Homeಕರೋನಾ ತಲ್ಲಣಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಬಿಜೆಪಿಯದ್ದು ಜೀವವಿರೋಧಿ, ಮನುಷತ್ವ ವಿರೋಧಿ ಸಿದ್ಧಾಂತ ಎಂದು ಪದೇ ಪದೇ ಸಾಬೀತುಪಡಿಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದೆ.

- Advertisement -
- Advertisement -

ಜನರು ಆಮ್ಲಜನಕವಿಲ್ಲದೆ ಕಷ್ಟಕ್ಕೊಳಗಾಗುತ್ತಿದ್ದಾರೆ, ಇದನ್ನು ಸರಿಪಡಿಸಬೇಕಿದ್ದ ಆಡಳಿತರೂಢ ಬಿಜೆಪಿ ಸರ್ಕಾರವು ಬೆಂಗಳೂರಿನ ಹೊರವಲಯದ ಗಿಡ್ಡೇನಹಳ್ಳಿಯ ಬಳಿ ಕೋವಿಡ್‌ನಿಂದ ಮೃತಪಟ್ಟವ ಶವಸಂಸ್ಕಾರಕ್ಕೆ ತೆರಳುವವರಿಗೆ, “ಉಚಿತ ನೀರು, ಟೀ, ಕಾಫಿ, ತಿಂಡಿ, ಊಟದ ವ್ಯವಸ್ಥೆ ಮಾಡಿದ್ದೇವೆ” ಎಂದು ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಆರ್‌. ಅಶೋಕ್‌, ಬಿಡಿಎ ಅಧ್ಯಕ್ಷ, ಶಾಸಕ ಎಸ್. ಆರ್‌. ವಿಶ್ವನಾಥ್‌ ಸೇರಿದಂತೆ ಇನ್ನಿಬ್ಬರ ನಗುಮುಖದ ಫ್ಲೆಕ್ಸ್‌ ಹಾಕಿ ಅಸೂಕ್ಷತೆ ಮರೆದಿದ್ದಾರೆ.

ಕೊರೊನಾ ಎರಡನೆ ಅಲೆ ರಾಜ್ಯದಲ್ಲಿ ತೀವ್ರಗೊಳ್ಳುತ್ತಿದೆ. ರಾಜ್ಯದಾದ್ಯಂತ ಬೆಡ್‌ಗಳ ಕೊರತೆ, ಐಸಿಯುಗಳ ಕೊರತೆ ಬಗ್ಗೆ ನಿರಂತರವಾಗಿ ವರದಿಯಾಗುತ್ತಲೆ ಇದೆ. ಆದರೆ ರಾಜ್ಯ ಸರ್ಕಾರ ಮಾತ್ರ ಈ ಬಗ್ಗೆ ಎಲ್ಲವೂ ಸರಿಯಾಗಿದೆ ಎಂದು ಹೇಳುತ್ತಲೆ ಬಂದಿತ್ತು. ಈ ನಡುವೆ ನಿನ್ನೆ ನಡೆದ ಚಾಮರಾಜನಗರದ ದುರಂತವು ರಾಜ್ಯ ಸರ್ಕಾರದ ವೈಫಲ್ಯವನ್ನು ರಾಜ್ಯದ ಜನತೆಗೆ ಬಿಚ್ಚಿಟ್ಟಿದೆ. ಆದರೆ ಘಟನೆಗೆ ರಾಜ್ಯ ಸರ್ಕಾರ ಜನರನ್ನು ಮತ್ತು ಅಧಿಕಾರಿಗಳನ್ನು ಹೊಣೆ ಮಾಡಿದೆ. ಇಷ್ಟೇ ಅಲ್ಲದೆ ಕಲಬುರ್ಗಿಯಲ್ಲೂ ಆಮ್ಲಜನಕ ಕೊರೊತೆಯಿಂದ ಐದು ಸೋಂಕಿತರು ಮೃತಪಟ್ಟದ್ದಾರೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಗಳೆದ್ದಿದ್ದು ಸರ್ಕಾರವು ತನ್ನ ತಪ್ಪನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ ಎಂದು ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಜನರು ಪ್ರಾಣವಾಯು ಇಲ್ಲದೆ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಾ ಆಸ್ಪತ್ರೆಯ ಬಳಿ ನರಳಾಡುತ್ತಾ ಇದ್ದರೆ, ಬಿಜೆಪಿ ಸಾವಿನ ವಿಚಾರವನ್ನೂ ತನ್ನ ಲಾಭಕ್ಕೆ ಬಳಸಿಕೊಳ್ಳುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ರಾತ್ರೋ ರಾತ್ರಿ ಫ್ಲೆಕ್ಸ್‌ ಅನ್ನು ಎತ್ತಂಗಡಿ ಮಾಡಲಾಗಿದೆ.

ಫ್ಲೆಕ್ಸ್‌ನಲ್ಲಿ, ‘‘ಕೋವಿ‌ಡ್‌‌ನಿಂದ ಮೃತಪಟ್ಟವರ ಉಚಿತ ಅಂತ್ಯ ಸಂಸ್ಕಾರಕ್ಕೆ ಗಿಡ್ಡೇನಹಳ್ಳಿಗೆ ಹೋಗುವ ದಾರಿ. ಕೋವಿಡ್‌ನಿಂದ ಮೃತಪಟ್ಟವರನ್ನು ‘ಸಕಲ ಸರ್ಕಾರಿ ಮರ್ಯಾದೆ’ಯೊಂದಿಗೆ ಅಂತ್ಯಸಂಸ್ಕಾರ ಮಾಡಲು ಜಿಲ್ಲಾಡಳಿತ ವತಿಯಿಂದ ವ್ಯವಸ್ಥೆಯಾಗಿದೆ. ಈ ಕಾರ್ಯಕ್ಕೆ ಉಚಿತವಾಗಿ ನೀರು, ಕಾಫಿ, ಟೀ, ತಿಂಡಿ, ಊಟದ ವ್ಯವಸ್ಥೆಯನ್ನು ಮಾಡಲಾಗಿದೆ’’ ಎಂದು ಬರೆಯಲಾಗಿದೆ.

ಜೊತೆಗೆ, “ಟಿ-ಕಾಫಿಯ ಉಚಿತ ವ್ಯವಸ್ಥೆಯನ್ನು ಯಲಹಂಕದ ಶಾಸಕರಾದ ಎಸ್. ಆರ್‌. ವಿಶ್ವನಾಥ್‌ ಮಾರ್ಗದರ್ಶನದಲ್ಲಿ, ನೆಲಮಂಗಲ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಎಸ್‌. ಮಲ್ಲಯ್ಯನವರ ನೇತೃತ್ವದಲ್ಲಿ ಮಾಡಲಾಗಿದೆ” ಎಂದು ಕೂಡಾ ಬರೆದು, ಅವರ ನಗುಮುಖದ ಚಿತ್ರವನ್ನು ಹಾಕಲಾಗಿದೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

 

ಈ ಫ್ಲೆಕ್ಸ್‌ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪತ್ರಕರ್ತ ಅಲ್‌ಮೈಡಾ ಗ್ಲಾಡ್‌ಸನ್‌ ಅವರು, “ಬಿಜೆಪಿಯನ್ನು ನಾನ್ಯಾಕೆ ವಿರೋಧಿಸುತ್ತೇನೆಂದು ಕೇಳುವವರು ಇದನ್ನೊಮ್ಮೆ ನೋಡಿ. ಅವರದ್ದು ಜೀವವಿರೋಧಿ, ಮನುಷತ್ವ ವಿರೋಧಿ ಸಿದ್ಧಾಂತ ಎಂದು ಅವರು ಪದೇ ಪದೇ ಸಾಬೀತುಪಡಿಸುತ್ತಿದ್ದಾರೆ. ಮನುಷ್ಯನಿರಬೇಕಾದ ಕನಿಷ್ಟ ಸಂವೇದನೆಗಳೂ ಇಲ್ಲ ಇವಕ್ಕೆ. ಸೋಂಕು ಹೆಚ್ಚಾದರೆ ಕರೆದುಕೊಂಡು ಹೋಗಲು ಅಂಬುಲೆನ್ಸ್ ಇಲ್ಲ.

ಒಂದೊಮ್ಮೆ ಅಂಬುಲೆನ್ಸ್ ಸಿಕ್ಕರೆ ಆಸ್ಪತ್ರೆ/ಬೆಡ್ ಇಲ್ಲ. ಹತ್ತಾರು ಕಿ.ಮೀ ಅಲೆದು ಆಸ್ಪತ್ರೆ ಸಿಕ್ಕರೆ ಐಸಿಯುವಿನಲ್ಲಿ ಜಾಗವಿಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಇಲ್ಲ. ಕೊನೆಗೆ ಸತ್ತವರ ಅಂತ್ಯ ಸಂಸ್ಕಾರಕ್ಕೂ ಜಾಗವಿಲ್ಲ. ಇಂಥ ಪರಿಸ್ಥಿತಿಯಲ್ಲಿ ಈ ಬಿಜೆಪಿಗರು ಕೋವಿಡ್ ಸೋಂಕಿನಿಂದ ಸತ್ತವರ ಅಂತ್ಯ ಸಂಸ್ಕಾರವನ್ನೂ ಒಂದು ಈವೆಂಟ್ ಮಾಡುತ್ತಿದ್ದಾರೆ. ಉಚಿತ ಚಾ, ಕಾಫಿ, ಊಟವಂತೆ. ಈ ಚಿತ್ರದ ಮೇಲಿರುವ ‘No’ ಗಳ ಬೋರ್ಡೇ ಇವರ ಅದಕ್ಷತೆ, ಅಸಾಮರ್ಥ್ಯ ಹಾಗೂ ಕ್ರೌರ್ಯಕ್ಕೆ ಸಾಕ್ಷಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಅಲ್ಲಿನ ಬ್ಯಾನರನ್ನು ತೆರವು ಗೊಳಿಸಲಾಗಿದೆ.

ಘಟನೆಗೆ ಶಾಸಕ ವಿಶ್ವನಾಥ್‌‌ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ. ‘‘ಗಿಡ್ಡೇನಹಳ್ಳಿ ಸುತ್ತ–ಮುತ್ತ ಜನ ವಾಸವಿಲ್ಲ. ಸುತ್ತಲೂ ಕಲ್ಲು ಬಂಡೆಗಳು ಇವೆ. ಅಲ್ಲಿ ಕುಡಿಯಲು ನೀರು ಸೇರಿದಂತೆ ಯಾವುದೇ ಸೌಲಭ್ಯವೂ ಇಲ್ಲ. ಶವಸಂಸ್ಕಾರಕ್ಕೆ ಬರುವವರಿಗೆ ತೊಂದರೆಯಾಗಬಾರದು, ಅವರಿಗೆ ನೀರು ಮತ್ತು ಆಹಾರ ಪೂರೈಕೆ ಮಾಡುವಂತೆ ಮಾನವೀಯತೆಯ ದೃಷ್ಟಿಯಿಂದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಆದರೆ, ಈ ಬಗ್ಗೆ ಪ್ರಧಾನಿ, ಮುಖ್ಯಮಂತ್ರಿ ಮತ್ತು ನನ್ನ ಫೋಟೊ ಇರುವ ಫ್ಲೆಕ್ಸ್‌ ಹಾಕಿರುವುದು ಸರಿಯಾದ ಕ್ರಮವಲ್ಲ. ಇದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ” ಎಂದಿದ್ದಾರೆ ಎಂದು ಪತ್ರಿಕೆ ತನ್ನ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶವಸಂಸ್ಕಾರದಲ್ಲೂ ರಾಜಕೀಯ, ಪ್ರಚಾರ ಬಯಸುವುದು ಮನಷ್ಯತ್ವ ಅಲ್ಲ. ಮನುವಾದಿಗಳು ಮಾನವೀಯತೆಯನ್ನೂ ಮರೆತು, ಎಲ್ಲದರಲ್ಲೂ ಪ್ರಚಾರ ಪಡೆಯಲು ಹೊರಟಿದ್ದಾರೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...