Homeಮುಖಪುಟರೈಲ್ವೇ ಹಳಿಗಳ ಬಳಿಯಿರುವ ಕೊಳಗೇರಿಗಳನ್ನು ತಕ್ಷಣ ಕೆಡವಲು ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರದ ಮಾಹಿತಿ

ರೈಲ್ವೇ ಹಳಿಗಳ ಬಳಿಯಿರುವ ಕೊಳಗೇರಿಗಳನ್ನು ತಕ್ಷಣ ಕೆಡವಲು ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರದ ಮಾಹಿತಿ

ಮೂರು ತಿಂಗಳ ಒಳಗಾಗಿ ನವದೆಹಲಿಯ 140 ಕಿಲೋಮೀಟರ್ ಉದ್ದದ ರೈಲ್ವೆ ಹಳಿಗಳ ಸುತ್ತಲಿನ ಸುಮಾರು 48,000 ಕೊಳಗೇರಿ ವಾಸಸ್ಥಳಗಳನ್ನು ತೆಗೆದುಹಾಕುವಂತೆ ಸುಪ್ರೀಂ ನಿರ್ದೇಶಿಸಿತ್ತು.

- Advertisement -
- Advertisement -

ದೆಹಲಿಯ ರೈಲ್ವೇ ಹಳಿಗಳ ಬಳಿ ಇರುವ ಕೊಳಗೇರಿಗಳನ್ನು ತಕ್ಷಣಕ್ಕೆ ಕೆಡವಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌‌ಗೆ ಮಾಹಿತಿ ನೀಡಿದೆ ಎಂದು ಕಾನೂನು ಸುದ್ದಿ ವೆಬ್‌ಸೈಟ್ ಲೈವ್ ಲಾ.ಇನ್ ವರದಿ ಮಾಡಿದೆ. ಸುಪ್ರೀಂ ಕೋರ್ಟ್ ಆಗಸ್ಟ್ 31ರಂದು ಈ ಕೊಳೆಗೇರಿಗಳನ್ನು ತೆಗೆದುಹಾಕುವಂತೆ ಆದೇಶಿಸಿತ್ತು.

ರೈಲ್ವೇ ಇಲಾಖೆಯು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದೊಂದಿಗೆ ಸಮಾಲೋಚಿಸಿ 4 ವಾರಗಳಲ್ಲಿ ಪರಿಹಾರ ಕಂಡುಕೊಳ್ಳುವವರೆಗೆ ರೈಲ್ವೆ ಹಳಿಗಳ ಬಳಿಯ ಕೊಳಗೇರಿಗಳನ್ನು ತೆರವುಗೊಳಿಸಲಾಗುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ ಬಾಬ್ದೆ ನೇತೃತ್ವದ ನ್ಯಾಯಪೀಠಕ್ಕೆ ಸಾಲಿಸಿಟರ್ ಜನರಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಮೂರು ತಿಂಗಳ ಒಳಗಾಗಿ ನವದೆಹಲಿಯ 140 ಕಿಲೋಮೀಟರ್ ಉದ್ದದ ರೈಲ್ವೆ ಹಳಿಗಳ ಸುತ್ತಲಿನ ಸುಮಾರು 48,000 ಕೊಳಗೇರಿ ವಾಸಸ್ಥಳಗಳನ್ನು ತೆಗೆದುಹಾಕುವಂತೆ ಸುಪ್ರೀಂ ನಿರ್ದೇಶಿಸಿತ್ತು. ಆಗಸ್ಟ್ 31ರಂದು ಸುಪ್ರೀಂ ಕೋರ್ಟ್ ಹೊರಡಿಸಿದ ಆದೇಶವನ್ನು ಹಿಂಪಡೆಯಬೇಕೆಂದು ಕಾಂಗ್ರೆಸ್ ಮುಖಂಡ ಅಜಯ್ ಮಾಕನ್ ಅರ್ಜಿ ಸಲ್ಲಿಸಿದ್ದರು.

ಕೊಳಗೇರಿಗಳನ್ನು ತೆಗೆದುಹಾಕುವ ಆದೇಶಕ್ಕೆ ಯಾವುದೇ ನ್ಯಾಯಾಲಯ ತಡೆ ನೀಡಬಾರದು ಎಂದು ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ನ್ಯಾಯಪೀಠ ನಿರ್ದೇಶಿಸಿತ್ತು.

ಇದನ್ನೂ ಓದಿ: ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

ದೆಹಲಿಯ ಎನ್‌ಸಿಟಿ (National Capital Territory) ಪ್ರದೇಶದಲ್ಲಿ 140 ಕಿ.ಮೀ ಮಾರ್ಗದ ಉದ್ದದ ಟ್ರ್ಯಾಕ್ ಬಳಿ ಕೊಳಗೇರಿಗಳಿವೆ ಎಂದು ರೈಲ್ವೆ ಇಲಾಖೆ ನ್ಯಾಯಾಲಯಕ್ಕೆ ಅಫಿಡವಿಟ್‌ ಸಲ್ಲಿಸಿದ ನಂತರ ನ್ಯಾಯಪೀಠ ಈ ಆದೇಶ ನೀಡಿತ್ತು. ಇದರಲ್ಲಿ ಸುಮಾರು 70 ಕಿ.ಮೀ ಮಾರ್ಗದ ಉದ್ದದ ಹಳಿಗಳ ಮೇಲೆ ಸಮೀಪದಲ್ಲಿರುವ ದೊಡ್ಡ ಕೊಳಗೇರಿ ಗುಡಿಸಲುಗಳು ಪರಿಣಾಮ ಬೀರುತ್ತಿವೆ ಎಂದು ರೈಲ್ವೆ ಹೇಳಿದೆ. ಜೊತೆಗೆ ಅತಿಕ್ರಮಣ ಮಾಡಿರುವ ಕೊಳಗೇರಿಗಳನ್ನು ತೆಗೆದುಹಾಕುವಲ್ಲಿ “ರಾಜಕೀಯ ಹಸ್ತಕ್ಷೇಪ”ವಿದೆ ಎಂದು ರೈಲ್ವೆ ನ್ಯಾಯಾಲಯಕ್ಕೆ ತಿಳಿಸಿತ್ತು.

ಸುಪ್ರೀಂ ಆದೇಶದ ನಂತರ, ಕೊಳಗೇರಿ ನಿವಾಸಿಗಳಿಗೆ ಪುನರ್ವಸತಿ ಕೋರಿ ಅಜಯ್ ಮಾಕನ್ ಈ ಹಿಂದೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದರು.  ಕೊಳಗೇರಿ ನಿವಾಸಿಗಳನ್ನು ಹೊರಹಾಕುವ ಆದೇಶವನ್ನು ಹಿಂಪಡೆಯಲು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೂ ಸುಪ್ರೀಂ ಕೋರ್ಟ್ ಕೊಳಗೇರಿಗಳನ್ನು ತೆಗೆದುಹಾಕುವಂತೆ ಆದೇಶಿಸಿತ್ತು.

ಸದ್ಯ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಆದೇಶವನ್ನು ಕಾರ್ಯರೂಪಕ್ಕೆ ತರಲು ಸಮಯ ಬೇಕು ಎಂದಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಇದು ಸ್ಲಂ ನಿವಾಸಿಗಳಿಗೆ ತಾತ್ಕಾಲಿಕ ರಿಲೀಫ್ ನೀಡಿದಂತಾಗಿದೆ.


ಇದನ್ನೂ ಓದಿ: ಲಾಕ್‌‌ಡೌನ್‌ ಸಮಯದಲ್ಲಿ ಮೃತಪಟ್ಟ ವಲಸಿಗರ ಮಾಹಿತಿ ಇಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...