Homeಮುಖಪುಟಸ್ಲಂ ತೆರವು ಕಾರ್ಯಾಚರಣೆ; 'ಘರ್ ಬಚಾವೋ, ಬಿಜೆಪಿ ಹಟಾವೋ' ಅಭಿಯಾನ ಆರಂಭಿಸಿದ ಎಎಪಿ

ಸ್ಲಂ ತೆರವು ಕಾರ್ಯಾಚರಣೆ; ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನ ಆರಂಭಿಸಿದ ಎಎಪಿ

- Advertisement -
- Advertisement -

ರಾಷ್ಟ್ರ ರಾಜಧಾನಿಯ ಸ್ಲಂ ಕ್ಲಸ್ಟರ್‌ಗಳಿಗೆ ಭೇಟಿ ನೀಡಿದ ಎಎಪಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್, ‘ಕೊಳೆಗೇರಿ ನಿವಾಸಿಗಳನ್ನು ಒಕ್ಕಲೆಬ್ಬಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ’ ಎಂದು ಭಾನುವಾರ ಆರೋಪಿಸಿದ್ದಾರೆ.

ದೆಹಲಿಯ ಕೊಳೆಗೇರಿ ನಿವಾಸಿಗಳನ್ನು ನಿರಾಶ್ರಿತರನ್ನಾಗಿ ಮಾಡುವ ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಎಎಪಿಯ ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನವನ್ನು ಪ್ರಾರಂಭಿಸಿದೆ.
ಅತಿಶಿ ಅವರು ಬಿ ಆರ್ ಕ್ಯಾಂಪ್ ಕೊಳೆಗೇರಿಗೆ ಭೇಟಿ ನೀಡಿದಾಗ ಅವರ ಸಂಪುಟ ಸಹೋದ್ಯೋಗಿ ಭಾರದ್ವಾಜ್ ಅವರು ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್ ಬಳಿಯ ಕೊಳೆಗೇರಿ ನಿವಾಸಿಗಳನ್ನು ಭೇಟಿ ಮಾಡಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೆಹಲಿಯ ಕೊಳಚೆ ಪ್ರದೇಶಗಳನ್ನು ನೆಲಸಮ ಮಾಡಲು ಮತ್ತು ಅದರ ನಿವಾಸಿಗಳನ್ನು ಅವರ ಮನೆಗಳಿಂದ 40 ರಿಂದ 50 ಕಿಮೀ ದೂರಕ್ಕೆ ಸ್ಥಳಾಂತರಿಸಲು ಪಿತೂರಿ ನಡೆಸುತ್ತಿದೆ. ಎಎಪಿ ಮತ್ತು (ದೆಹಲಿ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ (ಸ್ಲಂ ನಿವಾಸಿಗಳು) ನಿಂತಿದ್ದಾರೆ’ ಎಂದು ಅತಿಶಿ ಹೇಳಿದರು.

ಬಿಆರ್‌ ಕ್ಯಾಂಪ್‌ನ ಜನರಿಗೆ ಈಗಿರುವ ಮನೆಗಳಲ್ಲೇ ಫ್ಲಾಟ್‌ಗಳು ಸಿಗುವುದಿಲ್ಲವೋ ಅಲ್ಲಿಯವರೆಗೆ ಒಂದೇ ಒಂದು ಮನೆಯನ್ನು ಡಿಡಿಎ ಮುಟ್ಟಲು ಬಿಡುವುದಿಲ್ಲ ಎಂದು ಸಚಿವರು ಹೇಳಿದರು.

‘ನಾವು ಬುಲ್ಡೋಜರ್‌ಗಳ ಮುಂದೆ ನಿಲ್ಲಬೇಕೇ ಅಥವಾ ನ್ಯಾಯಾಲಯದಿಂದ ಆದೇಶವನ್ನು ಪಡೆಯಬೇಕೇ, ಆಮ್ ಆದ್ಮಿ ಪಕ್ಷವು ಬಿಆರ್ ಕ್ಯಾಂಪ್‌ನ ಸ್ಲಂಗಳಲ್ಲಿ ವಾಸಿಸುವ ಜನರನ್ನು ನಿರಾಶ್ರಿತರಾಗಲು ಬಿಡುವುದಿಲ್ಲ. ಸ್ಲಂ ನಿವಾಸಿಗಳ ಬಗ್ಗೆ ಬಿಜೆಪಿ ನಾಚಿಕೆಪಡುತ್ತದೆ, ಅದಕ್ಕಾಗಿಯೇ ಅವರು ಬುಲ್ಡೋಜರ್ ಬಳಸುತ್ತಿದ್ದಾರೆ’ ಎಂದು ಅವರು ವಾಗ್ದಾಳಿ ನಡೆಸಿದರು.

ಬಿಜೆಪಿ ನೇತೃತ್ವದ ಡಿಡಿಎ, ಸ್ಲಂ ನಿವಾಸಿಗಳನ್ನು ನರೇಲಾ ಮತ್ತು ಕಾಕ್ರೋಲಾದಲ್ಲಿ 50 ಕಿ.ಮೀ ದೂರಕ್ಕೆ ಸ್ಥಳಾಂತರಿಸಲು ಒತ್ತಾಯಿಸುತ್ತಿದೆ. ಅವರ ಉದ್ಯೋಗಗಳು ಮತ್ತು ಅವರ ಮಕ್ಕಳ ಶಾಲೆಗಳಿಂದ ಅವರನ್ನು ಮೈಲುಗಳಷ್ಟು ದೂರ ತಳ್ಳುತ್ತಿದೆ ಎಂದು ಅವರು ಹೇಳಿದರು.

ಇದೇ ರೀತಿಯ ಮಾತನಾಡಿದ ಭಾರದ್ವಾಜ್, ಇಲ್ಲಿನ ನಿವಾಸಿಗಳು ಚಾಲಕರು, ಸೇವಕರು, ಅಡುಗೆ ಸೇರಿದಂತೆ ಇತ್ಯಾದಿ ಕೆಲಸಗಳನ್ನು ಮಾಡುತ್ತಾ ದೆಹಲಿಯ ಜೆಜೆ ಕ್ಲಸ್ಟರ್‌ಗಳಲ್ಲಿ ತಮ್ಮ ಕುಟುಂಬಗಳೊಂದಿಗೆ ವಾಸಿಸುತ್ತಿದ್ದಾರೆ ಎಂದು ಹೇಳಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಈ ಜನರನ್ನು (ಸ್ಲಂ ನಿವಾಸಿಗಳನ್ನು) ಅವರ ಮನೆಗಳಿಂದ ಹೊರಹಾಕಲು ಅವರ ವಿರುದ್ಧ ಪಿತೂರಿ ನಡೆಸುತ್ತಿದೆ. ಕಾನೂನಿನ ಪ್ರಕಾರ, ಅಧಿಕಾರಿಗಳು ಅವರಿಗೆ ಸರಿಯಾದ ಮನೆಗಳನ್ನು ನೀಡದೆ, ಪಟ್ಟಿ ಮಾಡಲಾದ ಕ್ಲಸ್ಟರ್ ಅನ್ನು ಕೆಡವಲು ಸಾಧ್ಯವಿಲ್ಲ. ಬಿಜೆಪಿ ಮಾಡುತ್ತಿರುವುದು ಕಾನೂನುಬಾಹಿರ ಮತ್ತು ಅಮಾನವೀಯ’ ಎಂದು ಆರೋಪಿಸಿದರು.

ಕಾನೂನಿನ ಪ್ರಕಾರ ಕೊಳೆಗೇರಿ ನಿವಾಸಿಗಳಿಗೆ ಇನ್-ಸಿಟು ಹೌಸ್ ಒದಗಿಸುವವರೆಗೆ ದೆಹಲಿಯಲ್ಲಿ ಯಾವುದೇ ಜೆಜೆ ಕ್ಲಸ್ಟರ್ ಅನ್ನು ಕೆಡವಲು ಆದೇಶ ನೀಡದಂತೆ ಭಾರದ್ವಾಜ್ ಅವರು ನ್ಯಾಯಾಂಗವನ್ನು ಒತ್ತಾಯಿಸಿದರು. ತಮ್ಮ ಕಳವಳವನ್ನು ವ್ಯಕ್ತಪಡಿಸಿದ ಸಚಿವರು, ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್‌ನ ಸ್ಲಂ ಕ್ಲಸ್ಟರ್‌ ಜನಗಳಿಗೆ ನೋಟಿಸ್ ನೀಡಿರುವ ರೈಲ್ವೇ, ಜನರು ತಾವಾಗಿಯೇ ಸ್ಥಳಾಂತರಿಸಬೇಕು ಎಂದು ಹೇಳಿದೆ. ಆದರೆಮ ಅವರ ಪುನರ್ವಸತಿ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿದೆ’ ಎಂದರು.

‘ಸುಂದರ್ ನರ್ಸರಿ, ತುಘಲಕಾಬಾದ್, ಮೆಹ್ರೌಲಿ, ವಸಂತ್ ವಿಹಾರ್ ಮತ್ತು ಪ್ರಿಯಾಂಕಾ ಕಾಲೋನಿಯಲ್ಲಿ ಕೇಂದ್ರ ಸರ್ಕಾರದ ಏಜೆನ್ಸಿಗಳು ಅಸಂಖ್ಯಾತ ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ’ ಎಂದು ಭಾರದ್ವಾಜ್ ಹೇಳಿದರು.

ಕಳೆದ ಕೆಲವು ತಿಂಗಳುಗಳಿಂದ ಬಿಜೆಪಿ ಆಡಳಿತದಲ್ಲಿರುವ ಕೇಂದ್ರ ಸರ್ಕಾರದ ಸಂಸ್ಥೆಗಳಾದ ಎಎಸ್ಐ, ರೈಲ್ವೇ, ಡಿಡಿಎ, ಭೂ ಮತ್ತು ಅಭಿವೃದ್ಧಿ ಸಂಸ್ಥೆಗಳು ತಮ್ಮ ಸ್ವಾಮ್ಯದ ಜಮೀನುಗಳಲ್ಲಿರುವ ಜೆಜೆ ಕ್ಲಸ್ಟರ್‌ಗಳನ್ನು ಕೆಡವಲು ‘ಸಂಚು’ ನಡೆಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಆರೋಪಿಸಿದರು.

‘ಈ ಜನರು ತಮ್ಮ ಚಿಕ್ಕ ಮಕ್ಕಳೊಂದಿಗೆ ಇಲ್ಲಿ ವಾಸಿಸುತ್ತಿದ್ದಾರೆ, ಆ ಮಕ್ಕಳು ಹತ್ತಿರದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿತ್ತಾರೆ. ಆ ಮಹಿಳೆಯರು ಹತ್ತಿರದ ಮನೆಗಳಲ್ಲಿ ಕೆಲಸ ಮಾಡುತ್ತಾರೆ, ಪುರುಷರು ಹತ್ತಿರದ ಮಾರುಕಟ್ಟೆಗಳಲ್ಲಿ ಕೆಲಸ ಮಾಡುತ್ತಾರೆ. ಈ ಜನರು ಈಗ ಎಲ್ಲಿಗೆ ಹೋಗುತ್ತಾರೆ’ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ; ಐದು ವರ್ಷಗಳಲ್ಲಿ ಕಾಂಗ್ರೆಸ್ ತೊರೆದ ಪ್ರಮುಖ ನಾಯಕರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...