Homeಮುಖಪುಟಸ್ನೂಪಿಂಗ್‌ ಕೇಸ್: ಡಿಸಿಎಂ ಸಿಸೋಡಿಯಾ ವಿಚಾರಣೆಗೆ ಗೃಹ ಸಚಿವಾಲಯ ಅನುಮತಿ

ಸ್ನೂಪಿಂಗ್‌ ಕೇಸ್: ಡಿಸಿಎಂ ಸಿಸೋಡಿಯಾ ವಿಚಾರಣೆಗೆ ಗೃಹ ಸಚಿವಾಲಯ ಅನುಮತಿ

- Advertisement -
- Advertisement -

ಗೃಹ ವ್ಯವಹಾರಗಳ ಸಚಿವಾಲಯವು ಫೀಡ್‌ಬ್ಯಾಕ್‌ ಯೂನಿಟ್ ಸ್ನೂಪಿಂಗ್ ಪ್ರಕರಣದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿಚಾರಣೆಗೆ ಒಳಪಡಿಸಲು  ಅನುಮತಿ ನೀಡಿದೆ. ಮದ್ಯ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಸಿಬಿಐನ ವಿಚಾರಣೆಯಲ್ಲಿರುವುದರಿಂದ ಈ ಬೆಳವಣಿಗೆಯಾಗಿದೆ.

ಆಮ್ ಆದ್ಮಿ ಪಕ್ಷ 2015ರಲ್ಲಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜಕೀಯ ಗುಪ್ತಚರ ಸಂಗ್ರಹಣೆಗಾಗಿ ಫೀಡ್‌ಬ್ಯಾಕ್‌ ಯೂನಿಟ್‌ನ್ನು ರಚಿಸಿತು. ಈ ಸ್ನೂಪಿಂಗ್ ಯೂನಿಟ್‌ಗೆ ಮನೀಶ್ ಸಿಸೋಡಿಯಾ ಅವರು ಮುಖ್ಯಸ್ಥರಾಗಿದ್ದರು ಎಂದು ಸಿಬಿಐ ವರದಿ ಹೇಳಿದೆ ಎಂದು ಹೇಳುವ ಸಿಬಿಐ ವರದಿಯಲ್ಲಿ ಸಿಸೋಡಿಯಾ ವಿರುದ್ಧ ಸ್ನೂಪಿಂಗ್ ಆರೋಪಗಳನ್ನು ಮಾಡಲಾಗಿದೆ.

ಈ ಆರೋಪಗಳನ್ನು ಈ ಹಿಂದೆಯೇ ತಳ್ಳಿ ಹಾಕಿರುವ ಎಎಪಿ, ”ಇಲ್ಲಿಯವರೆಗೆ, ಸಿಬಿಐ, ಇಡಿ ಮತ್ತು ದೆಹಲಿ ಪೊಲೀಸರು ನಮ್ಮ ವಿರುದ್ಧ 163 ಪ್ರಕರಣಗಳನ್ನು ದಾಖಲಿಸಿದ್ದಾರೆ. ಆದರೆ, ಬಿಜೆಪಿಗೆ ಯಾವ ಪ್ರಕರಣವನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ. ಈ ಪ್ರಕರಣಗಳಲ್ಲಿ ಸುಮಾರು 134 ಪ್ರಕರಣಗಳನ್ನು ನ್ಯಾಯಾಲಯಗಳು ವಜಾಗೊಳಿಸಿದೆ ಮತ್ತು ಉಳಿದ ಪ್ರಕರಣಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರಕ್ಕೆ ಯಾವುದೇ ಸಾಕ್ಷ್ಯಾಧಾರ ಒದಗಿಸಲು ಸಾಧ್ಯವಾಗಿಲ್ಲ. ಈ ಪ್ರಕರಣಗಳು ರಾಜಕೀಯ ಪ್ರೇರಿತವಾಗಿವೆ ಎಂದು ಹೇಳುವ ಮೂಲಕ ಆರೋಪಗಳನ್ನು ದೆಹಲಿ ಸರಕಾರ ನಿರಾಕರಿಸಿತ್ತು.

ಇದನ್ನೂ ಓದಿ: ‘ಮತ್ತೆ ದಾಳಿ ನಡೆಸಿದ ಸಿಬಿಐ’: ದೆಹಲಿ ಡಿಸಿಎಂ ಸಿಸೋಡಿಯಾ ಆರೋಪ

ಸಿಸೋಡಿಯಾ ವಿರುದ್ಧ ಕಾನೂನು ಕ್ರಮಕ್ಕೆ ಸಿಬಿಐ ಕೋರಿಕೆಯನ್ನು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅನುಮೋದಿಸಿ, ಆ ಮನವಿಯನ್ನು ಗೃಹ ಸಚಿವಾಲಯಕ್ಕೆ ರವಾನಿಸಿದರು. ಸೆಪ್ಟೆಂಬರ್ 29, 2015ರ ಕ್ಯಾಬಿನೆಟ್ ನಿರ್ಣಯದ ಮೂಲಕ ಫೀಡ್‌ಬ್ಯಾಕ್‌ ಯೂನಿಟ್ ರಚಿಸಲಾಗಿದೆ. ಸಿಸೋಡಿಯಾ ನೇತೃತ್ವದ ಈ ಘಟಕವು ಯಾವುದೇ ಶಾಸಕಾಂಗ ಅಥವಾ ನ್ಯಾಯಾಂಗ ಕಾನೂನುಬದ್ಧತೆಯನ್ನು ಹೊಂದಿಲ್ಲ ಆದರೆ ರಾಜಕಾರಣಿಗಳ ಮೇಲೆ ಕಣ್ಣಿಡುತ್ತಿದ್ದು, ಗೂಢಚಾರಿಕೆ ಮಾಡುತ್ತಿದೆ ಎಂದು ಸಿಬಿಐ ತನ್ನ ವರದಿಯಲ್ಲಿ ಹೇಳಿದೆ.

ದೆಹಲಿ ಸರ್ಕಾರದ ವಿಜಿಲೆನ್ಸ್ ವಿಭಾಗದ ಮುಖ್ಯಸ್ಥರಾಗಿರುವ ಸಿಸೋಡಿಯಾ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ಅನುಮತಿ ಕೋರಿತ್ತು, ಅದರ ಅಡಿಯಲ್ಲಿ 2015 ರಲ್ಲಿ ಘಟಕವನ್ನು ‘ಹೆಚ್ಚುವರಿ ಸಾಂವಿಧಾನಿಕ-ಹೆಚ್ಚುವರಿ ನ್ಯಾಯಾಂಗ ಗುಪ್ತಚರ ಸಂಸ್ಥೆ’ ಎಂದು ರಹಸ್ಯವಾಗಿ ರಚಿಸಲಾಗಿದೆ ಎಂದು ಸಿಬಿಐ ಆರೋಪಿಸಿತ್ತು. ಇದೀಗ ಗೃಹ ವ್ಯವಹಾರಗಳ ಸಚಿವಾಲಯವು ಸಿಸೋಡಿಯಾ ಅವರನ್ನು ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿಚಾರಣೆಗೆ ಒಳಪಡಿಸಲು ಅನುಮತಿ ನೀಡಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಸಿಸೋಡಿಯಾ ಅವರು, ”ನಿಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದು, ಪ್ರಕರಣಗಳನ್ನು ದಾಖಲಿಸುವುದು ದುರ್ಬಲ ಮತ್ತು ಹೇಡಿತನದ ಸಂಕೇತವಾಗಿದೆ. ಆಮ್ ಆದ್ಮಿ ಪಕ್ಷ ಬೆಳೆದಂತೆ ನಮ್ಮ ವಿರುದ್ಧ ಇನ್ನೂ ಹಲವು ಪ್ರಕರಣಗಳು ದಾಖಲಾಗುತ್ತವೆ” ಎಂದಿದ್ದಾರೆ.

ಏನಿದು ಫೀಡ್‌ಬ್ಯಾಕ್‌ ಯೂನಿಟ್ ಸ್ನೂಪಿಂಗ್ ಪ್ರಕರಣ?

ಆಮ್ ಆದ್ಮಿ ಪಕ್ಷ 2015ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ದೆಹಲಿಯಲ್ಲಿ ಸರ್ಕಾರ ರಚಿಸಿತು. ಕೆಲದಿನಗಳ ನಂತರದಲ್ಲಿ ಎಎಪಿ ಸರ್ಕಾರವು ವಿವಿಧ “ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು, ಸಂಸ್ಥೆಗಳು ಮತ್ತು ಘಟಕಗಳ” ಕಾರ್ಯನಿರ್ವಹಣೆಯ ಕುರಿತು “ಸಂಬಂಧಿತ ಮತ್ತು ಕ್ರಿಯಾಶೀಲ ಪ್ರತಿಕ್ರಿಯೆ” ಸಂಗ್ರಹಿಸಲು ಮತ್ತು ಅವುಗಳ ಮೇಲೆ ಕಣ್ಗಾವಲಿಡಲು “ಫೀಡ್‌ಬ್ಯಾಕ್‌ ಯೂನಿಟ್“ನ್ನು ರಚಿಸಿತು. ಅದು ಮುಂದೆ ರಾಜಕಾರಣಿಗಳನ್ನು “ಟ್ರ್ಯಾಪ್” ಮಾಡಲು ಬಳಕೆಯಾಗಿದೆ ಎಂದು ಆರೋಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...