೆ ಅವರ ಸುರಕ್ಷತೆಯ ಬಗ್ಗೆ ಚಿಂತಿಸುತ್ತಿದ್ದಾರೆ.

ಇಸ್ರೇಲ್-ಇರಾನ್ ಯುದ್ಧಕ್ಕೆ ಕಾರಣವೇನು? ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...