Homeಕರ್ನಾಟಕತುಮಕೂರು ಅಮಾನಿಕೆರೆಯನ್ನೇ ನುಂಗುತ್ತಿದೆ ಸ್ಮಾರ್ಟ್ ಸಿಟಿ...

ತುಮಕೂರು ಅಮಾನಿಕೆರೆಯನ್ನೇ ನುಂಗುತ್ತಿದೆ ಸ್ಮಾರ್ಟ್ ಸಿಟಿ…

- Advertisement -
- Advertisement -

ತುಮಕೂರು ಅಮಾನಿಕೆರೆ ವಿಸ್ತೀರ್ಣ ದಿನೇದಿನೇ ಕುಗ್ಗುತ್ತಲೇ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಹತ್ತಿರ ಹತ್ತಿರ 900 ಎಕರೆ ಪ್ರದೇಶದಲ್ಲಿ ಹರಡಿದ ಕೆರೆಯ ಅಂಗಳ ಈಗ 500 ಎಕರೆಗೆ ಬಂದು ನಿಂತಿದೆ. ಅಂದರೆ ಸುಮಾರು 400 ಎಕರೆ ಕೆರೆಯನ್ನು ನುಂಗಣ್ಣಗಳ ಪಾಲಾಗಿದೆ. ಆದರೆ ಜಿಲ್ಲಾಡಳಿತ ಮಾತ್ರ ತಣ್ಣಗೆ ಕುಳಿತಿದೆ. ನುಂಗಣ್ಣಗಳು ಬಾರಿ ಕುಳಗಳೆಂಬುದೇ ಮೌನಕ್ಕೆ ಕಾರಣ. ನುಂಗಣ್ಣಗಳಿಂದ ಒತ್ತುವರಿ ಮಾಡಿಕೊಂಡಿರುವುದನ್ನು ತೆರೆವುಗೊಳಿಸುವ ಗೋಜಿಗೇ ಹೋಗಿಲ್ಲ. ಸಣ್ಣ ಪ್ರಯತ್ನವನ್ನೇ ಮಾಡಿಲ್ಲ. ಸರ್ಕಾರಿ ಜಮೀನು ಅದರಲ್ಲೂ ಕೆರೆಯ ಜಾಗ ಒತ್ತುವರಿಯಾಗಿದ್ದರೂ ಜಿಲ್ಲಾಡಳಿತ ಮಾತ್ರ ಕಿವಿಕೇಳದಂತೆ ನಡೆದುಕೊಳ್ಳುತ್ತಿದೆ.

ಅಮಾನಿಕೆರೆಯ ಅಭಿವೃದ್ಧಿಗೆಂದು ಸುಮಾರು 40 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಇದು ಮಾಜಿ ಸಚಿವ ಸೊಗಡು ಶಿವಣ್ಣನವರ ನಂತರ ಶಾಸಕರಾಗಿದ್ದ ರಫೀಕ್ ಅಹಮದ್ ಕಾಲದಲ್ಲಿ ಮೊದಲ ಹಂತದಲ್ಲಿ ಉದ್ಯಾನ, ವಾಕ್ ಪಾತ್ ಮತ್ತು ಕೆರೆಯ ಹೂಳೆತ್ತಿ ನಡುಗಡ್ಡೆಗಳನ್ನು ನಿರ್ಮಿಸಿ ಕೆರೆಯಲ್ಲಿ ವಿಹಾರ ನಡೆಸಲು ಉದ್ದೇಶಿಸಲಾಗಿತ್ತು. ಕೆರೆಯಲ್ಲಿನ ಮಣ್ಣನ್ನು ಬೇರೆಯ ಕಡೆಗೆ ಸಾಗಿಸಲಿಲ್ಲ. ಬದಲಿಗೆ ಅಲ್ಲಿಯೇ ಉದ್ಯಾನ ನಿರ್ಮಾಣ ಜಾಗದಲ್ಲಿ ಸುರಿಯಲಾಯಿತು. ಅಲ್ಲಿಗೆ ಕೆರೆಯ ಹೂಳೆತ್ತುವ ಮತ್ತು ನೀರು ತುಂಬಿಸುವ ಉದ್ದೇಶ ಮಣ್ಣು ಪಾಲಾಯಿತು. ಕೆರೆಯ ಹೂಳೆತ್ತಲು ಮಾಡಿದ ವೆಚ್ಚ 40 ಕೋಟಿ  ಹಣವನ್ನು ನೀರನಲ್ಲಿ ಹುಣಸೇಹಣ್ಣು ತೊಳೆದಂತಾಯಿತು.

ಹಳೆಯ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಂತೆ  13 ಎಕರೆ ಕೆರೆಯಂಗಳದಲ್ಲಿ ಉದ್ಯಾನವನ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಖಾಸಗಿಯವರು ಒಂದು ಕಡೆ ಒತ್ತುವರಿ ಮಾಡಿದರೆ ಮತ್ತೊಂದು ಕಡೆ ಸ್ಮಾರ್ಟ್ ಸಿಟಿ ಲಿಮಿಟೆಡ್ ನಿಂದ ಸರ್ಕಾರಿ ಒತ್ತುವರಿಯನ್ನು ಮಾಡಲಾಯಿತು. ಇದರಿಂದ ಕೆರೆಯ ನೀರು ತುಂಬುವ ಸಾಮರ್ಥ್ಯ ಗಣನೀಯವಾಗಿ ಇಳಿಕೆಯಾಗಿದೆ. ಒಂದಷ್ಟು ದಿನ ಪರಿಸರವಾದಿಗಳು ಇದರ ವಿರುದ್ಧ ದನಿ ಎತ್ತಿದರೂ ನರಿಯ ಕೂಗು ಗಿರಿಗೆ ಮುಟ್ಟೀತೆ ಎನ್ನುವಂತಾಯಿತು.

ತುಮಕೂರು ನಗರಕ್ಕೆ ಕುಡಿಯುವ ಉದ್ದೇಶಕ್ಕಾಗಿ ಒಂದು ಟಿಎಂಸಿ ನೀರನ್ನು ಬಳಸಿಕೊಳ್ಳಲು ಅವಕಾಶವಿದೆ. ಆದರೆ ಬುಗುಡನಹಳ್ಳಿ ಜಲಸಂಗ್ರಹಾಗಾರ ಕೇವಲ 240 ಎಂಸಿಎಫ್ ಟಸಿ ನೀರು ಮಾತ್ರ ಸಂಗ್ರಹ ಸಾಮರ್ಥ್ಯ ಹೊಂದಿದೆ. ಹೀಗಾಗಿ ಅಮಾನಿಕೆರೆಯಲ್ಲಿ ನೀರು ಸಂಗ್ರಹ ಮಾಡಿಕೊಂಡು ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಿದ್ದರೆ ಜನರಿಗೆ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ. ಅಂದರೆ ಅಮಾನಿಕೆರೆ ನಿಜವಾದ ಉದ್ದೇಶ ಈಡೇರಲಿಲ್ಲ. ಕುಡಿಯುವ ನೀರಿನ ಯೋಜನೆಗೂ ಅಮಾನಿಕೆರೆಯನ್ನು ಬಳಸಿಕೊಳ್ಳಲು ಮುಂದಾಗಲಿಲ್ಲ. ಕೆರೆಯಲ್ಲಿ ಉದ್ಯಾನವನ ನಿರ್ಮಾಣ ಮುಖ್ಯವಾಯಿತೇ ವಿನಃ ಜನರಿಗೆ ಕುಡಿಯುವ ನೀರು ಒದಗಿಸಬೇಕೆಂಬ ಕನಿಷ್ಠ ಜ್ಞಾನವೂ ಜನಪ್ರತಿನಿಧಿಗಳಿಗಾಗಲಿ, ಜಿಲ್ಲಾಡಳಿತಕ್ಕಾಗಲಿ, ಶಾಸಕರಿಗಾಗಲೀ ಬರಲೇ ಇಲ್ಲ.

ಇದೀಗ ಕೆರೆಯ ಸುತ್ತಲೂ ಸ್ಮಾರ್ಟ್ ಸಿಟಿಯ ಭಾಗವಾಗಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದಕ್ಕಾಗಿ ಮತ್ತಷ್ಟು ಒತ್ತುವರಿ ಮಾಡಿಕೊಂಡಿದ್ದು ಕೆರೆಯ ವಿಸ್ತೀರ್ಣ ಕಡಿಮೆಯಾಗಿದೆ. ಹತ್ತಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದ್ದು, ಇದರಿಂದ ಕಿಂಚಿತ್ತೂ ಜನೋಪಯೋಗಿಯಾಗಿ ಅನಿಸುತ್ತಿಲ್ಲ. ಸ್ಮಾರ್ಟ್ ಸಿಟಿ ನೆಪದಲ್ಲಿ ಹಣ ದೋಚಲಾಗುತ್ತಿದೆ. ಕೆರೆಯನ್ನು ಕಿರಿದುಗೊಳಿಸಿ ಮುಂದೆ ಕೆರೆಯನ್ನೇ ಇಲ್ಲವಾಗಿಸುವ ಯತ್ನ ನಡೆಯುತ್ತಿದೆ. ಕೆರೆಗೆ ನೀರು ಹರಿಸಿದ್ದರೆ ನೂರಾರು ಕೊಳವೆ ಬಾವಿಗಳು ತುಂಬಿಕೊಳ್ಳುತ್ತಿದ್ದವು. ಕುಡಿಯುಲು ನೀರು ಪೂರೈಕೆ ಮಾಡಬಹುದಿತ್ತು. ಇದ್ಯಾವುದನ್ನು ಮಾಡದೆ ಕೇವಲ ಕೆರೆಯ ಅಂಗಳಕ್ಕೆ ಮಣ್ಣನ್ನು ಸುರಿಯಲಾಗುತ್ತಿದೆ. ಇದು ಕೂಡಲೇ ನಿಲ್ಲಿಸಬೇಕು. ಇದು ಜೇಬು ತುಂಬಿಸುಕೊಳ್ಳುವ ಕಾಮಗಾರಿಯೇ ಹೊರತು ಜನರಿಗೇನೂ ಪ್ರಯೋಜನವಿಲ್ಲ ಎಂದು ರಂಗನಾಥ್ ಕಿಡಿಕಾರಿದ್ದಾರೆ.

ಜನಪ್ರಿಯ ಅಧಿಕಾರಿ ಭೂಬಾಲನ್‌

ಕೆರೆಯನ್ನು ಹಾಳುಗೆಡವಲು ಮತ್ತು ಈ ಜಾಗದಲ್ಲಿ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವುದು ಕೆಲವು ರಾಜಕಾರಣಿಗಳು ಉದ್ದೇಶವಾಗಿದೆ. ಏನಾದರೂ ಮಾಡಿ ಕೆರೆಯನ್ನು ಸಂಪೂರ್ಣ ನುಂಗಿದರೆ ಲೇಔಟ್ ಮಾಡಬಹುದು ಎಂಬ ಹುನ್ನಾರವೂ ಇದರಲ್ಲಿ ಅಡಗಿದೆ. ನಿಜವಾಗಿ ಅಭಿವೃದ್ಧಿ ಎಂದರೆ ರಸ್ತೆಗಳಲ್ಲ. ಜನರ ಜೀವನಮಟ್ಟ ಸುಧಾರಣೆ ಆಗಬೇಕು. ಅದಾಗದಿದ್ದರೆ ಎಷ್ಟೇ ಅಭಿವೃದ್ಧಿ ಮಾಡಿದರೂ ಯಾರಿಗೂ ನಯಾ ಪೈಸೆ ಪ್ರಯೋಜನವಿಲ್ಲ ಎಂಬುದನ್ನು ಮನಗಾಣಬೇಕಾಗಿದೆ.

ತುಮಕೂರು ಮಹಾನಗರ ಪಾಲಿಕೆಗೆ ಮತ್ತೆ ಭೂಬಾಲನ್ ಬಂದಿದ್ದಾರೆ. ಸ್ಮಾರ್ಟ್ ಸಿಟಿ ಹೆಸರನಲ್ಲಿ ನಡೆಯುತ್ತಿರುವ ಕಾಮಗಾರಿಗಳು ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ಅವರ ಮೇಲಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಾಗಿರುವ ಅಕ್ರಮಗಳನ್ನು ಬಯಲಿಗೆ ತರುವಂತಹ ಗುರುತರ ಕೆಲಸ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಭೂಬಾಲನ್ ಶ್ರಮಿಸುವಂತಾಗಲಿ ಎಂಬುದು ಜನರ ಅಭಿಮತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...