Homeಕರ್ನಾಟಕತುಮಕೂರು ಅಮಾನಿಕೆರೆಯನ್ನೇ ನುಂಗುತ್ತಿದೆ ಸ್ಮಾರ್ಟ್ ಸಿಟಿ...

ತುಮಕೂರು ಅಮಾನಿಕೆರೆಯನ್ನೇ ನುಂಗುತ್ತಿದೆ ಸ್ಮಾರ್ಟ್ ಸಿಟಿ…

- Advertisement -
- Advertisement -

ತುಮಕೂರು ಅಮಾನಿಕೆರೆ ವಿಸ್ತೀರ್ಣ ದಿನೇದಿನೇ ಕುಗ್ಗುತ್ತಲೇ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಹತ್ತಿರ ಹತ್ತಿರ 900 ಎಕರೆ ಪ್ರದೇಶದಲ್ಲಿ ಹರಡಿದ ಕೆರೆಯ ಅಂಗಳ ಈಗ 500 ಎಕರೆಗೆ ಬಂದು ನಿಂತಿದೆ. ಅಂದರೆ ಸುಮಾರು 400 ಎಕರೆ ಕೆರೆಯನ್ನು ನುಂಗಣ್ಣಗಳ ಪಾಲಾಗಿದೆ. ಆದರೆ ಜಿಲ್ಲಾಡಳಿತ ಮಾತ್ರ ತಣ್ಣಗೆ ಕುಳಿತಿದೆ. ನುಂಗಣ್ಣಗಳು ಬಾರಿ ಕುಳಗಳೆಂಬುದೇ ಮೌನಕ್ಕೆ ಕಾರಣ. ನುಂಗಣ್ಣಗಳಿಂದ ಒತ್ತುವರಿ ಮಾಡಿಕೊಂಡಿರುವುದನ್ನು ತೆರೆವುಗೊಳಿಸುವ ಗೋಜಿಗೇ ಹೋಗಿಲ್ಲ. ಸಣ್ಣ ಪ್ರಯತ್ನವನ್ನೇ ಮಾಡಿಲ್ಲ. ಸರ್ಕಾರಿ ಜಮೀನು ಅದರಲ್ಲೂ ಕೆರೆಯ ಜಾಗ ಒತ್ತುವರಿಯಾಗಿದ್ದರೂ ಜಿಲ್ಲಾಡಳಿತ ಮಾತ್ರ ಕಿವಿಕೇಳದಂತೆ ನಡೆದುಕೊಳ್ಳುತ್ತಿದೆ.

ಅಮಾನಿಕೆರೆಯ ಅಭಿವೃದ್ಧಿಗೆಂದು ಸುಮಾರು 40 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಇದು ಮಾಜಿ ಸಚಿವ ಸೊಗಡು ಶಿವಣ್ಣನವರ ನಂತರ ಶಾಸಕರಾಗಿದ್ದ ರಫೀಕ್ ಅಹಮದ್ ಕಾಲದಲ್ಲಿ ಮೊದಲ ಹಂತದಲ್ಲಿ ಉದ್ಯಾನ, ವಾಕ್ ಪಾತ್ ಮತ್ತು ಕೆರೆಯ ಹೂಳೆತ್ತಿ ನಡುಗಡ್ಡೆಗಳನ್ನು ನಿರ್ಮಿಸಿ ಕೆರೆಯಲ್ಲಿ ವಿಹಾರ ನಡೆಸಲು ಉದ್ದೇಶಿಸಲಾಗಿತ್ತು. ಕೆರೆಯಲ್ಲಿನ ಮಣ್ಣನ್ನು ಬೇರೆಯ ಕಡೆಗೆ ಸಾಗಿಸಲಿಲ್ಲ. ಬದಲಿಗೆ ಅಲ್ಲಿಯೇ ಉದ್ಯಾನ ನಿರ್ಮಾಣ ಜಾಗದಲ್ಲಿ ಸುರಿಯಲಾಯಿತು. ಅಲ್ಲಿಗೆ ಕೆರೆಯ ಹೂಳೆತ್ತುವ ಮತ್ತು ನೀರು ತುಂಬಿಸುವ ಉದ್ದೇಶ ಮಣ್ಣು ಪಾಲಾಯಿತು. ಕೆರೆಯ ಹೂಳೆತ್ತಲು ಮಾಡಿದ ವೆಚ್ಚ 40 ಕೋಟಿ  ಹಣವನ್ನು ನೀರನಲ್ಲಿ ಹುಣಸೇಹಣ್ಣು ತೊಳೆದಂತಾಯಿತು.

ಹಳೆಯ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಂತೆ  13 ಎಕರೆ ಕೆರೆಯಂಗಳದಲ್ಲಿ ಉದ್ಯಾನವನ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಖಾಸಗಿಯವರು ಒಂದು ಕಡೆ ಒತ್ತುವರಿ ಮಾಡಿದರೆ ಮತ್ತೊಂದು ಕಡೆ ಸ್ಮಾರ್ಟ್ ಸಿಟಿ ಲಿಮಿಟೆಡ್ ನಿಂದ ಸರ್ಕಾರಿ ಒತ್ತುವರಿಯನ್ನು ಮಾಡಲಾಯಿತು. ಇದರಿಂದ ಕೆರೆಯ ನೀರು ತುಂಬುವ ಸಾಮರ್ಥ್ಯ ಗಣನೀಯವಾಗಿ ಇಳಿಕೆಯಾಗಿದೆ. ಒಂದಷ್ಟು ದಿನ ಪರಿಸರವಾದಿಗಳು ಇದರ ವಿರುದ್ಧ ದನಿ ಎತ್ತಿದರೂ ನರಿಯ ಕೂಗು ಗಿರಿಗೆ ಮುಟ್ಟೀತೆ ಎನ್ನುವಂತಾಯಿತು.

ತುಮಕೂರು ನಗರಕ್ಕೆ ಕುಡಿಯುವ ಉದ್ದೇಶಕ್ಕಾಗಿ ಒಂದು ಟಿಎಂಸಿ ನೀರನ್ನು ಬಳಸಿಕೊಳ್ಳಲು ಅವಕಾಶವಿದೆ. ಆದರೆ ಬುಗುಡನಹಳ್ಳಿ ಜಲಸಂಗ್ರಹಾಗಾರ ಕೇವಲ 240 ಎಂಸಿಎಫ್ ಟಸಿ ನೀರು ಮಾತ್ರ ಸಂಗ್ರಹ ಸಾಮರ್ಥ್ಯ ಹೊಂದಿದೆ. ಹೀಗಾಗಿ ಅಮಾನಿಕೆರೆಯಲ್ಲಿ ನೀರು ಸಂಗ್ರಹ ಮಾಡಿಕೊಂಡು ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಿದ್ದರೆ ಜನರಿಗೆ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ. ಅಂದರೆ ಅಮಾನಿಕೆರೆ ನಿಜವಾದ ಉದ್ದೇಶ ಈಡೇರಲಿಲ್ಲ. ಕುಡಿಯುವ ನೀರಿನ ಯೋಜನೆಗೂ ಅಮಾನಿಕೆರೆಯನ್ನು ಬಳಸಿಕೊಳ್ಳಲು ಮುಂದಾಗಲಿಲ್ಲ. ಕೆರೆಯಲ್ಲಿ ಉದ್ಯಾನವನ ನಿರ್ಮಾಣ ಮುಖ್ಯವಾಯಿತೇ ವಿನಃ ಜನರಿಗೆ ಕುಡಿಯುವ ನೀರು ಒದಗಿಸಬೇಕೆಂಬ ಕನಿಷ್ಠ ಜ್ಞಾನವೂ ಜನಪ್ರತಿನಿಧಿಗಳಿಗಾಗಲಿ, ಜಿಲ್ಲಾಡಳಿತಕ್ಕಾಗಲಿ, ಶಾಸಕರಿಗಾಗಲೀ ಬರಲೇ ಇಲ್ಲ.

ಇದೀಗ ಕೆರೆಯ ಸುತ್ತಲೂ ಸ್ಮಾರ್ಟ್ ಸಿಟಿಯ ಭಾಗವಾಗಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದಕ್ಕಾಗಿ ಮತ್ತಷ್ಟು ಒತ್ತುವರಿ ಮಾಡಿಕೊಂಡಿದ್ದು ಕೆರೆಯ ವಿಸ್ತೀರ್ಣ ಕಡಿಮೆಯಾಗಿದೆ. ಹತ್ತಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದ್ದು, ಇದರಿಂದ ಕಿಂಚಿತ್ತೂ ಜನೋಪಯೋಗಿಯಾಗಿ ಅನಿಸುತ್ತಿಲ್ಲ. ಸ್ಮಾರ್ಟ್ ಸಿಟಿ ನೆಪದಲ್ಲಿ ಹಣ ದೋಚಲಾಗುತ್ತಿದೆ. ಕೆರೆಯನ್ನು ಕಿರಿದುಗೊಳಿಸಿ ಮುಂದೆ ಕೆರೆಯನ್ನೇ ಇಲ್ಲವಾಗಿಸುವ ಯತ್ನ ನಡೆಯುತ್ತಿದೆ. ಕೆರೆಗೆ ನೀರು ಹರಿಸಿದ್ದರೆ ನೂರಾರು ಕೊಳವೆ ಬಾವಿಗಳು ತುಂಬಿಕೊಳ್ಳುತ್ತಿದ್ದವು. ಕುಡಿಯುಲು ನೀರು ಪೂರೈಕೆ ಮಾಡಬಹುದಿತ್ತು. ಇದ್ಯಾವುದನ್ನು ಮಾಡದೆ ಕೇವಲ ಕೆರೆಯ ಅಂಗಳಕ್ಕೆ ಮಣ್ಣನ್ನು ಸುರಿಯಲಾಗುತ್ತಿದೆ. ಇದು ಕೂಡಲೇ ನಿಲ್ಲಿಸಬೇಕು. ಇದು ಜೇಬು ತುಂಬಿಸುಕೊಳ್ಳುವ ಕಾಮಗಾರಿಯೇ ಹೊರತು ಜನರಿಗೇನೂ ಪ್ರಯೋಜನವಿಲ್ಲ ಎಂದು ರಂಗನಾಥ್ ಕಿಡಿಕಾರಿದ್ದಾರೆ.

ಜನಪ್ರಿಯ ಅಧಿಕಾರಿ ಭೂಬಾಲನ್‌

ಕೆರೆಯನ್ನು ಹಾಳುಗೆಡವಲು ಮತ್ತು ಈ ಜಾಗದಲ್ಲಿ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವುದು ಕೆಲವು ರಾಜಕಾರಣಿಗಳು ಉದ್ದೇಶವಾಗಿದೆ. ಏನಾದರೂ ಮಾಡಿ ಕೆರೆಯನ್ನು ಸಂಪೂರ್ಣ ನುಂಗಿದರೆ ಲೇಔಟ್ ಮಾಡಬಹುದು ಎಂಬ ಹುನ್ನಾರವೂ ಇದರಲ್ಲಿ ಅಡಗಿದೆ. ನಿಜವಾಗಿ ಅಭಿವೃದ್ಧಿ ಎಂದರೆ ರಸ್ತೆಗಳಲ್ಲ. ಜನರ ಜೀವನಮಟ್ಟ ಸುಧಾರಣೆ ಆಗಬೇಕು. ಅದಾಗದಿದ್ದರೆ ಎಷ್ಟೇ ಅಭಿವೃದ್ಧಿ ಮಾಡಿದರೂ ಯಾರಿಗೂ ನಯಾ ಪೈಸೆ ಪ್ರಯೋಜನವಿಲ್ಲ ಎಂಬುದನ್ನು ಮನಗಾಣಬೇಕಾಗಿದೆ.

ತುಮಕೂರು ಮಹಾನಗರ ಪಾಲಿಕೆಗೆ ಮತ್ತೆ ಭೂಬಾಲನ್ ಬಂದಿದ್ದಾರೆ. ಸ್ಮಾರ್ಟ್ ಸಿಟಿ ಹೆಸರನಲ್ಲಿ ನಡೆಯುತ್ತಿರುವ ಕಾಮಗಾರಿಗಳು ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ಅವರ ಮೇಲಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಾಗಿರುವ ಅಕ್ರಮಗಳನ್ನು ಬಯಲಿಗೆ ತರುವಂತಹ ಗುರುತರ ಕೆಲಸ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಭೂಬಾಲನ್ ಶ್ರಮಿಸುವಂತಾಗಲಿ ಎಂಬುದು ಜನರ ಅಭಿಮತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...