Homeಮುಖಪುಟಸ್ನೂಪಿಂಗ್‌ ಕೇಸ್: ಡಿಸಿಎಂ ಸಿಸೋಡಿಯಾ ವಿಚಾರಣೆಗೆ ಗೃಹ ಸಚಿವಾಲಯ ಅನುಮತಿ

ಸ್ನೂಪಿಂಗ್‌ ಕೇಸ್: ಡಿಸಿಎಂ ಸಿಸೋಡಿಯಾ ವಿಚಾರಣೆಗೆ ಗೃಹ ಸಚಿವಾಲಯ ಅನುಮತಿ

- Advertisement -
- Advertisement -

ಗೃಹ ವ್ಯವಹಾರಗಳ ಸಚಿವಾಲಯವು ಫೀಡ್‌ಬ್ಯಾಕ್‌ ಯೂನಿಟ್ ಸ್ನೂಪಿಂಗ್ ಪ್ರಕರಣದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿಚಾರಣೆಗೆ ಒಳಪಡಿಸಲು  ಅನುಮತಿ ನೀಡಿದೆ. ಮದ್ಯ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಸಿಬಿಐನ ವಿಚಾರಣೆಯಲ್ಲಿರುವುದರಿಂದ ಈ ಬೆಳವಣಿಗೆಯಾಗಿದೆ.

ಆಮ್ ಆದ್ಮಿ ಪಕ್ಷ 2015ರಲ್ಲಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜಕೀಯ ಗುಪ್ತಚರ ಸಂಗ್ರಹಣೆಗಾಗಿ ಫೀಡ್‌ಬ್ಯಾಕ್‌ ಯೂನಿಟ್‌ನ್ನು ರಚಿಸಿತು. ಈ ಸ್ನೂಪಿಂಗ್ ಯೂನಿಟ್‌ಗೆ ಮನೀಶ್ ಸಿಸೋಡಿಯಾ ಅವರು ಮುಖ್ಯಸ್ಥರಾಗಿದ್ದರು ಎಂದು ಸಿಬಿಐ ವರದಿ ಹೇಳಿದೆ ಎಂದು ಹೇಳುವ ಸಿಬಿಐ ವರದಿಯಲ್ಲಿ ಸಿಸೋಡಿಯಾ ವಿರುದ್ಧ ಸ್ನೂಪಿಂಗ್ ಆರೋಪಗಳನ್ನು ಮಾಡಲಾಗಿದೆ.

ಈ ಆರೋಪಗಳನ್ನು ಈ ಹಿಂದೆಯೇ ತಳ್ಳಿ ಹಾಕಿರುವ ಎಎಪಿ, ”ಇಲ್ಲಿಯವರೆಗೆ, ಸಿಬಿಐ, ಇಡಿ ಮತ್ತು ದೆಹಲಿ ಪೊಲೀಸರು ನಮ್ಮ ವಿರುದ್ಧ 163 ಪ್ರಕರಣಗಳನ್ನು ದಾಖಲಿಸಿದ್ದಾರೆ. ಆದರೆ, ಬಿಜೆಪಿಗೆ ಯಾವ ಪ್ರಕರಣವನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ. ಈ ಪ್ರಕರಣಗಳಲ್ಲಿ ಸುಮಾರು 134 ಪ್ರಕರಣಗಳನ್ನು ನ್ಯಾಯಾಲಯಗಳು ವಜಾಗೊಳಿಸಿದೆ ಮತ್ತು ಉಳಿದ ಪ್ರಕರಣಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರಕ್ಕೆ ಯಾವುದೇ ಸಾಕ್ಷ್ಯಾಧಾರ ಒದಗಿಸಲು ಸಾಧ್ಯವಾಗಿಲ್ಲ. ಈ ಪ್ರಕರಣಗಳು ರಾಜಕೀಯ ಪ್ರೇರಿತವಾಗಿವೆ ಎಂದು ಹೇಳುವ ಮೂಲಕ ಆರೋಪಗಳನ್ನು ದೆಹಲಿ ಸರಕಾರ ನಿರಾಕರಿಸಿತ್ತು.

ಇದನ್ನೂ ಓದಿ: ‘ಮತ್ತೆ ದಾಳಿ ನಡೆಸಿದ ಸಿಬಿಐ’: ದೆಹಲಿ ಡಿಸಿಎಂ ಸಿಸೋಡಿಯಾ ಆರೋಪ

ಸಿಸೋಡಿಯಾ ವಿರುದ್ಧ ಕಾನೂನು ಕ್ರಮಕ್ಕೆ ಸಿಬಿಐ ಕೋರಿಕೆಯನ್ನು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅನುಮೋದಿಸಿ, ಆ ಮನವಿಯನ್ನು ಗೃಹ ಸಚಿವಾಲಯಕ್ಕೆ ರವಾನಿಸಿದರು. ಸೆಪ್ಟೆಂಬರ್ 29, 2015ರ ಕ್ಯಾಬಿನೆಟ್ ನಿರ್ಣಯದ ಮೂಲಕ ಫೀಡ್‌ಬ್ಯಾಕ್‌ ಯೂನಿಟ್ ರಚಿಸಲಾಗಿದೆ. ಸಿಸೋಡಿಯಾ ನೇತೃತ್ವದ ಈ ಘಟಕವು ಯಾವುದೇ ಶಾಸಕಾಂಗ ಅಥವಾ ನ್ಯಾಯಾಂಗ ಕಾನೂನುಬದ್ಧತೆಯನ್ನು ಹೊಂದಿಲ್ಲ ಆದರೆ ರಾಜಕಾರಣಿಗಳ ಮೇಲೆ ಕಣ್ಣಿಡುತ್ತಿದ್ದು, ಗೂಢಚಾರಿಕೆ ಮಾಡುತ್ತಿದೆ ಎಂದು ಸಿಬಿಐ ತನ್ನ ವರದಿಯಲ್ಲಿ ಹೇಳಿದೆ.

ದೆಹಲಿ ಸರ್ಕಾರದ ವಿಜಿಲೆನ್ಸ್ ವಿಭಾಗದ ಮುಖ್ಯಸ್ಥರಾಗಿರುವ ಸಿಸೋಡಿಯಾ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ಅನುಮತಿ ಕೋರಿತ್ತು, ಅದರ ಅಡಿಯಲ್ಲಿ 2015 ರಲ್ಲಿ ಘಟಕವನ್ನು ‘ಹೆಚ್ಚುವರಿ ಸಾಂವಿಧಾನಿಕ-ಹೆಚ್ಚುವರಿ ನ್ಯಾಯಾಂಗ ಗುಪ್ತಚರ ಸಂಸ್ಥೆ’ ಎಂದು ರಹಸ್ಯವಾಗಿ ರಚಿಸಲಾಗಿದೆ ಎಂದು ಸಿಬಿಐ ಆರೋಪಿಸಿತ್ತು. ಇದೀಗ ಗೃಹ ವ್ಯವಹಾರಗಳ ಸಚಿವಾಲಯವು ಸಿಸೋಡಿಯಾ ಅವರನ್ನು ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿಚಾರಣೆಗೆ ಒಳಪಡಿಸಲು ಅನುಮತಿ ನೀಡಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಸಿಸೋಡಿಯಾ ಅವರು, ”ನಿಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದು, ಪ್ರಕರಣಗಳನ್ನು ದಾಖಲಿಸುವುದು ದುರ್ಬಲ ಮತ್ತು ಹೇಡಿತನದ ಸಂಕೇತವಾಗಿದೆ. ಆಮ್ ಆದ್ಮಿ ಪಕ್ಷ ಬೆಳೆದಂತೆ ನಮ್ಮ ವಿರುದ್ಧ ಇನ್ನೂ ಹಲವು ಪ್ರಕರಣಗಳು ದಾಖಲಾಗುತ್ತವೆ” ಎಂದಿದ್ದಾರೆ.

ಏನಿದು ಫೀಡ್‌ಬ್ಯಾಕ್‌ ಯೂನಿಟ್ ಸ್ನೂಪಿಂಗ್ ಪ್ರಕರಣ?

ಆಮ್ ಆದ್ಮಿ ಪಕ್ಷ 2015ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ದೆಹಲಿಯಲ್ಲಿ ಸರ್ಕಾರ ರಚಿಸಿತು. ಕೆಲದಿನಗಳ ನಂತರದಲ್ಲಿ ಎಎಪಿ ಸರ್ಕಾರವು ವಿವಿಧ “ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು, ಸಂಸ್ಥೆಗಳು ಮತ್ತು ಘಟಕಗಳ” ಕಾರ್ಯನಿರ್ವಹಣೆಯ ಕುರಿತು “ಸಂಬಂಧಿತ ಮತ್ತು ಕ್ರಿಯಾಶೀಲ ಪ್ರತಿಕ್ರಿಯೆ” ಸಂಗ್ರಹಿಸಲು ಮತ್ತು ಅವುಗಳ ಮೇಲೆ ಕಣ್ಗಾವಲಿಡಲು “ಫೀಡ್‌ಬ್ಯಾಕ್‌ ಯೂನಿಟ್“ನ್ನು ರಚಿಸಿತು. ಅದು ಮುಂದೆ ರಾಜಕಾರಣಿಗಳನ್ನು “ಟ್ರ್ಯಾಪ್” ಮಾಡಲು ಬಳಕೆಯಾಗಿದೆ ಎಂದು ಆರೋಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...