Homeಕರೋನಾ ತಲ್ಲಣಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಬಿಜೆಪಿಯದ್ದು ಜೀವವಿರೋಧಿ, ಮನುಷತ್ವ ವಿರೋಧಿ ಸಿದ್ಧಾಂತ ಎಂದು ಪದೇ ಪದೇ ಸಾಬೀತುಪಡಿಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದೆ.

- Advertisement -
- Advertisement -

ಜನರು ಆಮ್ಲಜನಕವಿಲ್ಲದೆ ಕಷ್ಟಕ್ಕೊಳಗಾಗುತ್ತಿದ್ದಾರೆ, ಇದನ್ನು ಸರಿಪಡಿಸಬೇಕಿದ್ದ ಆಡಳಿತರೂಢ ಬಿಜೆಪಿ ಸರ್ಕಾರವು ಬೆಂಗಳೂರಿನ ಹೊರವಲಯದ ಗಿಡ್ಡೇನಹಳ್ಳಿಯ ಬಳಿ ಕೋವಿಡ್‌ನಿಂದ ಮೃತಪಟ್ಟವ ಶವಸಂಸ್ಕಾರಕ್ಕೆ ತೆರಳುವವರಿಗೆ, “ಉಚಿತ ನೀರು, ಟೀ, ಕಾಫಿ, ತಿಂಡಿ, ಊಟದ ವ್ಯವಸ್ಥೆ ಮಾಡಿದ್ದೇವೆ” ಎಂದು ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಆರ್‌. ಅಶೋಕ್‌, ಬಿಡಿಎ ಅಧ್ಯಕ್ಷ, ಶಾಸಕ ಎಸ್. ಆರ್‌. ವಿಶ್ವನಾಥ್‌ ಸೇರಿದಂತೆ ಇನ್ನಿಬ್ಬರ ನಗುಮುಖದ ಫ್ಲೆಕ್ಸ್‌ ಹಾಕಿ ಅಸೂಕ್ಷತೆ ಮರೆದಿದ್ದಾರೆ.

ಕೊರೊನಾ ಎರಡನೆ ಅಲೆ ರಾಜ್ಯದಲ್ಲಿ ತೀವ್ರಗೊಳ್ಳುತ್ತಿದೆ. ರಾಜ್ಯದಾದ್ಯಂತ ಬೆಡ್‌ಗಳ ಕೊರತೆ, ಐಸಿಯುಗಳ ಕೊರತೆ ಬಗ್ಗೆ ನಿರಂತರವಾಗಿ ವರದಿಯಾಗುತ್ತಲೆ ಇದೆ. ಆದರೆ ರಾಜ್ಯ ಸರ್ಕಾರ ಮಾತ್ರ ಈ ಬಗ್ಗೆ ಎಲ್ಲವೂ ಸರಿಯಾಗಿದೆ ಎಂದು ಹೇಳುತ್ತಲೆ ಬಂದಿತ್ತು. ಈ ನಡುವೆ ನಿನ್ನೆ ನಡೆದ ಚಾಮರಾಜನಗರದ ದುರಂತವು ರಾಜ್ಯ ಸರ್ಕಾರದ ವೈಫಲ್ಯವನ್ನು ರಾಜ್ಯದ ಜನತೆಗೆ ಬಿಚ್ಚಿಟ್ಟಿದೆ. ಆದರೆ ಘಟನೆಗೆ ರಾಜ್ಯ ಸರ್ಕಾರ ಜನರನ್ನು ಮತ್ತು ಅಧಿಕಾರಿಗಳನ್ನು ಹೊಣೆ ಮಾಡಿದೆ. ಇಷ್ಟೇ ಅಲ್ಲದೆ ಕಲಬುರ್ಗಿಯಲ್ಲೂ ಆಮ್ಲಜನಕ ಕೊರೊತೆಯಿಂದ ಐದು ಸೋಂಕಿತರು ಮೃತಪಟ್ಟದ್ದಾರೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಗಳೆದ್ದಿದ್ದು ಸರ್ಕಾರವು ತನ್ನ ತಪ್ಪನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ ಎಂದು ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಜನರು ಪ್ರಾಣವಾಯು ಇಲ್ಲದೆ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಾ ಆಸ್ಪತ್ರೆಯ ಬಳಿ ನರಳಾಡುತ್ತಾ ಇದ್ದರೆ, ಬಿಜೆಪಿ ಸಾವಿನ ವಿಚಾರವನ್ನೂ ತನ್ನ ಲಾಭಕ್ಕೆ ಬಳಸಿಕೊಳ್ಳುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ರಾತ್ರೋ ರಾತ್ರಿ ಫ್ಲೆಕ್ಸ್‌ ಅನ್ನು ಎತ್ತಂಗಡಿ ಮಾಡಲಾಗಿದೆ.

ಫ್ಲೆಕ್ಸ್‌ನಲ್ಲಿ, ‘‘ಕೋವಿ‌ಡ್‌‌ನಿಂದ ಮೃತಪಟ್ಟವರ ಉಚಿತ ಅಂತ್ಯ ಸಂಸ್ಕಾರಕ್ಕೆ ಗಿಡ್ಡೇನಹಳ್ಳಿಗೆ ಹೋಗುವ ದಾರಿ. ಕೋವಿಡ್‌ನಿಂದ ಮೃತಪಟ್ಟವರನ್ನು ‘ಸಕಲ ಸರ್ಕಾರಿ ಮರ್ಯಾದೆ’ಯೊಂದಿಗೆ ಅಂತ್ಯಸಂಸ್ಕಾರ ಮಾಡಲು ಜಿಲ್ಲಾಡಳಿತ ವತಿಯಿಂದ ವ್ಯವಸ್ಥೆಯಾಗಿದೆ. ಈ ಕಾರ್ಯಕ್ಕೆ ಉಚಿತವಾಗಿ ನೀರು, ಕಾಫಿ, ಟೀ, ತಿಂಡಿ, ಊಟದ ವ್ಯವಸ್ಥೆಯನ್ನು ಮಾಡಲಾಗಿದೆ’’ ಎಂದು ಬರೆಯಲಾಗಿದೆ.

ಜೊತೆಗೆ, “ಟಿ-ಕಾಫಿಯ ಉಚಿತ ವ್ಯವಸ್ಥೆಯನ್ನು ಯಲಹಂಕದ ಶಾಸಕರಾದ ಎಸ್. ಆರ್‌. ವಿಶ್ವನಾಥ್‌ ಮಾರ್ಗದರ್ಶನದಲ್ಲಿ, ನೆಲಮಂಗಲ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಎಸ್‌. ಮಲ್ಲಯ್ಯನವರ ನೇತೃತ್ವದಲ್ಲಿ ಮಾಡಲಾಗಿದೆ” ಎಂದು ಕೂಡಾ ಬರೆದು, ಅವರ ನಗುಮುಖದ ಚಿತ್ರವನ್ನು ಹಾಕಲಾಗಿದೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

 

ಈ ಫ್ಲೆಕ್ಸ್‌ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪತ್ರಕರ್ತ ಅಲ್‌ಮೈಡಾ ಗ್ಲಾಡ್‌ಸನ್‌ ಅವರು, “ಬಿಜೆಪಿಯನ್ನು ನಾನ್ಯಾಕೆ ವಿರೋಧಿಸುತ್ತೇನೆಂದು ಕೇಳುವವರು ಇದನ್ನೊಮ್ಮೆ ನೋಡಿ. ಅವರದ್ದು ಜೀವವಿರೋಧಿ, ಮನುಷತ್ವ ವಿರೋಧಿ ಸಿದ್ಧಾಂತ ಎಂದು ಅವರು ಪದೇ ಪದೇ ಸಾಬೀತುಪಡಿಸುತ್ತಿದ್ದಾರೆ. ಮನುಷ್ಯನಿರಬೇಕಾದ ಕನಿಷ್ಟ ಸಂವೇದನೆಗಳೂ ಇಲ್ಲ ಇವಕ್ಕೆ. ಸೋಂಕು ಹೆಚ್ಚಾದರೆ ಕರೆದುಕೊಂಡು ಹೋಗಲು ಅಂಬುಲೆನ್ಸ್ ಇಲ್ಲ.

ಒಂದೊಮ್ಮೆ ಅಂಬುಲೆನ್ಸ್ ಸಿಕ್ಕರೆ ಆಸ್ಪತ್ರೆ/ಬೆಡ್ ಇಲ್ಲ. ಹತ್ತಾರು ಕಿ.ಮೀ ಅಲೆದು ಆಸ್ಪತ್ರೆ ಸಿಕ್ಕರೆ ಐಸಿಯುವಿನಲ್ಲಿ ಜಾಗವಿಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಇಲ್ಲ. ಕೊನೆಗೆ ಸತ್ತವರ ಅಂತ್ಯ ಸಂಸ್ಕಾರಕ್ಕೂ ಜಾಗವಿಲ್ಲ. ಇಂಥ ಪರಿಸ್ಥಿತಿಯಲ್ಲಿ ಈ ಬಿಜೆಪಿಗರು ಕೋವಿಡ್ ಸೋಂಕಿನಿಂದ ಸತ್ತವರ ಅಂತ್ಯ ಸಂಸ್ಕಾರವನ್ನೂ ಒಂದು ಈವೆಂಟ್ ಮಾಡುತ್ತಿದ್ದಾರೆ. ಉಚಿತ ಚಾ, ಕಾಫಿ, ಊಟವಂತೆ. ಈ ಚಿತ್ರದ ಮೇಲಿರುವ ‘No’ ಗಳ ಬೋರ್ಡೇ ಇವರ ಅದಕ್ಷತೆ, ಅಸಾಮರ್ಥ್ಯ ಹಾಗೂ ಕ್ರೌರ್ಯಕ್ಕೆ ಸಾಕ್ಷಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಅಲ್ಲಿನ ಬ್ಯಾನರನ್ನು ತೆರವು ಗೊಳಿಸಲಾಗಿದೆ.

ಘಟನೆಗೆ ಶಾಸಕ ವಿಶ್ವನಾಥ್‌‌ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ. ‘‘ಗಿಡ್ಡೇನಹಳ್ಳಿ ಸುತ್ತ–ಮುತ್ತ ಜನ ವಾಸವಿಲ್ಲ. ಸುತ್ತಲೂ ಕಲ್ಲು ಬಂಡೆಗಳು ಇವೆ. ಅಲ್ಲಿ ಕುಡಿಯಲು ನೀರು ಸೇರಿದಂತೆ ಯಾವುದೇ ಸೌಲಭ್ಯವೂ ಇಲ್ಲ. ಶವಸಂಸ್ಕಾರಕ್ಕೆ ಬರುವವರಿಗೆ ತೊಂದರೆಯಾಗಬಾರದು, ಅವರಿಗೆ ನೀರು ಮತ್ತು ಆಹಾರ ಪೂರೈಕೆ ಮಾಡುವಂತೆ ಮಾನವೀಯತೆಯ ದೃಷ್ಟಿಯಿಂದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಆದರೆ, ಈ ಬಗ್ಗೆ ಪ್ರಧಾನಿ, ಮುಖ್ಯಮಂತ್ರಿ ಮತ್ತು ನನ್ನ ಫೋಟೊ ಇರುವ ಫ್ಲೆಕ್ಸ್‌ ಹಾಕಿರುವುದು ಸರಿಯಾದ ಕ್ರಮವಲ್ಲ. ಇದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ” ಎಂದಿದ್ದಾರೆ ಎಂದು ಪತ್ರಿಕೆ ತನ್ನ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶವಸಂಸ್ಕಾರದಲ್ಲೂ ರಾಜಕೀಯ, ಪ್ರಚಾರ ಬಯಸುವುದು ಮನಷ್ಯತ್ವ ಅಲ್ಲ. ಮನುವಾದಿಗಳು ಮಾನವೀಯತೆಯನ್ನೂ ಮರೆತು, ಎಲ್ಲದರಲ್ಲೂ ಪ್ರಚಾರ ಪಡೆಯಲು ಹೊರಟಿದ್ದಾರೆ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...