Homeಕರೋನಾ ತಲ್ಲಣಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಬಿಜೆಪಿಯದ್ದು ಜೀವವಿರೋಧಿ, ಮನುಷತ್ವ ವಿರೋಧಿ ಸಿದ್ಧಾಂತ ಎಂದು ಪದೇ ಪದೇ ಸಾಬೀತುಪಡಿಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದೆ.

- Advertisement -
- Advertisement -

ಜನರು ಆಮ್ಲಜನಕವಿಲ್ಲದೆ ಕಷ್ಟಕ್ಕೊಳಗಾಗುತ್ತಿದ್ದಾರೆ, ಇದನ್ನು ಸರಿಪಡಿಸಬೇಕಿದ್ದ ಆಡಳಿತರೂಢ ಬಿಜೆಪಿ ಸರ್ಕಾರವು ಬೆಂಗಳೂರಿನ ಹೊರವಲಯದ ಗಿಡ್ಡೇನಹಳ್ಳಿಯ ಬಳಿ ಕೋವಿಡ್‌ನಿಂದ ಮೃತಪಟ್ಟವ ಶವಸಂಸ್ಕಾರಕ್ಕೆ ತೆರಳುವವರಿಗೆ, “ಉಚಿತ ನೀರು, ಟೀ, ಕಾಫಿ, ತಿಂಡಿ, ಊಟದ ವ್ಯವಸ್ಥೆ ಮಾಡಿದ್ದೇವೆ” ಎಂದು ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಆರ್‌. ಅಶೋಕ್‌, ಬಿಡಿಎ ಅಧ್ಯಕ್ಷ, ಶಾಸಕ ಎಸ್. ಆರ್‌. ವಿಶ್ವನಾಥ್‌ ಸೇರಿದಂತೆ ಇನ್ನಿಬ್ಬರ ನಗುಮುಖದ ಫ್ಲೆಕ್ಸ್‌ ಹಾಕಿ ಅಸೂಕ್ಷತೆ ಮರೆದಿದ್ದಾರೆ.

ಕೊರೊನಾ ಎರಡನೆ ಅಲೆ ರಾಜ್ಯದಲ್ಲಿ ತೀವ್ರಗೊಳ್ಳುತ್ತಿದೆ. ರಾಜ್ಯದಾದ್ಯಂತ ಬೆಡ್‌ಗಳ ಕೊರತೆ, ಐಸಿಯುಗಳ ಕೊರತೆ ಬಗ್ಗೆ ನಿರಂತರವಾಗಿ ವರದಿಯಾಗುತ್ತಲೆ ಇದೆ. ಆದರೆ ರಾಜ್ಯ ಸರ್ಕಾರ ಮಾತ್ರ ಈ ಬಗ್ಗೆ ಎಲ್ಲವೂ ಸರಿಯಾಗಿದೆ ಎಂದು ಹೇಳುತ್ತಲೆ ಬಂದಿತ್ತು. ಈ ನಡುವೆ ನಿನ್ನೆ ನಡೆದ ಚಾಮರಾಜನಗರದ ದುರಂತವು ರಾಜ್ಯ ಸರ್ಕಾರದ ವೈಫಲ್ಯವನ್ನು ರಾಜ್ಯದ ಜನತೆಗೆ ಬಿಚ್ಚಿಟ್ಟಿದೆ. ಆದರೆ ಘಟನೆಗೆ ರಾಜ್ಯ ಸರ್ಕಾರ ಜನರನ್ನು ಮತ್ತು ಅಧಿಕಾರಿಗಳನ್ನು ಹೊಣೆ ಮಾಡಿದೆ. ಇಷ್ಟೇ ಅಲ್ಲದೆ ಕಲಬುರ್ಗಿಯಲ್ಲೂ ಆಮ್ಲಜನಕ ಕೊರೊತೆಯಿಂದ ಐದು ಸೋಂಕಿತರು ಮೃತಪಟ್ಟದ್ದಾರೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಗಳೆದ್ದಿದ್ದು ಸರ್ಕಾರವು ತನ್ನ ತಪ್ಪನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ ಎಂದು ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಜನರು ಪ್ರಾಣವಾಯು ಇಲ್ಲದೆ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಾ ಆಸ್ಪತ್ರೆಯ ಬಳಿ ನರಳಾಡುತ್ತಾ ಇದ್ದರೆ, ಬಿಜೆಪಿ ಸಾವಿನ ವಿಚಾರವನ್ನೂ ತನ್ನ ಲಾಭಕ್ಕೆ ಬಳಸಿಕೊಳ್ಳುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ರಾತ್ರೋ ರಾತ್ರಿ ಫ್ಲೆಕ್ಸ್‌ ಅನ್ನು ಎತ್ತಂಗಡಿ ಮಾಡಲಾಗಿದೆ.

ಫ್ಲೆಕ್ಸ್‌ನಲ್ಲಿ, ‘‘ಕೋವಿ‌ಡ್‌‌ನಿಂದ ಮೃತಪಟ್ಟವರ ಉಚಿತ ಅಂತ್ಯ ಸಂಸ್ಕಾರಕ್ಕೆ ಗಿಡ್ಡೇನಹಳ್ಳಿಗೆ ಹೋಗುವ ದಾರಿ. ಕೋವಿಡ್‌ನಿಂದ ಮೃತಪಟ್ಟವರನ್ನು ‘ಸಕಲ ಸರ್ಕಾರಿ ಮರ್ಯಾದೆ’ಯೊಂದಿಗೆ ಅಂತ್ಯಸಂಸ್ಕಾರ ಮಾಡಲು ಜಿಲ್ಲಾಡಳಿತ ವತಿಯಿಂದ ವ್ಯವಸ್ಥೆಯಾಗಿದೆ. ಈ ಕಾರ್ಯಕ್ಕೆ ಉಚಿತವಾಗಿ ನೀರು, ಕಾಫಿ, ಟೀ, ತಿಂಡಿ, ಊಟದ ವ್ಯವಸ್ಥೆಯನ್ನು ಮಾಡಲಾಗಿದೆ’’ ಎಂದು ಬರೆಯಲಾಗಿದೆ.

ಜೊತೆಗೆ, “ಟಿ-ಕಾಫಿಯ ಉಚಿತ ವ್ಯವಸ್ಥೆಯನ್ನು ಯಲಹಂಕದ ಶಾಸಕರಾದ ಎಸ್. ಆರ್‌. ವಿಶ್ವನಾಥ್‌ ಮಾರ್ಗದರ್ಶನದಲ್ಲಿ, ನೆಲಮಂಗಲ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಎಸ್‌. ಮಲ್ಲಯ್ಯನವರ ನೇತೃತ್ವದಲ್ಲಿ ಮಾಡಲಾಗಿದೆ” ಎಂದು ಕೂಡಾ ಬರೆದು, ಅವರ ನಗುಮುಖದ ಚಿತ್ರವನ್ನು ಹಾಕಲಾಗಿದೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

 

ಈ ಫ್ಲೆಕ್ಸ್‌ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪತ್ರಕರ್ತ ಅಲ್‌ಮೈಡಾ ಗ್ಲಾಡ್‌ಸನ್‌ ಅವರು, “ಬಿಜೆಪಿಯನ್ನು ನಾನ್ಯಾಕೆ ವಿರೋಧಿಸುತ್ತೇನೆಂದು ಕೇಳುವವರು ಇದನ್ನೊಮ್ಮೆ ನೋಡಿ. ಅವರದ್ದು ಜೀವವಿರೋಧಿ, ಮನುಷತ್ವ ವಿರೋಧಿ ಸಿದ್ಧಾಂತ ಎಂದು ಅವರು ಪದೇ ಪದೇ ಸಾಬೀತುಪಡಿಸುತ್ತಿದ್ದಾರೆ. ಮನುಷ್ಯನಿರಬೇಕಾದ ಕನಿಷ್ಟ ಸಂವೇದನೆಗಳೂ ಇಲ್ಲ ಇವಕ್ಕೆ. ಸೋಂಕು ಹೆಚ್ಚಾದರೆ ಕರೆದುಕೊಂಡು ಹೋಗಲು ಅಂಬುಲೆನ್ಸ್ ಇಲ್ಲ.

ಒಂದೊಮ್ಮೆ ಅಂಬುಲೆನ್ಸ್ ಸಿಕ್ಕರೆ ಆಸ್ಪತ್ರೆ/ಬೆಡ್ ಇಲ್ಲ. ಹತ್ತಾರು ಕಿ.ಮೀ ಅಲೆದು ಆಸ್ಪತ್ರೆ ಸಿಕ್ಕರೆ ಐಸಿಯುವಿನಲ್ಲಿ ಜಾಗವಿಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಇಲ್ಲ. ಕೊನೆಗೆ ಸತ್ತವರ ಅಂತ್ಯ ಸಂಸ್ಕಾರಕ್ಕೂ ಜಾಗವಿಲ್ಲ. ಇಂಥ ಪರಿಸ್ಥಿತಿಯಲ್ಲಿ ಈ ಬಿಜೆಪಿಗರು ಕೋವಿಡ್ ಸೋಂಕಿನಿಂದ ಸತ್ತವರ ಅಂತ್ಯ ಸಂಸ್ಕಾರವನ್ನೂ ಒಂದು ಈವೆಂಟ್ ಮಾಡುತ್ತಿದ್ದಾರೆ. ಉಚಿತ ಚಾ, ಕಾಫಿ, ಊಟವಂತೆ. ಈ ಚಿತ್ರದ ಮೇಲಿರುವ ‘No’ ಗಳ ಬೋರ್ಡೇ ಇವರ ಅದಕ್ಷತೆ, ಅಸಾಮರ್ಥ್ಯ ಹಾಗೂ ಕ್ರೌರ್ಯಕ್ಕೆ ಸಾಕ್ಷಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಅಲ್ಲಿನ ಬ್ಯಾನರನ್ನು ತೆರವು ಗೊಳಿಸಲಾಗಿದೆ.

ಘಟನೆಗೆ ಶಾಸಕ ವಿಶ್ವನಾಥ್‌‌ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ. ‘‘ಗಿಡ್ಡೇನಹಳ್ಳಿ ಸುತ್ತ–ಮುತ್ತ ಜನ ವಾಸವಿಲ್ಲ. ಸುತ್ತಲೂ ಕಲ್ಲು ಬಂಡೆಗಳು ಇವೆ. ಅಲ್ಲಿ ಕುಡಿಯಲು ನೀರು ಸೇರಿದಂತೆ ಯಾವುದೇ ಸೌಲಭ್ಯವೂ ಇಲ್ಲ. ಶವಸಂಸ್ಕಾರಕ್ಕೆ ಬರುವವರಿಗೆ ತೊಂದರೆಯಾಗಬಾರದು, ಅವರಿಗೆ ನೀರು ಮತ್ತು ಆಹಾರ ಪೂರೈಕೆ ಮಾಡುವಂತೆ ಮಾನವೀಯತೆಯ ದೃಷ್ಟಿಯಿಂದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಆದರೆ, ಈ ಬಗ್ಗೆ ಪ್ರಧಾನಿ, ಮುಖ್ಯಮಂತ್ರಿ ಮತ್ತು ನನ್ನ ಫೋಟೊ ಇರುವ ಫ್ಲೆಕ್ಸ್‌ ಹಾಕಿರುವುದು ಸರಿಯಾದ ಕ್ರಮವಲ್ಲ. ಇದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ” ಎಂದಿದ್ದಾರೆ ಎಂದು ಪತ್ರಿಕೆ ತನ್ನ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶವಸಂಸ್ಕಾರದಲ್ಲೂ ರಾಜಕೀಯ, ಪ್ರಚಾರ ಬಯಸುವುದು ಮನಷ್ಯತ್ವ ಅಲ್ಲ. ಮನುವಾದಿಗಳು ಮಾನವೀಯತೆಯನ್ನೂ ಮರೆತು, ಎಲ್ಲದರಲ್ಲೂ ಪ್ರಚಾರ ಪಡೆಯಲು ಹೊರಟಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...