Homeಅಂತರಾಷ್ಟ್ರೀಯ'ನೋಡಲು ತುಂಬಾ ಚೆನ್ನಾಗಿದೆ': ಮತ್ತೆ ಟ್ರಂಪ್ ಕಾಲೆಳೆದ ಗ್ರೇಟಾ ಥನ್ಬರ್ಗ್!

‘ನೋಡಲು ತುಂಬಾ ಚೆನ್ನಾಗಿದೆ’: ಮತ್ತೆ ಟ್ರಂಪ್ ಕಾಲೆಳೆದ ಗ್ರೇಟಾ ಥನ್ಬರ್ಗ್!

ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಘೋಷಣೆ ನಂತರ ಗ್ರೇಟಾ ಥನ್ಬರ್ಗ್ ಡೋನಾಲ್ಡ್ ಟ್ರಂಪ್‌ರವರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವುದು ಇದು ಎರಡನೇ ಬಾರಿಯಾಗಿದೆ.

- Advertisement -
- Advertisement -

ಅಮೆರಿಕಾದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಡಳಿತಾವಧಿ ನಿನ್ನೆಗೆ ಕೊನೆಗೊಂಡಿದೆ. ಮತ ಎಣಿಕೆಯಲ್ಲಿ ಮೋಸ ನಡೆದಿದೆಯೆಂದು ಆರೋಪಿಸಿದ್ದ ಟ್ರಂಪ್, ತನ್ನ ಬೆಂಬಲಿಗರು ಕ್ಯಾಪಿಟಲ್ ಮೇಲೆ ದಾಳಿ ನಡೆಸಲು ಪ್ರಚೋದನೆ ನೀಡಿದ್ದಾರೆ ಎಂಬ ವಿಚಾರಣೆಯನ್ನೂ ಸಹ ಎದುರಿಸುತ್ತಿದ್ದಾರೆ. ಟ್ರಂಪ್ ನಿರ್ಗಮನದ ನಂತರ ವಿಶ್ವದ ಬಹುತೇಕ ನಾಯಕರು ಟ್ರಂಪ್ ಆಡಳಿತದ ವಿರುದ್ಧ ಕಿಡಿಕಾರುತ್ತಿದ್ದಾರೆ. ಆ ಟೀಕಾಕಾರರ ಸಾಲಿಗೆ 17 ವರ್ಷದ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಕೂಡ ಸೇರಿಕೊಂಡಿದ್ದಾರೆ.

ಟ್ರಂಪ್ ಹೆಲಿಕ್ಯಾಪ್ಟರ್ ಹತ್ತಿ ನಿರ್ಗಮಿಸುತ್ತಿರುವ ಫೋಟೊವನ್ನು ಟ್ವೀಟ್ ಮಾಡಿದರು ಗ್ರೇಟಾ, “ಅವರು ಉಜ್ವಲ ಮತ್ತು ಅದ್ಭುತ ಭವಿಷ್ಯವನ್ನು ಎದುರು ನೋಡುತ್ತಿರುವ ಬಹಳ ಸಂತೋಷದ ಮುದುಕನಂತೆ ಕಾಣುತ್ತಾರೆ. ನೋಡಲು ತುಂಬಾ ಚೆನ್ನಾಗಿದೆ!” ಎಂದು ಬರೆದಿದ್ದಾರೆ.

ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಘೋಷಣೆ ನಂತರ ಗ್ರೇಟಾ ಥನ್ಬರ್ಗ್ ಡೋನಾಲ್ಡ್ ಟ್ರಂಪ್‌ರವರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಎರಡು ತಿಂಗಳ ಹಿಂದೆ ಮತ ಎಣಿಕೆಯ ವೇಳೆ ಟ್ರಂಪ್ ಸೋಲಿನ ಸನಿಹದಲ್ಲಿದ್ದಾಗ ವರ್ಷದ ಹಿಂದೆ ಟ್ರಂಪ್‌ ಬಳಸಿದ ಪದಗಳನ್ನೇ ಬಳಸಿ ಟ್ವೀಟ್ ಮಾಡುವ ಮೂಲಕ ಭರ್ಜರಿ ಟ್ರೋಲ್ ಮಾಡಿದ್ದರು.

“ಎಷ್ಟೊಂದು ಹಾಸ್ಯಾಸ್ಪದ. ಡೊನಾಲ್ಡ್ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಡೊನಾಲ್ಡ್, ಚಿಲ್!” ಎಂದು ಗ್ರೇಟಾ ಅಂದು ಟ್ವೀಟ್ ಮಾಡಿದ್ದಳು.

2019ರಲ್ಲಿ ಟೈಮ್ ಮ್ಯಾಗಜಿನ್‌ನ ವರ್ಷದ ವ್ಯಕ್ತಿಯಾಗಿ ಗ್ರೇಟಾ ಥನ್ಬರ್ಗ್ ಆಯ್ಕೆಯಾಗಿದ್ದರು. ಆಗ ಬಹಳಷ್ಟು ಜನ ಅವರಿಗೆ ಶುಭಾಶಯ ತಿಳಿಸಿದ್ದರು. ಆದರೆ ಟ್ರಂಪ್ ಮಾತ್ರ ಚಿಕ್ಕ ಹುಡುಗಿಯ ವಿರುದ್ಧ ‘ನಿನ್ನ ಅಹಂಕಾರ ಬಿಡು’ ಎಂದು ಟ್ವೀಟ್ ಮಾಡಿ ಅವಮಾನ ಮಾಡಿದ್ದರು. “ಎಷ್ಟೊಂದು ಹಾಸ್ಯಾಸ್ಪದ. ಗ್ರೇಟಾ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಗ್ರೇಟಾ, ಚಿಲ್!” ಎಂದು ಟ್ರಂಪ್ ಟ್ವೀಟ್ ಮಾಡಿದ್ದರು.

ಗ್ರೇಟಾ ಥನ್ಬರ್ಗ್ ಅಂದು ಟ್ರಂಪ್ ಬಳಸಿದ್ದ ಪದಗಳನ್ನೇ ಬಳಸಿ ಟ್ರೋಲ್ ಮಾಡಿದ್ದರೆ ಇಂದು ಅವರು ಹೆಲಿಕ್ಯಾಪ್ಟರ್‌ನಲ್ಲಿ ತೆರಳುವ ನಿರ್ಗಮನದ ಫೋಟೊ ಹಾಕಿ ನೋಡಲು ಎಷ್ಟು ಚೆನ್ನಾಗಿದೆ ಎನ್ನುವ ಮೂಲಕ ಟೀಕಿಸಿದ್ದರು.


ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...