Homeಮುಖಪುಟ'ಸಂಚಾರ್ ಸಾಥಿ ಆ್ಯಪ್‌'ನಿಂದ ಗೂಢಚರ್ಯೆ ಸಾಧ್ಯವಿಲ್ಲ, ಆದೇಶದಲ್ಲಿ ಬದಲಾವಣೆಗೆ ಸಿದ್ದ : ಸಚಿವ ಸಿಂಧಿಯಾ

‘ಸಂಚಾರ್ ಸಾಥಿ ಆ್ಯಪ್‌’ನಿಂದ ಗೂಢಚರ್ಯೆ ಸಾಧ್ಯವಿಲ್ಲ, ಆದೇಶದಲ್ಲಿ ಬದಲಾವಣೆಗೆ ಸಿದ್ದ : ಸಚಿವ ಸಿಂಧಿಯಾ

- Advertisement -
- Advertisement -

ಕೇಂದ್ರ ಸರ್ಕಾರ ಎಲ್ಲಾ ಸ್ಮಾರ್ಟ್‌ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯಗೊಳಿಸಿರುವುದರಿಂದ ಜನರು ಗೌಪ್ಯತೆ ಕಳೆದುಕೊಳ್ಳುವ ಆತಂಕ ಎದುರಾಗಿದೆ.

ಈ ಕುರಿತು ಬುಧವಾರ (ಡಿ.3) ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ದೂರ ಸಂಪರ್ಕ ಸಚಿವ ಜೋತಿರಾಧಿತ್ಯ ಸಿಂಧಿಯಾ, “ಸಂಚಾರ್ ಸಾಥಿ’ ಆ್ಯಪ್ ಮೂಲಕ ಗೂಡಾಚರ್ಯೆ ನಡೆಯಲು ಸಾಧ್ಯವಿಲ್ಲ. ಜನರ ಪ್ರತಿಕ್ರಿಯೆಗಳನ್ನು ಅನುಸರಿಸಿ ಮೊಬೈಲ್‌ಗಳಲ್ಲಿ ಆ್ಯಪ್ ಇನ್‌ಸ್ಟಾಲ್‌ಗೆ ಸಂಬಂಧಿಸಿದ ಆದೇಶದಲ್ಲಿ ಬದಲಾವಣೆಗಳನ್ನು ಮಾಡಲು ಸಚಿವಾಲಯ ಸಿದ್ಧವಾಗಿದೆ” ಎಂದು ಹೇಳಿದ್ದಾರೆ.

ಸಂಚಾರ್ ಸಾಥಿ ಆ್ಯಪ್‌ನಿಂದ ಬೇಹುಗಾರಿಕೆ ಕುರಿತು ಕಳವಳ ವ್ಯಕ್ತಪಡಿಸಿ ಕಾಂಗ್ರೆಸ್ ನಾಯಕ ದೀಪೇಂದರ್ ಸಿಂಗ್ ಹೂಡಾ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಸಚಿವ ಸಿಂಧಿಯಾ, “ಸಂಚಾರ್ ಸಾಥಿ ಆ್ಯಪ್‌ನಿಂದ ಯಾವುದೇ ಗೂಢಚಾರಿಕೆ ಸಾಧ್ಯವಿಲ್ಲ, ಯಾವುದೇ ಗೂಢಚಾರಿಕೆ ಸಂಭವಿಸುವುದಿಲ್ಲ” ಎಂದು ತಿಳಿಸಿದ್ದಾರೆ.

ಎಲ್ಲಾ ಸ್ಮಾರ್ಟ್‌ ಫೋನ್‌ ತಯಾರಕರು ಹೊಸ ಮೊಬೈಲ್‌ ಫೋನ್‌ಗಳಲ್ಲಿ ಅವುಗಳ ಮಾರಾಟಕ್ಕೂ ಮುನ್ನ ಸಂಚಾರ್ ಸಾಥಿ ಆ್ಯಪ್ ಪ್ರಿ ಇನ್‌ಸ್ಟಾಲ್ ಮಾಡಬೇಕು. ಇಗಾಗಲೇ ಮಾರಾಟವಾಗಿ ಬಳಕೆಯಲ್ಲಿರುವ ಮೊಬೈಲ್‌ ಫೋನ್‌ಗಳಲ್ಲಿ ಸಾಫ್ಟ್‌ವೇರ್ ಅಪ್ಡೇಟ್ ಮೂಲಕ ಆ್ಯಪ್ ಇನ್‌ಸ್ಟಾಲ್ ಮಾಡಿಸಬೇಕು ಎಂದು ನವೆಂಬರ್ 28ರಂದು ನೀಡಿದ ನಿರ್ದೇಶದಲ್ಲಿ ಕೇಂದ್ರ ದೂರ ಸಂಪರ್ಕ ಸಚಿವಾಲಯ ಹೇಳಿದೆ.

ಈ ನಿರ್ದೇಶನದ ಬಗ್ಗೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಮತ್ತು ಇತರ ಸಾರ್ವಜನಿಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇದು ಕೇಂದ್ರ ಸರ್ಕಾರ ಜನರ ಮೇಲೆ ಕಣ್ಗಾವಲು ಇಡಲು ಮಾಡಿರುವ ಹೊಸ ತಂತ್ರ ಎಂದು ಆರೋಪಿಸಿದ್ದಾರೆ.

ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಸಿಂಧಿಯಾ, “ಸಂಚಾರ್ ಸಾಥಿ ಆ್ಯಪ್ ಡಿಲಿಟ್ ಮಾಡಲು ಸಾಧ್ಯವಾಗದಂತೆ ಎಂಬೆಡ್ ಮಾಡಲಾಗುತ್ತಿದೆ ಎನ್ನುವುದು ಸುಳ್ಳು. ಆ್ಯಪ್ ಪ್ರಿ ಇನ್‌ಸ್ಟಾಲ್‌ಗೆ ನಿರ್ದೇಶಿಸಿರುವುದು ನಿಜ. ಆದರೆ, ಅದು ಬೇಡವಾದಾಗ ಬಳಕೆದಾರರು ಅನ್‌ ಇನ್‌ಸ್ಟಾಲ್ ಮಾಡಬಹುದು” ಎಂದಿದ್ದಾರೆ.

ಜನರ ಮೊಬೈಲ್‌ ಫೋನ್‌ಗಳಲ್ಲಿ ಆ್ಯಪ್ ಇನ್‌ಸ್ಟಾಲ್ ಮಾಡುವುದನ್ನು ಕಡ್ಡಾಯಗೊಳಿಸುವ ಮೂಲಕ ಅವರ ಮೆಸೇಜ್‌ಗಳು ಸೇರಿದಂತೆ ಚಲನವಲನಗಳ ಮೇಲೆ ಕಣ್ಣಿಡಲು ಸರ್ಕಾರ ಪ್ರಯತ್ನಿಸುತ್ತಿದೆ. ಇದು ಸಂವಿಧಾನ ಖಾತ್ರಿಪಡಿಸಿದ ಗೌಪ್ಯತೆಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಆ್ಯಪ್ ಜನರನ್ನು ಸೈಬರ್ ವಂಚನೆಯಂತಹ ಕೃತ್ಯಗಳಿಂದ ರಕ್ಷಿಸಲು ಇನ್‌ಸ್ಟಾಲ್ ಮಾಡಿಸಲಾಗುತ್ತಿದೆ. ಈ ವಿಚಾರದಲ್ಲಿ ಜನರಿಗೆ ಸ್ವಾತಂತ್ರ್ಯ ನೀಡಲಾಗಿದೆ ಎಂದು ಸಿಂಧಿಯಾ ಸಮರ್ಥಿಸಿಕೊಂಡಿದ್ದಾರೆ. ಮೊಬೈಲ್ ಬಳಕೆದಾರರು ಆ್ಯಪ್‌ನಲ್ಲಿ ನೋಂದಣಿ ಮಾಡಿಕೊಂಡಿಲ್ಲ ಎಂದರೆ, ಅದು ಕಾರ್ಯನಿರ್ವಹಿಸುವುದಿಲ್ಲ. ಅಲ್ಲದೆ, ಬೇಡವಾದಾಗ ಆ್ಯಪ್ ಡಿಲಿಟ್ ಮಾಡಬಹುದು ಎಂದು ಸಿಂಧಿಯಾ ಲೋಕಸಭೆಗೆ ತಿಳಿಸಿದ್ದಾರೆ.

ಸುಮಾರು 1.5 ಕೋಟಿ ಅಪ್ಲಿಕೇಶನ್‌ ಈಗಾಗಲೇ ಡೌನ್‌ಲೋಡ್‌ ಆಗಿವೆ. ಪೋರ್ಟಲ್ ಮತ್ತು ಅಪ್ಲಿಕೇಶನ್‌ ಮೂಲಕ 26 ಲಕ್ಷ ಕದ್ದ ಹ್ಯಾಂಡ್‌ಸೆಟ್‌ಗಳನ್ನು ಪತ್ತೆಹಚ್ಚಲಾಗಿದೆ, 7 ಲಕ್ಷ ಕದ್ದ ಹ್ಯಾಂಡ್‌ಸೆಟ್‌ಗಳನ್ನು ಗ್ರಾಹಕರಿಗೆ ಹಿಂತಿರುಗಿಸಲಾಗಿದೆ, 41 ಲಕ್ಷ ಮೊಬೈಲ್ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ ಮತ್ತು 6 ಲಕ್ಷ ವಂಚನೆಗಳನ್ನು ತಡೆಯಲಾಗಿದೆ ಎಂದು ಸಿಂಧಿಯಾ ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...