Homeಕರ್ನಾಟಕಮಾನಮರ್ಯಾದೆ ಇದ್ದರೆ ಶಾಲಿನಿ ರಜಿನೀಶ್ ರಾಜಿನಾಮೆ ಕೊಟ್ಟು ಮನೆಗೆ ಹೋಗಲಿ: ಸೊಗಡು ಶಿವಣ್ಣ ಕಿಡಿ

ಮಾನಮರ್ಯಾದೆ ಇದ್ದರೆ ಶಾಲಿನಿ ರಜಿನೀಶ್ ರಾಜಿನಾಮೆ ಕೊಟ್ಟು ಮನೆಗೆ ಹೋಗಲಿ: ಸೊಗಡು ಶಿವಣ್ಣ ಕಿಡಿ

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ನಿರ್ಮಾಣಕ್ಕಾಗಿ ದಾಸ್ತಾನು ಮಾಡಿದ್ದ ಗ್ಯಾಸ್ ಪೈಪ್ ಗಳು ಸುಟ್ಟು ಹೋಗಿದ್ದರೂ ಒಬ್ಬೇ ಒಬ್ಬ ಅಧಿಕಾರಿಯೂ ಸ್ಥಳಕ್ಕೆ ಬಂದು ಪರಿಶೀಲಿಸಿಲ್ಲ. ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧ್ಯಕ್ಷ ಶಾಲಿನಿ ರಜನೀಶ್ ಬೇಜವಾಬ್ದಾರಿ ಹಿನ್ನೆಲೆಯಲ್ಲೇ ಬೆಂಕಿ ದುರಂತ ಸಂಭವಿಸಿದ್ದು, ಮಾನಮರ್ಯಾದೆ ಇದ್ದರೆ ಅವರು ರಾಜಿನಾಮೆ ಕೊಟ್ಟು ಮನೆಗೆ ಹೋಗಲಿ. ಇಲ್ಲವೇ ಸರ್ಕಾರ ಶಾಲಿನಿ ಅವರನ್ನು ಅಮಾನತು ಮಾಡಲಿ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸೊಗಡು ಶಿವಣ್ಣ ಒತ್ತಾಯಿಸಿದ್ದಾರೆ.

ತುಮಕೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕುಡಿಯುವ ನೀರು ಮತ್ತು ಒಳಚರಂಡಿ ನಿರ್ಮಾಣಕ್ಕಾಗಿ ದಾಸ್ತಾನು ಮಾಡಿದ್ದ ನಾಲ್ಕು ಲಾರಿ ಲೋಡು ಪಿವಿಸಿ ಪೈಪ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿರುವ ಘಟನೆ ಬುಧವಾರ ಮುಂಜಾನೆ  ಸಂಭವಿಸಿತ್ತು.

ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿಬಂದಿರುವ ನಡುವೆಯೇ ಇದೀಗ ಪಿವಿಸಿ ಪೈಪ್ ಗಳು ಬೆಂಕಿಯಲ್ಲಿ ಸುಟ್ಟ ಭಸ್ಮವಾಗಿವೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಸ್ಮಾರ್ಟ್ ಸಿಟಿ ಕಾಮಗಾರಿಯ ಪೈಪ್ ಗಳು ಸುಟ್ಟು ಕರಕಲಾಗಿದ್ದರೂ ಸ್ಥಳಕ್ಕೆ ಜಿಲ್ಲಾಧಿಕಾರಿ, ನಗರ ಪಾಲಿಕೆ ಆಯುಕ್ತ, ಯಾರೂ ಬಂದು ನೋಡಿಲ್ಲ. ಇದು ಅವರ ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದು ಸೊಗಡು ಶಿವಣ್ಣ ವಾಗ್ದಾಳಿ ನಡೆಸಿದ್ದಾರೆ.

ಬೆಂಕಿ ಬಿದ್ದ ಸ್ಥಳದ 40 ಅಡಿ ದೂರದಲ್ಲೇ ಮನೆಗಳು ಇವೆ. ಹೆಚ್ಚು ಕಡಿಮೆ ಆಗಿದ್ದರೆ ಅನಾಹುತ ಸಂಭವಿಸುತ್ತಿತ್ತು. ಸದ್ಯಕ್ಕೆ ಅಂತಹ ಅನಾಹುತದಿಂದ ಕಾರ್ಮಿಕರು ಮತ್ತ ಸ್ಥಳೀಯರು ಪಾರಾಗಿದ್ದಾರೆ. ಅದು ನಮ್ಮ ಪುಣ್ಯ. ಬೆಂಕಿ ಜ್ವಾಲೆ ಮನೆಗಳಿಗೆ ತಗುಲಿದ್ದರೆ ಸ್ಮಾರ್ಟ್ ಸಿಟಿ ಹೋಗಿ ಸ್ಮಶಾನ ಸಿಟಿ ಆಗುತ್ತಿತ್ತು. ಬೆಂಕಿ ಹೊತ್ತಿ ಉರಿದರೂ ಅಲ್ಲಿ ಭದ್ರತಾ ಸಿಬ್ಬಂದಿಯನ್ನು ಇಟ್ಟಿಲ್ಲ. ಪೊಲೀಸರು ಗಸ್ತು ತಿರುಗಿಲ್ಲ. ಆದರೆ ಸ್ಮಾರ್ಟ್ ಸಿಟಿ ಅಧಿಕಾರಿಗಳು ಘಟನೆಯೇ ನಡೆದಿಲ್ಲವೆಂಬಂತೆ ಸುಟ್ಟಜಾಗವನ್ನು ಮಣ್ಣಿನಿಂದ ಮುಚ್ಚಿ ಹೋಗಿದ್ದಾರೆ. ಇದು ಘಟನೆಯನ್ನು ಮುಚ್ಚಿ ಹಾಕುವ ತಂತ್ರವಾಗಿದೆ ಎಂದು ಟೀಕಿಸಿದ್ದಾರೆ.

ನಾನು ಹಿಂದೆಯೇ ಆರೋಪಿಸಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ಸ್ಮಾರ್ಟ್ ಸಿಟಿಯಲ್ಲಿ ಅವ್ಯವಹಾರವಾಗಿದೆ. ಇದನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ. ಶಾಲಿನಿ ಜರನೀಶ್ ಅವನ್ನು ಸರ್ಕಾರ ಮನೆಗೆ ಕಳಿಸಬೇಕು. ಮತ್ತೆ ತುಮಕೂರಿಗೆ ಅವರು ಬರಬಾರದು ಎಂದು ಅವರು ತಿಳಿಸಿದರು.

ಪೈಪ್ ಗೆ ಬೆಂಕಿ ತಗುಲಿದ್ದರಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಗೋಡೆಗಳು ಸುಟ್ಟು ಹೋಗಿವೆ. ಡಿಡಿಪಿಐ ಈ ಬಗ್ಗೆ ಸೂಮೋಟೋ ದೂರು ದಾಖಲಿಸಬೇಕಿತ್ತು. ಅವರು ಕೂಡ ಇತ್ತ ತಿರುಗಿಯೂ ನೋಡಿಲ್ಲ. ಇಲ್ಲಿ ಯಾರಿಗೂ ಜನರ ಬಗ್ಗೆ ಕಾಳಜಿ ಇಲ್ಲ. ಪೈಪುಗಳು ಸುಟ್ಟು ಹೋದ ಬಗ್ಗೆ ಕಿಂಚಿತ್ತೂ ಗಮನವಿಲ್ಲ ಎಂದು ಟೀಕಾಪ್ರಹಾರ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...