Homeಮುಖಪುಟಸ್ಲಂ ತೆರವು ಕಾರ್ಯಾಚರಣೆ; 'ಘರ್ ಬಚಾವೋ, ಬಿಜೆಪಿ ಹಟಾವೋ' ಅಭಿಯಾನ ಆರಂಭಿಸಿದ ಎಎಪಿ

ಸ್ಲಂ ತೆರವು ಕಾರ್ಯಾಚರಣೆ; ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನ ಆರಂಭಿಸಿದ ಎಎಪಿ

- Advertisement -
- Advertisement -

ರಾಷ್ಟ್ರ ರಾಜಧಾನಿಯ ಸ್ಲಂ ಕ್ಲಸ್ಟರ್‌ಗಳಿಗೆ ಭೇಟಿ ನೀಡಿದ ಎಎಪಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್, ‘ಕೊಳೆಗೇರಿ ನಿವಾಸಿಗಳನ್ನು ಒಕ್ಕಲೆಬ್ಬಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ’ ಎಂದು ಭಾನುವಾರ ಆರೋಪಿಸಿದ್ದಾರೆ.

ದೆಹಲಿಯ ಕೊಳೆಗೇರಿ ನಿವಾಸಿಗಳನ್ನು ನಿರಾಶ್ರಿತರನ್ನಾಗಿ ಮಾಡುವ ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಎಎಪಿಯ ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನವನ್ನು ಪ್ರಾರಂಭಿಸಿದೆ.
ಅತಿಶಿ ಅವರು ಬಿ ಆರ್ ಕ್ಯಾಂಪ್ ಕೊಳೆಗೇರಿಗೆ ಭೇಟಿ ನೀಡಿದಾಗ ಅವರ ಸಂಪುಟ ಸಹೋದ್ಯೋಗಿ ಭಾರದ್ವಾಜ್ ಅವರು ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್ ಬಳಿಯ ಕೊಳೆಗೇರಿ ನಿವಾಸಿಗಳನ್ನು ಭೇಟಿ ಮಾಡಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೆಹಲಿಯ ಕೊಳಚೆ ಪ್ರದೇಶಗಳನ್ನು ನೆಲಸಮ ಮಾಡಲು ಮತ್ತು ಅದರ ನಿವಾಸಿಗಳನ್ನು ಅವರ ಮನೆಗಳಿಂದ 40 ರಿಂದ 50 ಕಿಮೀ ದೂರಕ್ಕೆ ಸ್ಥಳಾಂತರಿಸಲು ಪಿತೂರಿ ನಡೆಸುತ್ತಿದೆ. ಎಎಪಿ ಮತ್ತು (ದೆಹಲಿ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ (ಸ್ಲಂ ನಿವಾಸಿಗಳು) ನಿಂತಿದ್ದಾರೆ’ ಎಂದು ಅತಿಶಿ ಹೇಳಿದರು.

ಬಿಆರ್‌ ಕ್ಯಾಂಪ್‌ನ ಜನರಿಗೆ ಈಗಿರುವ ಮನೆಗಳಲ್ಲೇ ಫ್ಲಾಟ್‌ಗಳು ಸಿಗುವುದಿಲ್ಲವೋ ಅಲ್ಲಿಯವರೆಗೆ ಒಂದೇ ಒಂದು ಮನೆಯನ್ನು ಡಿಡಿಎ ಮುಟ್ಟಲು ಬಿಡುವುದಿಲ್ಲ ಎಂದು ಸಚಿವರು ಹೇಳಿದರು.

‘ನಾವು ಬುಲ್ಡೋಜರ್‌ಗಳ ಮುಂದೆ ನಿಲ್ಲಬೇಕೇ ಅಥವಾ ನ್ಯಾಯಾಲಯದಿಂದ ಆದೇಶವನ್ನು ಪಡೆಯಬೇಕೇ, ಆಮ್ ಆದ್ಮಿ ಪಕ್ಷವು ಬಿಆರ್ ಕ್ಯಾಂಪ್‌ನ ಸ್ಲಂಗಳಲ್ಲಿ ವಾಸಿಸುವ ಜನರನ್ನು ನಿರಾಶ್ರಿತರಾಗಲು ಬಿಡುವುದಿಲ್ಲ. ಸ್ಲಂ ನಿವಾಸಿಗಳ ಬಗ್ಗೆ ಬಿಜೆಪಿ ನಾಚಿಕೆಪಡುತ್ತದೆ, ಅದಕ್ಕಾಗಿಯೇ ಅವರು ಬುಲ್ಡೋಜರ್ ಬಳಸುತ್ತಿದ್ದಾರೆ’ ಎಂದು ಅವರು ವಾಗ್ದಾಳಿ ನಡೆಸಿದರು.

ಬಿಜೆಪಿ ನೇತೃತ್ವದ ಡಿಡಿಎ, ಸ್ಲಂ ನಿವಾಸಿಗಳನ್ನು ನರೇಲಾ ಮತ್ತು ಕಾಕ್ರೋಲಾದಲ್ಲಿ 50 ಕಿ.ಮೀ ದೂರಕ್ಕೆ ಸ್ಥಳಾಂತರಿಸಲು ಒತ್ತಾಯಿಸುತ್ತಿದೆ. ಅವರ ಉದ್ಯೋಗಗಳು ಮತ್ತು ಅವರ ಮಕ್ಕಳ ಶಾಲೆಗಳಿಂದ ಅವರನ್ನು ಮೈಲುಗಳಷ್ಟು ದೂರ ತಳ್ಳುತ್ತಿದೆ ಎಂದು ಅವರು ಹೇಳಿದರು.

ಇದೇ ರೀತಿಯ ಮಾತನಾಡಿದ ಭಾರದ್ವಾಜ್, ಇಲ್ಲಿನ ನಿವಾಸಿಗಳು ಚಾಲಕರು, ಸೇವಕರು, ಅಡುಗೆ ಸೇರಿದಂತೆ ಇತ್ಯಾದಿ ಕೆಲಸಗಳನ್ನು ಮಾಡುತ್ತಾ ದೆಹಲಿಯ ಜೆಜೆ ಕ್ಲಸ್ಟರ್‌ಗಳಲ್ಲಿ ತಮ್ಮ ಕುಟುಂಬಗಳೊಂದಿಗೆ ವಾಸಿಸುತ್ತಿದ್ದಾರೆ ಎಂದು ಹೇಳಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಈ ಜನರನ್ನು (ಸ್ಲಂ ನಿವಾಸಿಗಳನ್ನು) ಅವರ ಮನೆಗಳಿಂದ ಹೊರಹಾಕಲು ಅವರ ವಿರುದ್ಧ ಪಿತೂರಿ ನಡೆಸುತ್ತಿದೆ. ಕಾನೂನಿನ ಪ್ರಕಾರ, ಅಧಿಕಾರಿಗಳು ಅವರಿಗೆ ಸರಿಯಾದ ಮನೆಗಳನ್ನು ನೀಡದೆ, ಪಟ್ಟಿ ಮಾಡಲಾದ ಕ್ಲಸ್ಟರ್ ಅನ್ನು ಕೆಡವಲು ಸಾಧ್ಯವಿಲ್ಲ. ಬಿಜೆಪಿ ಮಾಡುತ್ತಿರುವುದು ಕಾನೂನುಬಾಹಿರ ಮತ್ತು ಅಮಾನವೀಯ’ ಎಂದು ಆರೋಪಿಸಿದರು.

ಕಾನೂನಿನ ಪ್ರಕಾರ ಕೊಳೆಗೇರಿ ನಿವಾಸಿಗಳಿಗೆ ಇನ್-ಸಿಟು ಹೌಸ್ ಒದಗಿಸುವವರೆಗೆ ದೆಹಲಿಯಲ್ಲಿ ಯಾವುದೇ ಜೆಜೆ ಕ್ಲಸ್ಟರ್ ಅನ್ನು ಕೆಡವಲು ಆದೇಶ ನೀಡದಂತೆ ಭಾರದ್ವಾಜ್ ಅವರು ನ್ಯಾಯಾಂಗವನ್ನು ಒತ್ತಾಯಿಸಿದರು. ತಮ್ಮ ಕಳವಳವನ್ನು ವ್ಯಕ್ತಪಡಿಸಿದ ಸಚಿವರು, ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್‌ನ ಸ್ಲಂ ಕ್ಲಸ್ಟರ್‌ ಜನಗಳಿಗೆ ನೋಟಿಸ್ ನೀಡಿರುವ ರೈಲ್ವೇ, ಜನರು ತಾವಾಗಿಯೇ ಸ್ಥಳಾಂತರಿಸಬೇಕು ಎಂದು ಹೇಳಿದೆ. ಆದರೆಮ ಅವರ ಪುನರ್ವಸತಿ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿದೆ’ ಎಂದರು.

‘ಸುಂದರ್ ನರ್ಸರಿ, ತುಘಲಕಾಬಾದ್, ಮೆಹ್ರೌಲಿ, ವಸಂತ್ ವಿಹಾರ್ ಮತ್ತು ಪ್ರಿಯಾಂಕಾ ಕಾಲೋನಿಯಲ್ಲಿ ಕೇಂದ್ರ ಸರ್ಕಾರದ ಏಜೆನ್ಸಿಗಳು ಅಸಂಖ್ಯಾತ ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ’ ಎಂದು ಭಾರದ್ವಾಜ್ ಹೇಳಿದರು.

ಕಳೆದ ಕೆಲವು ತಿಂಗಳುಗಳಿಂದ ಬಿಜೆಪಿ ಆಡಳಿತದಲ್ಲಿರುವ ಕೇಂದ್ರ ಸರ್ಕಾರದ ಸಂಸ್ಥೆಗಳಾದ ಎಎಸ್ಐ, ರೈಲ್ವೇ, ಡಿಡಿಎ, ಭೂ ಮತ್ತು ಅಭಿವೃದ್ಧಿ ಸಂಸ್ಥೆಗಳು ತಮ್ಮ ಸ್ವಾಮ್ಯದ ಜಮೀನುಗಳಲ್ಲಿರುವ ಜೆಜೆ ಕ್ಲಸ್ಟರ್‌ಗಳನ್ನು ಕೆಡವಲು ‘ಸಂಚು’ ನಡೆಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಆರೋಪಿಸಿದರು.

‘ಈ ಜನರು ತಮ್ಮ ಚಿಕ್ಕ ಮಕ್ಕಳೊಂದಿಗೆ ಇಲ್ಲಿ ವಾಸಿಸುತ್ತಿದ್ದಾರೆ, ಆ ಮಕ್ಕಳು ಹತ್ತಿರದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿತ್ತಾರೆ. ಆ ಮಹಿಳೆಯರು ಹತ್ತಿರದ ಮನೆಗಳಲ್ಲಿ ಕೆಲಸ ಮಾಡುತ್ತಾರೆ, ಪುರುಷರು ಹತ್ತಿರದ ಮಾರುಕಟ್ಟೆಗಳಲ್ಲಿ ಕೆಲಸ ಮಾಡುತ್ತಾರೆ. ಈ ಜನರು ಈಗ ಎಲ್ಲಿಗೆ ಹೋಗುತ್ತಾರೆ’ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ; ಐದು ವರ್ಷಗಳಲ್ಲಿ ಕಾಂಗ್ರೆಸ್ ತೊರೆದ ಪ್ರಮುಖ ನಾಯಕರು ಯಾರು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಮಹಾಲಕ್ಷಿ ಮತ್ತು ಮೆಟ್ರೋ’: ತೆಲಂಗಾಣ ಸರ್ಕಾರ-ಎಲ್‌&ಟಿ ನಡುವೆ ಜೋರಾದ ಜಟಾಪಟಿ

0
ಹೈದರಾಬಾದ್ ಮಹಾನಗರ ಮೆಟ್ರೋ ಸೇವೆ ಸೇರಿದಂತೆ ತೆಲಂಗಾಣ ರಾಜ್ಯದ ಹಲವು ಬೃಹತ್ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆ ಮಾಡುತ್ತಿರುವ 'ಲಾರ್ಸೆನ್ ಮತ್ತು ಟೂಬ್ರೊ (ಎಲ್ & ಟಿ)' ಕಂಪನಿ ಮತ್ತು ರಾಜ್ಯ ಸರ್ಕಾರದ...