Homeಮುಖಪುಟಸ್ನೂಪಿಂಗ್‌ ಕೇಸ್: ಡಿಸಿಎಂ ಸಿಸೋಡಿಯಾ ವಿಚಾರಣೆಗೆ ಗೃಹ ಸಚಿವಾಲಯ ಅನುಮತಿ

ಸ್ನೂಪಿಂಗ್‌ ಕೇಸ್: ಡಿಸಿಎಂ ಸಿಸೋಡಿಯಾ ವಿಚಾರಣೆಗೆ ಗೃಹ ಸಚಿವಾಲಯ ಅನುಮತಿ

- Advertisement -
- Advertisement -

ಗೃಹ ವ್ಯವಹಾರಗಳ ಸಚಿವಾಲಯವು ಫೀಡ್‌ಬ್ಯಾಕ್‌ ಯೂನಿಟ್ ಸ್ನೂಪಿಂಗ್ ಪ್ರಕರಣದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿಚಾರಣೆಗೆ ಒಳಪಡಿಸಲು  ಅನುಮತಿ ನೀಡಿದೆ. ಮದ್ಯ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಸಿಬಿಐನ ವಿಚಾರಣೆಯಲ್ಲಿರುವುದರಿಂದ ಈ ಬೆಳವಣಿಗೆಯಾಗಿದೆ.

ಆಮ್ ಆದ್ಮಿ ಪಕ್ಷ 2015ರಲ್ಲಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜಕೀಯ ಗುಪ್ತಚರ ಸಂಗ್ರಹಣೆಗಾಗಿ ಫೀಡ್‌ಬ್ಯಾಕ್‌ ಯೂನಿಟ್‌ನ್ನು ರಚಿಸಿತು. ಈ ಸ್ನೂಪಿಂಗ್ ಯೂನಿಟ್‌ಗೆ ಮನೀಶ್ ಸಿಸೋಡಿಯಾ ಅವರು ಮುಖ್ಯಸ್ಥರಾಗಿದ್ದರು ಎಂದು ಸಿಬಿಐ ವರದಿ ಹೇಳಿದೆ ಎಂದು ಹೇಳುವ ಸಿಬಿಐ ವರದಿಯಲ್ಲಿ ಸಿಸೋಡಿಯಾ ವಿರುದ್ಧ ಸ್ನೂಪಿಂಗ್ ಆರೋಪಗಳನ್ನು ಮಾಡಲಾಗಿದೆ.

ಈ ಆರೋಪಗಳನ್ನು ಈ ಹಿಂದೆಯೇ ತಳ್ಳಿ ಹಾಕಿರುವ ಎಎಪಿ, ”ಇಲ್ಲಿಯವರೆಗೆ, ಸಿಬಿಐ, ಇಡಿ ಮತ್ತು ದೆಹಲಿ ಪೊಲೀಸರು ನಮ್ಮ ವಿರುದ್ಧ 163 ಪ್ರಕರಣಗಳನ್ನು ದಾಖಲಿಸಿದ್ದಾರೆ. ಆದರೆ, ಬಿಜೆಪಿಗೆ ಯಾವ ಪ್ರಕರಣವನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ. ಈ ಪ್ರಕರಣಗಳಲ್ಲಿ ಸುಮಾರು 134 ಪ್ರಕರಣಗಳನ್ನು ನ್ಯಾಯಾಲಯಗಳು ವಜಾಗೊಳಿಸಿದೆ ಮತ್ತು ಉಳಿದ ಪ್ರಕರಣಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರಕ್ಕೆ ಯಾವುದೇ ಸಾಕ್ಷ್ಯಾಧಾರ ಒದಗಿಸಲು ಸಾಧ್ಯವಾಗಿಲ್ಲ. ಈ ಪ್ರಕರಣಗಳು ರಾಜಕೀಯ ಪ್ರೇರಿತವಾಗಿವೆ ಎಂದು ಹೇಳುವ ಮೂಲಕ ಆರೋಪಗಳನ್ನು ದೆಹಲಿ ಸರಕಾರ ನಿರಾಕರಿಸಿತ್ತು.

ಇದನ್ನೂ ಓದಿ: ‘ಮತ್ತೆ ದಾಳಿ ನಡೆಸಿದ ಸಿಬಿಐ’: ದೆಹಲಿ ಡಿಸಿಎಂ ಸಿಸೋಡಿಯಾ ಆರೋಪ

ಸಿಸೋಡಿಯಾ ವಿರುದ್ಧ ಕಾನೂನು ಕ್ರಮಕ್ಕೆ ಸಿಬಿಐ ಕೋರಿಕೆಯನ್ನು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅನುಮೋದಿಸಿ, ಆ ಮನವಿಯನ್ನು ಗೃಹ ಸಚಿವಾಲಯಕ್ಕೆ ರವಾನಿಸಿದರು. ಸೆಪ್ಟೆಂಬರ್ 29, 2015ರ ಕ್ಯಾಬಿನೆಟ್ ನಿರ್ಣಯದ ಮೂಲಕ ಫೀಡ್‌ಬ್ಯಾಕ್‌ ಯೂನಿಟ್ ರಚಿಸಲಾಗಿದೆ. ಸಿಸೋಡಿಯಾ ನೇತೃತ್ವದ ಈ ಘಟಕವು ಯಾವುದೇ ಶಾಸಕಾಂಗ ಅಥವಾ ನ್ಯಾಯಾಂಗ ಕಾನೂನುಬದ್ಧತೆಯನ್ನು ಹೊಂದಿಲ್ಲ ಆದರೆ ರಾಜಕಾರಣಿಗಳ ಮೇಲೆ ಕಣ್ಣಿಡುತ್ತಿದ್ದು, ಗೂಢಚಾರಿಕೆ ಮಾಡುತ್ತಿದೆ ಎಂದು ಸಿಬಿಐ ತನ್ನ ವರದಿಯಲ್ಲಿ ಹೇಳಿದೆ.

ದೆಹಲಿ ಸರ್ಕಾರದ ವಿಜಿಲೆನ್ಸ್ ವಿಭಾಗದ ಮುಖ್ಯಸ್ಥರಾಗಿರುವ ಸಿಸೋಡಿಯಾ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ಅನುಮತಿ ಕೋರಿತ್ತು, ಅದರ ಅಡಿಯಲ್ಲಿ 2015 ರಲ್ಲಿ ಘಟಕವನ್ನು ‘ಹೆಚ್ಚುವರಿ ಸಾಂವಿಧಾನಿಕ-ಹೆಚ್ಚುವರಿ ನ್ಯಾಯಾಂಗ ಗುಪ್ತಚರ ಸಂಸ್ಥೆ’ ಎಂದು ರಹಸ್ಯವಾಗಿ ರಚಿಸಲಾಗಿದೆ ಎಂದು ಸಿಬಿಐ ಆರೋಪಿಸಿತ್ತು. ಇದೀಗ ಗೃಹ ವ್ಯವಹಾರಗಳ ಸಚಿವಾಲಯವು ಸಿಸೋಡಿಯಾ ಅವರನ್ನು ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿಚಾರಣೆಗೆ ಒಳಪಡಿಸಲು ಅನುಮತಿ ನೀಡಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಸಿಸೋಡಿಯಾ ಅವರು, ”ನಿಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದು, ಪ್ರಕರಣಗಳನ್ನು ದಾಖಲಿಸುವುದು ದುರ್ಬಲ ಮತ್ತು ಹೇಡಿತನದ ಸಂಕೇತವಾಗಿದೆ. ಆಮ್ ಆದ್ಮಿ ಪಕ್ಷ ಬೆಳೆದಂತೆ ನಮ್ಮ ವಿರುದ್ಧ ಇನ್ನೂ ಹಲವು ಪ್ರಕರಣಗಳು ದಾಖಲಾಗುತ್ತವೆ” ಎಂದಿದ್ದಾರೆ.

ಏನಿದು ಫೀಡ್‌ಬ್ಯಾಕ್‌ ಯೂನಿಟ್ ಸ್ನೂಪಿಂಗ್ ಪ್ರಕರಣ?

ಆಮ್ ಆದ್ಮಿ ಪಕ್ಷ 2015ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ದೆಹಲಿಯಲ್ಲಿ ಸರ್ಕಾರ ರಚಿಸಿತು. ಕೆಲದಿನಗಳ ನಂತರದಲ್ಲಿ ಎಎಪಿ ಸರ್ಕಾರವು ವಿವಿಧ “ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು, ಸಂಸ್ಥೆಗಳು ಮತ್ತು ಘಟಕಗಳ” ಕಾರ್ಯನಿರ್ವಹಣೆಯ ಕುರಿತು “ಸಂಬಂಧಿತ ಮತ್ತು ಕ್ರಿಯಾಶೀಲ ಪ್ರತಿಕ್ರಿಯೆ” ಸಂಗ್ರಹಿಸಲು ಮತ್ತು ಅವುಗಳ ಮೇಲೆ ಕಣ್ಗಾವಲಿಡಲು “ಫೀಡ್‌ಬ್ಯಾಕ್‌ ಯೂನಿಟ್“ನ್ನು ರಚಿಸಿತು. ಅದು ಮುಂದೆ ರಾಜಕಾರಣಿಗಳನ್ನು “ಟ್ರ್ಯಾಪ್” ಮಾಡಲು ಬಳಕೆಯಾಗಿದೆ ಎಂದು ಆರೋಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...