Homeಕರೋನಾ ತಲ್ಲಣಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಬಿಜೆಪಿಯದ್ದು ಜೀವವಿರೋಧಿ, ಮನುಷತ್ವ ವಿರೋಧಿ ಸಿದ್ಧಾಂತ ಎಂದು ಪದೇ ಪದೇ ಸಾಬೀತುಪಡಿಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದೆ.

- Advertisement -
- Advertisement -

ಜನರು ಆಮ್ಲಜನಕವಿಲ್ಲದೆ ಕಷ್ಟಕ್ಕೊಳಗಾಗುತ್ತಿದ್ದಾರೆ, ಇದನ್ನು ಸರಿಪಡಿಸಬೇಕಿದ್ದ ಆಡಳಿತರೂಢ ಬಿಜೆಪಿ ಸರ್ಕಾರವು ಬೆಂಗಳೂರಿನ ಹೊರವಲಯದ ಗಿಡ್ಡೇನಹಳ್ಳಿಯ ಬಳಿ ಕೋವಿಡ್‌ನಿಂದ ಮೃತಪಟ್ಟವ ಶವಸಂಸ್ಕಾರಕ್ಕೆ ತೆರಳುವವರಿಗೆ, “ಉಚಿತ ನೀರು, ಟೀ, ಕಾಫಿ, ತಿಂಡಿ, ಊಟದ ವ್ಯವಸ್ಥೆ ಮಾಡಿದ್ದೇವೆ” ಎಂದು ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಆರ್‌. ಅಶೋಕ್‌, ಬಿಡಿಎ ಅಧ್ಯಕ್ಷ, ಶಾಸಕ ಎಸ್. ಆರ್‌. ವಿಶ್ವನಾಥ್‌ ಸೇರಿದಂತೆ ಇನ್ನಿಬ್ಬರ ನಗುಮುಖದ ಫ್ಲೆಕ್ಸ್‌ ಹಾಕಿ ಅಸೂಕ್ಷತೆ ಮರೆದಿದ್ದಾರೆ.

ಕೊರೊನಾ ಎರಡನೆ ಅಲೆ ರಾಜ್ಯದಲ್ಲಿ ತೀವ್ರಗೊಳ್ಳುತ್ತಿದೆ. ರಾಜ್ಯದಾದ್ಯಂತ ಬೆಡ್‌ಗಳ ಕೊರತೆ, ಐಸಿಯುಗಳ ಕೊರತೆ ಬಗ್ಗೆ ನಿರಂತರವಾಗಿ ವರದಿಯಾಗುತ್ತಲೆ ಇದೆ. ಆದರೆ ರಾಜ್ಯ ಸರ್ಕಾರ ಮಾತ್ರ ಈ ಬಗ್ಗೆ ಎಲ್ಲವೂ ಸರಿಯಾಗಿದೆ ಎಂದು ಹೇಳುತ್ತಲೆ ಬಂದಿತ್ತು. ಈ ನಡುವೆ ನಿನ್ನೆ ನಡೆದ ಚಾಮರಾಜನಗರದ ದುರಂತವು ರಾಜ್ಯ ಸರ್ಕಾರದ ವೈಫಲ್ಯವನ್ನು ರಾಜ್ಯದ ಜನತೆಗೆ ಬಿಚ್ಚಿಟ್ಟಿದೆ. ಆದರೆ ಘಟನೆಗೆ ರಾಜ್ಯ ಸರ್ಕಾರ ಜನರನ್ನು ಮತ್ತು ಅಧಿಕಾರಿಗಳನ್ನು ಹೊಣೆ ಮಾಡಿದೆ. ಇಷ್ಟೇ ಅಲ್ಲದೆ ಕಲಬುರ್ಗಿಯಲ್ಲೂ ಆಮ್ಲಜನಕ ಕೊರೊತೆಯಿಂದ ಐದು ಸೋಂಕಿತರು ಮೃತಪಟ್ಟದ್ದಾರೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಗಳೆದ್ದಿದ್ದು ಸರ್ಕಾರವು ತನ್ನ ತಪ್ಪನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ ಎಂದು ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಜನರು ಪ್ರಾಣವಾಯು ಇಲ್ಲದೆ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಾ ಆಸ್ಪತ್ರೆಯ ಬಳಿ ನರಳಾಡುತ್ತಾ ಇದ್ದರೆ, ಬಿಜೆಪಿ ಸಾವಿನ ವಿಚಾರವನ್ನೂ ತನ್ನ ಲಾಭಕ್ಕೆ ಬಳಸಿಕೊಳ್ಳುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ರಾತ್ರೋ ರಾತ್ರಿ ಫ್ಲೆಕ್ಸ್‌ ಅನ್ನು ಎತ್ತಂಗಡಿ ಮಾಡಲಾಗಿದೆ.

ಫ್ಲೆಕ್ಸ್‌ನಲ್ಲಿ, ‘‘ಕೋವಿ‌ಡ್‌‌ನಿಂದ ಮೃತಪಟ್ಟವರ ಉಚಿತ ಅಂತ್ಯ ಸಂಸ್ಕಾರಕ್ಕೆ ಗಿಡ್ಡೇನಹಳ್ಳಿಗೆ ಹೋಗುವ ದಾರಿ. ಕೋವಿಡ್‌ನಿಂದ ಮೃತಪಟ್ಟವರನ್ನು ‘ಸಕಲ ಸರ್ಕಾರಿ ಮರ್ಯಾದೆ’ಯೊಂದಿಗೆ ಅಂತ್ಯಸಂಸ್ಕಾರ ಮಾಡಲು ಜಿಲ್ಲಾಡಳಿತ ವತಿಯಿಂದ ವ್ಯವಸ್ಥೆಯಾಗಿದೆ. ಈ ಕಾರ್ಯಕ್ಕೆ ಉಚಿತವಾಗಿ ನೀರು, ಕಾಫಿ, ಟೀ, ತಿಂಡಿ, ಊಟದ ವ್ಯವಸ್ಥೆಯನ್ನು ಮಾಡಲಾಗಿದೆ’’ ಎಂದು ಬರೆಯಲಾಗಿದೆ.

ಜೊತೆಗೆ, “ಟಿ-ಕಾಫಿಯ ಉಚಿತ ವ್ಯವಸ್ಥೆಯನ್ನು ಯಲಹಂಕದ ಶಾಸಕರಾದ ಎಸ್. ಆರ್‌. ವಿಶ್ವನಾಥ್‌ ಮಾರ್ಗದರ್ಶನದಲ್ಲಿ, ನೆಲಮಂಗಲ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಎಸ್‌. ಮಲ್ಲಯ್ಯನವರ ನೇತೃತ್ವದಲ್ಲಿ ಮಾಡಲಾಗಿದೆ” ಎಂದು ಕೂಡಾ ಬರೆದು, ಅವರ ನಗುಮುಖದ ಚಿತ್ರವನ್ನು ಹಾಕಲಾಗಿದೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

 

ಈ ಫ್ಲೆಕ್ಸ್‌ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪತ್ರಕರ್ತ ಅಲ್‌ಮೈಡಾ ಗ್ಲಾಡ್‌ಸನ್‌ ಅವರು, “ಬಿಜೆಪಿಯನ್ನು ನಾನ್ಯಾಕೆ ವಿರೋಧಿಸುತ್ತೇನೆಂದು ಕೇಳುವವರು ಇದನ್ನೊಮ್ಮೆ ನೋಡಿ. ಅವರದ್ದು ಜೀವವಿರೋಧಿ, ಮನುಷತ್ವ ವಿರೋಧಿ ಸಿದ್ಧಾಂತ ಎಂದು ಅವರು ಪದೇ ಪದೇ ಸಾಬೀತುಪಡಿಸುತ್ತಿದ್ದಾರೆ. ಮನುಷ್ಯನಿರಬೇಕಾದ ಕನಿಷ್ಟ ಸಂವೇದನೆಗಳೂ ಇಲ್ಲ ಇವಕ್ಕೆ. ಸೋಂಕು ಹೆಚ್ಚಾದರೆ ಕರೆದುಕೊಂಡು ಹೋಗಲು ಅಂಬುಲೆನ್ಸ್ ಇಲ್ಲ.

ಒಂದೊಮ್ಮೆ ಅಂಬುಲೆನ್ಸ್ ಸಿಕ್ಕರೆ ಆಸ್ಪತ್ರೆ/ಬೆಡ್ ಇಲ್ಲ. ಹತ್ತಾರು ಕಿ.ಮೀ ಅಲೆದು ಆಸ್ಪತ್ರೆ ಸಿಕ್ಕರೆ ಐಸಿಯುವಿನಲ್ಲಿ ಜಾಗವಿಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಇಲ್ಲ. ಕೊನೆಗೆ ಸತ್ತವರ ಅಂತ್ಯ ಸಂಸ್ಕಾರಕ್ಕೂ ಜಾಗವಿಲ್ಲ. ಇಂಥ ಪರಿಸ್ಥಿತಿಯಲ್ಲಿ ಈ ಬಿಜೆಪಿಗರು ಕೋವಿಡ್ ಸೋಂಕಿನಿಂದ ಸತ್ತವರ ಅಂತ್ಯ ಸಂಸ್ಕಾರವನ್ನೂ ಒಂದು ಈವೆಂಟ್ ಮಾಡುತ್ತಿದ್ದಾರೆ. ಉಚಿತ ಚಾ, ಕಾಫಿ, ಊಟವಂತೆ. ಈ ಚಿತ್ರದ ಮೇಲಿರುವ ‘No’ ಗಳ ಬೋರ್ಡೇ ಇವರ ಅದಕ್ಷತೆ, ಅಸಾಮರ್ಥ್ಯ ಹಾಗೂ ಕ್ರೌರ್ಯಕ್ಕೆ ಸಾಕ್ಷಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಅಲ್ಲಿನ ಬ್ಯಾನರನ್ನು ತೆರವು ಗೊಳಿಸಲಾಗಿದೆ.

ಘಟನೆಗೆ ಶಾಸಕ ವಿಶ್ವನಾಥ್‌‌ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ. ‘‘ಗಿಡ್ಡೇನಹಳ್ಳಿ ಸುತ್ತ–ಮುತ್ತ ಜನ ವಾಸವಿಲ್ಲ. ಸುತ್ತಲೂ ಕಲ್ಲು ಬಂಡೆಗಳು ಇವೆ. ಅಲ್ಲಿ ಕುಡಿಯಲು ನೀರು ಸೇರಿದಂತೆ ಯಾವುದೇ ಸೌಲಭ್ಯವೂ ಇಲ್ಲ. ಶವಸಂಸ್ಕಾರಕ್ಕೆ ಬರುವವರಿಗೆ ತೊಂದರೆಯಾಗಬಾರದು, ಅವರಿಗೆ ನೀರು ಮತ್ತು ಆಹಾರ ಪೂರೈಕೆ ಮಾಡುವಂತೆ ಮಾನವೀಯತೆಯ ದೃಷ್ಟಿಯಿಂದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಆದರೆ, ಈ ಬಗ್ಗೆ ಪ್ರಧಾನಿ, ಮುಖ್ಯಮಂತ್ರಿ ಮತ್ತು ನನ್ನ ಫೋಟೊ ಇರುವ ಫ್ಲೆಕ್ಸ್‌ ಹಾಕಿರುವುದು ಸರಿಯಾದ ಕ್ರಮವಲ್ಲ. ಇದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ” ಎಂದಿದ್ದಾರೆ ಎಂದು ಪತ್ರಿಕೆ ತನ್ನ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶವಸಂಸ್ಕಾರದಲ್ಲೂ ರಾಜಕೀಯ, ಪ್ರಚಾರ ಬಯಸುವುದು ಮನಷ್ಯತ್ವ ಅಲ್ಲ. ಮನುವಾದಿಗಳು ಮಾನವೀಯತೆಯನ್ನೂ ಮರೆತು, ಎಲ್ಲದರಲ್ಲೂ ಪ್ರಚಾರ ಪಡೆಯಲು ಹೊರಟಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...