Homeಕರೋನಾ ತಲ್ಲಣಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಬಿಜೆಪಿಯದ್ದು ಜೀವವಿರೋಧಿ, ಮನುಷತ್ವ ವಿರೋಧಿ ಸಿದ್ಧಾಂತ ಎಂದು ಪದೇ ಪದೇ ಸಾಬೀತುಪಡಿಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದೆ.

- Advertisement -
- Advertisement -

ಜನರು ಆಮ್ಲಜನಕವಿಲ್ಲದೆ ಕಷ್ಟಕ್ಕೊಳಗಾಗುತ್ತಿದ್ದಾರೆ, ಇದನ್ನು ಸರಿಪಡಿಸಬೇಕಿದ್ದ ಆಡಳಿತರೂಢ ಬಿಜೆಪಿ ಸರ್ಕಾರವು ಬೆಂಗಳೂರಿನ ಹೊರವಲಯದ ಗಿಡ್ಡೇನಹಳ್ಳಿಯ ಬಳಿ ಕೋವಿಡ್‌ನಿಂದ ಮೃತಪಟ್ಟವ ಶವಸಂಸ್ಕಾರಕ್ಕೆ ತೆರಳುವವರಿಗೆ, “ಉಚಿತ ನೀರು, ಟೀ, ಕಾಫಿ, ತಿಂಡಿ, ಊಟದ ವ್ಯವಸ್ಥೆ ಮಾಡಿದ್ದೇವೆ” ಎಂದು ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಆರ್‌. ಅಶೋಕ್‌, ಬಿಡಿಎ ಅಧ್ಯಕ್ಷ, ಶಾಸಕ ಎಸ್. ಆರ್‌. ವಿಶ್ವನಾಥ್‌ ಸೇರಿದಂತೆ ಇನ್ನಿಬ್ಬರ ನಗುಮುಖದ ಫ್ಲೆಕ್ಸ್‌ ಹಾಕಿ ಅಸೂಕ್ಷತೆ ಮರೆದಿದ್ದಾರೆ.

ಕೊರೊನಾ ಎರಡನೆ ಅಲೆ ರಾಜ್ಯದಲ್ಲಿ ತೀವ್ರಗೊಳ್ಳುತ್ತಿದೆ. ರಾಜ್ಯದಾದ್ಯಂತ ಬೆಡ್‌ಗಳ ಕೊರತೆ, ಐಸಿಯುಗಳ ಕೊರತೆ ಬಗ್ಗೆ ನಿರಂತರವಾಗಿ ವರದಿಯಾಗುತ್ತಲೆ ಇದೆ. ಆದರೆ ರಾಜ್ಯ ಸರ್ಕಾರ ಮಾತ್ರ ಈ ಬಗ್ಗೆ ಎಲ್ಲವೂ ಸರಿಯಾಗಿದೆ ಎಂದು ಹೇಳುತ್ತಲೆ ಬಂದಿತ್ತು. ಈ ನಡುವೆ ನಿನ್ನೆ ನಡೆದ ಚಾಮರಾಜನಗರದ ದುರಂತವು ರಾಜ್ಯ ಸರ್ಕಾರದ ವೈಫಲ್ಯವನ್ನು ರಾಜ್ಯದ ಜನತೆಗೆ ಬಿಚ್ಚಿಟ್ಟಿದೆ. ಆದರೆ ಘಟನೆಗೆ ರಾಜ್ಯ ಸರ್ಕಾರ ಜನರನ್ನು ಮತ್ತು ಅಧಿಕಾರಿಗಳನ್ನು ಹೊಣೆ ಮಾಡಿದೆ. ಇಷ್ಟೇ ಅಲ್ಲದೆ ಕಲಬುರ್ಗಿಯಲ್ಲೂ ಆಮ್ಲಜನಕ ಕೊರೊತೆಯಿಂದ ಐದು ಸೋಂಕಿತರು ಮೃತಪಟ್ಟದ್ದಾರೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಗಳೆದ್ದಿದ್ದು ಸರ್ಕಾರವು ತನ್ನ ತಪ್ಪನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ ಎಂದು ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಜನರು ಪ್ರಾಣವಾಯು ಇಲ್ಲದೆ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಾ ಆಸ್ಪತ್ರೆಯ ಬಳಿ ನರಳಾಡುತ್ತಾ ಇದ್ದರೆ, ಬಿಜೆಪಿ ಸಾವಿನ ವಿಚಾರವನ್ನೂ ತನ್ನ ಲಾಭಕ್ಕೆ ಬಳಸಿಕೊಳ್ಳುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ರಾತ್ರೋ ರಾತ್ರಿ ಫ್ಲೆಕ್ಸ್‌ ಅನ್ನು ಎತ್ತಂಗಡಿ ಮಾಡಲಾಗಿದೆ.

ಫ್ಲೆಕ್ಸ್‌ನಲ್ಲಿ, ‘‘ಕೋವಿ‌ಡ್‌‌ನಿಂದ ಮೃತಪಟ್ಟವರ ಉಚಿತ ಅಂತ್ಯ ಸಂಸ್ಕಾರಕ್ಕೆ ಗಿಡ್ಡೇನಹಳ್ಳಿಗೆ ಹೋಗುವ ದಾರಿ. ಕೋವಿಡ್‌ನಿಂದ ಮೃತಪಟ್ಟವರನ್ನು ‘ಸಕಲ ಸರ್ಕಾರಿ ಮರ್ಯಾದೆ’ಯೊಂದಿಗೆ ಅಂತ್ಯಸಂಸ್ಕಾರ ಮಾಡಲು ಜಿಲ್ಲಾಡಳಿತ ವತಿಯಿಂದ ವ್ಯವಸ್ಥೆಯಾಗಿದೆ. ಈ ಕಾರ್ಯಕ್ಕೆ ಉಚಿತವಾಗಿ ನೀರು, ಕಾಫಿ, ಟೀ, ತಿಂಡಿ, ಊಟದ ವ್ಯವಸ್ಥೆಯನ್ನು ಮಾಡಲಾಗಿದೆ’’ ಎಂದು ಬರೆಯಲಾಗಿದೆ.

ಜೊತೆಗೆ, “ಟಿ-ಕಾಫಿಯ ಉಚಿತ ವ್ಯವಸ್ಥೆಯನ್ನು ಯಲಹಂಕದ ಶಾಸಕರಾದ ಎಸ್. ಆರ್‌. ವಿಶ್ವನಾಥ್‌ ಮಾರ್ಗದರ್ಶನದಲ್ಲಿ, ನೆಲಮಂಗಲ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಎಸ್‌. ಮಲ್ಲಯ್ಯನವರ ನೇತೃತ್ವದಲ್ಲಿ ಮಾಡಲಾಗಿದೆ” ಎಂದು ಕೂಡಾ ಬರೆದು, ಅವರ ನಗುಮುಖದ ಚಿತ್ರವನ್ನು ಹಾಕಲಾಗಿದೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

 

ಈ ಫ್ಲೆಕ್ಸ್‌ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪತ್ರಕರ್ತ ಅಲ್‌ಮೈಡಾ ಗ್ಲಾಡ್‌ಸನ್‌ ಅವರು, “ಬಿಜೆಪಿಯನ್ನು ನಾನ್ಯಾಕೆ ವಿರೋಧಿಸುತ್ತೇನೆಂದು ಕೇಳುವವರು ಇದನ್ನೊಮ್ಮೆ ನೋಡಿ. ಅವರದ್ದು ಜೀವವಿರೋಧಿ, ಮನುಷತ್ವ ವಿರೋಧಿ ಸಿದ್ಧಾಂತ ಎಂದು ಅವರು ಪದೇ ಪದೇ ಸಾಬೀತುಪಡಿಸುತ್ತಿದ್ದಾರೆ. ಮನುಷ್ಯನಿರಬೇಕಾದ ಕನಿಷ್ಟ ಸಂವೇದನೆಗಳೂ ಇಲ್ಲ ಇವಕ್ಕೆ. ಸೋಂಕು ಹೆಚ್ಚಾದರೆ ಕರೆದುಕೊಂಡು ಹೋಗಲು ಅಂಬುಲೆನ್ಸ್ ಇಲ್ಲ.

ಒಂದೊಮ್ಮೆ ಅಂಬುಲೆನ್ಸ್ ಸಿಕ್ಕರೆ ಆಸ್ಪತ್ರೆ/ಬೆಡ್ ಇಲ್ಲ. ಹತ್ತಾರು ಕಿ.ಮೀ ಅಲೆದು ಆಸ್ಪತ್ರೆ ಸಿಕ್ಕರೆ ಐಸಿಯುವಿನಲ್ಲಿ ಜಾಗವಿಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಇಲ್ಲ. ಕೊನೆಗೆ ಸತ್ತವರ ಅಂತ್ಯ ಸಂಸ್ಕಾರಕ್ಕೂ ಜಾಗವಿಲ್ಲ. ಇಂಥ ಪರಿಸ್ಥಿತಿಯಲ್ಲಿ ಈ ಬಿಜೆಪಿಗರು ಕೋವಿಡ್ ಸೋಂಕಿನಿಂದ ಸತ್ತವರ ಅಂತ್ಯ ಸಂಸ್ಕಾರವನ್ನೂ ಒಂದು ಈವೆಂಟ್ ಮಾಡುತ್ತಿದ್ದಾರೆ. ಉಚಿತ ಚಾ, ಕಾಫಿ, ಊಟವಂತೆ. ಈ ಚಿತ್ರದ ಮೇಲಿರುವ ‘No’ ಗಳ ಬೋರ್ಡೇ ಇವರ ಅದಕ್ಷತೆ, ಅಸಾಮರ್ಥ್ಯ ಹಾಗೂ ಕ್ರೌರ್ಯಕ್ಕೆ ಸಾಕ್ಷಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಅಲ್ಲಿನ ಬ್ಯಾನರನ್ನು ತೆರವು ಗೊಳಿಸಲಾಗಿದೆ.

ಘಟನೆಗೆ ಶಾಸಕ ವಿಶ್ವನಾಥ್‌‌ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ. ‘‘ಗಿಡ್ಡೇನಹಳ್ಳಿ ಸುತ್ತ–ಮುತ್ತ ಜನ ವಾಸವಿಲ್ಲ. ಸುತ್ತಲೂ ಕಲ್ಲು ಬಂಡೆಗಳು ಇವೆ. ಅಲ್ಲಿ ಕುಡಿಯಲು ನೀರು ಸೇರಿದಂತೆ ಯಾವುದೇ ಸೌಲಭ್ಯವೂ ಇಲ್ಲ. ಶವಸಂಸ್ಕಾರಕ್ಕೆ ಬರುವವರಿಗೆ ತೊಂದರೆಯಾಗಬಾರದು, ಅವರಿಗೆ ನೀರು ಮತ್ತು ಆಹಾರ ಪೂರೈಕೆ ಮಾಡುವಂತೆ ಮಾನವೀಯತೆಯ ದೃಷ್ಟಿಯಿಂದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಆದರೆ, ಈ ಬಗ್ಗೆ ಪ್ರಧಾನಿ, ಮುಖ್ಯಮಂತ್ರಿ ಮತ್ತು ನನ್ನ ಫೋಟೊ ಇರುವ ಫ್ಲೆಕ್ಸ್‌ ಹಾಕಿರುವುದು ಸರಿಯಾದ ಕ್ರಮವಲ್ಲ. ಇದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ” ಎಂದಿದ್ದಾರೆ ಎಂದು ಪತ್ರಿಕೆ ತನ್ನ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶವಸಂಸ್ಕಾರದಲ್ಲೂ ರಾಜಕೀಯ, ಪ್ರಚಾರ ಬಯಸುವುದು ಮನಷ್ಯತ್ವ ಅಲ್ಲ. ಮನುವಾದಿಗಳು ಮಾನವೀಯತೆಯನ್ನೂ ಮರೆತು, ಎಲ್ಲದರಲ್ಲೂ ಪ್ರಚಾರ ಪಡೆಯಲು ಹೊರಟಿದ್ದಾರೆ.

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...