Homeಮುಖಪುಟಸ್ನೂಪಿಂಗ್‌ ಕೇಸ್: ಡಿಸಿಎಂ ಸಿಸೋಡಿಯಾ ವಿಚಾರಣೆಗೆ ಗೃಹ ಸಚಿವಾಲಯ ಅನುಮತಿ

ಸ್ನೂಪಿಂಗ್‌ ಕೇಸ್: ಡಿಸಿಎಂ ಸಿಸೋಡಿಯಾ ವಿಚಾರಣೆಗೆ ಗೃಹ ಸಚಿವಾಲಯ ಅನುಮತಿ

- Advertisement -
- Advertisement -

ಗೃಹ ವ್ಯವಹಾರಗಳ ಸಚಿವಾಲಯವು ಫೀಡ್‌ಬ್ಯಾಕ್‌ ಯೂನಿಟ್ ಸ್ನೂಪಿಂಗ್ ಪ್ರಕರಣದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿಚಾರಣೆಗೆ ಒಳಪಡಿಸಲು  ಅನುಮತಿ ನೀಡಿದೆ. ಮದ್ಯ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಸಿಬಿಐನ ವಿಚಾರಣೆಯಲ್ಲಿರುವುದರಿಂದ ಈ ಬೆಳವಣಿಗೆಯಾಗಿದೆ.

ಆಮ್ ಆದ್ಮಿ ಪಕ್ಷ 2015ರಲ್ಲಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜಕೀಯ ಗುಪ್ತಚರ ಸಂಗ್ರಹಣೆಗಾಗಿ ಫೀಡ್‌ಬ್ಯಾಕ್‌ ಯೂನಿಟ್‌ನ್ನು ರಚಿಸಿತು. ಈ ಸ್ನೂಪಿಂಗ್ ಯೂನಿಟ್‌ಗೆ ಮನೀಶ್ ಸಿಸೋಡಿಯಾ ಅವರು ಮುಖ್ಯಸ್ಥರಾಗಿದ್ದರು ಎಂದು ಸಿಬಿಐ ವರದಿ ಹೇಳಿದೆ ಎಂದು ಹೇಳುವ ಸಿಬಿಐ ವರದಿಯಲ್ಲಿ ಸಿಸೋಡಿಯಾ ವಿರುದ್ಧ ಸ್ನೂಪಿಂಗ್ ಆರೋಪಗಳನ್ನು ಮಾಡಲಾಗಿದೆ.

ಈ ಆರೋಪಗಳನ್ನು ಈ ಹಿಂದೆಯೇ ತಳ್ಳಿ ಹಾಕಿರುವ ಎಎಪಿ, ”ಇಲ್ಲಿಯವರೆಗೆ, ಸಿಬಿಐ, ಇಡಿ ಮತ್ತು ದೆಹಲಿ ಪೊಲೀಸರು ನಮ್ಮ ವಿರುದ್ಧ 163 ಪ್ರಕರಣಗಳನ್ನು ದಾಖಲಿಸಿದ್ದಾರೆ. ಆದರೆ, ಬಿಜೆಪಿಗೆ ಯಾವ ಪ್ರಕರಣವನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ. ಈ ಪ್ರಕರಣಗಳಲ್ಲಿ ಸುಮಾರು 134 ಪ್ರಕರಣಗಳನ್ನು ನ್ಯಾಯಾಲಯಗಳು ವಜಾಗೊಳಿಸಿದೆ ಮತ್ತು ಉಳಿದ ಪ್ರಕರಣಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರಕ್ಕೆ ಯಾವುದೇ ಸಾಕ್ಷ್ಯಾಧಾರ ಒದಗಿಸಲು ಸಾಧ್ಯವಾಗಿಲ್ಲ. ಈ ಪ್ರಕರಣಗಳು ರಾಜಕೀಯ ಪ್ರೇರಿತವಾಗಿವೆ ಎಂದು ಹೇಳುವ ಮೂಲಕ ಆರೋಪಗಳನ್ನು ದೆಹಲಿ ಸರಕಾರ ನಿರಾಕರಿಸಿತ್ತು.

ಇದನ್ನೂ ಓದಿ: ‘ಮತ್ತೆ ದಾಳಿ ನಡೆಸಿದ ಸಿಬಿಐ’: ದೆಹಲಿ ಡಿಸಿಎಂ ಸಿಸೋಡಿಯಾ ಆರೋಪ

ಸಿಸೋಡಿಯಾ ವಿರುದ್ಧ ಕಾನೂನು ಕ್ರಮಕ್ಕೆ ಸಿಬಿಐ ಕೋರಿಕೆಯನ್ನು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅನುಮೋದಿಸಿ, ಆ ಮನವಿಯನ್ನು ಗೃಹ ಸಚಿವಾಲಯಕ್ಕೆ ರವಾನಿಸಿದರು. ಸೆಪ್ಟೆಂಬರ್ 29, 2015ರ ಕ್ಯಾಬಿನೆಟ್ ನಿರ್ಣಯದ ಮೂಲಕ ಫೀಡ್‌ಬ್ಯಾಕ್‌ ಯೂನಿಟ್ ರಚಿಸಲಾಗಿದೆ. ಸಿಸೋಡಿಯಾ ನೇತೃತ್ವದ ಈ ಘಟಕವು ಯಾವುದೇ ಶಾಸಕಾಂಗ ಅಥವಾ ನ್ಯಾಯಾಂಗ ಕಾನೂನುಬದ್ಧತೆಯನ್ನು ಹೊಂದಿಲ್ಲ ಆದರೆ ರಾಜಕಾರಣಿಗಳ ಮೇಲೆ ಕಣ್ಣಿಡುತ್ತಿದ್ದು, ಗೂಢಚಾರಿಕೆ ಮಾಡುತ್ತಿದೆ ಎಂದು ಸಿಬಿಐ ತನ್ನ ವರದಿಯಲ್ಲಿ ಹೇಳಿದೆ.

ದೆಹಲಿ ಸರ್ಕಾರದ ವಿಜಿಲೆನ್ಸ್ ವಿಭಾಗದ ಮುಖ್ಯಸ್ಥರಾಗಿರುವ ಸಿಸೋಡಿಯಾ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ಅನುಮತಿ ಕೋರಿತ್ತು, ಅದರ ಅಡಿಯಲ್ಲಿ 2015 ರಲ್ಲಿ ಘಟಕವನ್ನು ‘ಹೆಚ್ಚುವರಿ ಸಾಂವಿಧಾನಿಕ-ಹೆಚ್ಚುವರಿ ನ್ಯಾಯಾಂಗ ಗುಪ್ತಚರ ಸಂಸ್ಥೆ’ ಎಂದು ರಹಸ್ಯವಾಗಿ ರಚಿಸಲಾಗಿದೆ ಎಂದು ಸಿಬಿಐ ಆರೋಪಿಸಿತ್ತು. ಇದೀಗ ಗೃಹ ವ್ಯವಹಾರಗಳ ಸಚಿವಾಲಯವು ಸಿಸೋಡಿಯಾ ಅವರನ್ನು ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿಚಾರಣೆಗೆ ಒಳಪಡಿಸಲು ಅನುಮತಿ ನೀಡಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಸಿಸೋಡಿಯಾ ಅವರು, ”ನಿಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದು, ಪ್ರಕರಣಗಳನ್ನು ದಾಖಲಿಸುವುದು ದುರ್ಬಲ ಮತ್ತು ಹೇಡಿತನದ ಸಂಕೇತವಾಗಿದೆ. ಆಮ್ ಆದ್ಮಿ ಪಕ್ಷ ಬೆಳೆದಂತೆ ನಮ್ಮ ವಿರುದ್ಧ ಇನ್ನೂ ಹಲವು ಪ್ರಕರಣಗಳು ದಾಖಲಾಗುತ್ತವೆ” ಎಂದಿದ್ದಾರೆ.

ಏನಿದು ಫೀಡ್‌ಬ್ಯಾಕ್‌ ಯೂನಿಟ್ ಸ್ನೂಪಿಂಗ್ ಪ್ರಕರಣ?

ಆಮ್ ಆದ್ಮಿ ಪಕ್ಷ 2015ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ದೆಹಲಿಯಲ್ಲಿ ಸರ್ಕಾರ ರಚಿಸಿತು. ಕೆಲದಿನಗಳ ನಂತರದಲ್ಲಿ ಎಎಪಿ ಸರ್ಕಾರವು ವಿವಿಧ “ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು, ಸಂಸ್ಥೆಗಳು ಮತ್ತು ಘಟಕಗಳ” ಕಾರ್ಯನಿರ್ವಹಣೆಯ ಕುರಿತು “ಸಂಬಂಧಿತ ಮತ್ತು ಕ್ರಿಯಾಶೀಲ ಪ್ರತಿಕ್ರಿಯೆ” ಸಂಗ್ರಹಿಸಲು ಮತ್ತು ಅವುಗಳ ಮೇಲೆ ಕಣ್ಗಾವಲಿಡಲು “ಫೀಡ್‌ಬ್ಯಾಕ್‌ ಯೂನಿಟ್“ನ್ನು ರಚಿಸಿತು. ಅದು ಮುಂದೆ ರಾಜಕಾರಣಿಗಳನ್ನು “ಟ್ರ್ಯಾಪ್” ಮಾಡಲು ಬಳಕೆಯಾಗಿದೆ ಎಂದು ಆರೋಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...