Homeಕರ್ನಾಟಕತುಮಕೂರು ಅಮಾನಿಕೆರೆಯನ್ನೇ ನುಂಗುತ್ತಿದೆ ಸ್ಮಾರ್ಟ್ ಸಿಟಿ...

ತುಮಕೂರು ಅಮಾನಿಕೆರೆಯನ್ನೇ ನುಂಗುತ್ತಿದೆ ಸ್ಮಾರ್ಟ್ ಸಿಟಿ…

- Advertisement -
- Advertisement -

ತುಮಕೂರು ಅಮಾನಿಕೆರೆ ವಿಸ್ತೀರ್ಣ ದಿನೇದಿನೇ ಕುಗ್ಗುತ್ತಲೇ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಹತ್ತಿರ ಹತ್ತಿರ 900 ಎಕರೆ ಪ್ರದೇಶದಲ್ಲಿ ಹರಡಿದ ಕೆರೆಯ ಅಂಗಳ ಈಗ 500 ಎಕರೆಗೆ ಬಂದು ನಿಂತಿದೆ. ಅಂದರೆ ಸುಮಾರು 400 ಎಕರೆ ಕೆರೆಯನ್ನು ನುಂಗಣ್ಣಗಳ ಪಾಲಾಗಿದೆ. ಆದರೆ ಜಿಲ್ಲಾಡಳಿತ ಮಾತ್ರ ತಣ್ಣಗೆ ಕುಳಿತಿದೆ. ನುಂಗಣ್ಣಗಳು ಬಾರಿ ಕುಳಗಳೆಂಬುದೇ ಮೌನಕ್ಕೆ ಕಾರಣ. ನುಂಗಣ್ಣಗಳಿಂದ ಒತ್ತುವರಿ ಮಾಡಿಕೊಂಡಿರುವುದನ್ನು ತೆರೆವುಗೊಳಿಸುವ ಗೋಜಿಗೇ ಹೋಗಿಲ್ಲ. ಸಣ್ಣ ಪ್ರಯತ್ನವನ್ನೇ ಮಾಡಿಲ್ಲ. ಸರ್ಕಾರಿ ಜಮೀನು ಅದರಲ್ಲೂ ಕೆರೆಯ ಜಾಗ ಒತ್ತುವರಿಯಾಗಿದ್ದರೂ ಜಿಲ್ಲಾಡಳಿತ ಮಾತ್ರ ಕಿವಿಕೇಳದಂತೆ ನಡೆದುಕೊಳ್ಳುತ್ತಿದೆ.

ಅಮಾನಿಕೆರೆಯ ಅಭಿವೃದ್ಧಿಗೆಂದು ಸುಮಾರು 40 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಇದು ಮಾಜಿ ಸಚಿವ ಸೊಗಡು ಶಿವಣ್ಣನವರ ನಂತರ ಶಾಸಕರಾಗಿದ್ದ ರಫೀಕ್ ಅಹಮದ್ ಕಾಲದಲ್ಲಿ ಮೊದಲ ಹಂತದಲ್ಲಿ ಉದ್ಯಾನ, ವಾಕ್ ಪಾತ್ ಮತ್ತು ಕೆರೆಯ ಹೂಳೆತ್ತಿ ನಡುಗಡ್ಡೆಗಳನ್ನು ನಿರ್ಮಿಸಿ ಕೆರೆಯಲ್ಲಿ ವಿಹಾರ ನಡೆಸಲು ಉದ್ದೇಶಿಸಲಾಗಿತ್ತು. ಕೆರೆಯಲ್ಲಿನ ಮಣ್ಣನ್ನು ಬೇರೆಯ ಕಡೆಗೆ ಸಾಗಿಸಲಿಲ್ಲ. ಬದಲಿಗೆ ಅಲ್ಲಿಯೇ ಉದ್ಯಾನ ನಿರ್ಮಾಣ ಜಾಗದಲ್ಲಿ ಸುರಿಯಲಾಯಿತು. ಅಲ್ಲಿಗೆ ಕೆರೆಯ ಹೂಳೆತ್ತುವ ಮತ್ತು ನೀರು ತುಂಬಿಸುವ ಉದ್ದೇಶ ಮಣ್ಣು ಪಾಲಾಯಿತು. ಕೆರೆಯ ಹೂಳೆತ್ತಲು ಮಾಡಿದ ವೆಚ್ಚ 40 ಕೋಟಿ  ಹಣವನ್ನು ನೀರನಲ್ಲಿ ಹುಣಸೇಹಣ್ಣು ತೊಳೆದಂತಾಯಿತು.

ಹಳೆಯ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಂತೆ  13 ಎಕರೆ ಕೆರೆಯಂಗಳದಲ್ಲಿ ಉದ್ಯಾನವನ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಖಾಸಗಿಯವರು ಒಂದು ಕಡೆ ಒತ್ತುವರಿ ಮಾಡಿದರೆ ಮತ್ತೊಂದು ಕಡೆ ಸ್ಮಾರ್ಟ್ ಸಿಟಿ ಲಿಮಿಟೆಡ್ ನಿಂದ ಸರ್ಕಾರಿ ಒತ್ತುವರಿಯನ್ನು ಮಾಡಲಾಯಿತು. ಇದರಿಂದ ಕೆರೆಯ ನೀರು ತುಂಬುವ ಸಾಮರ್ಥ್ಯ ಗಣನೀಯವಾಗಿ ಇಳಿಕೆಯಾಗಿದೆ. ಒಂದಷ್ಟು ದಿನ ಪರಿಸರವಾದಿಗಳು ಇದರ ವಿರುದ್ಧ ದನಿ ಎತ್ತಿದರೂ ನರಿಯ ಕೂಗು ಗಿರಿಗೆ ಮುಟ್ಟೀತೆ ಎನ್ನುವಂತಾಯಿತು.

ತುಮಕೂರು ನಗರಕ್ಕೆ ಕುಡಿಯುವ ಉದ್ದೇಶಕ್ಕಾಗಿ ಒಂದು ಟಿಎಂಸಿ ನೀರನ್ನು ಬಳಸಿಕೊಳ್ಳಲು ಅವಕಾಶವಿದೆ. ಆದರೆ ಬುಗುಡನಹಳ್ಳಿ ಜಲಸಂಗ್ರಹಾಗಾರ ಕೇವಲ 240 ಎಂಸಿಎಫ್ ಟಸಿ ನೀರು ಮಾತ್ರ ಸಂಗ್ರಹ ಸಾಮರ್ಥ್ಯ ಹೊಂದಿದೆ. ಹೀಗಾಗಿ ಅಮಾನಿಕೆರೆಯಲ್ಲಿ ನೀರು ಸಂಗ್ರಹ ಮಾಡಿಕೊಂಡು ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಿದ್ದರೆ ಜನರಿಗೆ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ. ಅಂದರೆ ಅಮಾನಿಕೆರೆ ನಿಜವಾದ ಉದ್ದೇಶ ಈಡೇರಲಿಲ್ಲ. ಕುಡಿಯುವ ನೀರಿನ ಯೋಜನೆಗೂ ಅಮಾನಿಕೆರೆಯನ್ನು ಬಳಸಿಕೊಳ್ಳಲು ಮುಂದಾಗಲಿಲ್ಲ. ಕೆರೆಯಲ್ಲಿ ಉದ್ಯಾನವನ ನಿರ್ಮಾಣ ಮುಖ್ಯವಾಯಿತೇ ವಿನಃ ಜನರಿಗೆ ಕುಡಿಯುವ ನೀರು ಒದಗಿಸಬೇಕೆಂಬ ಕನಿಷ್ಠ ಜ್ಞಾನವೂ ಜನಪ್ರತಿನಿಧಿಗಳಿಗಾಗಲಿ, ಜಿಲ್ಲಾಡಳಿತಕ್ಕಾಗಲಿ, ಶಾಸಕರಿಗಾಗಲೀ ಬರಲೇ ಇಲ್ಲ.

ಇದೀಗ ಕೆರೆಯ ಸುತ್ತಲೂ ಸ್ಮಾರ್ಟ್ ಸಿಟಿಯ ಭಾಗವಾಗಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದಕ್ಕಾಗಿ ಮತ್ತಷ್ಟು ಒತ್ತುವರಿ ಮಾಡಿಕೊಂಡಿದ್ದು ಕೆರೆಯ ವಿಸ್ತೀರ್ಣ ಕಡಿಮೆಯಾಗಿದೆ. ಹತ್ತಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದ್ದು, ಇದರಿಂದ ಕಿಂಚಿತ್ತೂ ಜನೋಪಯೋಗಿಯಾಗಿ ಅನಿಸುತ್ತಿಲ್ಲ. ಸ್ಮಾರ್ಟ್ ಸಿಟಿ ನೆಪದಲ್ಲಿ ಹಣ ದೋಚಲಾಗುತ್ತಿದೆ. ಕೆರೆಯನ್ನು ಕಿರಿದುಗೊಳಿಸಿ ಮುಂದೆ ಕೆರೆಯನ್ನೇ ಇಲ್ಲವಾಗಿಸುವ ಯತ್ನ ನಡೆಯುತ್ತಿದೆ. ಕೆರೆಗೆ ನೀರು ಹರಿಸಿದ್ದರೆ ನೂರಾರು ಕೊಳವೆ ಬಾವಿಗಳು ತುಂಬಿಕೊಳ್ಳುತ್ತಿದ್ದವು. ಕುಡಿಯುಲು ನೀರು ಪೂರೈಕೆ ಮಾಡಬಹುದಿತ್ತು. ಇದ್ಯಾವುದನ್ನು ಮಾಡದೆ ಕೇವಲ ಕೆರೆಯ ಅಂಗಳಕ್ಕೆ ಮಣ್ಣನ್ನು ಸುರಿಯಲಾಗುತ್ತಿದೆ. ಇದು ಕೂಡಲೇ ನಿಲ್ಲಿಸಬೇಕು. ಇದು ಜೇಬು ತುಂಬಿಸುಕೊಳ್ಳುವ ಕಾಮಗಾರಿಯೇ ಹೊರತು ಜನರಿಗೇನೂ ಪ್ರಯೋಜನವಿಲ್ಲ ಎಂದು ರಂಗನಾಥ್ ಕಿಡಿಕಾರಿದ್ದಾರೆ.

ಜನಪ್ರಿಯ ಅಧಿಕಾರಿ ಭೂಬಾಲನ್‌

ಕೆರೆಯನ್ನು ಹಾಳುಗೆಡವಲು ಮತ್ತು ಈ ಜಾಗದಲ್ಲಿ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವುದು ಕೆಲವು ರಾಜಕಾರಣಿಗಳು ಉದ್ದೇಶವಾಗಿದೆ. ಏನಾದರೂ ಮಾಡಿ ಕೆರೆಯನ್ನು ಸಂಪೂರ್ಣ ನುಂಗಿದರೆ ಲೇಔಟ್ ಮಾಡಬಹುದು ಎಂಬ ಹುನ್ನಾರವೂ ಇದರಲ್ಲಿ ಅಡಗಿದೆ. ನಿಜವಾಗಿ ಅಭಿವೃದ್ಧಿ ಎಂದರೆ ರಸ್ತೆಗಳಲ್ಲ. ಜನರ ಜೀವನಮಟ್ಟ ಸುಧಾರಣೆ ಆಗಬೇಕು. ಅದಾಗದಿದ್ದರೆ ಎಷ್ಟೇ ಅಭಿವೃದ್ಧಿ ಮಾಡಿದರೂ ಯಾರಿಗೂ ನಯಾ ಪೈಸೆ ಪ್ರಯೋಜನವಿಲ್ಲ ಎಂಬುದನ್ನು ಮನಗಾಣಬೇಕಾಗಿದೆ.

ತುಮಕೂರು ಮಹಾನಗರ ಪಾಲಿಕೆಗೆ ಮತ್ತೆ ಭೂಬಾಲನ್ ಬಂದಿದ್ದಾರೆ. ಸ್ಮಾರ್ಟ್ ಸಿಟಿ ಹೆಸರನಲ್ಲಿ ನಡೆಯುತ್ತಿರುವ ಕಾಮಗಾರಿಗಳು ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ಅವರ ಮೇಲಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಾಗಿರುವ ಅಕ್ರಮಗಳನ್ನು ಬಯಲಿಗೆ ತರುವಂತಹ ಗುರುತರ ಕೆಲಸ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಭೂಬಾಲನ್ ಶ್ರಮಿಸುವಂತಾಗಲಿ ಎಂಬುದು ಜನರ ಅಭಿಮತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...