Homeಮುಖಪುಟನಿಮ್ಮನ್ನು ರಕ್ಷಿಸಿಕೊಳ್ಳಬೇಕಾದರೆ "ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಬೇಕು": ಪ್ರಿಯಾಂಕ ಗಾಂಧಿ

ನಿಮ್ಮನ್ನು ರಕ್ಷಿಸಿಕೊಳ್ಳಬೇಕಾದರೆ “ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಬೇಕು”: ಪ್ರಿಯಾಂಕ ಗಾಂಧಿ

- Advertisement -
- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಹಿಳೆಯರ ಮೇಲಿನ ಅಪರಾಧದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಅಂತಹ ಅಪರಾಧಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು “ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಮಹಿಳೆಯರಿಗೆ ಸಮಾಜದಲ್ಲಿ ಅಧಿಕಾರ ಸಿಗಬೇಕು ಎಂದು ನಾನು ಹೇಳುತ್ತೇನೆ. ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಲು, ಪಂಚಾಯತ್ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಲು ಮತ್ತು ರಾಜಕೀಯದಲ್ಲಿ ಮುಂದೆ ಬರಲು ನಾನು ನನ್ನ ಸಹೋದರಿಯರಿಗೆ ಹೇಳುತ್ತೇನೆ. ಇದರಿಂದಾಗಿ ನೀವು ಅಧಿಕಾರ ಪಡೆಯುತ್ತೀರಿ ಮತ್ತು ಇಂತಹ ಘಟನೆಗಳು ನಡೆಯದಂತೆ ನಿಮ್ಮನ್ನು ರಕ್ಷಿಸಿಕೊಳ್ಳಬಹುದು” ಎಂದು ಪ್ರಿಯಾಂಕಾ ಗಾಂಧಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಉನ್ನಾವೋ ತೆರಳಿ ಸಂತ್ರಸ್ತೆಯ ಕುಟುಂಬದವರಿಗೆ ಸಾಂತ್ವನ ಹೇಳಿ ನಂತರ ಮಾತನಾಡಿದ ಅವರು ಅಪರಾಧದ ವಿರುದ್ಧ ನಿಮ್ಮನ್ನು ರಕ್ಷಿಸಿಕೊಳ್ಳಲು ಪುರುಷರಿಂದ ಶಕ್ತಿಯನ್ನು ಕಸಿದುಕೊಳ್ಳಿ ಎಂದು ನೆರೆದಿದ್ದ ಮಹಿಳೆಯರಿಗೆ ಪ್ರಿಯಾಂಕಾ ಗಾಂಧಿ ಕರೆ ನೀಡಿದ್ದಾರೆ.

ಎರಡು ದಿನಗಳ ಉತ್ತರ ಪ್ರದೇಶ ಭೇಟಿಯಲ್ಲಿರುವ ಕಾಂಗ್ರೆಸ್ ಮುಖಂಡೆ ತಮ್ಮ ಪಕ್ಷವು ಎಲ್ಲ ಹಂತದ ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಲಿದೆ ಎಂದು ಪುನರುಚ್ಚರಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ, ವಿಶೇಷವಾಗಿ ಮಹಿಳೆಯರ ಮೇಲಿನ ಅಪರಾಧದ ಕುರಿತು ಉತ್ತರ ಪ್ರದೇಶ ರಾಜ್ಯ ಸರ್ಕಾರದ ಮೇಲೆ ದಾಳಿ ಮಾಡಿದ ಅವರು, “ಉನ್ನಾವೊದಲ್ಲಿ, ಕಳೆದ 11 ತಿಂಗಳಲ್ಲಿ ಸುಮಾರು 90 ಅತ್ಯಾಚಾರ ಪ್ರಕರಣಗಳು ಕಂಡುಬಂದಿವೆ. “ಕೊನೆಯ ಘಟನೆ ವರದಿಯಾದಾಗ, ಸರ್ಕಾರವು ಅಪರಾಧಿಗಳನ್ನು ಕೊನೆಯವರೆಗೂ ರಕ್ಷಿಸಿತು ಎಂದು ಬಿಜೆಪಿ ಶಾಸಕ ಕುಲದೀಪ್‌ ಸಿಂಗ್‌ ಸೆಂಗಾರ್‌ ಉಲ್ಲೇಖಿಸಿ ಮಾತನಾಡಿದ್ದಾರೆ.

“ಮೈನ್‌ಪುರಿಯಲ್ಲಿ, ಸಂಭಾಲ್‌ನಲ್ಲಿ ಏನಾಯಿತು ಎಂದು ನೀವು ನೋಡಿರಬೇಕು? ಮಹಿಳೆಯರಿಗೆ ಈ ಸರ್ಕಾರದ ಮೇಲೆ ಹೇಗೆ ನಂಬಿಕೆ ಇಡಬಹುದು? ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಉತ್ತರ ಪ್ರದೇಶ ಪ್ರಥಮ ಸ್ಥಾನದಲ್ಲಿದೆ. ಮುಖ್ಯಮಂತ್ರಿ ಈ ಕುರಿತು ಏನು ಹೇಳಿದ್ದಾರೆ, ಯಾವ ಕ್ರಮ ತೆಗೆದುಕೊಂಡಿದ್ದಾರೆ? ಈಗಲಾದರೂ ಅವರು ಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗಿದೆ “ಎಂದು ಅವರು ಒತ್ತಿ ಹೇಳಿದ್ದಾರೆ.

ಸರ್ಕಾರ ಇದನ್ನು ತುರ್ತು ಪರಿಸ್ಥಿತಿಯಂತೆ ತೆಗೆದುಕೊಳ್ಳಬೇಕು ಮತ್ತು ಸಂತ್ರಸ್ತರಿಗೆ ತ್ವರಿತ ಸಹಾಯವನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

“ನನ್ನ ಸಲಹೆಯೆಂದರೆ ಮುಖ್ಯಮಂತ್ರಿಯವರ ಕಚೇರಿಯಲ್ಲಿ ಕೋಶವೊಂದನ್ನು ಸ್ಥಾಪಿಸಬೇಕು. ಅಲ್ಲಿ ಪ್ರತಿ ಜಿಲ್ಲೆಯ ಎಸ್‌ಪಿ ನೇರವಾಗಿ ಮಹಿಳೆಯರ ದೂರುಗಳ ಬಗ್ಗೆ ಸಿಎಂಗೆ ವರದಿ ಮಾಡಬೇಕು. ಅವುಗಳಿಗೆ ಸಂಬಂಧಿಸಿದಂತೆ 24 ಗಂಟೆಗಳಲ್ಲಿ ಎಫ್‌ಐಆರ್ ದಾಖಲಿಸಬೇಕು ಮತ್ತು ದೂರುದಾರರಿಗೆ ಭದ್ರತೆಯನ್ನು ಒದಗಿಸಬೇಕು” ಎಂದು ಅವರು ಹೇಳಿದ್ದಾರೆ.

ಪರಿಸ್ಥಿತಿ ಹೇಗಿದೆಯೆಂದರೆ, ಮಹಿಳೆಯರು ಇಂದು ತಮ್ಮ ಮನೆಗಳಿಂದ ಹೊರಬರಲು ಭಯಪಡುತ್ತಿದ್ದಾರೆ.  ಉನ್ನಾವೊ ಪ್ರಕರಣದಲ್ಲಿ, ಎಫ್‌ಐಆರ್ ದಾಖಲಿಸಲು ನಾಲ್ಕು ತಿಂಗಳು ಬೇಕಾಯಿತು ಮತ್ತು ಅದೂ ನ್ಯಾಯಾಲಯದ ನಿರ್ದೇಶನದ ಮೇರೆಗೆ ಮಾತ್ರ.” ಎಂದು ಅವರು ಹೇಳಿದ್ದಲ್ಲದೇ ಈ ಸರ್ಕಾರ ಮಹಿಳೆಯರ ಪರವೋ ಅಥವಾ ಅಪರಾಧಿಗಳ ಪರವಾಗಿದ್ದಾರೆಯೇ ಎಂದು ಸರ್ಕಾರ ನಿರ್ಧರಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಮಹಿಳೆಯರ ಮೇಲಿನ ಅಪರಾಧವನ್ನು ಎದುರಿಸಲು ಹೆಚ್ಚು ಕಠಿಣ ಕಾನೂನುಗಳ ಅಗತ್ಯವಿದೆಯೇ ಎಂದು ಕೇಳಿದಾಗ, “ನಿರ್ಭಯಾ ಪ್ರಕರಣದ ನಂತರ ಕಾನೂನು ಸ್ಪಷ್ಟವಾಗಿದೆ ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಿಯಾಂಕ ಗಾಂಧಿಯವರ ಅಭಿಪ್ರಾಯ ಅಕ್ಷರಶಃ ಸತ್ಯ. ಜನಸಂಖ್ಯೆಯ ಅರ್ಧದಷ್ಟು ಇರುವ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಸಮಾನವಾದ ಅವಕಾಶ ದೊರಕಬೇಕು.

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...