Homeಕರ್ನಾಟಕತುಮಕೂರು ಅಮಾನಿಕೆರೆಯನ್ನೇ ನುಂಗುತ್ತಿದೆ ಸ್ಮಾರ್ಟ್ ಸಿಟಿ...

ತುಮಕೂರು ಅಮಾನಿಕೆರೆಯನ್ನೇ ನುಂಗುತ್ತಿದೆ ಸ್ಮಾರ್ಟ್ ಸಿಟಿ…

- Advertisement -
- Advertisement -

ತುಮಕೂರು ಅಮಾನಿಕೆರೆ ವಿಸ್ತೀರ್ಣ ದಿನೇದಿನೇ ಕುಗ್ಗುತ್ತಲೇ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಹತ್ತಿರ ಹತ್ತಿರ 900 ಎಕರೆ ಪ್ರದೇಶದಲ್ಲಿ ಹರಡಿದ ಕೆರೆಯ ಅಂಗಳ ಈಗ 500 ಎಕರೆಗೆ ಬಂದು ನಿಂತಿದೆ. ಅಂದರೆ ಸುಮಾರು 400 ಎಕರೆ ಕೆರೆಯನ್ನು ನುಂಗಣ್ಣಗಳ ಪಾಲಾಗಿದೆ. ಆದರೆ ಜಿಲ್ಲಾಡಳಿತ ಮಾತ್ರ ತಣ್ಣಗೆ ಕುಳಿತಿದೆ. ನುಂಗಣ್ಣಗಳು ಬಾರಿ ಕುಳಗಳೆಂಬುದೇ ಮೌನಕ್ಕೆ ಕಾರಣ. ನುಂಗಣ್ಣಗಳಿಂದ ಒತ್ತುವರಿ ಮಾಡಿಕೊಂಡಿರುವುದನ್ನು ತೆರೆವುಗೊಳಿಸುವ ಗೋಜಿಗೇ ಹೋಗಿಲ್ಲ. ಸಣ್ಣ ಪ್ರಯತ್ನವನ್ನೇ ಮಾಡಿಲ್ಲ. ಸರ್ಕಾರಿ ಜಮೀನು ಅದರಲ್ಲೂ ಕೆರೆಯ ಜಾಗ ಒತ್ತುವರಿಯಾಗಿದ್ದರೂ ಜಿಲ್ಲಾಡಳಿತ ಮಾತ್ರ ಕಿವಿಕೇಳದಂತೆ ನಡೆದುಕೊಳ್ಳುತ್ತಿದೆ.

ಅಮಾನಿಕೆರೆಯ ಅಭಿವೃದ್ಧಿಗೆಂದು ಸುಮಾರು 40 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಇದು ಮಾಜಿ ಸಚಿವ ಸೊಗಡು ಶಿವಣ್ಣನವರ ನಂತರ ಶಾಸಕರಾಗಿದ್ದ ರಫೀಕ್ ಅಹಮದ್ ಕಾಲದಲ್ಲಿ ಮೊದಲ ಹಂತದಲ್ಲಿ ಉದ್ಯಾನ, ವಾಕ್ ಪಾತ್ ಮತ್ತು ಕೆರೆಯ ಹೂಳೆತ್ತಿ ನಡುಗಡ್ಡೆಗಳನ್ನು ನಿರ್ಮಿಸಿ ಕೆರೆಯಲ್ಲಿ ವಿಹಾರ ನಡೆಸಲು ಉದ್ದೇಶಿಸಲಾಗಿತ್ತು. ಕೆರೆಯಲ್ಲಿನ ಮಣ್ಣನ್ನು ಬೇರೆಯ ಕಡೆಗೆ ಸಾಗಿಸಲಿಲ್ಲ. ಬದಲಿಗೆ ಅಲ್ಲಿಯೇ ಉದ್ಯಾನ ನಿರ್ಮಾಣ ಜಾಗದಲ್ಲಿ ಸುರಿಯಲಾಯಿತು. ಅಲ್ಲಿಗೆ ಕೆರೆಯ ಹೂಳೆತ್ತುವ ಮತ್ತು ನೀರು ತುಂಬಿಸುವ ಉದ್ದೇಶ ಮಣ್ಣು ಪಾಲಾಯಿತು. ಕೆರೆಯ ಹೂಳೆತ್ತಲು ಮಾಡಿದ ವೆಚ್ಚ 40 ಕೋಟಿ  ಹಣವನ್ನು ನೀರನಲ್ಲಿ ಹುಣಸೇಹಣ್ಣು ತೊಳೆದಂತಾಯಿತು.

ಹಳೆಯ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಂತೆ  13 ಎಕರೆ ಕೆರೆಯಂಗಳದಲ್ಲಿ ಉದ್ಯಾನವನ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಖಾಸಗಿಯವರು ಒಂದು ಕಡೆ ಒತ್ತುವರಿ ಮಾಡಿದರೆ ಮತ್ತೊಂದು ಕಡೆ ಸ್ಮಾರ್ಟ್ ಸಿಟಿ ಲಿಮಿಟೆಡ್ ನಿಂದ ಸರ್ಕಾರಿ ಒತ್ತುವರಿಯನ್ನು ಮಾಡಲಾಯಿತು. ಇದರಿಂದ ಕೆರೆಯ ನೀರು ತುಂಬುವ ಸಾಮರ್ಥ್ಯ ಗಣನೀಯವಾಗಿ ಇಳಿಕೆಯಾಗಿದೆ. ಒಂದಷ್ಟು ದಿನ ಪರಿಸರವಾದಿಗಳು ಇದರ ವಿರುದ್ಧ ದನಿ ಎತ್ತಿದರೂ ನರಿಯ ಕೂಗು ಗಿರಿಗೆ ಮುಟ್ಟೀತೆ ಎನ್ನುವಂತಾಯಿತು.

ತುಮಕೂರು ನಗರಕ್ಕೆ ಕುಡಿಯುವ ಉದ್ದೇಶಕ್ಕಾಗಿ ಒಂದು ಟಿಎಂಸಿ ನೀರನ್ನು ಬಳಸಿಕೊಳ್ಳಲು ಅವಕಾಶವಿದೆ. ಆದರೆ ಬುಗುಡನಹಳ್ಳಿ ಜಲಸಂಗ್ರಹಾಗಾರ ಕೇವಲ 240 ಎಂಸಿಎಫ್ ಟಸಿ ನೀರು ಮಾತ್ರ ಸಂಗ್ರಹ ಸಾಮರ್ಥ್ಯ ಹೊಂದಿದೆ. ಹೀಗಾಗಿ ಅಮಾನಿಕೆರೆಯಲ್ಲಿ ನೀರು ಸಂಗ್ರಹ ಮಾಡಿಕೊಂಡು ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಿದ್ದರೆ ಜನರಿಗೆ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ. ಅಂದರೆ ಅಮಾನಿಕೆರೆ ನಿಜವಾದ ಉದ್ದೇಶ ಈಡೇರಲಿಲ್ಲ. ಕುಡಿಯುವ ನೀರಿನ ಯೋಜನೆಗೂ ಅಮಾನಿಕೆರೆಯನ್ನು ಬಳಸಿಕೊಳ್ಳಲು ಮುಂದಾಗಲಿಲ್ಲ. ಕೆರೆಯಲ್ಲಿ ಉದ್ಯಾನವನ ನಿರ್ಮಾಣ ಮುಖ್ಯವಾಯಿತೇ ವಿನಃ ಜನರಿಗೆ ಕುಡಿಯುವ ನೀರು ಒದಗಿಸಬೇಕೆಂಬ ಕನಿಷ್ಠ ಜ್ಞಾನವೂ ಜನಪ್ರತಿನಿಧಿಗಳಿಗಾಗಲಿ, ಜಿಲ್ಲಾಡಳಿತಕ್ಕಾಗಲಿ, ಶಾಸಕರಿಗಾಗಲೀ ಬರಲೇ ಇಲ್ಲ.

ಇದೀಗ ಕೆರೆಯ ಸುತ್ತಲೂ ಸ್ಮಾರ್ಟ್ ಸಿಟಿಯ ಭಾಗವಾಗಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದಕ್ಕಾಗಿ ಮತ್ತಷ್ಟು ಒತ್ತುವರಿ ಮಾಡಿಕೊಂಡಿದ್ದು ಕೆರೆಯ ವಿಸ್ತೀರ್ಣ ಕಡಿಮೆಯಾಗಿದೆ. ಹತ್ತಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದ್ದು, ಇದರಿಂದ ಕಿಂಚಿತ್ತೂ ಜನೋಪಯೋಗಿಯಾಗಿ ಅನಿಸುತ್ತಿಲ್ಲ. ಸ್ಮಾರ್ಟ್ ಸಿಟಿ ನೆಪದಲ್ಲಿ ಹಣ ದೋಚಲಾಗುತ್ತಿದೆ. ಕೆರೆಯನ್ನು ಕಿರಿದುಗೊಳಿಸಿ ಮುಂದೆ ಕೆರೆಯನ್ನೇ ಇಲ್ಲವಾಗಿಸುವ ಯತ್ನ ನಡೆಯುತ್ತಿದೆ. ಕೆರೆಗೆ ನೀರು ಹರಿಸಿದ್ದರೆ ನೂರಾರು ಕೊಳವೆ ಬಾವಿಗಳು ತುಂಬಿಕೊಳ್ಳುತ್ತಿದ್ದವು. ಕುಡಿಯುಲು ನೀರು ಪೂರೈಕೆ ಮಾಡಬಹುದಿತ್ತು. ಇದ್ಯಾವುದನ್ನು ಮಾಡದೆ ಕೇವಲ ಕೆರೆಯ ಅಂಗಳಕ್ಕೆ ಮಣ್ಣನ್ನು ಸುರಿಯಲಾಗುತ್ತಿದೆ. ಇದು ಕೂಡಲೇ ನಿಲ್ಲಿಸಬೇಕು. ಇದು ಜೇಬು ತುಂಬಿಸುಕೊಳ್ಳುವ ಕಾಮಗಾರಿಯೇ ಹೊರತು ಜನರಿಗೇನೂ ಪ್ರಯೋಜನವಿಲ್ಲ ಎಂದು ರಂಗನಾಥ್ ಕಿಡಿಕಾರಿದ್ದಾರೆ.

ಜನಪ್ರಿಯ ಅಧಿಕಾರಿ ಭೂಬಾಲನ್‌

ಕೆರೆಯನ್ನು ಹಾಳುಗೆಡವಲು ಮತ್ತು ಈ ಜಾಗದಲ್ಲಿ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವುದು ಕೆಲವು ರಾಜಕಾರಣಿಗಳು ಉದ್ದೇಶವಾಗಿದೆ. ಏನಾದರೂ ಮಾಡಿ ಕೆರೆಯನ್ನು ಸಂಪೂರ್ಣ ನುಂಗಿದರೆ ಲೇಔಟ್ ಮಾಡಬಹುದು ಎಂಬ ಹುನ್ನಾರವೂ ಇದರಲ್ಲಿ ಅಡಗಿದೆ. ನಿಜವಾಗಿ ಅಭಿವೃದ್ಧಿ ಎಂದರೆ ರಸ್ತೆಗಳಲ್ಲ. ಜನರ ಜೀವನಮಟ್ಟ ಸುಧಾರಣೆ ಆಗಬೇಕು. ಅದಾಗದಿದ್ದರೆ ಎಷ್ಟೇ ಅಭಿವೃದ್ಧಿ ಮಾಡಿದರೂ ಯಾರಿಗೂ ನಯಾ ಪೈಸೆ ಪ್ರಯೋಜನವಿಲ್ಲ ಎಂಬುದನ್ನು ಮನಗಾಣಬೇಕಾಗಿದೆ.

ತುಮಕೂರು ಮಹಾನಗರ ಪಾಲಿಕೆಗೆ ಮತ್ತೆ ಭೂಬಾಲನ್ ಬಂದಿದ್ದಾರೆ. ಸ್ಮಾರ್ಟ್ ಸಿಟಿ ಹೆಸರನಲ್ಲಿ ನಡೆಯುತ್ತಿರುವ ಕಾಮಗಾರಿಗಳು ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ಅವರ ಮೇಲಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಾಗಿರುವ ಅಕ್ರಮಗಳನ್ನು ಬಯಲಿಗೆ ತರುವಂತಹ ಗುರುತರ ಕೆಲಸ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಭೂಬಾಲನ್ ಶ್ರಮಿಸುವಂತಾಗಲಿ ಎಂಬುದು ಜನರ ಅಭಿಮತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...