Homeಕರ್ನಾಟಕತುಮಕೂರು ಅಮಾನಿಕೆರೆಯನ್ನೇ ನುಂಗುತ್ತಿದೆ ಸ್ಮಾರ್ಟ್ ಸಿಟಿ...

ತುಮಕೂರು ಅಮಾನಿಕೆರೆಯನ್ನೇ ನುಂಗುತ್ತಿದೆ ಸ್ಮಾರ್ಟ್ ಸಿಟಿ…

- Advertisement -
- Advertisement -

ತುಮಕೂರು ಅಮಾನಿಕೆರೆ ವಿಸ್ತೀರ್ಣ ದಿನೇದಿನೇ ಕುಗ್ಗುತ್ತಲೇ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಹತ್ತಿರ ಹತ್ತಿರ 900 ಎಕರೆ ಪ್ರದೇಶದಲ್ಲಿ ಹರಡಿದ ಕೆರೆಯ ಅಂಗಳ ಈಗ 500 ಎಕರೆಗೆ ಬಂದು ನಿಂತಿದೆ. ಅಂದರೆ ಸುಮಾರು 400 ಎಕರೆ ಕೆರೆಯನ್ನು ನುಂಗಣ್ಣಗಳ ಪಾಲಾಗಿದೆ. ಆದರೆ ಜಿಲ್ಲಾಡಳಿತ ಮಾತ್ರ ತಣ್ಣಗೆ ಕುಳಿತಿದೆ. ನುಂಗಣ್ಣಗಳು ಬಾರಿ ಕುಳಗಳೆಂಬುದೇ ಮೌನಕ್ಕೆ ಕಾರಣ. ನುಂಗಣ್ಣಗಳಿಂದ ಒತ್ತುವರಿ ಮಾಡಿಕೊಂಡಿರುವುದನ್ನು ತೆರೆವುಗೊಳಿಸುವ ಗೋಜಿಗೇ ಹೋಗಿಲ್ಲ. ಸಣ್ಣ ಪ್ರಯತ್ನವನ್ನೇ ಮಾಡಿಲ್ಲ. ಸರ್ಕಾರಿ ಜಮೀನು ಅದರಲ್ಲೂ ಕೆರೆಯ ಜಾಗ ಒತ್ತುವರಿಯಾಗಿದ್ದರೂ ಜಿಲ್ಲಾಡಳಿತ ಮಾತ್ರ ಕಿವಿಕೇಳದಂತೆ ನಡೆದುಕೊಳ್ಳುತ್ತಿದೆ.

ಅಮಾನಿಕೆರೆಯ ಅಭಿವೃದ್ಧಿಗೆಂದು ಸುಮಾರು 40 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಇದು ಮಾಜಿ ಸಚಿವ ಸೊಗಡು ಶಿವಣ್ಣನವರ ನಂತರ ಶಾಸಕರಾಗಿದ್ದ ರಫೀಕ್ ಅಹಮದ್ ಕಾಲದಲ್ಲಿ ಮೊದಲ ಹಂತದಲ್ಲಿ ಉದ್ಯಾನ, ವಾಕ್ ಪಾತ್ ಮತ್ತು ಕೆರೆಯ ಹೂಳೆತ್ತಿ ನಡುಗಡ್ಡೆಗಳನ್ನು ನಿರ್ಮಿಸಿ ಕೆರೆಯಲ್ಲಿ ವಿಹಾರ ನಡೆಸಲು ಉದ್ದೇಶಿಸಲಾಗಿತ್ತು. ಕೆರೆಯಲ್ಲಿನ ಮಣ್ಣನ್ನು ಬೇರೆಯ ಕಡೆಗೆ ಸಾಗಿಸಲಿಲ್ಲ. ಬದಲಿಗೆ ಅಲ್ಲಿಯೇ ಉದ್ಯಾನ ನಿರ್ಮಾಣ ಜಾಗದಲ್ಲಿ ಸುರಿಯಲಾಯಿತು. ಅಲ್ಲಿಗೆ ಕೆರೆಯ ಹೂಳೆತ್ತುವ ಮತ್ತು ನೀರು ತುಂಬಿಸುವ ಉದ್ದೇಶ ಮಣ್ಣು ಪಾಲಾಯಿತು. ಕೆರೆಯ ಹೂಳೆತ್ತಲು ಮಾಡಿದ ವೆಚ್ಚ 40 ಕೋಟಿ  ಹಣವನ್ನು ನೀರನಲ್ಲಿ ಹುಣಸೇಹಣ್ಣು ತೊಳೆದಂತಾಯಿತು.

ಹಳೆಯ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಂತೆ  13 ಎಕರೆ ಕೆರೆಯಂಗಳದಲ್ಲಿ ಉದ್ಯಾನವನ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಖಾಸಗಿಯವರು ಒಂದು ಕಡೆ ಒತ್ತುವರಿ ಮಾಡಿದರೆ ಮತ್ತೊಂದು ಕಡೆ ಸ್ಮಾರ್ಟ್ ಸಿಟಿ ಲಿಮಿಟೆಡ್ ನಿಂದ ಸರ್ಕಾರಿ ಒತ್ತುವರಿಯನ್ನು ಮಾಡಲಾಯಿತು. ಇದರಿಂದ ಕೆರೆಯ ನೀರು ತುಂಬುವ ಸಾಮರ್ಥ್ಯ ಗಣನೀಯವಾಗಿ ಇಳಿಕೆಯಾಗಿದೆ. ಒಂದಷ್ಟು ದಿನ ಪರಿಸರವಾದಿಗಳು ಇದರ ವಿರುದ್ಧ ದನಿ ಎತ್ತಿದರೂ ನರಿಯ ಕೂಗು ಗಿರಿಗೆ ಮುಟ್ಟೀತೆ ಎನ್ನುವಂತಾಯಿತು.

ತುಮಕೂರು ನಗರಕ್ಕೆ ಕುಡಿಯುವ ಉದ್ದೇಶಕ್ಕಾಗಿ ಒಂದು ಟಿಎಂಸಿ ನೀರನ್ನು ಬಳಸಿಕೊಳ್ಳಲು ಅವಕಾಶವಿದೆ. ಆದರೆ ಬುಗುಡನಹಳ್ಳಿ ಜಲಸಂಗ್ರಹಾಗಾರ ಕೇವಲ 240 ಎಂಸಿಎಫ್ ಟಸಿ ನೀರು ಮಾತ್ರ ಸಂಗ್ರಹ ಸಾಮರ್ಥ್ಯ ಹೊಂದಿದೆ. ಹೀಗಾಗಿ ಅಮಾನಿಕೆರೆಯಲ್ಲಿ ನೀರು ಸಂಗ್ರಹ ಮಾಡಿಕೊಂಡು ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಿದ್ದರೆ ಜನರಿಗೆ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ. ಅಂದರೆ ಅಮಾನಿಕೆರೆ ನಿಜವಾದ ಉದ್ದೇಶ ಈಡೇರಲಿಲ್ಲ. ಕುಡಿಯುವ ನೀರಿನ ಯೋಜನೆಗೂ ಅಮಾನಿಕೆರೆಯನ್ನು ಬಳಸಿಕೊಳ್ಳಲು ಮುಂದಾಗಲಿಲ್ಲ. ಕೆರೆಯಲ್ಲಿ ಉದ್ಯಾನವನ ನಿರ್ಮಾಣ ಮುಖ್ಯವಾಯಿತೇ ವಿನಃ ಜನರಿಗೆ ಕುಡಿಯುವ ನೀರು ಒದಗಿಸಬೇಕೆಂಬ ಕನಿಷ್ಠ ಜ್ಞಾನವೂ ಜನಪ್ರತಿನಿಧಿಗಳಿಗಾಗಲಿ, ಜಿಲ್ಲಾಡಳಿತಕ್ಕಾಗಲಿ, ಶಾಸಕರಿಗಾಗಲೀ ಬರಲೇ ಇಲ್ಲ.

ಇದೀಗ ಕೆರೆಯ ಸುತ್ತಲೂ ಸ್ಮಾರ್ಟ್ ಸಿಟಿಯ ಭಾಗವಾಗಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದಕ್ಕಾಗಿ ಮತ್ತಷ್ಟು ಒತ್ತುವರಿ ಮಾಡಿಕೊಂಡಿದ್ದು ಕೆರೆಯ ವಿಸ್ತೀರ್ಣ ಕಡಿಮೆಯಾಗಿದೆ. ಹತ್ತಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದ್ದು, ಇದರಿಂದ ಕಿಂಚಿತ್ತೂ ಜನೋಪಯೋಗಿಯಾಗಿ ಅನಿಸುತ್ತಿಲ್ಲ. ಸ್ಮಾರ್ಟ್ ಸಿಟಿ ನೆಪದಲ್ಲಿ ಹಣ ದೋಚಲಾಗುತ್ತಿದೆ. ಕೆರೆಯನ್ನು ಕಿರಿದುಗೊಳಿಸಿ ಮುಂದೆ ಕೆರೆಯನ್ನೇ ಇಲ್ಲವಾಗಿಸುವ ಯತ್ನ ನಡೆಯುತ್ತಿದೆ. ಕೆರೆಗೆ ನೀರು ಹರಿಸಿದ್ದರೆ ನೂರಾರು ಕೊಳವೆ ಬಾವಿಗಳು ತುಂಬಿಕೊಳ್ಳುತ್ತಿದ್ದವು. ಕುಡಿಯುಲು ನೀರು ಪೂರೈಕೆ ಮಾಡಬಹುದಿತ್ತು. ಇದ್ಯಾವುದನ್ನು ಮಾಡದೆ ಕೇವಲ ಕೆರೆಯ ಅಂಗಳಕ್ಕೆ ಮಣ್ಣನ್ನು ಸುರಿಯಲಾಗುತ್ತಿದೆ. ಇದು ಕೂಡಲೇ ನಿಲ್ಲಿಸಬೇಕು. ಇದು ಜೇಬು ತುಂಬಿಸುಕೊಳ್ಳುವ ಕಾಮಗಾರಿಯೇ ಹೊರತು ಜನರಿಗೇನೂ ಪ್ರಯೋಜನವಿಲ್ಲ ಎಂದು ರಂಗನಾಥ್ ಕಿಡಿಕಾರಿದ್ದಾರೆ.

ಜನಪ್ರಿಯ ಅಧಿಕಾರಿ ಭೂಬಾಲನ್‌

ಕೆರೆಯನ್ನು ಹಾಳುಗೆಡವಲು ಮತ್ತು ಈ ಜಾಗದಲ್ಲಿ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವುದು ಕೆಲವು ರಾಜಕಾರಣಿಗಳು ಉದ್ದೇಶವಾಗಿದೆ. ಏನಾದರೂ ಮಾಡಿ ಕೆರೆಯನ್ನು ಸಂಪೂರ್ಣ ನುಂಗಿದರೆ ಲೇಔಟ್ ಮಾಡಬಹುದು ಎಂಬ ಹುನ್ನಾರವೂ ಇದರಲ್ಲಿ ಅಡಗಿದೆ. ನಿಜವಾಗಿ ಅಭಿವೃದ್ಧಿ ಎಂದರೆ ರಸ್ತೆಗಳಲ್ಲ. ಜನರ ಜೀವನಮಟ್ಟ ಸುಧಾರಣೆ ಆಗಬೇಕು. ಅದಾಗದಿದ್ದರೆ ಎಷ್ಟೇ ಅಭಿವೃದ್ಧಿ ಮಾಡಿದರೂ ಯಾರಿಗೂ ನಯಾ ಪೈಸೆ ಪ್ರಯೋಜನವಿಲ್ಲ ಎಂಬುದನ್ನು ಮನಗಾಣಬೇಕಾಗಿದೆ.

ತುಮಕೂರು ಮಹಾನಗರ ಪಾಲಿಕೆಗೆ ಮತ್ತೆ ಭೂಬಾಲನ್ ಬಂದಿದ್ದಾರೆ. ಸ್ಮಾರ್ಟ್ ಸಿಟಿ ಹೆಸರನಲ್ಲಿ ನಡೆಯುತ್ತಿರುವ ಕಾಮಗಾರಿಗಳು ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ಅವರ ಮೇಲಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಾಗಿರುವ ಅಕ್ರಮಗಳನ್ನು ಬಯಲಿಗೆ ತರುವಂತಹ ಗುರುತರ ಕೆಲಸ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಭೂಬಾಲನ್ ಶ್ರಮಿಸುವಂತಾಗಲಿ ಎಂಬುದು ಜನರ ಅಭಿಮತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...