Homeಮುಖಪುಟಸ್ನೂಪಿಂಗ್‌ ಕೇಸ್: ಡಿಸಿಎಂ ಸಿಸೋಡಿಯಾ ವಿಚಾರಣೆಗೆ ಗೃಹ ಸಚಿವಾಲಯ ಅನುಮತಿ

ಸ್ನೂಪಿಂಗ್‌ ಕೇಸ್: ಡಿಸಿಎಂ ಸಿಸೋಡಿಯಾ ವಿಚಾರಣೆಗೆ ಗೃಹ ಸಚಿವಾಲಯ ಅನುಮತಿ

- Advertisement -
- Advertisement -

ಗೃಹ ವ್ಯವಹಾರಗಳ ಸಚಿವಾಲಯವು ಫೀಡ್‌ಬ್ಯಾಕ್‌ ಯೂನಿಟ್ ಸ್ನೂಪಿಂಗ್ ಪ್ರಕರಣದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿಚಾರಣೆಗೆ ಒಳಪಡಿಸಲು  ಅನುಮತಿ ನೀಡಿದೆ. ಮದ್ಯ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಸಿಬಿಐನ ವಿಚಾರಣೆಯಲ್ಲಿರುವುದರಿಂದ ಈ ಬೆಳವಣಿಗೆಯಾಗಿದೆ.

ಆಮ್ ಆದ್ಮಿ ಪಕ್ಷ 2015ರಲ್ಲಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜಕೀಯ ಗುಪ್ತಚರ ಸಂಗ್ರಹಣೆಗಾಗಿ ಫೀಡ್‌ಬ್ಯಾಕ್‌ ಯೂನಿಟ್‌ನ್ನು ರಚಿಸಿತು. ಈ ಸ್ನೂಪಿಂಗ್ ಯೂನಿಟ್‌ಗೆ ಮನೀಶ್ ಸಿಸೋಡಿಯಾ ಅವರು ಮುಖ್ಯಸ್ಥರಾಗಿದ್ದರು ಎಂದು ಸಿಬಿಐ ವರದಿ ಹೇಳಿದೆ ಎಂದು ಹೇಳುವ ಸಿಬಿಐ ವರದಿಯಲ್ಲಿ ಸಿಸೋಡಿಯಾ ವಿರುದ್ಧ ಸ್ನೂಪಿಂಗ್ ಆರೋಪಗಳನ್ನು ಮಾಡಲಾಗಿದೆ.

ಈ ಆರೋಪಗಳನ್ನು ಈ ಹಿಂದೆಯೇ ತಳ್ಳಿ ಹಾಕಿರುವ ಎಎಪಿ, ”ಇಲ್ಲಿಯವರೆಗೆ, ಸಿಬಿಐ, ಇಡಿ ಮತ್ತು ದೆಹಲಿ ಪೊಲೀಸರು ನಮ್ಮ ವಿರುದ್ಧ 163 ಪ್ರಕರಣಗಳನ್ನು ದಾಖಲಿಸಿದ್ದಾರೆ. ಆದರೆ, ಬಿಜೆಪಿಗೆ ಯಾವ ಪ್ರಕರಣವನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ. ಈ ಪ್ರಕರಣಗಳಲ್ಲಿ ಸುಮಾರು 134 ಪ್ರಕರಣಗಳನ್ನು ನ್ಯಾಯಾಲಯಗಳು ವಜಾಗೊಳಿಸಿದೆ ಮತ್ತು ಉಳಿದ ಪ್ರಕರಣಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರಕ್ಕೆ ಯಾವುದೇ ಸಾಕ್ಷ್ಯಾಧಾರ ಒದಗಿಸಲು ಸಾಧ್ಯವಾಗಿಲ್ಲ. ಈ ಪ್ರಕರಣಗಳು ರಾಜಕೀಯ ಪ್ರೇರಿತವಾಗಿವೆ ಎಂದು ಹೇಳುವ ಮೂಲಕ ಆರೋಪಗಳನ್ನು ದೆಹಲಿ ಸರಕಾರ ನಿರಾಕರಿಸಿತ್ತು.

ಇದನ್ನೂ ಓದಿ: ‘ಮತ್ತೆ ದಾಳಿ ನಡೆಸಿದ ಸಿಬಿಐ’: ದೆಹಲಿ ಡಿಸಿಎಂ ಸಿಸೋಡಿಯಾ ಆರೋಪ

ಸಿಸೋಡಿಯಾ ವಿರುದ್ಧ ಕಾನೂನು ಕ್ರಮಕ್ಕೆ ಸಿಬಿಐ ಕೋರಿಕೆಯನ್ನು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅನುಮೋದಿಸಿ, ಆ ಮನವಿಯನ್ನು ಗೃಹ ಸಚಿವಾಲಯಕ್ಕೆ ರವಾನಿಸಿದರು. ಸೆಪ್ಟೆಂಬರ್ 29, 2015ರ ಕ್ಯಾಬಿನೆಟ್ ನಿರ್ಣಯದ ಮೂಲಕ ಫೀಡ್‌ಬ್ಯಾಕ್‌ ಯೂನಿಟ್ ರಚಿಸಲಾಗಿದೆ. ಸಿಸೋಡಿಯಾ ನೇತೃತ್ವದ ಈ ಘಟಕವು ಯಾವುದೇ ಶಾಸಕಾಂಗ ಅಥವಾ ನ್ಯಾಯಾಂಗ ಕಾನೂನುಬದ್ಧತೆಯನ್ನು ಹೊಂದಿಲ್ಲ ಆದರೆ ರಾಜಕಾರಣಿಗಳ ಮೇಲೆ ಕಣ್ಣಿಡುತ್ತಿದ್ದು, ಗೂಢಚಾರಿಕೆ ಮಾಡುತ್ತಿದೆ ಎಂದು ಸಿಬಿಐ ತನ್ನ ವರದಿಯಲ್ಲಿ ಹೇಳಿದೆ.

ದೆಹಲಿ ಸರ್ಕಾರದ ವಿಜಿಲೆನ್ಸ್ ವಿಭಾಗದ ಮುಖ್ಯಸ್ಥರಾಗಿರುವ ಸಿಸೋಡಿಯಾ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ಅನುಮತಿ ಕೋರಿತ್ತು, ಅದರ ಅಡಿಯಲ್ಲಿ 2015 ರಲ್ಲಿ ಘಟಕವನ್ನು ‘ಹೆಚ್ಚುವರಿ ಸಾಂವಿಧಾನಿಕ-ಹೆಚ್ಚುವರಿ ನ್ಯಾಯಾಂಗ ಗುಪ್ತಚರ ಸಂಸ್ಥೆ’ ಎಂದು ರಹಸ್ಯವಾಗಿ ರಚಿಸಲಾಗಿದೆ ಎಂದು ಸಿಬಿಐ ಆರೋಪಿಸಿತ್ತು. ಇದೀಗ ಗೃಹ ವ್ಯವಹಾರಗಳ ಸಚಿವಾಲಯವು ಸಿಸೋಡಿಯಾ ಅವರನ್ನು ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿಚಾರಣೆಗೆ ಒಳಪಡಿಸಲು ಅನುಮತಿ ನೀಡಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಸಿಸೋಡಿಯಾ ಅವರು, ”ನಿಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದು, ಪ್ರಕರಣಗಳನ್ನು ದಾಖಲಿಸುವುದು ದುರ್ಬಲ ಮತ್ತು ಹೇಡಿತನದ ಸಂಕೇತವಾಗಿದೆ. ಆಮ್ ಆದ್ಮಿ ಪಕ್ಷ ಬೆಳೆದಂತೆ ನಮ್ಮ ವಿರುದ್ಧ ಇನ್ನೂ ಹಲವು ಪ್ರಕರಣಗಳು ದಾಖಲಾಗುತ್ತವೆ” ಎಂದಿದ್ದಾರೆ.

ಏನಿದು ಫೀಡ್‌ಬ್ಯಾಕ್‌ ಯೂನಿಟ್ ಸ್ನೂಪಿಂಗ್ ಪ್ರಕರಣ?

ಆಮ್ ಆದ್ಮಿ ಪಕ್ಷ 2015ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ದೆಹಲಿಯಲ್ಲಿ ಸರ್ಕಾರ ರಚಿಸಿತು. ಕೆಲದಿನಗಳ ನಂತರದಲ್ಲಿ ಎಎಪಿ ಸರ್ಕಾರವು ವಿವಿಧ “ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು, ಸಂಸ್ಥೆಗಳು ಮತ್ತು ಘಟಕಗಳ” ಕಾರ್ಯನಿರ್ವಹಣೆಯ ಕುರಿತು “ಸಂಬಂಧಿತ ಮತ್ತು ಕ್ರಿಯಾಶೀಲ ಪ್ರತಿಕ್ರಿಯೆ” ಸಂಗ್ರಹಿಸಲು ಮತ್ತು ಅವುಗಳ ಮೇಲೆ ಕಣ್ಗಾವಲಿಡಲು “ಫೀಡ್‌ಬ್ಯಾಕ್‌ ಯೂನಿಟ್“ನ್ನು ರಚಿಸಿತು. ಅದು ಮುಂದೆ ರಾಜಕಾರಣಿಗಳನ್ನು “ಟ್ರ್ಯಾಪ್” ಮಾಡಲು ಬಳಕೆಯಾಗಿದೆ ಎಂದು ಆರೋಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...