Homeಮುಖಪುಟಸ್ಲಂ ತೆರವು ಕಾರ್ಯಾಚರಣೆ; 'ಘರ್ ಬಚಾವೋ, ಬಿಜೆಪಿ ಹಟಾವೋ' ಅಭಿಯಾನ ಆರಂಭಿಸಿದ ಎಎಪಿ

ಸ್ಲಂ ತೆರವು ಕಾರ್ಯಾಚರಣೆ; ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನ ಆರಂಭಿಸಿದ ಎಎಪಿ

- Advertisement -
- Advertisement -

ರಾಷ್ಟ್ರ ರಾಜಧಾನಿಯ ಸ್ಲಂ ಕ್ಲಸ್ಟರ್‌ಗಳಿಗೆ ಭೇಟಿ ನೀಡಿದ ಎಎಪಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್, ‘ಕೊಳೆಗೇರಿ ನಿವಾಸಿಗಳನ್ನು ಒಕ್ಕಲೆಬ್ಬಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ’ ಎಂದು ಭಾನುವಾರ ಆರೋಪಿಸಿದ್ದಾರೆ.

ದೆಹಲಿಯ ಕೊಳೆಗೇರಿ ನಿವಾಸಿಗಳನ್ನು ನಿರಾಶ್ರಿತರನ್ನಾಗಿ ಮಾಡುವ ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಎಎಪಿಯ ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನವನ್ನು ಪ್ರಾರಂಭಿಸಿದೆ.
ಅತಿಶಿ ಅವರು ಬಿ ಆರ್ ಕ್ಯಾಂಪ್ ಕೊಳೆಗೇರಿಗೆ ಭೇಟಿ ನೀಡಿದಾಗ ಅವರ ಸಂಪುಟ ಸಹೋದ್ಯೋಗಿ ಭಾರದ್ವಾಜ್ ಅವರು ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್ ಬಳಿಯ ಕೊಳೆಗೇರಿ ನಿವಾಸಿಗಳನ್ನು ಭೇಟಿ ಮಾಡಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೆಹಲಿಯ ಕೊಳಚೆ ಪ್ರದೇಶಗಳನ್ನು ನೆಲಸಮ ಮಾಡಲು ಮತ್ತು ಅದರ ನಿವಾಸಿಗಳನ್ನು ಅವರ ಮನೆಗಳಿಂದ 40 ರಿಂದ 50 ಕಿಮೀ ದೂರಕ್ಕೆ ಸ್ಥಳಾಂತರಿಸಲು ಪಿತೂರಿ ನಡೆಸುತ್ತಿದೆ. ಎಎಪಿ ಮತ್ತು (ದೆಹಲಿ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ (ಸ್ಲಂ ನಿವಾಸಿಗಳು) ನಿಂತಿದ್ದಾರೆ’ ಎಂದು ಅತಿಶಿ ಹೇಳಿದರು.

ಬಿಆರ್‌ ಕ್ಯಾಂಪ್‌ನ ಜನರಿಗೆ ಈಗಿರುವ ಮನೆಗಳಲ್ಲೇ ಫ್ಲಾಟ್‌ಗಳು ಸಿಗುವುದಿಲ್ಲವೋ ಅಲ್ಲಿಯವರೆಗೆ ಒಂದೇ ಒಂದು ಮನೆಯನ್ನು ಡಿಡಿಎ ಮುಟ್ಟಲು ಬಿಡುವುದಿಲ್ಲ ಎಂದು ಸಚಿವರು ಹೇಳಿದರು.

‘ನಾವು ಬುಲ್ಡೋಜರ್‌ಗಳ ಮುಂದೆ ನಿಲ್ಲಬೇಕೇ ಅಥವಾ ನ್ಯಾಯಾಲಯದಿಂದ ಆದೇಶವನ್ನು ಪಡೆಯಬೇಕೇ, ಆಮ್ ಆದ್ಮಿ ಪಕ್ಷವು ಬಿಆರ್ ಕ್ಯಾಂಪ್‌ನ ಸ್ಲಂಗಳಲ್ಲಿ ವಾಸಿಸುವ ಜನರನ್ನು ನಿರಾಶ್ರಿತರಾಗಲು ಬಿಡುವುದಿಲ್ಲ. ಸ್ಲಂ ನಿವಾಸಿಗಳ ಬಗ್ಗೆ ಬಿಜೆಪಿ ನಾಚಿಕೆಪಡುತ್ತದೆ, ಅದಕ್ಕಾಗಿಯೇ ಅವರು ಬುಲ್ಡೋಜರ್ ಬಳಸುತ್ತಿದ್ದಾರೆ’ ಎಂದು ಅವರು ವಾಗ್ದಾಳಿ ನಡೆಸಿದರು.

ಬಿಜೆಪಿ ನೇತೃತ್ವದ ಡಿಡಿಎ, ಸ್ಲಂ ನಿವಾಸಿಗಳನ್ನು ನರೇಲಾ ಮತ್ತು ಕಾಕ್ರೋಲಾದಲ್ಲಿ 50 ಕಿ.ಮೀ ದೂರಕ್ಕೆ ಸ್ಥಳಾಂತರಿಸಲು ಒತ್ತಾಯಿಸುತ್ತಿದೆ. ಅವರ ಉದ್ಯೋಗಗಳು ಮತ್ತು ಅವರ ಮಕ್ಕಳ ಶಾಲೆಗಳಿಂದ ಅವರನ್ನು ಮೈಲುಗಳಷ್ಟು ದೂರ ತಳ್ಳುತ್ತಿದೆ ಎಂದು ಅವರು ಹೇಳಿದರು.

ಇದೇ ರೀತಿಯ ಮಾತನಾಡಿದ ಭಾರದ್ವಾಜ್, ಇಲ್ಲಿನ ನಿವಾಸಿಗಳು ಚಾಲಕರು, ಸೇವಕರು, ಅಡುಗೆ ಸೇರಿದಂತೆ ಇತ್ಯಾದಿ ಕೆಲಸಗಳನ್ನು ಮಾಡುತ್ತಾ ದೆಹಲಿಯ ಜೆಜೆ ಕ್ಲಸ್ಟರ್‌ಗಳಲ್ಲಿ ತಮ್ಮ ಕುಟುಂಬಗಳೊಂದಿಗೆ ವಾಸಿಸುತ್ತಿದ್ದಾರೆ ಎಂದು ಹೇಳಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಈ ಜನರನ್ನು (ಸ್ಲಂ ನಿವಾಸಿಗಳನ್ನು) ಅವರ ಮನೆಗಳಿಂದ ಹೊರಹಾಕಲು ಅವರ ವಿರುದ್ಧ ಪಿತೂರಿ ನಡೆಸುತ್ತಿದೆ. ಕಾನೂನಿನ ಪ್ರಕಾರ, ಅಧಿಕಾರಿಗಳು ಅವರಿಗೆ ಸರಿಯಾದ ಮನೆಗಳನ್ನು ನೀಡದೆ, ಪಟ್ಟಿ ಮಾಡಲಾದ ಕ್ಲಸ್ಟರ್ ಅನ್ನು ಕೆಡವಲು ಸಾಧ್ಯವಿಲ್ಲ. ಬಿಜೆಪಿ ಮಾಡುತ್ತಿರುವುದು ಕಾನೂನುಬಾಹಿರ ಮತ್ತು ಅಮಾನವೀಯ’ ಎಂದು ಆರೋಪಿಸಿದರು.

ಕಾನೂನಿನ ಪ್ರಕಾರ ಕೊಳೆಗೇರಿ ನಿವಾಸಿಗಳಿಗೆ ಇನ್-ಸಿಟು ಹೌಸ್ ಒದಗಿಸುವವರೆಗೆ ದೆಹಲಿಯಲ್ಲಿ ಯಾವುದೇ ಜೆಜೆ ಕ್ಲಸ್ಟರ್ ಅನ್ನು ಕೆಡವಲು ಆದೇಶ ನೀಡದಂತೆ ಭಾರದ್ವಾಜ್ ಅವರು ನ್ಯಾಯಾಂಗವನ್ನು ಒತ್ತಾಯಿಸಿದರು. ತಮ್ಮ ಕಳವಳವನ್ನು ವ್ಯಕ್ತಪಡಿಸಿದ ಸಚಿವರು, ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್‌ನ ಸ್ಲಂ ಕ್ಲಸ್ಟರ್‌ ಜನಗಳಿಗೆ ನೋಟಿಸ್ ನೀಡಿರುವ ರೈಲ್ವೇ, ಜನರು ತಾವಾಗಿಯೇ ಸ್ಥಳಾಂತರಿಸಬೇಕು ಎಂದು ಹೇಳಿದೆ. ಆದರೆಮ ಅವರ ಪುನರ್ವಸತಿ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿದೆ’ ಎಂದರು.

‘ಸುಂದರ್ ನರ್ಸರಿ, ತುಘಲಕಾಬಾದ್, ಮೆಹ್ರೌಲಿ, ವಸಂತ್ ವಿಹಾರ್ ಮತ್ತು ಪ್ರಿಯಾಂಕಾ ಕಾಲೋನಿಯಲ್ಲಿ ಕೇಂದ್ರ ಸರ್ಕಾರದ ಏಜೆನ್ಸಿಗಳು ಅಸಂಖ್ಯಾತ ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ’ ಎಂದು ಭಾರದ್ವಾಜ್ ಹೇಳಿದರು.

ಕಳೆದ ಕೆಲವು ತಿಂಗಳುಗಳಿಂದ ಬಿಜೆಪಿ ಆಡಳಿತದಲ್ಲಿರುವ ಕೇಂದ್ರ ಸರ್ಕಾರದ ಸಂಸ್ಥೆಗಳಾದ ಎಎಸ್ಐ, ರೈಲ್ವೇ, ಡಿಡಿಎ, ಭೂ ಮತ್ತು ಅಭಿವೃದ್ಧಿ ಸಂಸ್ಥೆಗಳು ತಮ್ಮ ಸ್ವಾಮ್ಯದ ಜಮೀನುಗಳಲ್ಲಿರುವ ಜೆಜೆ ಕ್ಲಸ್ಟರ್‌ಗಳನ್ನು ಕೆಡವಲು ‘ಸಂಚು’ ನಡೆಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಆರೋಪಿಸಿದರು.

‘ಈ ಜನರು ತಮ್ಮ ಚಿಕ್ಕ ಮಕ್ಕಳೊಂದಿಗೆ ಇಲ್ಲಿ ವಾಸಿಸುತ್ತಿದ್ದಾರೆ, ಆ ಮಕ್ಕಳು ಹತ್ತಿರದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿತ್ತಾರೆ. ಆ ಮಹಿಳೆಯರು ಹತ್ತಿರದ ಮನೆಗಳಲ್ಲಿ ಕೆಲಸ ಮಾಡುತ್ತಾರೆ, ಪುರುಷರು ಹತ್ತಿರದ ಮಾರುಕಟ್ಟೆಗಳಲ್ಲಿ ಕೆಲಸ ಮಾಡುತ್ತಾರೆ. ಈ ಜನರು ಈಗ ಎಲ್ಲಿಗೆ ಹೋಗುತ್ತಾರೆ’ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ; ಐದು ವರ್ಷಗಳಲ್ಲಿ ಕಾಂಗ್ರೆಸ್ ತೊರೆದ ಪ್ರಮುಖ ನಾಯಕರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...