Homeಮುಖಪುಟನಿಮ್ಮನ್ನು ರಕ್ಷಿಸಿಕೊಳ್ಳಬೇಕಾದರೆ "ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಬೇಕು": ಪ್ರಿಯಾಂಕ ಗಾಂಧಿ

ನಿಮ್ಮನ್ನು ರಕ್ಷಿಸಿಕೊಳ್ಳಬೇಕಾದರೆ “ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಬೇಕು”: ಪ್ರಿಯಾಂಕ ಗಾಂಧಿ

- Advertisement -
- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಹಿಳೆಯರ ಮೇಲಿನ ಅಪರಾಧದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಅಂತಹ ಅಪರಾಧಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು “ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಮಹಿಳೆಯರಿಗೆ ಸಮಾಜದಲ್ಲಿ ಅಧಿಕಾರ ಸಿಗಬೇಕು ಎಂದು ನಾನು ಹೇಳುತ್ತೇನೆ. ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಲು, ಪಂಚಾಯತ್ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಲು ಮತ್ತು ರಾಜಕೀಯದಲ್ಲಿ ಮುಂದೆ ಬರಲು ನಾನು ನನ್ನ ಸಹೋದರಿಯರಿಗೆ ಹೇಳುತ್ತೇನೆ. ಇದರಿಂದಾಗಿ ನೀವು ಅಧಿಕಾರ ಪಡೆಯುತ್ತೀರಿ ಮತ್ತು ಇಂತಹ ಘಟನೆಗಳು ನಡೆಯದಂತೆ ನಿಮ್ಮನ್ನು ರಕ್ಷಿಸಿಕೊಳ್ಳಬಹುದು” ಎಂದು ಪ್ರಿಯಾಂಕಾ ಗಾಂಧಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಉನ್ನಾವೋ ತೆರಳಿ ಸಂತ್ರಸ್ತೆಯ ಕುಟುಂಬದವರಿಗೆ ಸಾಂತ್ವನ ಹೇಳಿ ನಂತರ ಮಾತನಾಡಿದ ಅವರು ಅಪರಾಧದ ವಿರುದ್ಧ ನಿಮ್ಮನ್ನು ರಕ್ಷಿಸಿಕೊಳ್ಳಲು ಪುರುಷರಿಂದ ಶಕ್ತಿಯನ್ನು ಕಸಿದುಕೊಳ್ಳಿ ಎಂದು ನೆರೆದಿದ್ದ ಮಹಿಳೆಯರಿಗೆ ಪ್ರಿಯಾಂಕಾ ಗಾಂಧಿ ಕರೆ ನೀಡಿದ್ದಾರೆ.

ಎರಡು ದಿನಗಳ ಉತ್ತರ ಪ್ರದೇಶ ಭೇಟಿಯಲ್ಲಿರುವ ಕಾಂಗ್ರೆಸ್ ಮುಖಂಡೆ ತಮ್ಮ ಪಕ್ಷವು ಎಲ್ಲ ಹಂತದ ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಲಿದೆ ಎಂದು ಪುನರುಚ್ಚರಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ, ವಿಶೇಷವಾಗಿ ಮಹಿಳೆಯರ ಮೇಲಿನ ಅಪರಾಧದ ಕುರಿತು ಉತ್ತರ ಪ್ರದೇಶ ರಾಜ್ಯ ಸರ್ಕಾರದ ಮೇಲೆ ದಾಳಿ ಮಾಡಿದ ಅವರು, “ಉನ್ನಾವೊದಲ್ಲಿ, ಕಳೆದ 11 ತಿಂಗಳಲ್ಲಿ ಸುಮಾರು 90 ಅತ್ಯಾಚಾರ ಪ್ರಕರಣಗಳು ಕಂಡುಬಂದಿವೆ. “ಕೊನೆಯ ಘಟನೆ ವರದಿಯಾದಾಗ, ಸರ್ಕಾರವು ಅಪರಾಧಿಗಳನ್ನು ಕೊನೆಯವರೆಗೂ ರಕ್ಷಿಸಿತು ಎಂದು ಬಿಜೆಪಿ ಶಾಸಕ ಕುಲದೀಪ್‌ ಸಿಂಗ್‌ ಸೆಂಗಾರ್‌ ಉಲ್ಲೇಖಿಸಿ ಮಾತನಾಡಿದ್ದಾರೆ.

“ಮೈನ್‌ಪುರಿಯಲ್ಲಿ, ಸಂಭಾಲ್‌ನಲ್ಲಿ ಏನಾಯಿತು ಎಂದು ನೀವು ನೋಡಿರಬೇಕು? ಮಹಿಳೆಯರಿಗೆ ಈ ಸರ್ಕಾರದ ಮೇಲೆ ಹೇಗೆ ನಂಬಿಕೆ ಇಡಬಹುದು? ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಉತ್ತರ ಪ್ರದೇಶ ಪ್ರಥಮ ಸ್ಥಾನದಲ್ಲಿದೆ. ಮುಖ್ಯಮಂತ್ರಿ ಈ ಕುರಿತು ಏನು ಹೇಳಿದ್ದಾರೆ, ಯಾವ ಕ್ರಮ ತೆಗೆದುಕೊಂಡಿದ್ದಾರೆ? ಈಗಲಾದರೂ ಅವರು ಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗಿದೆ “ಎಂದು ಅವರು ಒತ್ತಿ ಹೇಳಿದ್ದಾರೆ.

ಸರ್ಕಾರ ಇದನ್ನು ತುರ್ತು ಪರಿಸ್ಥಿತಿಯಂತೆ ತೆಗೆದುಕೊಳ್ಳಬೇಕು ಮತ್ತು ಸಂತ್ರಸ್ತರಿಗೆ ತ್ವರಿತ ಸಹಾಯವನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

“ನನ್ನ ಸಲಹೆಯೆಂದರೆ ಮುಖ್ಯಮಂತ್ರಿಯವರ ಕಚೇರಿಯಲ್ಲಿ ಕೋಶವೊಂದನ್ನು ಸ್ಥಾಪಿಸಬೇಕು. ಅಲ್ಲಿ ಪ್ರತಿ ಜಿಲ್ಲೆಯ ಎಸ್‌ಪಿ ನೇರವಾಗಿ ಮಹಿಳೆಯರ ದೂರುಗಳ ಬಗ್ಗೆ ಸಿಎಂಗೆ ವರದಿ ಮಾಡಬೇಕು. ಅವುಗಳಿಗೆ ಸಂಬಂಧಿಸಿದಂತೆ 24 ಗಂಟೆಗಳಲ್ಲಿ ಎಫ್‌ಐಆರ್ ದಾಖಲಿಸಬೇಕು ಮತ್ತು ದೂರುದಾರರಿಗೆ ಭದ್ರತೆಯನ್ನು ಒದಗಿಸಬೇಕು” ಎಂದು ಅವರು ಹೇಳಿದ್ದಾರೆ.

ಪರಿಸ್ಥಿತಿ ಹೇಗಿದೆಯೆಂದರೆ, ಮಹಿಳೆಯರು ಇಂದು ತಮ್ಮ ಮನೆಗಳಿಂದ ಹೊರಬರಲು ಭಯಪಡುತ್ತಿದ್ದಾರೆ.  ಉನ್ನಾವೊ ಪ್ರಕರಣದಲ್ಲಿ, ಎಫ್‌ಐಆರ್ ದಾಖಲಿಸಲು ನಾಲ್ಕು ತಿಂಗಳು ಬೇಕಾಯಿತು ಮತ್ತು ಅದೂ ನ್ಯಾಯಾಲಯದ ನಿರ್ದೇಶನದ ಮೇರೆಗೆ ಮಾತ್ರ.” ಎಂದು ಅವರು ಹೇಳಿದ್ದಲ್ಲದೇ ಈ ಸರ್ಕಾರ ಮಹಿಳೆಯರ ಪರವೋ ಅಥವಾ ಅಪರಾಧಿಗಳ ಪರವಾಗಿದ್ದಾರೆಯೇ ಎಂದು ಸರ್ಕಾರ ನಿರ್ಧರಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಮಹಿಳೆಯರ ಮೇಲಿನ ಅಪರಾಧವನ್ನು ಎದುರಿಸಲು ಹೆಚ್ಚು ಕಠಿಣ ಕಾನೂನುಗಳ ಅಗತ್ಯವಿದೆಯೇ ಎಂದು ಕೇಳಿದಾಗ, “ನಿರ್ಭಯಾ ಪ್ರಕರಣದ ನಂತರ ಕಾನೂನು ಸ್ಪಷ್ಟವಾಗಿದೆ ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಿಯಾಂಕ ಗಾಂಧಿಯವರ ಅಭಿಪ್ರಾಯ ಅಕ್ಷರಶಃ ಸತ್ಯ. ಜನಸಂಖ್ಯೆಯ ಅರ್ಧದಷ್ಟು ಇರುವ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಸಮಾನವಾದ ಅವಕಾಶ ದೊರಕಬೇಕು.

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...