Homeಅಂತರಾಷ್ಟ್ರೀಯಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

- Advertisement -
- Advertisement -

ಉತ್ತರಪ್ರದೇಶದ ಬಾರಾಬಂಕಿ ಜಿಲ್ಲೆಯಿಂದ ಸುಮಾರು 20ರಿಂದ 25 ಯುವಕರು ಇಸ್ರೇಲ್‌ನಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಈಗ ಅವರು ಇಸ್ರೇಲ್ -ಇರಾನ್ ಸಂಘರ್ಷದಿಂದಾಗಿ ಪ್ರತಿದಿನ ಕ್ಷಿಪಣಿ ದಾಳಿಯ ಅಪಾಯವನ್ನು ಎದುರಿಸಬೇಕಾಗಿದೆ. ಭಾರತದಲ್ಲಿರುವ ಈ ಕಾರ್ಮಿಕರ ಕುಟುಂಬಗಳು ಕೂಡ ಈಗ ಆತಂಕದೊಂದಿಗೆ ಬದುಕು ದೂಡುವಂತಾಗಿದೆ.

ಪ್ರತಿ ಬಾರಿ ಇಸ್ರೆಲ್‌ನಲ್ಲಿರುವ ತಮ್ಮವರಿಗೆ ಕರೆ ಮಾಡುವಾಗ ಅಲ್ಲಿನ ಸೈರನ್‌ಗಳು ಅಥವಾ ಸ್ಫೋಟಗಳು ಕೇಳುತ್ತವೆ. ಇದರಿಂದಾಗಿ ನಮಗೆ ಭಯವಾಗುತ್ತಿದೆ ಎಂದು ದಿವಾನ್ ಪೊಲೀಸ್‌ ಠಾಣೆ ವ್ಯಾಪ್ತಿಯ ಸಾಲೆಹ್ ನಗರ ಕಾಲೋನಿಯ ನಿವಾಸಿ ರಾಜು ಸಿಂಗ್ ಹೇಳಿದರು.

ಇಸ್ರೇಲ್‌ನಲ್ಲಿ ಕೆಲಸಮಾಡುತ್ತಿರುವವರಲ್ಲಿ ಸಾಲೆಹ್ ನಗರದಿಂದ ರಾಜು ಸಿಂಗ್ ಅವರ ಸೋದರಳಿಯ ಕೆ.ಪಿ.ಸಿಂಗ್, ಜನೀಂದ್ರ ಪ್ರತಾಪ್‌ ಸಿಂಗ್ (ಅವರ ಚಿಕ್ಕಪ್ಪನ ಮಗ), ಲಲಿತ್ ಸಿಂಗ್ (ಅವರ ಅಣ್ಣನ ಮಗ), ಮತ್ತು ನೆರೆಹೊರೆಯವರಾದ ಮೋನೋ, ಸಂಜಯ್, ಮಂಗಳ್ ಸಿಂಗ್ ಮತ್ತು ದಿನೇಶ್ ಸಿಂಗ್‌ ಸೇರಿದಂತೆ ಇತರರು ಇದ್ದಾರೆ. ಒಟ್ಟಾರೆ ಗ್ರಾಮದಿಂದ ಸುಮಾರು 20ರಿಂದ 25 ಯುವಕರು ಕಳೆದ ಒಂದು ವರ್ಷದಿಂದ ಕಾರ್ಮಿಕರಾಗಿ ಇಸ್ರೇಲ್‌ನಲ್ಲಿದ್ದಾರೆ.

ಅವರ ಮಾಸಿಕ ಸಂಬಳ 1 ಲಕ್ಷದಿಂದ 1.5 ಲಕ್ಷ ರೂಪಾಯಿಗಳವರೆಗೆ ಇದೆ. ಸಂಪಾದನೆ ಚೆನ್ನಾಗಿದೆ. ಆದರೆ ಪರಿಸ್ಥಿತಿ ತುಂಬಾ ಅಪಾಯಕಾರಿಯಾಗಿದೆ ಎಂದು ರಾಜು ಸಿಂಗ್ ವಿವರಿಸುತ್ತಾರೆ.

ತಮ್ಮ ಮಗ ರಾಕೇಶ್ ಕೂಡ ಸುಮಾರು ಒಂದು ವರ್ಷದಿಂದ ಇಸ್ರೇಲ್‌ನಲ್ಲಿದ್ದಾನೆ ಎಂದು ಕಾಲೋನಿಯ ಮತ್ತೊಬ್ಬ ನಿವಾಸಿ ವಿನೋದ್ ಸಿಂಗ್‌ ಹೇಳಿದರು.

ನನ್ನ ಮಗ ರಾಕೇಶ್ ನನಗೆ ಕರೆ ಮಾಡಿ ತಾವು ಎಲ್ಲರೂ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾನೆ ಎಂದು ವಿನೋದ್ ಸಿಂಗ್‌ ಹೇಳಿದರು. “ಸೈರನ್‌ಗಳು ಮೊಳಗಿದಾಗಲೆಲ್ಲಾ ನಾವು ತಕ್ಷಣ ಬಂಕರ್‌ಗಳಿಗೆ ಓಡುತ್ತೇವೆ. ಇಲ್ಲಿ ಪ್ರತಿದಿನ ಸುಮಾರು150ರಿಂದ 200 ಕ್ಷಿಪಣಿಗಳು ಬೀಳುತ್ತಿವೆ ಎಂದು ತನ್ನ ಮಗ ತಿಳಿಸಿದ್ದಾನೆ” ಎಂದು ವಿನೋದ್‌ ಮಾಹಿತಿ ನೀಡಿದರು.

ರಾಕೇಶ್‌ ಅವರು ಭಾರತದಲ್ಲಿರುವ ತನ್ನ ಕುಟುಂಬದೊಂದಿಗೆ ಕೆಲವು ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಅವರ ಇಸ್ರೇಲ್‌ನ ಉದ್ಯೋಗದಾತರು ಕೆಲಸ ಸ್ಥಳದಿಂದ ವಿಡಿಯೋಗಳನ್ನು ಕಳುಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದ್ದಾರೆ. ಇವರು ಕಳುಹಿಸಿರುವ ಕೆಲ ವಿಡಿಯೋಗಳಲ್ಲಿ ಬಾಂಬ್‌ ದಾಳಿಗಳು ಮತ್ತು ಕ್ಷಿಪಣಿ ದಾಳಿ ನಡೆಯುತ್ತಿರುವುದು ನೋಡಬಹುದಾಗಿದೆ.

ಇವರೆಲ್ಲಾ ಕಳೆದ 4 ದಿನಗಳಿಂದ ಕೆಲಸಕ್ಕೆ ಹೋಗುವುದನ್ನು ನಿಲ್ಲಿಸಿದ್ದಾರೆ. ಯುದ್ದ ಎಂದರೆ ಯುದ್ಧ. ಅವರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದರೂ, ನಮಗೆ ನಮ್ಮದೆ ಆದ ಭಯವಿದೆ ಎಂದು ರಾಜು ಸಿಂಗ್ ಹೇಳಿದರು.

ಇಸ್ರೇಲ್‌ಗೆ ಭಾರತದ ಈ ಯುವ ಕಾರ್ಮಿಕರು ಹೋಗಿರುವುದು ಭಾರತ ಮತ್ತು ಇಸ್ರೇಲ್‌ ಸರಕಾರಗಳ ನಡುವಿನ ದೊಡ್ಡ ಒಪ್ಪಂದದ ಭಾಗವಾಗಿದೆ. ಇಸ್ರೇಲ್‌ನಲ್ಲಿ ಭಾರತೀಯ ನಿರ್ಮಾಣ ಕಾರ್ಮಿಕರನ್ನುನೇಮಿಸಿಕೊಳ್ಳಲು ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಭಾರತದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ಉತ್ತರಪ್ರದೇಶದ ಹಲವಾರು ಜಿಲ್ಲೆಗಳಿಂದ ನುರಿತ ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಿದೆ.

ತಮ್ಮ ಮಕ್ಕಳು ಅಲ್ಲಿ ಉತ್ತಮ ಸಂಬಳವನ್ನು ಗಳಿಸುತ್ತಾರೆ ಎಂದು ಕುಟಂಬಗಳು ಹೆಮ್ಮೆಪಡುತ್ತಿದ್ದರೂ, ನಡೆಯುತ್ತಿರುವ ಸಂಘರ್ಷದ ನಡುವೆ ಅವರ ಸುರಕ್ಷತೆಯ ಬಗ್ಗೆ ಚಿಂತಿಸುತ್ತಿದ್ದಾರೆ.

ಇಸ್ರೇಲ್-ಇರಾನ್ ಯುದ್ಧಕ್ಕೆ ಕಾರಣವೇನು? ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...