Homeಕರ್ನಾಟಕಮಾನಮರ್ಯಾದೆ ಇದ್ದರೆ ಶಾಲಿನಿ ರಜಿನೀಶ್ ರಾಜಿನಾಮೆ ಕೊಟ್ಟು ಮನೆಗೆ ಹೋಗಲಿ: ಸೊಗಡು ಶಿವಣ್ಣ ಕಿಡಿ

ಮಾನಮರ್ಯಾದೆ ಇದ್ದರೆ ಶಾಲಿನಿ ರಜಿನೀಶ್ ರಾಜಿನಾಮೆ ಕೊಟ್ಟು ಮನೆಗೆ ಹೋಗಲಿ: ಸೊಗಡು ಶಿವಣ್ಣ ಕಿಡಿ

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ನಿರ್ಮಾಣಕ್ಕಾಗಿ ದಾಸ್ತಾನು ಮಾಡಿದ್ದ ಗ್ಯಾಸ್ ಪೈಪ್ ಗಳು ಸುಟ್ಟು ಹೋಗಿದ್ದರೂ ಒಬ್ಬೇ ಒಬ್ಬ ಅಧಿಕಾರಿಯೂ ಸ್ಥಳಕ್ಕೆ ಬಂದು ಪರಿಶೀಲಿಸಿಲ್ಲ. ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧ್ಯಕ್ಷ ಶಾಲಿನಿ ರಜನೀಶ್ ಬೇಜವಾಬ್ದಾರಿ ಹಿನ್ನೆಲೆಯಲ್ಲೇ ಬೆಂಕಿ ದುರಂತ ಸಂಭವಿಸಿದ್ದು, ಮಾನಮರ್ಯಾದೆ ಇದ್ದರೆ ಅವರು ರಾಜಿನಾಮೆ ಕೊಟ್ಟು ಮನೆಗೆ ಹೋಗಲಿ. ಇಲ್ಲವೇ ಸರ್ಕಾರ ಶಾಲಿನಿ ಅವರನ್ನು ಅಮಾನತು ಮಾಡಲಿ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸೊಗಡು ಶಿವಣ್ಣ ಒತ್ತಾಯಿಸಿದ್ದಾರೆ.

ತುಮಕೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕುಡಿಯುವ ನೀರು ಮತ್ತು ಒಳಚರಂಡಿ ನಿರ್ಮಾಣಕ್ಕಾಗಿ ದಾಸ್ತಾನು ಮಾಡಿದ್ದ ನಾಲ್ಕು ಲಾರಿ ಲೋಡು ಪಿವಿಸಿ ಪೈಪ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿರುವ ಘಟನೆ ಬುಧವಾರ ಮುಂಜಾನೆ  ಸಂಭವಿಸಿತ್ತು.

ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿಬಂದಿರುವ ನಡುವೆಯೇ ಇದೀಗ ಪಿವಿಸಿ ಪೈಪ್ ಗಳು ಬೆಂಕಿಯಲ್ಲಿ ಸುಟ್ಟ ಭಸ್ಮವಾಗಿವೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಸ್ಮಾರ್ಟ್ ಸಿಟಿ ಕಾಮಗಾರಿಯ ಪೈಪ್ ಗಳು ಸುಟ್ಟು ಕರಕಲಾಗಿದ್ದರೂ ಸ್ಥಳಕ್ಕೆ ಜಿಲ್ಲಾಧಿಕಾರಿ, ನಗರ ಪಾಲಿಕೆ ಆಯುಕ್ತ, ಯಾರೂ ಬಂದು ನೋಡಿಲ್ಲ. ಇದು ಅವರ ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದು ಸೊಗಡು ಶಿವಣ್ಣ ವಾಗ್ದಾಳಿ ನಡೆಸಿದ್ದಾರೆ.

ಬೆಂಕಿ ಬಿದ್ದ ಸ್ಥಳದ 40 ಅಡಿ ದೂರದಲ್ಲೇ ಮನೆಗಳು ಇವೆ. ಹೆಚ್ಚು ಕಡಿಮೆ ಆಗಿದ್ದರೆ ಅನಾಹುತ ಸಂಭವಿಸುತ್ತಿತ್ತು. ಸದ್ಯಕ್ಕೆ ಅಂತಹ ಅನಾಹುತದಿಂದ ಕಾರ್ಮಿಕರು ಮತ್ತ ಸ್ಥಳೀಯರು ಪಾರಾಗಿದ್ದಾರೆ. ಅದು ನಮ್ಮ ಪುಣ್ಯ. ಬೆಂಕಿ ಜ್ವಾಲೆ ಮನೆಗಳಿಗೆ ತಗುಲಿದ್ದರೆ ಸ್ಮಾರ್ಟ್ ಸಿಟಿ ಹೋಗಿ ಸ್ಮಶಾನ ಸಿಟಿ ಆಗುತ್ತಿತ್ತು. ಬೆಂಕಿ ಹೊತ್ತಿ ಉರಿದರೂ ಅಲ್ಲಿ ಭದ್ರತಾ ಸಿಬ್ಬಂದಿಯನ್ನು ಇಟ್ಟಿಲ್ಲ. ಪೊಲೀಸರು ಗಸ್ತು ತಿರುಗಿಲ್ಲ. ಆದರೆ ಸ್ಮಾರ್ಟ್ ಸಿಟಿ ಅಧಿಕಾರಿಗಳು ಘಟನೆಯೇ ನಡೆದಿಲ್ಲವೆಂಬಂತೆ ಸುಟ್ಟಜಾಗವನ್ನು ಮಣ್ಣಿನಿಂದ ಮುಚ್ಚಿ ಹೋಗಿದ್ದಾರೆ. ಇದು ಘಟನೆಯನ್ನು ಮುಚ್ಚಿ ಹಾಕುವ ತಂತ್ರವಾಗಿದೆ ಎಂದು ಟೀಕಿಸಿದ್ದಾರೆ.

ನಾನು ಹಿಂದೆಯೇ ಆರೋಪಿಸಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ಸ್ಮಾರ್ಟ್ ಸಿಟಿಯಲ್ಲಿ ಅವ್ಯವಹಾರವಾಗಿದೆ. ಇದನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ. ಶಾಲಿನಿ ಜರನೀಶ್ ಅವನ್ನು ಸರ್ಕಾರ ಮನೆಗೆ ಕಳಿಸಬೇಕು. ಮತ್ತೆ ತುಮಕೂರಿಗೆ ಅವರು ಬರಬಾರದು ಎಂದು ಅವರು ತಿಳಿಸಿದರು.

ಪೈಪ್ ಗೆ ಬೆಂಕಿ ತಗುಲಿದ್ದರಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಗೋಡೆಗಳು ಸುಟ್ಟು ಹೋಗಿವೆ. ಡಿಡಿಪಿಐ ಈ ಬಗ್ಗೆ ಸೂಮೋಟೋ ದೂರು ದಾಖಲಿಸಬೇಕಿತ್ತು. ಅವರು ಕೂಡ ಇತ್ತ ತಿರುಗಿಯೂ ನೋಡಿಲ್ಲ. ಇಲ್ಲಿ ಯಾರಿಗೂ ಜನರ ಬಗ್ಗೆ ಕಾಳಜಿ ಇಲ್ಲ. ಪೈಪುಗಳು ಸುಟ್ಟು ಹೋದ ಬಗ್ಗೆ ಕಿಂಚಿತ್ತೂ ಗಮನವಿಲ್ಲ ಎಂದು ಟೀಕಾಪ್ರಹಾರ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...