Homeಮುಖಪುಟ'ಸಂಚಾರ್ ಸಾಥಿ ಆ್ಯಪ್‌'ನಿಂದ ಗೂಢಚರ್ಯೆ ಸಾಧ್ಯವಿಲ್ಲ, ಆದೇಶದಲ್ಲಿ ಬದಲಾವಣೆಗೆ ಸಿದ್ದ : ಸಚಿವ ಸಿಂಧಿಯಾ

‘ಸಂಚಾರ್ ಸಾಥಿ ಆ್ಯಪ್‌’ನಿಂದ ಗೂಢಚರ್ಯೆ ಸಾಧ್ಯವಿಲ್ಲ, ಆದೇಶದಲ್ಲಿ ಬದಲಾವಣೆಗೆ ಸಿದ್ದ : ಸಚಿವ ಸಿಂಧಿಯಾ

- Advertisement -
- Advertisement -

ಕೇಂದ್ರ ಸರ್ಕಾರ ಎಲ್ಲಾ ಸ್ಮಾರ್ಟ್‌ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯಗೊಳಿಸಿರುವುದರಿಂದ ಜನರು ಗೌಪ್ಯತೆ ಕಳೆದುಕೊಳ್ಳುವ ಆತಂಕ ಎದುರಾಗಿದೆ.

ಈ ಕುರಿತು ಬುಧವಾರ (ಡಿ.3) ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ದೂರ ಸಂಪರ್ಕ ಸಚಿವ ಜೋತಿರಾಧಿತ್ಯ ಸಿಂಧಿಯಾ, “ಸಂಚಾರ್ ಸಾಥಿ’ ಆ್ಯಪ್ ಮೂಲಕ ಗೂಡಾಚರ್ಯೆ ನಡೆಯಲು ಸಾಧ್ಯವಿಲ್ಲ. ಜನರ ಪ್ರತಿಕ್ರಿಯೆಗಳನ್ನು ಅನುಸರಿಸಿ ಮೊಬೈಲ್‌ಗಳಲ್ಲಿ ಆ್ಯಪ್ ಇನ್‌ಸ್ಟಾಲ್‌ಗೆ ಸಂಬಂಧಿಸಿದ ಆದೇಶದಲ್ಲಿ ಬದಲಾವಣೆಗಳನ್ನು ಮಾಡಲು ಸಚಿವಾಲಯ ಸಿದ್ಧವಾಗಿದೆ” ಎಂದು ಹೇಳಿದ್ದಾರೆ.

ಸಂಚಾರ್ ಸಾಥಿ ಆ್ಯಪ್‌ನಿಂದ ಬೇಹುಗಾರಿಕೆ ಕುರಿತು ಕಳವಳ ವ್ಯಕ್ತಪಡಿಸಿ ಕಾಂಗ್ರೆಸ್ ನಾಯಕ ದೀಪೇಂದರ್ ಸಿಂಗ್ ಹೂಡಾ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಸಚಿವ ಸಿಂಧಿಯಾ, “ಸಂಚಾರ್ ಸಾಥಿ ಆ್ಯಪ್‌ನಿಂದ ಯಾವುದೇ ಗೂಢಚಾರಿಕೆ ಸಾಧ್ಯವಿಲ್ಲ, ಯಾವುದೇ ಗೂಢಚಾರಿಕೆ ಸಂಭವಿಸುವುದಿಲ್ಲ” ಎಂದು ತಿಳಿಸಿದ್ದಾರೆ.

ಎಲ್ಲಾ ಸ್ಮಾರ್ಟ್‌ ಫೋನ್‌ ತಯಾರಕರು ಹೊಸ ಮೊಬೈಲ್‌ ಫೋನ್‌ಗಳಲ್ಲಿ ಅವುಗಳ ಮಾರಾಟಕ್ಕೂ ಮುನ್ನ ಸಂಚಾರ್ ಸಾಥಿ ಆ್ಯಪ್ ಪ್ರಿ ಇನ್‌ಸ್ಟಾಲ್ ಮಾಡಬೇಕು. ಇಗಾಗಲೇ ಮಾರಾಟವಾಗಿ ಬಳಕೆಯಲ್ಲಿರುವ ಮೊಬೈಲ್‌ ಫೋನ್‌ಗಳಲ್ಲಿ ಸಾಫ್ಟ್‌ವೇರ್ ಅಪ್ಡೇಟ್ ಮೂಲಕ ಆ್ಯಪ್ ಇನ್‌ಸ್ಟಾಲ್ ಮಾಡಿಸಬೇಕು ಎಂದು ನವೆಂಬರ್ 28ರಂದು ನೀಡಿದ ನಿರ್ದೇಶದಲ್ಲಿ ಕೇಂದ್ರ ದೂರ ಸಂಪರ್ಕ ಸಚಿವಾಲಯ ಹೇಳಿದೆ.

ಈ ನಿರ್ದೇಶನದ ಬಗ್ಗೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಮತ್ತು ಇತರ ಸಾರ್ವಜನಿಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇದು ಕೇಂದ್ರ ಸರ್ಕಾರ ಜನರ ಮೇಲೆ ಕಣ್ಗಾವಲು ಇಡಲು ಮಾಡಿರುವ ಹೊಸ ತಂತ್ರ ಎಂದು ಆರೋಪಿಸಿದ್ದಾರೆ.

ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಸಿಂಧಿಯಾ, “ಸಂಚಾರ್ ಸಾಥಿ ಆ್ಯಪ್ ಡಿಲಿಟ್ ಮಾಡಲು ಸಾಧ್ಯವಾಗದಂತೆ ಎಂಬೆಡ್ ಮಾಡಲಾಗುತ್ತಿದೆ ಎನ್ನುವುದು ಸುಳ್ಳು. ಆ್ಯಪ್ ಪ್ರಿ ಇನ್‌ಸ್ಟಾಲ್‌ಗೆ ನಿರ್ದೇಶಿಸಿರುವುದು ನಿಜ. ಆದರೆ, ಅದು ಬೇಡವಾದಾಗ ಬಳಕೆದಾರರು ಅನ್‌ ಇನ್‌ಸ್ಟಾಲ್ ಮಾಡಬಹುದು” ಎಂದಿದ್ದಾರೆ.

ಜನರ ಮೊಬೈಲ್‌ ಫೋನ್‌ಗಳಲ್ಲಿ ಆ್ಯಪ್ ಇನ್‌ಸ್ಟಾಲ್ ಮಾಡುವುದನ್ನು ಕಡ್ಡಾಯಗೊಳಿಸುವ ಮೂಲಕ ಅವರ ಮೆಸೇಜ್‌ಗಳು ಸೇರಿದಂತೆ ಚಲನವಲನಗಳ ಮೇಲೆ ಕಣ್ಣಿಡಲು ಸರ್ಕಾರ ಪ್ರಯತ್ನಿಸುತ್ತಿದೆ. ಇದು ಸಂವಿಧಾನ ಖಾತ್ರಿಪಡಿಸಿದ ಗೌಪ್ಯತೆಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಆ್ಯಪ್ ಜನರನ್ನು ಸೈಬರ್ ವಂಚನೆಯಂತಹ ಕೃತ್ಯಗಳಿಂದ ರಕ್ಷಿಸಲು ಇನ್‌ಸ್ಟಾಲ್ ಮಾಡಿಸಲಾಗುತ್ತಿದೆ. ಈ ವಿಚಾರದಲ್ಲಿ ಜನರಿಗೆ ಸ್ವಾತಂತ್ರ್ಯ ನೀಡಲಾಗಿದೆ ಎಂದು ಸಿಂಧಿಯಾ ಸಮರ್ಥಿಸಿಕೊಂಡಿದ್ದಾರೆ. ಮೊಬೈಲ್ ಬಳಕೆದಾರರು ಆ್ಯಪ್‌ನಲ್ಲಿ ನೋಂದಣಿ ಮಾಡಿಕೊಂಡಿಲ್ಲ ಎಂದರೆ, ಅದು ಕಾರ್ಯನಿರ್ವಹಿಸುವುದಿಲ್ಲ. ಅಲ್ಲದೆ, ಬೇಡವಾದಾಗ ಆ್ಯಪ್ ಡಿಲಿಟ್ ಮಾಡಬಹುದು ಎಂದು ಸಿಂಧಿಯಾ ಲೋಕಸಭೆಗೆ ತಿಳಿಸಿದ್ದಾರೆ.

ಸುಮಾರು 1.5 ಕೋಟಿ ಅಪ್ಲಿಕೇಶನ್‌ ಈಗಾಗಲೇ ಡೌನ್‌ಲೋಡ್‌ ಆಗಿವೆ. ಪೋರ್ಟಲ್ ಮತ್ತು ಅಪ್ಲಿಕೇಶನ್‌ ಮೂಲಕ 26 ಲಕ್ಷ ಕದ್ದ ಹ್ಯಾಂಡ್‌ಸೆಟ್‌ಗಳನ್ನು ಪತ್ತೆಹಚ್ಚಲಾಗಿದೆ, 7 ಲಕ್ಷ ಕದ್ದ ಹ್ಯಾಂಡ್‌ಸೆಟ್‌ಗಳನ್ನು ಗ್ರಾಹಕರಿಗೆ ಹಿಂತಿರುಗಿಸಲಾಗಿದೆ, 41 ಲಕ್ಷ ಮೊಬೈಲ್ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ ಮತ್ತು 6 ಲಕ್ಷ ವಂಚನೆಗಳನ್ನು ತಡೆಯಲಾಗಿದೆ ಎಂದು ಸಿಂಧಿಯಾ ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...