Homeಅಂತರಾಷ್ಟ್ರೀಯ'ನೋಡಲು ತುಂಬಾ ಚೆನ್ನಾಗಿದೆ': ಮತ್ತೆ ಟ್ರಂಪ್ ಕಾಲೆಳೆದ ಗ್ರೇಟಾ ಥನ್ಬರ್ಗ್!

‘ನೋಡಲು ತುಂಬಾ ಚೆನ್ನಾಗಿದೆ’: ಮತ್ತೆ ಟ್ರಂಪ್ ಕಾಲೆಳೆದ ಗ್ರೇಟಾ ಥನ್ಬರ್ಗ್!

ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಘೋಷಣೆ ನಂತರ ಗ್ರೇಟಾ ಥನ್ಬರ್ಗ್ ಡೋನಾಲ್ಡ್ ಟ್ರಂಪ್‌ರವರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವುದು ಇದು ಎರಡನೇ ಬಾರಿಯಾಗಿದೆ.

- Advertisement -
- Advertisement -

ಅಮೆರಿಕಾದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಡಳಿತಾವಧಿ ನಿನ್ನೆಗೆ ಕೊನೆಗೊಂಡಿದೆ. ಮತ ಎಣಿಕೆಯಲ್ಲಿ ಮೋಸ ನಡೆದಿದೆಯೆಂದು ಆರೋಪಿಸಿದ್ದ ಟ್ರಂಪ್, ತನ್ನ ಬೆಂಬಲಿಗರು ಕ್ಯಾಪಿಟಲ್ ಮೇಲೆ ದಾಳಿ ನಡೆಸಲು ಪ್ರಚೋದನೆ ನೀಡಿದ್ದಾರೆ ಎಂಬ ವಿಚಾರಣೆಯನ್ನೂ ಸಹ ಎದುರಿಸುತ್ತಿದ್ದಾರೆ. ಟ್ರಂಪ್ ನಿರ್ಗಮನದ ನಂತರ ವಿಶ್ವದ ಬಹುತೇಕ ನಾಯಕರು ಟ್ರಂಪ್ ಆಡಳಿತದ ವಿರುದ್ಧ ಕಿಡಿಕಾರುತ್ತಿದ್ದಾರೆ. ಆ ಟೀಕಾಕಾರರ ಸಾಲಿಗೆ 17 ವರ್ಷದ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಕೂಡ ಸೇರಿಕೊಂಡಿದ್ದಾರೆ.

ಟ್ರಂಪ್ ಹೆಲಿಕ್ಯಾಪ್ಟರ್ ಹತ್ತಿ ನಿರ್ಗಮಿಸುತ್ತಿರುವ ಫೋಟೊವನ್ನು ಟ್ವೀಟ್ ಮಾಡಿದರು ಗ್ರೇಟಾ, “ಅವರು ಉಜ್ವಲ ಮತ್ತು ಅದ್ಭುತ ಭವಿಷ್ಯವನ್ನು ಎದುರು ನೋಡುತ್ತಿರುವ ಬಹಳ ಸಂತೋಷದ ಮುದುಕನಂತೆ ಕಾಣುತ್ತಾರೆ. ನೋಡಲು ತುಂಬಾ ಚೆನ್ನಾಗಿದೆ!” ಎಂದು ಬರೆದಿದ್ದಾರೆ.

ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಘೋಷಣೆ ನಂತರ ಗ್ರೇಟಾ ಥನ್ಬರ್ಗ್ ಡೋನಾಲ್ಡ್ ಟ್ರಂಪ್‌ರವರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಎರಡು ತಿಂಗಳ ಹಿಂದೆ ಮತ ಎಣಿಕೆಯ ವೇಳೆ ಟ್ರಂಪ್ ಸೋಲಿನ ಸನಿಹದಲ್ಲಿದ್ದಾಗ ವರ್ಷದ ಹಿಂದೆ ಟ್ರಂಪ್‌ ಬಳಸಿದ ಪದಗಳನ್ನೇ ಬಳಸಿ ಟ್ವೀಟ್ ಮಾಡುವ ಮೂಲಕ ಭರ್ಜರಿ ಟ್ರೋಲ್ ಮಾಡಿದ್ದರು.

“ಎಷ್ಟೊಂದು ಹಾಸ್ಯಾಸ್ಪದ. ಡೊನಾಲ್ಡ್ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಡೊನಾಲ್ಡ್, ಚಿಲ್!” ಎಂದು ಗ್ರೇಟಾ ಅಂದು ಟ್ವೀಟ್ ಮಾಡಿದ್ದಳು.

2019ರಲ್ಲಿ ಟೈಮ್ ಮ್ಯಾಗಜಿನ್‌ನ ವರ್ಷದ ವ್ಯಕ್ತಿಯಾಗಿ ಗ್ರೇಟಾ ಥನ್ಬರ್ಗ್ ಆಯ್ಕೆಯಾಗಿದ್ದರು. ಆಗ ಬಹಳಷ್ಟು ಜನ ಅವರಿಗೆ ಶುಭಾಶಯ ತಿಳಿಸಿದ್ದರು. ಆದರೆ ಟ್ರಂಪ್ ಮಾತ್ರ ಚಿಕ್ಕ ಹುಡುಗಿಯ ವಿರುದ್ಧ ‘ನಿನ್ನ ಅಹಂಕಾರ ಬಿಡು’ ಎಂದು ಟ್ವೀಟ್ ಮಾಡಿ ಅವಮಾನ ಮಾಡಿದ್ದರು. “ಎಷ್ಟೊಂದು ಹಾಸ್ಯಾಸ್ಪದ. ಗ್ರೇಟಾ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಗ್ರೇಟಾ, ಚಿಲ್!” ಎಂದು ಟ್ರಂಪ್ ಟ್ವೀಟ್ ಮಾಡಿದ್ದರು.

ಗ್ರೇಟಾ ಥನ್ಬರ್ಗ್ ಅಂದು ಟ್ರಂಪ್ ಬಳಸಿದ್ದ ಪದಗಳನ್ನೇ ಬಳಸಿ ಟ್ರೋಲ್ ಮಾಡಿದ್ದರೆ ಇಂದು ಅವರು ಹೆಲಿಕ್ಯಾಪ್ಟರ್‌ನಲ್ಲಿ ತೆರಳುವ ನಿರ್ಗಮನದ ಫೋಟೊ ಹಾಕಿ ನೋಡಲು ಎಷ್ಟು ಚೆನ್ನಾಗಿದೆ ಎನ್ನುವ ಮೂಲಕ ಟೀಕಿಸಿದ್ದರು.


ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...