Homeಮುಖಪುಟಸ್ಲಂ ತೆರವು ಕಾರ್ಯಾಚರಣೆ; 'ಘರ್ ಬಚಾವೋ, ಬಿಜೆಪಿ ಹಟಾವೋ' ಅಭಿಯಾನ ಆರಂಭಿಸಿದ ಎಎಪಿ

ಸ್ಲಂ ತೆರವು ಕಾರ್ಯಾಚರಣೆ; ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನ ಆರಂಭಿಸಿದ ಎಎಪಿ

- Advertisement -
- Advertisement -

ರಾಷ್ಟ್ರ ರಾಜಧಾನಿಯ ಸ್ಲಂ ಕ್ಲಸ್ಟರ್‌ಗಳಿಗೆ ಭೇಟಿ ನೀಡಿದ ಎಎಪಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್, ‘ಕೊಳೆಗೇರಿ ನಿವಾಸಿಗಳನ್ನು ಒಕ್ಕಲೆಬ್ಬಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ’ ಎಂದು ಭಾನುವಾರ ಆರೋಪಿಸಿದ್ದಾರೆ.

ದೆಹಲಿಯ ಕೊಳೆಗೇರಿ ನಿವಾಸಿಗಳನ್ನು ನಿರಾಶ್ರಿತರನ್ನಾಗಿ ಮಾಡುವ ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಎಎಪಿಯ ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನವನ್ನು ಪ್ರಾರಂಭಿಸಿದೆ.
ಅತಿಶಿ ಅವರು ಬಿ ಆರ್ ಕ್ಯಾಂಪ್ ಕೊಳೆಗೇರಿಗೆ ಭೇಟಿ ನೀಡಿದಾಗ ಅವರ ಸಂಪುಟ ಸಹೋದ್ಯೋಗಿ ಭಾರದ್ವಾಜ್ ಅವರು ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್ ಬಳಿಯ ಕೊಳೆಗೇರಿ ನಿವಾಸಿಗಳನ್ನು ಭೇಟಿ ಮಾಡಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೆಹಲಿಯ ಕೊಳಚೆ ಪ್ರದೇಶಗಳನ್ನು ನೆಲಸಮ ಮಾಡಲು ಮತ್ತು ಅದರ ನಿವಾಸಿಗಳನ್ನು ಅವರ ಮನೆಗಳಿಂದ 40 ರಿಂದ 50 ಕಿಮೀ ದೂರಕ್ಕೆ ಸ್ಥಳಾಂತರಿಸಲು ಪಿತೂರಿ ನಡೆಸುತ್ತಿದೆ. ಎಎಪಿ ಮತ್ತು (ದೆಹಲಿ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ (ಸ್ಲಂ ನಿವಾಸಿಗಳು) ನಿಂತಿದ್ದಾರೆ’ ಎಂದು ಅತಿಶಿ ಹೇಳಿದರು.

ಬಿಆರ್‌ ಕ್ಯಾಂಪ್‌ನ ಜನರಿಗೆ ಈಗಿರುವ ಮನೆಗಳಲ್ಲೇ ಫ್ಲಾಟ್‌ಗಳು ಸಿಗುವುದಿಲ್ಲವೋ ಅಲ್ಲಿಯವರೆಗೆ ಒಂದೇ ಒಂದು ಮನೆಯನ್ನು ಡಿಡಿಎ ಮುಟ್ಟಲು ಬಿಡುವುದಿಲ್ಲ ಎಂದು ಸಚಿವರು ಹೇಳಿದರು.

‘ನಾವು ಬುಲ್ಡೋಜರ್‌ಗಳ ಮುಂದೆ ನಿಲ್ಲಬೇಕೇ ಅಥವಾ ನ್ಯಾಯಾಲಯದಿಂದ ಆದೇಶವನ್ನು ಪಡೆಯಬೇಕೇ, ಆಮ್ ಆದ್ಮಿ ಪಕ್ಷವು ಬಿಆರ್ ಕ್ಯಾಂಪ್‌ನ ಸ್ಲಂಗಳಲ್ಲಿ ವಾಸಿಸುವ ಜನರನ್ನು ನಿರಾಶ್ರಿತರಾಗಲು ಬಿಡುವುದಿಲ್ಲ. ಸ್ಲಂ ನಿವಾಸಿಗಳ ಬಗ್ಗೆ ಬಿಜೆಪಿ ನಾಚಿಕೆಪಡುತ್ತದೆ, ಅದಕ್ಕಾಗಿಯೇ ಅವರು ಬುಲ್ಡೋಜರ್ ಬಳಸುತ್ತಿದ್ದಾರೆ’ ಎಂದು ಅವರು ವಾಗ್ದಾಳಿ ನಡೆಸಿದರು.

ಬಿಜೆಪಿ ನೇತೃತ್ವದ ಡಿಡಿಎ, ಸ್ಲಂ ನಿವಾಸಿಗಳನ್ನು ನರೇಲಾ ಮತ್ತು ಕಾಕ್ರೋಲಾದಲ್ಲಿ 50 ಕಿ.ಮೀ ದೂರಕ್ಕೆ ಸ್ಥಳಾಂತರಿಸಲು ಒತ್ತಾಯಿಸುತ್ತಿದೆ. ಅವರ ಉದ್ಯೋಗಗಳು ಮತ್ತು ಅವರ ಮಕ್ಕಳ ಶಾಲೆಗಳಿಂದ ಅವರನ್ನು ಮೈಲುಗಳಷ್ಟು ದೂರ ತಳ್ಳುತ್ತಿದೆ ಎಂದು ಅವರು ಹೇಳಿದರು.

ಇದೇ ರೀತಿಯ ಮಾತನಾಡಿದ ಭಾರದ್ವಾಜ್, ಇಲ್ಲಿನ ನಿವಾಸಿಗಳು ಚಾಲಕರು, ಸೇವಕರು, ಅಡುಗೆ ಸೇರಿದಂತೆ ಇತ್ಯಾದಿ ಕೆಲಸಗಳನ್ನು ಮಾಡುತ್ತಾ ದೆಹಲಿಯ ಜೆಜೆ ಕ್ಲಸ್ಟರ್‌ಗಳಲ್ಲಿ ತಮ್ಮ ಕುಟುಂಬಗಳೊಂದಿಗೆ ವಾಸಿಸುತ್ತಿದ್ದಾರೆ ಎಂದು ಹೇಳಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಈ ಜನರನ್ನು (ಸ್ಲಂ ನಿವಾಸಿಗಳನ್ನು) ಅವರ ಮನೆಗಳಿಂದ ಹೊರಹಾಕಲು ಅವರ ವಿರುದ್ಧ ಪಿತೂರಿ ನಡೆಸುತ್ತಿದೆ. ಕಾನೂನಿನ ಪ್ರಕಾರ, ಅಧಿಕಾರಿಗಳು ಅವರಿಗೆ ಸರಿಯಾದ ಮನೆಗಳನ್ನು ನೀಡದೆ, ಪಟ್ಟಿ ಮಾಡಲಾದ ಕ್ಲಸ್ಟರ್ ಅನ್ನು ಕೆಡವಲು ಸಾಧ್ಯವಿಲ್ಲ. ಬಿಜೆಪಿ ಮಾಡುತ್ತಿರುವುದು ಕಾನೂನುಬಾಹಿರ ಮತ್ತು ಅಮಾನವೀಯ’ ಎಂದು ಆರೋಪಿಸಿದರು.

ಕಾನೂನಿನ ಪ್ರಕಾರ ಕೊಳೆಗೇರಿ ನಿವಾಸಿಗಳಿಗೆ ಇನ್-ಸಿಟು ಹೌಸ್ ಒದಗಿಸುವವರೆಗೆ ದೆಹಲಿಯಲ್ಲಿ ಯಾವುದೇ ಜೆಜೆ ಕ್ಲಸ್ಟರ್ ಅನ್ನು ಕೆಡವಲು ಆದೇಶ ನೀಡದಂತೆ ಭಾರದ್ವಾಜ್ ಅವರು ನ್ಯಾಯಾಂಗವನ್ನು ಒತ್ತಾಯಿಸಿದರು. ತಮ್ಮ ಕಳವಳವನ್ನು ವ್ಯಕ್ತಪಡಿಸಿದ ಸಚಿವರು, ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್‌ನ ಸ್ಲಂ ಕ್ಲಸ್ಟರ್‌ ಜನಗಳಿಗೆ ನೋಟಿಸ್ ನೀಡಿರುವ ರೈಲ್ವೇ, ಜನರು ತಾವಾಗಿಯೇ ಸ್ಥಳಾಂತರಿಸಬೇಕು ಎಂದು ಹೇಳಿದೆ. ಆದರೆಮ ಅವರ ಪುನರ್ವಸತಿ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿದೆ’ ಎಂದರು.

‘ಸುಂದರ್ ನರ್ಸರಿ, ತುಘಲಕಾಬಾದ್, ಮೆಹ್ರೌಲಿ, ವಸಂತ್ ವಿಹಾರ್ ಮತ್ತು ಪ್ರಿಯಾಂಕಾ ಕಾಲೋನಿಯಲ್ಲಿ ಕೇಂದ್ರ ಸರ್ಕಾರದ ಏಜೆನ್ಸಿಗಳು ಅಸಂಖ್ಯಾತ ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ’ ಎಂದು ಭಾರದ್ವಾಜ್ ಹೇಳಿದರು.

ಕಳೆದ ಕೆಲವು ತಿಂಗಳುಗಳಿಂದ ಬಿಜೆಪಿ ಆಡಳಿತದಲ್ಲಿರುವ ಕೇಂದ್ರ ಸರ್ಕಾರದ ಸಂಸ್ಥೆಗಳಾದ ಎಎಸ್ಐ, ರೈಲ್ವೇ, ಡಿಡಿಎ, ಭೂ ಮತ್ತು ಅಭಿವೃದ್ಧಿ ಸಂಸ್ಥೆಗಳು ತಮ್ಮ ಸ್ವಾಮ್ಯದ ಜಮೀನುಗಳಲ್ಲಿರುವ ಜೆಜೆ ಕ್ಲಸ್ಟರ್‌ಗಳನ್ನು ಕೆಡವಲು ‘ಸಂಚು’ ನಡೆಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಆರೋಪಿಸಿದರು.

‘ಈ ಜನರು ತಮ್ಮ ಚಿಕ್ಕ ಮಕ್ಕಳೊಂದಿಗೆ ಇಲ್ಲಿ ವಾಸಿಸುತ್ತಿದ್ದಾರೆ, ಆ ಮಕ್ಕಳು ಹತ್ತಿರದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿತ್ತಾರೆ. ಆ ಮಹಿಳೆಯರು ಹತ್ತಿರದ ಮನೆಗಳಲ್ಲಿ ಕೆಲಸ ಮಾಡುತ್ತಾರೆ, ಪುರುಷರು ಹತ್ತಿರದ ಮಾರುಕಟ್ಟೆಗಳಲ್ಲಿ ಕೆಲಸ ಮಾಡುತ್ತಾರೆ. ಈ ಜನರು ಈಗ ಎಲ್ಲಿಗೆ ಹೋಗುತ್ತಾರೆ’ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ; ಐದು ವರ್ಷಗಳಲ್ಲಿ ಕಾಂಗ್ರೆಸ್ ತೊರೆದ ಪ್ರಮುಖ ನಾಯಕರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...