Homeಅಂತರಾಷ್ಟ್ರೀಯ'ನೋಡಲು ತುಂಬಾ ಚೆನ್ನಾಗಿದೆ': ಮತ್ತೆ ಟ್ರಂಪ್ ಕಾಲೆಳೆದ ಗ್ರೇಟಾ ಥನ್ಬರ್ಗ್!

‘ನೋಡಲು ತುಂಬಾ ಚೆನ್ನಾಗಿದೆ’: ಮತ್ತೆ ಟ್ರಂಪ್ ಕಾಲೆಳೆದ ಗ್ರೇಟಾ ಥನ್ಬರ್ಗ್!

ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಘೋಷಣೆ ನಂತರ ಗ್ರೇಟಾ ಥನ್ಬರ್ಗ್ ಡೋನಾಲ್ಡ್ ಟ್ರಂಪ್‌ರವರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವುದು ಇದು ಎರಡನೇ ಬಾರಿಯಾಗಿದೆ.

- Advertisement -
- Advertisement -

ಅಮೆರಿಕಾದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಡಳಿತಾವಧಿ ನಿನ್ನೆಗೆ ಕೊನೆಗೊಂಡಿದೆ. ಮತ ಎಣಿಕೆಯಲ್ಲಿ ಮೋಸ ನಡೆದಿದೆಯೆಂದು ಆರೋಪಿಸಿದ್ದ ಟ್ರಂಪ್, ತನ್ನ ಬೆಂಬಲಿಗರು ಕ್ಯಾಪಿಟಲ್ ಮೇಲೆ ದಾಳಿ ನಡೆಸಲು ಪ್ರಚೋದನೆ ನೀಡಿದ್ದಾರೆ ಎಂಬ ವಿಚಾರಣೆಯನ್ನೂ ಸಹ ಎದುರಿಸುತ್ತಿದ್ದಾರೆ. ಟ್ರಂಪ್ ನಿರ್ಗಮನದ ನಂತರ ವಿಶ್ವದ ಬಹುತೇಕ ನಾಯಕರು ಟ್ರಂಪ್ ಆಡಳಿತದ ವಿರುದ್ಧ ಕಿಡಿಕಾರುತ್ತಿದ್ದಾರೆ. ಆ ಟೀಕಾಕಾರರ ಸಾಲಿಗೆ 17 ವರ್ಷದ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಕೂಡ ಸೇರಿಕೊಂಡಿದ್ದಾರೆ.

ಟ್ರಂಪ್ ಹೆಲಿಕ್ಯಾಪ್ಟರ್ ಹತ್ತಿ ನಿರ್ಗಮಿಸುತ್ತಿರುವ ಫೋಟೊವನ್ನು ಟ್ವೀಟ್ ಮಾಡಿದರು ಗ್ರೇಟಾ, “ಅವರು ಉಜ್ವಲ ಮತ್ತು ಅದ್ಭುತ ಭವಿಷ್ಯವನ್ನು ಎದುರು ನೋಡುತ್ತಿರುವ ಬಹಳ ಸಂತೋಷದ ಮುದುಕನಂತೆ ಕಾಣುತ್ತಾರೆ. ನೋಡಲು ತುಂಬಾ ಚೆನ್ನಾಗಿದೆ!” ಎಂದು ಬರೆದಿದ್ದಾರೆ.

ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಘೋಷಣೆ ನಂತರ ಗ್ರೇಟಾ ಥನ್ಬರ್ಗ್ ಡೋನಾಲ್ಡ್ ಟ್ರಂಪ್‌ರವರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಎರಡು ತಿಂಗಳ ಹಿಂದೆ ಮತ ಎಣಿಕೆಯ ವೇಳೆ ಟ್ರಂಪ್ ಸೋಲಿನ ಸನಿಹದಲ್ಲಿದ್ದಾಗ ವರ್ಷದ ಹಿಂದೆ ಟ್ರಂಪ್‌ ಬಳಸಿದ ಪದಗಳನ್ನೇ ಬಳಸಿ ಟ್ವೀಟ್ ಮಾಡುವ ಮೂಲಕ ಭರ್ಜರಿ ಟ್ರೋಲ್ ಮಾಡಿದ್ದರು.

“ಎಷ್ಟೊಂದು ಹಾಸ್ಯಾಸ್ಪದ. ಡೊನಾಲ್ಡ್ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಡೊನಾಲ್ಡ್, ಚಿಲ್!” ಎಂದು ಗ್ರೇಟಾ ಅಂದು ಟ್ವೀಟ್ ಮಾಡಿದ್ದಳು.

2019ರಲ್ಲಿ ಟೈಮ್ ಮ್ಯಾಗಜಿನ್‌ನ ವರ್ಷದ ವ್ಯಕ್ತಿಯಾಗಿ ಗ್ರೇಟಾ ಥನ್ಬರ್ಗ್ ಆಯ್ಕೆಯಾಗಿದ್ದರು. ಆಗ ಬಹಳಷ್ಟು ಜನ ಅವರಿಗೆ ಶುಭಾಶಯ ತಿಳಿಸಿದ್ದರು. ಆದರೆ ಟ್ರಂಪ್ ಮಾತ್ರ ಚಿಕ್ಕ ಹುಡುಗಿಯ ವಿರುದ್ಧ ‘ನಿನ್ನ ಅಹಂಕಾರ ಬಿಡು’ ಎಂದು ಟ್ವೀಟ್ ಮಾಡಿ ಅವಮಾನ ಮಾಡಿದ್ದರು. “ಎಷ್ಟೊಂದು ಹಾಸ್ಯಾಸ್ಪದ. ಗ್ರೇಟಾ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಗ್ರೇಟಾ, ಚಿಲ್!” ಎಂದು ಟ್ರಂಪ್ ಟ್ವೀಟ್ ಮಾಡಿದ್ದರು.

ಗ್ರೇಟಾ ಥನ್ಬರ್ಗ್ ಅಂದು ಟ್ರಂಪ್ ಬಳಸಿದ್ದ ಪದಗಳನ್ನೇ ಬಳಸಿ ಟ್ರೋಲ್ ಮಾಡಿದ್ದರೆ ಇಂದು ಅವರು ಹೆಲಿಕ್ಯಾಪ್ಟರ್‌ನಲ್ಲಿ ತೆರಳುವ ನಿರ್ಗಮನದ ಫೋಟೊ ಹಾಕಿ ನೋಡಲು ಎಷ್ಟು ಚೆನ್ನಾಗಿದೆ ಎನ್ನುವ ಮೂಲಕ ಟೀಕಿಸಿದ್ದರು.


ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...