Homeಅಂತರಾಷ್ಟ್ರೀಯಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

- Advertisement -
- Advertisement -

ಉತ್ತರಪ್ರದೇಶದ ಬಾರಾಬಂಕಿ ಜಿಲ್ಲೆಯಿಂದ ಸುಮಾರು 20ರಿಂದ 25 ಯುವಕರು ಇಸ್ರೇಲ್‌ನಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಈಗ ಅವರು ಇಸ್ರೇಲ್ -ಇರಾನ್ ಸಂಘರ್ಷದಿಂದಾಗಿ ಪ್ರತಿದಿನ ಕ್ಷಿಪಣಿ ದಾಳಿಯ ಅಪಾಯವನ್ನು ಎದುರಿಸಬೇಕಾಗಿದೆ. ಭಾರತದಲ್ಲಿರುವ ಈ ಕಾರ್ಮಿಕರ ಕುಟುಂಬಗಳು ಕೂಡ ಈಗ ಆತಂಕದೊಂದಿಗೆ ಬದುಕು ದೂಡುವಂತಾಗಿದೆ.

ಪ್ರತಿ ಬಾರಿ ಇಸ್ರೆಲ್‌ನಲ್ಲಿರುವ ತಮ್ಮವರಿಗೆ ಕರೆ ಮಾಡುವಾಗ ಅಲ್ಲಿನ ಸೈರನ್‌ಗಳು ಅಥವಾ ಸ್ಫೋಟಗಳು ಕೇಳುತ್ತವೆ. ಇದರಿಂದಾಗಿ ನಮಗೆ ಭಯವಾಗುತ್ತಿದೆ ಎಂದು ದಿವಾನ್ ಪೊಲೀಸ್‌ ಠಾಣೆ ವ್ಯಾಪ್ತಿಯ ಸಾಲೆಹ್ ನಗರ ಕಾಲೋನಿಯ ನಿವಾಸಿ ರಾಜು ಸಿಂಗ್ ಹೇಳಿದರು.

ಇಸ್ರೇಲ್‌ನಲ್ಲಿ ಕೆಲಸಮಾಡುತ್ತಿರುವವರಲ್ಲಿ ಸಾಲೆಹ್ ನಗರದಿಂದ ರಾಜು ಸಿಂಗ್ ಅವರ ಸೋದರಳಿಯ ಕೆ.ಪಿ.ಸಿಂಗ್, ಜನೀಂದ್ರ ಪ್ರತಾಪ್‌ ಸಿಂಗ್ (ಅವರ ಚಿಕ್ಕಪ್ಪನ ಮಗ), ಲಲಿತ್ ಸಿಂಗ್ (ಅವರ ಅಣ್ಣನ ಮಗ), ಮತ್ತು ನೆರೆಹೊರೆಯವರಾದ ಮೋನೋ, ಸಂಜಯ್, ಮಂಗಳ್ ಸಿಂಗ್ ಮತ್ತು ದಿನೇಶ್ ಸಿಂಗ್‌ ಸೇರಿದಂತೆ ಇತರರು ಇದ್ದಾರೆ. ಒಟ್ಟಾರೆ ಗ್ರಾಮದಿಂದ ಸುಮಾರು 20ರಿಂದ 25 ಯುವಕರು ಕಳೆದ ಒಂದು ವರ್ಷದಿಂದ ಕಾರ್ಮಿಕರಾಗಿ ಇಸ್ರೇಲ್‌ನಲ್ಲಿದ್ದಾರೆ.

ಅವರ ಮಾಸಿಕ ಸಂಬಳ 1 ಲಕ್ಷದಿಂದ 1.5 ಲಕ್ಷ ರೂಪಾಯಿಗಳವರೆಗೆ ಇದೆ. ಸಂಪಾದನೆ ಚೆನ್ನಾಗಿದೆ. ಆದರೆ ಪರಿಸ್ಥಿತಿ ತುಂಬಾ ಅಪಾಯಕಾರಿಯಾಗಿದೆ ಎಂದು ರಾಜು ಸಿಂಗ್ ವಿವರಿಸುತ್ತಾರೆ.

ತಮ್ಮ ಮಗ ರಾಕೇಶ್ ಕೂಡ ಸುಮಾರು ಒಂದು ವರ್ಷದಿಂದ ಇಸ್ರೇಲ್‌ನಲ್ಲಿದ್ದಾನೆ ಎಂದು ಕಾಲೋನಿಯ ಮತ್ತೊಬ್ಬ ನಿವಾಸಿ ವಿನೋದ್ ಸಿಂಗ್‌ ಹೇಳಿದರು.

ನನ್ನ ಮಗ ರಾಕೇಶ್ ನನಗೆ ಕರೆ ಮಾಡಿ ತಾವು ಎಲ್ಲರೂ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾನೆ ಎಂದು ವಿನೋದ್ ಸಿಂಗ್‌ ಹೇಳಿದರು. “ಸೈರನ್‌ಗಳು ಮೊಳಗಿದಾಗಲೆಲ್ಲಾ ನಾವು ತಕ್ಷಣ ಬಂಕರ್‌ಗಳಿಗೆ ಓಡುತ್ತೇವೆ. ಇಲ್ಲಿ ಪ್ರತಿದಿನ ಸುಮಾರು150ರಿಂದ 200 ಕ್ಷಿಪಣಿಗಳು ಬೀಳುತ್ತಿವೆ ಎಂದು ತನ್ನ ಮಗ ತಿಳಿಸಿದ್ದಾನೆ” ಎಂದು ವಿನೋದ್‌ ಮಾಹಿತಿ ನೀಡಿದರು.

ರಾಕೇಶ್‌ ಅವರು ಭಾರತದಲ್ಲಿರುವ ತನ್ನ ಕುಟುಂಬದೊಂದಿಗೆ ಕೆಲವು ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಅವರ ಇಸ್ರೇಲ್‌ನ ಉದ್ಯೋಗದಾತರು ಕೆಲಸ ಸ್ಥಳದಿಂದ ವಿಡಿಯೋಗಳನ್ನು ಕಳುಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದ್ದಾರೆ. ಇವರು ಕಳುಹಿಸಿರುವ ಕೆಲ ವಿಡಿಯೋಗಳಲ್ಲಿ ಬಾಂಬ್‌ ದಾಳಿಗಳು ಮತ್ತು ಕ್ಷಿಪಣಿ ದಾಳಿ ನಡೆಯುತ್ತಿರುವುದು ನೋಡಬಹುದಾಗಿದೆ.

ಇವರೆಲ್ಲಾ ಕಳೆದ 4 ದಿನಗಳಿಂದ ಕೆಲಸಕ್ಕೆ ಹೋಗುವುದನ್ನು ನಿಲ್ಲಿಸಿದ್ದಾರೆ. ಯುದ್ದ ಎಂದರೆ ಯುದ್ಧ. ಅವರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದರೂ, ನಮಗೆ ನಮ್ಮದೆ ಆದ ಭಯವಿದೆ ಎಂದು ರಾಜು ಸಿಂಗ್ ಹೇಳಿದರು.

ಇಸ್ರೇಲ್‌ಗೆ ಭಾರತದ ಈ ಯುವ ಕಾರ್ಮಿಕರು ಹೋಗಿರುವುದು ಭಾರತ ಮತ್ತು ಇಸ್ರೇಲ್‌ ಸರಕಾರಗಳ ನಡುವಿನ ದೊಡ್ಡ ಒಪ್ಪಂದದ ಭಾಗವಾಗಿದೆ. ಇಸ್ರೇಲ್‌ನಲ್ಲಿ ಭಾರತೀಯ ನಿರ್ಮಾಣ ಕಾರ್ಮಿಕರನ್ನುನೇಮಿಸಿಕೊಳ್ಳಲು ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಭಾರತದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ಉತ್ತರಪ್ರದೇಶದ ಹಲವಾರು ಜಿಲ್ಲೆಗಳಿಂದ ನುರಿತ ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಿದೆ.

ತಮ್ಮ ಮಕ್ಕಳು ಅಲ್ಲಿ ಉತ್ತಮ ಸಂಬಳವನ್ನು ಗಳಿಸುತ್ತಾರೆ ಎಂದು ಕುಟಂಬಗಳು ಹೆಮ್ಮೆಪಡುತ್ತಿದ್ದರೂ, ನಡೆಯುತ್ತಿರುವ ಸಂಘರ್ಷದ ನಡುವೆ ಅವರ ಸುರಕ್ಷತೆಯ ಬಗ್ಗೆ ಚಿಂತಿಸುತ್ತಿದ್ದಾರೆ.

ಇಸ್ರೇಲ್-ಇರಾನ್ ಯುದ್ಧಕ್ಕೆ ಕಾರಣವೇನು? ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...