Homeಮುಖಪುಟನಿಮ್ಮನ್ನು ರಕ್ಷಿಸಿಕೊಳ್ಳಬೇಕಾದರೆ "ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಬೇಕು": ಪ್ರಿಯಾಂಕ ಗಾಂಧಿ

ನಿಮ್ಮನ್ನು ರಕ್ಷಿಸಿಕೊಳ್ಳಬೇಕಾದರೆ “ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಬೇಕು”: ಪ್ರಿಯಾಂಕ ಗಾಂಧಿ

- Advertisement -
- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಹಿಳೆಯರ ಮೇಲಿನ ಅಪರಾಧದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಅಂತಹ ಅಪರಾಧಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು “ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಮಹಿಳೆಯರಿಗೆ ಸಮಾಜದಲ್ಲಿ ಅಧಿಕಾರ ಸಿಗಬೇಕು ಎಂದು ನಾನು ಹೇಳುತ್ತೇನೆ. ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಲು, ಪಂಚಾಯತ್ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಲು ಮತ್ತು ರಾಜಕೀಯದಲ್ಲಿ ಮುಂದೆ ಬರಲು ನಾನು ನನ್ನ ಸಹೋದರಿಯರಿಗೆ ಹೇಳುತ್ತೇನೆ. ಇದರಿಂದಾಗಿ ನೀವು ಅಧಿಕಾರ ಪಡೆಯುತ್ತೀರಿ ಮತ್ತು ಇಂತಹ ಘಟನೆಗಳು ನಡೆಯದಂತೆ ನಿಮ್ಮನ್ನು ರಕ್ಷಿಸಿಕೊಳ್ಳಬಹುದು” ಎಂದು ಪ್ರಿಯಾಂಕಾ ಗಾಂಧಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಉನ್ನಾವೋ ತೆರಳಿ ಸಂತ್ರಸ್ತೆಯ ಕುಟುಂಬದವರಿಗೆ ಸಾಂತ್ವನ ಹೇಳಿ ನಂತರ ಮಾತನಾಡಿದ ಅವರು ಅಪರಾಧದ ವಿರುದ್ಧ ನಿಮ್ಮನ್ನು ರಕ್ಷಿಸಿಕೊಳ್ಳಲು ಪುರುಷರಿಂದ ಶಕ್ತಿಯನ್ನು ಕಸಿದುಕೊಳ್ಳಿ ಎಂದು ನೆರೆದಿದ್ದ ಮಹಿಳೆಯರಿಗೆ ಪ್ರಿಯಾಂಕಾ ಗಾಂಧಿ ಕರೆ ನೀಡಿದ್ದಾರೆ.

ಎರಡು ದಿನಗಳ ಉತ್ತರ ಪ್ರದೇಶ ಭೇಟಿಯಲ್ಲಿರುವ ಕಾಂಗ್ರೆಸ್ ಮುಖಂಡೆ ತಮ್ಮ ಪಕ್ಷವು ಎಲ್ಲ ಹಂತದ ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಲಿದೆ ಎಂದು ಪುನರುಚ್ಚರಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ, ವಿಶೇಷವಾಗಿ ಮಹಿಳೆಯರ ಮೇಲಿನ ಅಪರಾಧದ ಕುರಿತು ಉತ್ತರ ಪ್ರದೇಶ ರಾಜ್ಯ ಸರ್ಕಾರದ ಮೇಲೆ ದಾಳಿ ಮಾಡಿದ ಅವರು, “ಉನ್ನಾವೊದಲ್ಲಿ, ಕಳೆದ 11 ತಿಂಗಳಲ್ಲಿ ಸುಮಾರು 90 ಅತ್ಯಾಚಾರ ಪ್ರಕರಣಗಳು ಕಂಡುಬಂದಿವೆ. “ಕೊನೆಯ ಘಟನೆ ವರದಿಯಾದಾಗ, ಸರ್ಕಾರವು ಅಪರಾಧಿಗಳನ್ನು ಕೊನೆಯವರೆಗೂ ರಕ್ಷಿಸಿತು ಎಂದು ಬಿಜೆಪಿ ಶಾಸಕ ಕುಲದೀಪ್‌ ಸಿಂಗ್‌ ಸೆಂಗಾರ್‌ ಉಲ್ಲೇಖಿಸಿ ಮಾತನಾಡಿದ್ದಾರೆ.

“ಮೈನ್‌ಪುರಿಯಲ್ಲಿ, ಸಂಭಾಲ್‌ನಲ್ಲಿ ಏನಾಯಿತು ಎಂದು ನೀವು ನೋಡಿರಬೇಕು? ಮಹಿಳೆಯರಿಗೆ ಈ ಸರ್ಕಾರದ ಮೇಲೆ ಹೇಗೆ ನಂಬಿಕೆ ಇಡಬಹುದು? ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಉತ್ತರ ಪ್ರದೇಶ ಪ್ರಥಮ ಸ್ಥಾನದಲ್ಲಿದೆ. ಮುಖ್ಯಮಂತ್ರಿ ಈ ಕುರಿತು ಏನು ಹೇಳಿದ್ದಾರೆ, ಯಾವ ಕ್ರಮ ತೆಗೆದುಕೊಂಡಿದ್ದಾರೆ? ಈಗಲಾದರೂ ಅವರು ಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗಿದೆ “ಎಂದು ಅವರು ಒತ್ತಿ ಹೇಳಿದ್ದಾರೆ.

ಸರ್ಕಾರ ಇದನ್ನು ತುರ್ತು ಪರಿಸ್ಥಿತಿಯಂತೆ ತೆಗೆದುಕೊಳ್ಳಬೇಕು ಮತ್ತು ಸಂತ್ರಸ್ತರಿಗೆ ತ್ವರಿತ ಸಹಾಯವನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

“ನನ್ನ ಸಲಹೆಯೆಂದರೆ ಮುಖ್ಯಮಂತ್ರಿಯವರ ಕಚೇರಿಯಲ್ಲಿ ಕೋಶವೊಂದನ್ನು ಸ್ಥಾಪಿಸಬೇಕು. ಅಲ್ಲಿ ಪ್ರತಿ ಜಿಲ್ಲೆಯ ಎಸ್‌ಪಿ ನೇರವಾಗಿ ಮಹಿಳೆಯರ ದೂರುಗಳ ಬಗ್ಗೆ ಸಿಎಂಗೆ ವರದಿ ಮಾಡಬೇಕು. ಅವುಗಳಿಗೆ ಸಂಬಂಧಿಸಿದಂತೆ 24 ಗಂಟೆಗಳಲ್ಲಿ ಎಫ್‌ಐಆರ್ ದಾಖಲಿಸಬೇಕು ಮತ್ತು ದೂರುದಾರರಿಗೆ ಭದ್ರತೆಯನ್ನು ಒದಗಿಸಬೇಕು” ಎಂದು ಅವರು ಹೇಳಿದ್ದಾರೆ.

ಪರಿಸ್ಥಿತಿ ಹೇಗಿದೆಯೆಂದರೆ, ಮಹಿಳೆಯರು ಇಂದು ತಮ್ಮ ಮನೆಗಳಿಂದ ಹೊರಬರಲು ಭಯಪಡುತ್ತಿದ್ದಾರೆ.  ಉನ್ನಾವೊ ಪ್ರಕರಣದಲ್ಲಿ, ಎಫ್‌ಐಆರ್ ದಾಖಲಿಸಲು ನಾಲ್ಕು ತಿಂಗಳು ಬೇಕಾಯಿತು ಮತ್ತು ಅದೂ ನ್ಯಾಯಾಲಯದ ನಿರ್ದೇಶನದ ಮೇರೆಗೆ ಮಾತ್ರ.” ಎಂದು ಅವರು ಹೇಳಿದ್ದಲ್ಲದೇ ಈ ಸರ್ಕಾರ ಮಹಿಳೆಯರ ಪರವೋ ಅಥವಾ ಅಪರಾಧಿಗಳ ಪರವಾಗಿದ್ದಾರೆಯೇ ಎಂದು ಸರ್ಕಾರ ನಿರ್ಧರಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಮಹಿಳೆಯರ ಮೇಲಿನ ಅಪರಾಧವನ್ನು ಎದುರಿಸಲು ಹೆಚ್ಚು ಕಠಿಣ ಕಾನೂನುಗಳ ಅಗತ್ಯವಿದೆಯೇ ಎಂದು ಕೇಳಿದಾಗ, “ನಿರ್ಭಯಾ ಪ್ರಕರಣದ ನಂತರ ಕಾನೂನು ಸ್ಪಷ್ಟವಾಗಿದೆ ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಿಯಾಂಕ ಗಾಂಧಿಯವರ ಅಭಿಪ್ರಾಯ ಅಕ್ಷರಶಃ ಸತ್ಯ. ಜನಸಂಖ್ಯೆಯ ಅರ್ಧದಷ್ಟು ಇರುವ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಸಮಾನವಾದ ಅವಕಾಶ ದೊರಕಬೇಕು.

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...