Homeಕರ್ನಾಟಕತುಮಕೂರು ಅಮಾನಿಕೆರೆಯನ್ನೇ ನುಂಗುತ್ತಿದೆ ಸ್ಮಾರ್ಟ್ ಸಿಟಿ...

ತುಮಕೂರು ಅಮಾನಿಕೆರೆಯನ್ನೇ ನುಂಗುತ್ತಿದೆ ಸ್ಮಾರ್ಟ್ ಸಿಟಿ…

- Advertisement -
- Advertisement -

ತುಮಕೂರು ಅಮಾನಿಕೆರೆ ವಿಸ್ತೀರ್ಣ ದಿನೇದಿನೇ ಕುಗ್ಗುತ್ತಲೇ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಹತ್ತಿರ ಹತ್ತಿರ 900 ಎಕರೆ ಪ್ರದೇಶದಲ್ಲಿ ಹರಡಿದ ಕೆರೆಯ ಅಂಗಳ ಈಗ 500 ಎಕರೆಗೆ ಬಂದು ನಿಂತಿದೆ. ಅಂದರೆ ಸುಮಾರು 400 ಎಕರೆ ಕೆರೆಯನ್ನು ನುಂಗಣ್ಣಗಳ ಪಾಲಾಗಿದೆ. ಆದರೆ ಜಿಲ್ಲಾಡಳಿತ ಮಾತ್ರ ತಣ್ಣಗೆ ಕುಳಿತಿದೆ. ನುಂಗಣ್ಣಗಳು ಬಾರಿ ಕುಳಗಳೆಂಬುದೇ ಮೌನಕ್ಕೆ ಕಾರಣ. ನುಂಗಣ್ಣಗಳಿಂದ ಒತ್ತುವರಿ ಮಾಡಿಕೊಂಡಿರುವುದನ್ನು ತೆರೆವುಗೊಳಿಸುವ ಗೋಜಿಗೇ ಹೋಗಿಲ್ಲ. ಸಣ್ಣ ಪ್ರಯತ್ನವನ್ನೇ ಮಾಡಿಲ್ಲ. ಸರ್ಕಾರಿ ಜಮೀನು ಅದರಲ್ಲೂ ಕೆರೆಯ ಜಾಗ ಒತ್ತುವರಿಯಾಗಿದ್ದರೂ ಜಿಲ್ಲಾಡಳಿತ ಮಾತ್ರ ಕಿವಿಕೇಳದಂತೆ ನಡೆದುಕೊಳ್ಳುತ್ತಿದೆ.

ಅಮಾನಿಕೆರೆಯ ಅಭಿವೃದ್ಧಿಗೆಂದು ಸುಮಾರು 40 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಇದು ಮಾಜಿ ಸಚಿವ ಸೊಗಡು ಶಿವಣ್ಣನವರ ನಂತರ ಶಾಸಕರಾಗಿದ್ದ ರಫೀಕ್ ಅಹಮದ್ ಕಾಲದಲ್ಲಿ ಮೊದಲ ಹಂತದಲ್ಲಿ ಉದ್ಯಾನ, ವಾಕ್ ಪಾತ್ ಮತ್ತು ಕೆರೆಯ ಹೂಳೆತ್ತಿ ನಡುಗಡ್ಡೆಗಳನ್ನು ನಿರ್ಮಿಸಿ ಕೆರೆಯಲ್ಲಿ ವಿಹಾರ ನಡೆಸಲು ಉದ್ದೇಶಿಸಲಾಗಿತ್ತು. ಕೆರೆಯಲ್ಲಿನ ಮಣ್ಣನ್ನು ಬೇರೆಯ ಕಡೆಗೆ ಸಾಗಿಸಲಿಲ್ಲ. ಬದಲಿಗೆ ಅಲ್ಲಿಯೇ ಉದ್ಯಾನ ನಿರ್ಮಾಣ ಜಾಗದಲ್ಲಿ ಸುರಿಯಲಾಯಿತು. ಅಲ್ಲಿಗೆ ಕೆರೆಯ ಹೂಳೆತ್ತುವ ಮತ್ತು ನೀರು ತುಂಬಿಸುವ ಉದ್ದೇಶ ಮಣ್ಣು ಪಾಲಾಯಿತು. ಕೆರೆಯ ಹೂಳೆತ್ತಲು ಮಾಡಿದ ವೆಚ್ಚ 40 ಕೋಟಿ  ಹಣವನ್ನು ನೀರನಲ್ಲಿ ಹುಣಸೇಹಣ್ಣು ತೊಳೆದಂತಾಯಿತು.

ಹಳೆಯ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಂತೆ  13 ಎಕರೆ ಕೆರೆಯಂಗಳದಲ್ಲಿ ಉದ್ಯಾನವನ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಖಾಸಗಿಯವರು ಒಂದು ಕಡೆ ಒತ್ತುವರಿ ಮಾಡಿದರೆ ಮತ್ತೊಂದು ಕಡೆ ಸ್ಮಾರ್ಟ್ ಸಿಟಿ ಲಿಮಿಟೆಡ್ ನಿಂದ ಸರ್ಕಾರಿ ಒತ್ತುವರಿಯನ್ನು ಮಾಡಲಾಯಿತು. ಇದರಿಂದ ಕೆರೆಯ ನೀರು ತುಂಬುವ ಸಾಮರ್ಥ್ಯ ಗಣನೀಯವಾಗಿ ಇಳಿಕೆಯಾಗಿದೆ. ಒಂದಷ್ಟು ದಿನ ಪರಿಸರವಾದಿಗಳು ಇದರ ವಿರುದ್ಧ ದನಿ ಎತ್ತಿದರೂ ನರಿಯ ಕೂಗು ಗಿರಿಗೆ ಮುಟ್ಟೀತೆ ಎನ್ನುವಂತಾಯಿತು.

ತುಮಕೂರು ನಗರಕ್ಕೆ ಕುಡಿಯುವ ಉದ್ದೇಶಕ್ಕಾಗಿ ಒಂದು ಟಿಎಂಸಿ ನೀರನ್ನು ಬಳಸಿಕೊಳ್ಳಲು ಅವಕಾಶವಿದೆ. ಆದರೆ ಬುಗುಡನಹಳ್ಳಿ ಜಲಸಂಗ್ರಹಾಗಾರ ಕೇವಲ 240 ಎಂಸಿಎಫ್ ಟಸಿ ನೀರು ಮಾತ್ರ ಸಂಗ್ರಹ ಸಾಮರ್ಥ್ಯ ಹೊಂದಿದೆ. ಹೀಗಾಗಿ ಅಮಾನಿಕೆರೆಯಲ್ಲಿ ನೀರು ಸಂಗ್ರಹ ಮಾಡಿಕೊಂಡು ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಿದ್ದರೆ ಜನರಿಗೆ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ. ಅಂದರೆ ಅಮಾನಿಕೆರೆ ನಿಜವಾದ ಉದ್ದೇಶ ಈಡೇರಲಿಲ್ಲ. ಕುಡಿಯುವ ನೀರಿನ ಯೋಜನೆಗೂ ಅಮಾನಿಕೆರೆಯನ್ನು ಬಳಸಿಕೊಳ್ಳಲು ಮುಂದಾಗಲಿಲ್ಲ. ಕೆರೆಯಲ್ಲಿ ಉದ್ಯಾನವನ ನಿರ್ಮಾಣ ಮುಖ್ಯವಾಯಿತೇ ವಿನಃ ಜನರಿಗೆ ಕುಡಿಯುವ ನೀರು ಒದಗಿಸಬೇಕೆಂಬ ಕನಿಷ್ಠ ಜ್ಞಾನವೂ ಜನಪ್ರತಿನಿಧಿಗಳಿಗಾಗಲಿ, ಜಿಲ್ಲಾಡಳಿತಕ್ಕಾಗಲಿ, ಶಾಸಕರಿಗಾಗಲೀ ಬರಲೇ ಇಲ್ಲ.

ಇದೀಗ ಕೆರೆಯ ಸುತ್ತಲೂ ಸ್ಮಾರ್ಟ್ ಸಿಟಿಯ ಭಾಗವಾಗಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದಕ್ಕಾಗಿ ಮತ್ತಷ್ಟು ಒತ್ತುವರಿ ಮಾಡಿಕೊಂಡಿದ್ದು ಕೆರೆಯ ವಿಸ್ತೀರ್ಣ ಕಡಿಮೆಯಾಗಿದೆ. ಹತ್ತಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದ್ದು, ಇದರಿಂದ ಕಿಂಚಿತ್ತೂ ಜನೋಪಯೋಗಿಯಾಗಿ ಅನಿಸುತ್ತಿಲ್ಲ. ಸ್ಮಾರ್ಟ್ ಸಿಟಿ ನೆಪದಲ್ಲಿ ಹಣ ದೋಚಲಾಗುತ್ತಿದೆ. ಕೆರೆಯನ್ನು ಕಿರಿದುಗೊಳಿಸಿ ಮುಂದೆ ಕೆರೆಯನ್ನೇ ಇಲ್ಲವಾಗಿಸುವ ಯತ್ನ ನಡೆಯುತ್ತಿದೆ. ಕೆರೆಗೆ ನೀರು ಹರಿಸಿದ್ದರೆ ನೂರಾರು ಕೊಳವೆ ಬಾವಿಗಳು ತುಂಬಿಕೊಳ್ಳುತ್ತಿದ್ದವು. ಕುಡಿಯುಲು ನೀರು ಪೂರೈಕೆ ಮಾಡಬಹುದಿತ್ತು. ಇದ್ಯಾವುದನ್ನು ಮಾಡದೆ ಕೇವಲ ಕೆರೆಯ ಅಂಗಳಕ್ಕೆ ಮಣ್ಣನ್ನು ಸುರಿಯಲಾಗುತ್ತಿದೆ. ಇದು ಕೂಡಲೇ ನಿಲ್ಲಿಸಬೇಕು. ಇದು ಜೇಬು ತುಂಬಿಸುಕೊಳ್ಳುವ ಕಾಮಗಾರಿಯೇ ಹೊರತು ಜನರಿಗೇನೂ ಪ್ರಯೋಜನವಿಲ್ಲ ಎಂದು ರಂಗನಾಥ್ ಕಿಡಿಕಾರಿದ್ದಾರೆ.

ಜನಪ್ರಿಯ ಅಧಿಕಾರಿ ಭೂಬಾಲನ್‌

ಕೆರೆಯನ್ನು ಹಾಳುಗೆಡವಲು ಮತ್ತು ಈ ಜಾಗದಲ್ಲಿ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವುದು ಕೆಲವು ರಾಜಕಾರಣಿಗಳು ಉದ್ದೇಶವಾಗಿದೆ. ಏನಾದರೂ ಮಾಡಿ ಕೆರೆಯನ್ನು ಸಂಪೂರ್ಣ ನುಂಗಿದರೆ ಲೇಔಟ್ ಮಾಡಬಹುದು ಎಂಬ ಹುನ್ನಾರವೂ ಇದರಲ್ಲಿ ಅಡಗಿದೆ. ನಿಜವಾಗಿ ಅಭಿವೃದ್ಧಿ ಎಂದರೆ ರಸ್ತೆಗಳಲ್ಲ. ಜನರ ಜೀವನಮಟ್ಟ ಸುಧಾರಣೆ ಆಗಬೇಕು. ಅದಾಗದಿದ್ದರೆ ಎಷ್ಟೇ ಅಭಿವೃದ್ಧಿ ಮಾಡಿದರೂ ಯಾರಿಗೂ ನಯಾ ಪೈಸೆ ಪ್ರಯೋಜನವಿಲ್ಲ ಎಂಬುದನ್ನು ಮನಗಾಣಬೇಕಾಗಿದೆ.

ತುಮಕೂರು ಮಹಾನಗರ ಪಾಲಿಕೆಗೆ ಮತ್ತೆ ಭೂಬಾಲನ್ ಬಂದಿದ್ದಾರೆ. ಸ್ಮಾರ್ಟ್ ಸಿಟಿ ಹೆಸರನಲ್ಲಿ ನಡೆಯುತ್ತಿರುವ ಕಾಮಗಾರಿಗಳು ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ಅವರ ಮೇಲಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಾಗಿರುವ ಅಕ್ರಮಗಳನ್ನು ಬಯಲಿಗೆ ತರುವಂತಹ ಗುರುತರ ಕೆಲಸ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಭೂಬಾಲನ್ ಶ್ರಮಿಸುವಂತಾಗಲಿ ಎಂಬುದು ಜನರ ಅಭಿಮತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...