Homeಅಂತರಾಷ್ಟ್ರೀಯಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

- Advertisement -
- Advertisement -

ಉತ್ತರಪ್ರದೇಶದ ಬಾರಾಬಂಕಿ ಜಿಲ್ಲೆಯಿಂದ ಸುಮಾರು 20ರಿಂದ 25 ಯುವಕರು ಇಸ್ರೇಲ್‌ನಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಈಗ ಅವರು ಇಸ್ರೇಲ್ -ಇರಾನ್ ಸಂಘರ್ಷದಿಂದಾಗಿ ಪ್ರತಿದಿನ ಕ್ಷಿಪಣಿ ದಾಳಿಯ ಅಪಾಯವನ್ನು ಎದುರಿಸಬೇಕಾಗಿದೆ. ಭಾರತದಲ್ಲಿರುವ ಈ ಕಾರ್ಮಿಕರ ಕುಟುಂಬಗಳು ಕೂಡ ಈಗ ಆತಂಕದೊಂದಿಗೆ ಬದುಕು ದೂಡುವಂತಾಗಿದೆ.

ಪ್ರತಿ ಬಾರಿ ಇಸ್ರೆಲ್‌ನಲ್ಲಿರುವ ತಮ್ಮವರಿಗೆ ಕರೆ ಮಾಡುವಾಗ ಅಲ್ಲಿನ ಸೈರನ್‌ಗಳು ಅಥವಾ ಸ್ಫೋಟಗಳು ಕೇಳುತ್ತವೆ. ಇದರಿಂದಾಗಿ ನಮಗೆ ಭಯವಾಗುತ್ತಿದೆ ಎಂದು ದಿವಾನ್ ಪೊಲೀಸ್‌ ಠಾಣೆ ವ್ಯಾಪ್ತಿಯ ಸಾಲೆಹ್ ನಗರ ಕಾಲೋನಿಯ ನಿವಾಸಿ ರಾಜು ಸಿಂಗ್ ಹೇಳಿದರು.

ಇಸ್ರೇಲ್‌ನಲ್ಲಿ ಕೆಲಸಮಾಡುತ್ತಿರುವವರಲ್ಲಿ ಸಾಲೆಹ್ ನಗರದಿಂದ ರಾಜು ಸಿಂಗ್ ಅವರ ಸೋದರಳಿಯ ಕೆ.ಪಿ.ಸಿಂಗ್, ಜನೀಂದ್ರ ಪ್ರತಾಪ್‌ ಸಿಂಗ್ (ಅವರ ಚಿಕ್ಕಪ್ಪನ ಮಗ), ಲಲಿತ್ ಸಿಂಗ್ (ಅವರ ಅಣ್ಣನ ಮಗ), ಮತ್ತು ನೆರೆಹೊರೆಯವರಾದ ಮೋನೋ, ಸಂಜಯ್, ಮಂಗಳ್ ಸಿಂಗ್ ಮತ್ತು ದಿನೇಶ್ ಸಿಂಗ್‌ ಸೇರಿದಂತೆ ಇತರರು ಇದ್ದಾರೆ. ಒಟ್ಟಾರೆ ಗ್ರಾಮದಿಂದ ಸುಮಾರು 20ರಿಂದ 25 ಯುವಕರು ಕಳೆದ ಒಂದು ವರ್ಷದಿಂದ ಕಾರ್ಮಿಕರಾಗಿ ಇಸ್ರೇಲ್‌ನಲ್ಲಿದ್ದಾರೆ.

ಅವರ ಮಾಸಿಕ ಸಂಬಳ 1 ಲಕ್ಷದಿಂದ 1.5 ಲಕ್ಷ ರೂಪಾಯಿಗಳವರೆಗೆ ಇದೆ. ಸಂಪಾದನೆ ಚೆನ್ನಾಗಿದೆ. ಆದರೆ ಪರಿಸ್ಥಿತಿ ತುಂಬಾ ಅಪಾಯಕಾರಿಯಾಗಿದೆ ಎಂದು ರಾಜು ಸಿಂಗ್ ವಿವರಿಸುತ್ತಾರೆ.

ತಮ್ಮ ಮಗ ರಾಕೇಶ್ ಕೂಡ ಸುಮಾರು ಒಂದು ವರ್ಷದಿಂದ ಇಸ್ರೇಲ್‌ನಲ್ಲಿದ್ದಾನೆ ಎಂದು ಕಾಲೋನಿಯ ಮತ್ತೊಬ್ಬ ನಿವಾಸಿ ವಿನೋದ್ ಸಿಂಗ್‌ ಹೇಳಿದರು.

ನನ್ನ ಮಗ ರಾಕೇಶ್ ನನಗೆ ಕರೆ ಮಾಡಿ ತಾವು ಎಲ್ಲರೂ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾನೆ ಎಂದು ವಿನೋದ್ ಸಿಂಗ್‌ ಹೇಳಿದರು. “ಸೈರನ್‌ಗಳು ಮೊಳಗಿದಾಗಲೆಲ್ಲಾ ನಾವು ತಕ್ಷಣ ಬಂಕರ್‌ಗಳಿಗೆ ಓಡುತ್ತೇವೆ. ಇಲ್ಲಿ ಪ್ರತಿದಿನ ಸುಮಾರು150ರಿಂದ 200 ಕ್ಷಿಪಣಿಗಳು ಬೀಳುತ್ತಿವೆ ಎಂದು ತನ್ನ ಮಗ ತಿಳಿಸಿದ್ದಾನೆ” ಎಂದು ವಿನೋದ್‌ ಮಾಹಿತಿ ನೀಡಿದರು.

ರಾಕೇಶ್‌ ಅವರು ಭಾರತದಲ್ಲಿರುವ ತನ್ನ ಕುಟುಂಬದೊಂದಿಗೆ ಕೆಲವು ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಅವರ ಇಸ್ರೇಲ್‌ನ ಉದ್ಯೋಗದಾತರು ಕೆಲಸ ಸ್ಥಳದಿಂದ ವಿಡಿಯೋಗಳನ್ನು ಕಳುಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದ್ದಾರೆ. ಇವರು ಕಳುಹಿಸಿರುವ ಕೆಲ ವಿಡಿಯೋಗಳಲ್ಲಿ ಬಾಂಬ್‌ ದಾಳಿಗಳು ಮತ್ತು ಕ್ಷಿಪಣಿ ದಾಳಿ ನಡೆಯುತ್ತಿರುವುದು ನೋಡಬಹುದಾಗಿದೆ.

ಇವರೆಲ್ಲಾ ಕಳೆದ 4 ದಿನಗಳಿಂದ ಕೆಲಸಕ್ಕೆ ಹೋಗುವುದನ್ನು ನಿಲ್ಲಿಸಿದ್ದಾರೆ. ಯುದ್ದ ಎಂದರೆ ಯುದ್ಧ. ಅವರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದರೂ, ನಮಗೆ ನಮ್ಮದೆ ಆದ ಭಯವಿದೆ ಎಂದು ರಾಜು ಸಿಂಗ್ ಹೇಳಿದರು.

ಇಸ್ರೇಲ್‌ಗೆ ಭಾರತದ ಈ ಯುವ ಕಾರ್ಮಿಕರು ಹೋಗಿರುವುದು ಭಾರತ ಮತ್ತು ಇಸ್ರೇಲ್‌ ಸರಕಾರಗಳ ನಡುವಿನ ದೊಡ್ಡ ಒಪ್ಪಂದದ ಭಾಗವಾಗಿದೆ. ಇಸ್ರೇಲ್‌ನಲ್ಲಿ ಭಾರತೀಯ ನಿರ್ಮಾಣ ಕಾರ್ಮಿಕರನ್ನುನೇಮಿಸಿಕೊಳ್ಳಲು ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಭಾರತದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ಉತ್ತರಪ್ರದೇಶದ ಹಲವಾರು ಜಿಲ್ಲೆಗಳಿಂದ ನುರಿತ ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಿದೆ.

ತಮ್ಮ ಮಕ್ಕಳು ಅಲ್ಲಿ ಉತ್ತಮ ಸಂಬಳವನ್ನು ಗಳಿಸುತ್ತಾರೆ ಎಂದು ಕುಟಂಬಗಳು ಹೆಮ್ಮೆಪಡುತ್ತಿದ್ದರೂ, ನಡೆಯುತ್ತಿರುವ ಸಂಘರ್ಷದ ನಡುವೆ ಅವರ ಸುರಕ್ಷತೆಯ ಬಗ್ಗೆ ಚಿಂತಿಸುತ್ತಿದ್ದಾರೆ.

ಇಸ್ರೇಲ್-ಇರಾನ್ ಯುದ್ಧಕ್ಕೆ ಕಾರಣವೇನು? ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...