Homeಮುಖಪುಟಸ್ಲಂ ತೆರವು ಕಾರ್ಯಾಚರಣೆ; 'ಘರ್ ಬಚಾವೋ, ಬಿಜೆಪಿ ಹಟಾವೋ' ಅಭಿಯಾನ ಆರಂಭಿಸಿದ ಎಎಪಿ

ಸ್ಲಂ ತೆರವು ಕಾರ್ಯಾಚರಣೆ; ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನ ಆರಂಭಿಸಿದ ಎಎಪಿ

- Advertisement -
- Advertisement -

ರಾಷ್ಟ್ರ ರಾಜಧಾನಿಯ ಸ್ಲಂ ಕ್ಲಸ್ಟರ್‌ಗಳಿಗೆ ಭೇಟಿ ನೀಡಿದ ಎಎಪಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್, ‘ಕೊಳೆಗೇರಿ ನಿವಾಸಿಗಳನ್ನು ಒಕ್ಕಲೆಬ್ಬಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ’ ಎಂದು ಭಾನುವಾರ ಆರೋಪಿಸಿದ್ದಾರೆ.

ದೆಹಲಿಯ ಕೊಳೆಗೇರಿ ನಿವಾಸಿಗಳನ್ನು ನಿರಾಶ್ರಿತರನ್ನಾಗಿ ಮಾಡುವ ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಎಎಪಿಯ ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನವನ್ನು ಪ್ರಾರಂಭಿಸಿದೆ.
ಅತಿಶಿ ಅವರು ಬಿ ಆರ್ ಕ್ಯಾಂಪ್ ಕೊಳೆಗೇರಿಗೆ ಭೇಟಿ ನೀಡಿದಾಗ ಅವರ ಸಂಪುಟ ಸಹೋದ್ಯೋಗಿ ಭಾರದ್ವಾಜ್ ಅವರು ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್ ಬಳಿಯ ಕೊಳೆಗೇರಿ ನಿವಾಸಿಗಳನ್ನು ಭೇಟಿ ಮಾಡಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೆಹಲಿಯ ಕೊಳಚೆ ಪ್ರದೇಶಗಳನ್ನು ನೆಲಸಮ ಮಾಡಲು ಮತ್ತು ಅದರ ನಿವಾಸಿಗಳನ್ನು ಅವರ ಮನೆಗಳಿಂದ 40 ರಿಂದ 50 ಕಿಮೀ ದೂರಕ್ಕೆ ಸ್ಥಳಾಂತರಿಸಲು ಪಿತೂರಿ ನಡೆಸುತ್ತಿದೆ. ಎಎಪಿ ಮತ್ತು (ದೆಹಲಿ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ (ಸ್ಲಂ ನಿವಾಸಿಗಳು) ನಿಂತಿದ್ದಾರೆ’ ಎಂದು ಅತಿಶಿ ಹೇಳಿದರು.

ಬಿಆರ್‌ ಕ್ಯಾಂಪ್‌ನ ಜನರಿಗೆ ಈಗಿರುವ ಮನೆಗಳಲ್ಲೇ ಫ್ಲಾಟ್‌ಗಳು ಸಿಗುವುದಿಲ್ಲವೋ ಅಲ್ಲಿಯವರೆಗೆ ಒಂದೇ ಒಂದು ಮನೆಯನ್ನು ಡಿಡಿಎ ಮುಟ್ಟಲು ಬಿಡುವುದಿಲ್ಲ ಎಂದು ಸಚಿವರು ಹೇಳಿದರು.

‘ನಾವು ಬುಲ್ಡೋಜರ್‌ಗಳ ಮುಂದೆ ನಿಲ್ಲಬೇಕೇ ಅಥವಾ ನ್ಯಾಯಾಲಯದಿಂದ ಆದೇಶವನ್ನು ಪಡೆಯಬೇಕೇ, ಆಮ್ ಆದ್ಮಿ ಪಕ್ಷವು ಬಿಆರ್ ಕ್ಯಾಂಪ್‌ನ ಸ್ಲಂಗಳಲ್ಲಿ ವಾಸಿಸುವ ಜನರನ್ನು ನಿರಾಶ್ರಿತರಾಗಲು ಬಿಡುವುದಿಲ್ಲ. ಸ್ಲಂ ನಿವಾಸಿಗಳ ಬಗ್ಗೆ ಬಿಜೆಪಿ ನಾಚಿಕೆಪಡುತ್ತದೆ, ಅದಕ್ಕಾಗಿಯೇ ಅವರು ಬುಲ್ಡೋಜರ್ ಬಳಸುತ್ತಿದ್ದಾರೆ’ ಎಂದು ಅವರು ವಾಗ್ದಾಳಿ ನಡೆಸಿದರು.

ಬಿಜೆಪಿ ನೇತೃತ್ವದ ಡಿಡಿಎ, ಸ್ಲಂ ನಿವಾಸಿಗಳನ್ನು ನರೇಲಾ ಮತ್ತು ಕಾಕ್ರೋಲಾದಲ್ಲಿ 50 ಕಿ.ಮೀ ದೂರಕ್ಕೆ ಸ್ಥಳಾಂತರಿಸಲು ಒತ್ತಾಯಿಸುತ್ತಿದೆ. ಅವರ ಉದ್ಯೋಗಗಳು ಮತ್ತು ಅವರ ಮಕ್ಕಳ ಶಾಲೆಗಳಿಂದ ಅವರನ್ನು ಮೈಲುಗಳಷ್ಟು ದೂರ ತಳ್ಳುತ್ತಿದೆ ಎಂದು ಅವರು ಹೇಳಿದರು.

ಇದೇ ರೀತಿಯ ಮಾತನಾಡಿದ ಭಾರದ್ವಾಜ್, ಇಲ್ಲಿನ ನಿವಾಸಿಗಳು ಚಾಲಕರು, ಸೇವಕರು, ಅಡುಗೆ ಸೇರಿದಂತೆ ಇತ್ಯಾದಿ ಕೆಲಸಗಳನ್ನು ಮಾಡುತ್ತಾ ದೆಹಲಿಯ ಜೆಜೆ ಕ್ಲಸ್ಟರ್‌ಗಳಲ್ಲಿ ತಮ್ಮ ಕುಟುಂಬಗಳೊಂದಿಗೆ ವಾಸಿಸುತ್ತಿದ್ದಾರೆ ಎಂದು ಹೇಳಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಈ ಜನರನ್ನು (ಸ್ಲಂ ನಿವಾಸಿಗಳನ್ನು) ಅವರ ಮನೆಗಳಿಂದ ಹೊರಹಾಕಲು ಅವರ ವಿರುದ್ಧ ಪಿತೂರಿ ನಡೆಸುತ್ತಿದೆ. ಕಾನೂನಿನ ಪ್ರಕಾರ, ಅಧಿಕಾರಿಗಳು ಅವರಿಗೆ ಸರಿಯಾದ ಮನೆಗಳನ್ನು ನೀಡದೆ, ಪಟ್ಟಿ ಮಾಡಲಾದ ಕ್ಲಸ್ಟರ್ ಅನ್ನು ಕೆಡವಲು ಸಾಧ್ಯವಿಲ್ಲ. ಬಿಜೆಪಿ ಮಾಡುತ್ತಿರುವುದು ಕಾನೂನುಬಾಹಿರ ಮತ್ತು ಅಮಾನವೀಯ’ ಎಂದು ಆರೋಪಿಸಿದರು.

ಕಾನೂನಿನ ಪ್ರಕಾರ ಕೊಳೆಗೇರಿ ನಿವಾಸಿಗಳಿಗೆ ಇನ್-ಸಿಟು ಹೌಸ್ ಒದಗಿಸುವವರೆಗೆ ದೆಹಲಿಯಲ್ಲಿ ಯಾವುದೇ ಜೆಜೆ ಕ್ಲಸ್ಟರ್ ಅನ್ನು ಕೆಡವಲು ಆದೇಶ ನೀಡದಂತೆ ಭಾರದ್ವಾಜ್ ಅವರು ನ್ಯಾಯಾಂಗವನ್ನು ಒತ್ತಾಯಿಸಿದರು. ತಮ್ಮ ಕಳವಳವನ್ನು ವ್ಯಕ್ತಪಡಿಸಿದ ಸಚಿವರು, ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್‌ನ ಸ್ಲಂ ಕ್ಲಸ್ಟರ್‌ ಜನಗಳಿಗೆ ನೋಟಿಸ್ ನೀಡಿರುವ ರೈಲ್ವೇ, ಜನರು ತಾವಾಗಿಯೇ ಸ್ಥಳಾಂತರಿಸಬೇಕು ಎಂದು ಹೇಳಿದೆ. ಆದರೆಮ ಅವರ ಪುನರ್ವಸತಿ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿದೆ’ ಎಂದರು.

‘ಸುಂದರ್ ನರ್ಸರಿ, ತುಘಲಕಾಬಾದ್, ಮೆಹ್ರೌಲಿ, ವಸಂತ್ ವಿಹಾರ್ ಮತ್ತು ಪ್ರಿಯಾಂಕಾ ಕಾಲೋನಿಯಲ್ಲಿ ಕೇಂದ್ರ ಸರ್ಕಾರದ ಏಜೆನ್ಸಿಗಳು ಅಸಂಖ್ಯಾತ ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ’ ಎಂದು ಭಾರದ್ವಾಜ್ ಹೇಳಿದರು.

ಕಳೆದ ಕೆಲವು ತಿಂಗಳುಗಳಿಂದ ಬಿಜೆಪಿ ಆಡಳಿತದಲ್ಲಿರುವ ಕೇಂದ್ರ ಸರ್ಕಾರದ ಸಂಸ್ಥೆಗಳಾದ ಎಎಸ್ಐ, ರೈಲ್ವೇ, ಡಿಡಿಎ, ಭೂ ಮತ್ತು ಅಭಿವೃದ್ಧಿ ಸಂಸ್ಥೆಗಳು ತಮ್ಮ ಸ್ವಾಮ್ಯದ ಜಮೀನುಗಳಲ್ಲಿರುವ ಜೆಜೆ ಕ್ಲಸ್ಟರ್‌ಗಳನ್ನು ಕೆಡವಲು ‘ಸಂಚು’ ನಡೆಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಆರೋಪಿಸಿದರು.

‘ಈ ಜನರು ತಮ್ಮ ಚಿಕ್ಕ ಮಕ್ಕಳೊಂದಿಗೆ ಇಲ್ಲಿ ವಾಸಿಸುತ್ತಿದ್ದಾರೆ, ಆ ಮಕ್ಕಳು ಹತ್ತಿರದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿತ್ತಾರೆ. ಆ ಮಹಿಳೆಯರು ಹತ್ತಿರದ ಮನೆಗಳಲ್ಲಿ ಕೆಲಸ ಮಾಡುತ್ತಾರೆ, ಪುರುಷರು ಹತ್ತಿರದ ಮಾರುಕಟ್ಟೆಗಳಲ್ಲಿ ಕೆಲಸ ಮಾಡುತ್ತಾರೆ. ಈ ಜನರು ಈಗ ಎಲ್ಲಿಗೆ ಹೋಗುತ್ತಾರೆ’ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ; ಐದು ವರ್ಷಗಳಲ್ಲಿ ಕಾಂಗ್ರೆಸ್ ತೊರೆದ ಪ್ರಮುಖ ನಾಯಕರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...