Homeಮುಖಪುಟ’ಮೊದಲು ಆಲೋಚನೆ ಬದಲಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶವೂ ಬದಲಾಗುತ್ತದೆ’

’ಮೊದಲು ಆಲೋಚನೆ ಬದಲಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶವೂ ಬದಲಾಗುತ್ತದೆ’

- Advertisement -
- Advertisement -

ಮಹಿಳೆಯರ ಉಡುಪಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಉತ್ತರಾಖಂಡದ ಹೊಸ ಮುಖ್ಯಮಂತ್ರಿ ವಿರುದ್ಧ ವಿರೋಧ ಪಕ್ಷಗಳು ಸೇರಿದಂತೆ ಟ್ವಿಟರ್‌ನಲ್ಲಿ ಹಲವು ಮಂದಿ ವಿರೋಧ ವ್ಯಕ್ತಪಡಿಸಿದ್ದಾರೆ. ಹರಿದ ಡೆನಿಮ್‌ ಜೀನ್ಸ್‌ಗಳನ್ನು ಧರಿಸಿದ ಚಿತ್ರಗಳನ್ನು ಪೋಸ್ಟ್ ಮಾಡಿ ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ’ಮೊದಲು ಆಲೋಚನೆ ಬದಲಾಯಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶ ಬದಲಾಗುತ್ತದೆ’ ಎಂದಿದ್ದಾರೆ.

ಡೆಹ್ರಾಡೂನ್‌ನಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ಉತ್ತರಾಖಂಡ ರಾಜ್ಯ ಆಯೋಗ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮುಖ್ಯಮಂತ್ರಿ ತಿರಥ್ ​​ಸಿಂಗ್ ರಾವತ್, ಹರಿದ ಬಟ್ಟೆ ಧರಿಸಿದ ಮಹಿಳೆಯರಿಂದ ಮಕ್ಕಳಿಗೆ ಸಂಸ್ಕಾರ ಕಲಿಸಲು ಸಾಧ್ಯವೆ..? ಮಕ್ಕಳು ಪೋಷಕರಿಂದ ಮನೆಯಲ್ಲಿಯೇ ಹಾಳಾಗುತ್ತಾರೆ. ಇದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ. ಇವರು ಸಮಾಜಕ್ಕೆ ನೀಡುತ್ತಿರುವ ಸಂದೇಶವೇನು’ ಎಂದಿದ್ದರು.

ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್‌ರ ಈ ಹೇಳಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಹೇಳಿಕೆಗೆ ವಿರೋಧ ವ್ಯಕ್ತ ಪಡಿಸಿದವರಲ್ಲಿ ಮೊದಲಿಗರು ಕಾಂಗ್ರೆಸ್ ನಾಯಕ ಸಂಜಯ್ ಝಾ. ತಿರಥ್ ಸಿಂಗ್ ರಾವತ್ ಮಾತನ್ನು ನೀವು ಅನುಮೋದಿಸುತ್ತಿರಾ ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದರು.

ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ತಿರಥ್ ಸಿಂಗ್ ರಾವತ್ ಹೇಳಿಕೆಗೆ ನಿನ್ನೆಯಿಂದಲೇ ಟ್ವಿಟರ್ ತುಂಬಾ ಹರಿದ ಜೀನ್ಸ್ ಧರಿಸಿದ್ದ ಚಿತ್ರಗಳನ್ನು ಹಂಚಿಕೊಂಡು ಅನೇಕ ಮಂದಿ ಪೋಸ್ಟ್ ಮಾಡುತ್ತಿದದ್ರು. ಗುರುವಾರ #RippedJeansTwitter ಹ್ಯಾಶ್‌ಟ್ಯಾಗ್‌ ಬಳಸಿ ಸಾವಿರಾರು ಮಂದಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯಸಭಾ ಸಂಸದೆ ಮತ್ತು ಶಿವಸೇನೆ ಮುಖಂಡ ಪ್ರಿಯಾಂಕಾ ಚತುರ್ವೇದಿ ತಮ್ಮ ಟ್ವಿಟರ್‌ನಲ್ಲಿ, “ದೇಶದ ‘ಸಂಸ್ಕೃತಿ’ ಮತ್ತು ‘ಸಂಸ್ಕಾರ’ ಮಹಿಳೆಯರನ್ನು ಮತ್ತು ಅವರ ಆಯ್ಕೆಗಳ ಬಗ್ಗೆ ಕುಳಿತು ನಿರ್ಣಯಿಸುವ ಪುರುಷರಿಂದ ಪ್ರಭಾವಿತವಾಗಿದೆ. ಮೊದಲು ಆಲೋಚನೆ ಬದಲಾಯಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶ ಬದಲಾಗುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮತ ನೀಡಿದರೆ ‘ಜೈ ಸಿಯಾ ರಾಂ’ ಎನ್ನಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ನಟಿ ಗುಲ್ ಪನಾಗ್ ಮಗುವನ್ನು ಹಿಡಿದುಕೊಂಡು ಹರಿದ ಡೆನಿಮ್ ಧರಿಸಿದ ಸೆಲ್ಫಿ ಹಂಚಿಕೊಂಡಿದ್ದು, #RippedJeansTwitter ಬಳಸಿದ್ದಾರೆ.

ರೇಡಿಯೊ ಜಾಕಿ ಆಗಿರುವ ನಿಮಿ ಎಂಬುವವರು ತಮ್ಮ ಫೋಟೋವನ್ನು ಶೇರ್ ಮಾಡಿದ್ದು, ಹರಿದ ಜೀನ್ಸ್ ಸತ್ತುಹೋಗಿರುವ ಮನಸ್ಥಿತಿಯ ವಿರುದ್ಧದ ಹೋರಾಟ ಎಂದಿದ್ದಾರೆ.

ಮಾಜಿ ಫೆಮಿನಾ ಮಿಸ್ ಇಂಡಿಯಾ, ನಟಿ ಸಿಮ್ರಾನ್ ಕೌರ್ ಕೂಡ ತಮ್ಮ ಟ್ವಿಟರ್‌ ಪೇಜ್‌ನಲ್ಲಿ ಹರಿದ ಜೀನ್ಸ್ ಧರಿಸಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಟ್ವಿಟರ್‌ ಬಳಕೆದಾರರೊಬ್ಬರು ನಟಿ ಕಂಗನಾ ಅವರ ಚಿತ್ರಗಳನ್ನು ಹಂಚಿಕೊಂಡಿದ್ದು, ಈ ಅಭಿಯಾನಕ್ಕೆ ಕೈ ಜೋಡಿಸಿದಕ್ಕೆ ಧನ್ಯವಾದಗಳು ಎಂದಿದ್ದಾರೆ.

ಕೆಲ ದಿನಗಳ ಹಿಂದೆ ನಟಿ ಕಂಗನಾ ಕೂಡ ಹರಿದ ಡೆನಿಮ್ ಜೀನ್ಸ್‌ ವಿರುದ್ಧ ಮಾತನಾಡಿದ್ದರು. ’ಪ್ರಸ್ತುತ ಸಾಧಕರನ್ನು ಗುರುತಿಸಲು ಹೊರಟಾಗ ಅವರೆಲ್ಲಾ ಹರಿದ, ಟೋನ್ಡ್ ಅಮೆರಿಕನ್ ಜೀನ್ಸ್‌ಗಳನ್ನು ಧರಿಸಿರುತ್ತಾರೆ ಎಂದು, ಟೋನ್ಡ್ ಅಮೆರಿಕನ್ ಜೀನ್ಸ್ ಧರಿಸಿಸುವವರನ್ನು ಪರೋಕ್ಷವಾಗಿ ಟೀಕಿಸಿದ್ದರು. ಆಗ ನಟಿ ಕಂಗನಾ ರಣಾವತ್ ಅವರನ್ನು ನೆಟ್ಟಿಗರು ಅವರದ್ದೇ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಕಾಲೆಳೆದಿದ್ದರು.


ಇದನ್ನೂ ಓದಿ: ಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...