Homeಕರ್ನಾಟಕತುಮಕೂರು ಅಮಾನಿಕೆರೆಯನ್ನೇ ನುಂಗುತ್ತಿದೆ ಸ್ಮಾರ್ಟ್ ಸಿಟಿ...

ತುಮಕೂರು ಅಮಾನಿಕೆರೆಯನ್ನೇ ನುಂಗುತ್ತಿದೆ ಸ್ಮಾರ್ಟ್ ಸಿಟಿ…

- Advertisement -
- Advertisement -

ತುಮಕೂರು ಅಮಾನಿಕೆರೆ ವಿಸ್ತೀರ್ಣ ದಿನೇದಿನೇ ಕುಗ್ಗುತ್ತಲೇ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಹತ್ತಿರ ಹತ್ತಿರ 900 ಎಕರೆ ಪ್ರದೇಶದಲ್ಲಿ ಹರಡಿದ ಕೆರೆಯ ಅಂಗಳ ಈಗ 500 ಎಕರೆಗೆ ಬಂದು ನಿಂತಿದೆ. ಅಂದರೆ ಸುಮಾರು 400 ಎಕರೆ ಕೆರೆಯನ್ನು ನುಂಗಣ್ಣಗಳ ಪಾಲಾಗಿದೆ. ಆದರೆ ಜಿಲ್ಲಾಡಳಿತ ಮಾತ್ರ ತಣ್ಣಗೆ ಕುಳಿತಿದೆ. ನುಂಗಣ್ಣಗಳು ಬಾರಿ ಕುಳಗಳೆಂಬುದೇ ಮೌನಕ್ಕೆ ಕಾರಣ. ನುಂಗಣ್ಣಗಳಿಂದ ಒತ್ತುವರಿ ಮಾಡಿಕೊಂಡಿರುವುದನ್ನು ತೆರೆವುಗೊಳಿಸುವ ಗೋಜಿಗೇ ಹೋಗಿಲ್ಲ. ಸಣ್ಣ ಪ್ರಯತ್ನವನ್ನೇ ಮಾಡಿಲ್ಲ. ಸರ್ಕಾರಿ ಜಮೀನು ಅದರಲ್ಲೂ ಕೆರೆಯ ಜಾಗ ಒತ್ತುವರಿಯಾಗಿದ್ದರೂ ಜಿಲ್ಲಾಡಳಿತ ಮಾತ್ರ ಕಿವಿಕೇಳದಂತೆ ನಡೆದುಕೊಳ್ಳುತ್ತಿದೆ.

ಅಮಾನಿಕೆರೆಯ ಅಭಿವೃದ್ಧಿಗೆಂದು ಸುಮಾರು 40 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಇದು ಮಾಜಿ ಸಚಿವ ಸೊಗಡು ಶಿವಣ್ಣನವರ ನಂತರ ಶಾಸಕರಾಗಿದ್ದ ರಫೀಕ್ ಅಹಮದ್ ಕಾಲದಲ್ಲಿ ಮೊದಲ ಹಂತದಲ್ಲಿ ಉದ್ಯಾನ, ವಾಕ್ ಪಾತ್ ಮತ್ತು ಕೆರೆಯ ಹೂಳೆತ್ತಿ ನಡುಗಡ್ಡೆಗಳನ್ನು ನಿರ್ಮಿಸಿ ಕೆರೆಯಲ್ಲಿ ವಿಹಾರ ನಡೆಸಲು ಉದ್ದೇಶಿಸಲಾಗಿತ್ತು. ಕೆರೆಯಲ್ಲಿನ ಮಣ್ಣನ್ನು ಬೇರೆಯ ಕಡೆಗೆ ಸಾಗಿಸಲಿಲ್ಲ. ಬದಲಿಗೆ ಅಲ್ಲಿಯೇ ಉದ್ಯಾನ ನಿರ್ಮಾಣ ಜಾಗದಲ್ಲಿ ಸುರಿಯಲಾಯಿತು. ಅಲ್ಲಿಗೆ ಕೆರೆಯ ಹೂಳೆತ್ತುವ ಮತ್ತು ನೀರು ತುಂಬಿಸುವ ಉದ್ದೇಶ ಮಣ್ಣು ಪಾಲಾಯಿತು. ಕೆರೆಯ ಹೂಳೆತ್ತಲು ಮಾಡಿದ ವೆಚ್ಚ 40 ಕೋಟಿ  ಹಣವನ್ನು ನೀರನಲ್ಲಿ ಹುಣಸೇಹಣ್ಣು ತೊಳೆದಂತಾಯಿತು.

ಹಳೆಯ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಂತೆ  13 ಎಕರೆ ಕೆರೆಯಂಗಳದಲ್ಲಿ ಉದ್ಯಾನವನ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಖಾಸಗಿಯವರು ಒಂದು ಕಡೆ ಒತ್ತುವರಿ ಮಾಡಿದರೆ ಮತ್ತೊಂದು ಕಡೆ ಸ್ಮಾರ್ಟ್ ಸಿಟಿ ಲಿಮಿಟೆಡ್ ನಿಂದ ಸರ್ಕಾರಿ ಒತ್ತುವರಿಯನ್ನು ಮಾಡಲಾಯಿತು. ಇದರಿಂದ ಕೆರೆಯ ನೀರು ತುಂಬುವ ಸಾಮರ್ಥ್ಯ ಗಣನೀಯವಾಗಿ ಇಳಿಕೆಯಾಗಿದೆ. ಒಂದಷ್ಟು ದಿನ ಪರಿಸರವಾದಿಗಳು ಇದರ ವಿರುದ್ಧ ದನಿ ಎತ್ತಿದರೂ ನರಿಯ ಕೂಗು ಗಿರಿಗೆ ಮುಟ್ಟೀತೆ ಎನ್ನುವಂತಾಯಿತು.

ತುಮಕೂರು ನಗರಕ್ಕೆ ಕುಡಿಯುವ ಉದ್ದೇಶಕ್ಕಾಗಿ ಒಂದು ಟಿಎಂಸಿ ನೀರನ್ನು ಬಳಸಿಕೊಳ್ಳಲು ಅವಕಾಶವಿದೆ. ಆದರೆ ಬುಗುಡನಹಳ್ಳಿ ಜಲಸಂಗ್ರಹಾಗಾರ ಕೇವಲ 240 ಎಂಸಿಎಫ್ ಟಸಿ ನೀರು ಮಾತ್ರ ಸಂಗ್ರಹ ಸಾಮರ್ಥ್ಯ ಹೊಂದಿದೆ. ಹೀಗಾಗಿ ಅಮಾನಿಕೆರೆಯಲ್ಲಿ ನೀರು ಸಂಗ್ರಹ ಮಾಡಿಕೊಂಡು ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಿದ್ದರೆ ಜನರಿಗೆ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ. ಅಂದರೆ ಅಮಾನಿಕೆರೆ ನಿಜವಾದ ಉದ್ದೇಶ ಈಡೇರಲಿಲ್ಲ. ಕುಡಿಯುವ ನೀರಿನ ಯೋಜನೆಗೂ ಅಮಾನಿಕೆರೆಯನ್ನು ಬಳಸಿಕೊಳ್ಳಲು ಮುಂದಾಗಲಿಲ್ಲ. ಕೆರೆಯಲ್ಲಿ ಉದ್ಯಾನವನ ನಿರ್ಮಾಣ ಮುಖ್ಯವಾಯಿತೇ ವಿನಃ ಜನರಿಗೆ ಕುಡಿಯುವ ನೀರು ಒದಗಿಸಬೇಕೆಂಬ ಕನಿಷ್ಠ ಜ್ಞಾನವೂ ಜನಪ್ರತಿನಿಧಿಗಳಿಗಾಗಲಿ, ಜಿಲ್ಲಾಡಳಿತಕ್ಕಾಗಲಿ, ಶಾಸಕರಿಗಾಗಲೀ ಬರಲೇ ಇಲ್ಲ.

ಇದೀಗ ಕೆರೆಯ ಸುತ್ತಲೂ ಸ್ಮಾರ್ಟ್ ಸಿಟಿಯ ಭಾಗವಾಗಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದಕ್ಕಾಗಿ ಮತ್ತಷ್ಟು ಒತ್ತುವರಿ ಮಾಡಿಕೊಂಡಿದ್ದು ಕೆರೆಯ ವಿಸ್ತೀರ್ಣ ಕಡಿಮೆಯಾಗಿದೆ. ಹತ್ತಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದ್ದು, ಇದರಿಂದ ಕಿಂಚಿತ್ತೂ ಜನೋಪಯೋಗಿಯಾಗಿ ಅನಿಸುತ್ತಿಲ್ಲ. ಸ್ಮಾರ್ಟ್ ಸಿಟಿ ನೆಪದಲ್ಲಿ ಹಣ ದೋಚಲಾಗುತ್ತಿದೆ. ಕೆರೆಯನ್ನು ಕಿರಿದುಗೊಳಿಸಿ ಮುಂದೆ ಕೆರೆಯನ್ನೇ ಇಲ್ಲವಾಗಿಸುವ ಯತ್ನ ನಡೆಯುತ್ತಿದೆ. ಕೆರೆಗೆ ನೀರು ಹರಿಸಿದ್ದರೆ ನೂರಾರು ಕೊಳವೆ ಬಾವಿಗಳು ತುಂಬಿಕೊಳ್ಳುತ್ತಿದ್ದವು. ಕುಡಿಯುಲು ನೀರು ಪೂರೈಕೆ ಮಾಡಬಹುದಿತ್ತು. ಇದ್ಯಾವುದನ್ನು ಮಾಡದೆ ಕೇವಲ ಕೆರೆಯ ಅಂಗಳಕ್ಕೆ ಮಣ್ಣನ್ನು ಸುರಿಯಲಾಗುತ್ತಿದೆ. ಇದು ಕೂಡಲೇ ನಿಲ್ಲಿಸಬೇಕು. ಇದು ಜೇಬು ತುಂಬಿಸುಕೊಳ್ಳುವ ಕಾಮಗಾರಿಯೇ ಹೊರತು ಜನರಿಗೇನೂ ಪ್ರಯೋಜನವಿಲ್ಲ ಎಂದು ರಂಗನಾಥ್ ಕಿಡಿಕಾರಿದ್ದಾರೆ.

ಜನಪ್ರಿಯ ಅಧಿಕಾರಿ ಭೂಬಾಲನ್‌

ಕೆರೆಯನ್ನು ಹಾಳುಗೆಡವಲು ಮತ್ತು ಈ ಜಾಗದಲ್ಲಿ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವುದು ಕೆಲವು ರಾಜಕಾರಣಿಗಳು ಉದ್ದೇಶವಾಗಿದೆ. ಏನಾದರೂ ಮಾಡಿ ಕೆರೆಯನ್ನು ಸಂಪೂರ್ಣ ನುಂಗಿದರೆ ಲೇಔಟ್ ಮಾಡಬಹುದು ಎಂಬ ಹುನ್ನಾರವೂ ಇದರಲ್ಲಿ ಅಡಗಿದೆ. ನಿಜವಾಗಿ ಅಭಿವೃದ್ಧಿ ಎಂದರೆ ರಸ್ತೆಗಳಲ್ಲ. ಜನರ ಜೀವನಮಟ್ಟ ಸುಧಾರಣೆ ಆಗಬೇಕು. ಅದಾಗದಿದ್ದರೆ ಎಷ್ಟೇ ಅಭಿವೃದ್ಧಿ ಮಾಡಿದರೂ ಯಾರಿಗೂ ನಯಾ ಪೈಸೆ ಪ್ರಯೋಜನವಿಲ್ಲ ಎಂಬುದನ್ನು ಮನಗಾಣಬೇಕಾಗಿದೆ.

ತುಮಕೂರು ಮಹಾನಗರ ಪಾಲಿಕೆಗೆ ಮತ್ತೆ ಭೂಬಾಲನ್ ಬಂದಿದ್ದಾರೆ. ಸ್ಮಾರ್ಟ್ ಸಿಟಿ ಹೆಸರನಲ್ಲಿ ನಡೆಯುತ್ತಿರುವ ಕಾಮಗಾರಿಗಳು ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ಅವರ ಮೇಲಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಾಗಿರುವ ಅಕ್ರಮಗಳನ್ನು ಬಯಲಿಗೆ ತರುವಂತಹ ಗುರುತರ ಕೆಲಸ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಭೂಬಾಲನ್ ಶ್ರಮಿಸುವಂತಾಗಲಿ ಎಂಬುದು ಜನರ ಅಭಿಮತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...