Homeಮುಖಪುಟ’ಮೊದಲು ಆಲೋಚನೆ ಬದಲಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶವೂ ಬದಲಾಗುತ್ತದೆ’

’ಮೊದಲು ಆಲೋಚನೆ ಬದಲಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶವೂ ಬದಲಾಗುತ್ತದೆ’

- Advertisement -
- Advertisement -

ಮಹಿಳೆಯರ ಉಡುಪಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಉತ್ತರಾಖಂಡದ ಹೊಸ ಮುಖ್ಯಮಂತ್ರಿ ವಿರುದ್ಧ ವಿರೋಧ ಪಕ್ಷಗಳು ಸೇರಿದಂತೆ ಟ್ವಿಟರ್‌ನಲ್ಲಿ ಹಲವು ಮಂದಿ ವಿರೋಧ ವ್ಯಕ್ತಪಡಿಸಿದ್ದಾರೆ. ಹರಿದ ಡೆನಿಮ್‌ ಜೀನ್ಸ್‌ಗಳನ್ನು ಧರಿಸಿದ ಚಿತ್ರಗಳನ್ನು ಪೋಸ್ಟ್ ಮಾಡಿ ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ’ಮೊದಲು ಆಲೋಚನೆ ಬದಲಾಯಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶ ಬದಲಾಗುತ್ತದೆ’ ಎಂದಿದ್ದಾರೆ.

ಡೆಹ್ರಾಡೂನ್‌ನಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ಉತ್ತರಾಖಂಡ ರಾಜ್ಯ ಆಯೋಗ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮುಖ್ಯಮಂತ್ರಿ ತಿರಥ್ ​​ಸಿಂಗ್ ರಾವತ್, ಹರಿದ ಬಟ್ಟೆ ಧರಿಸಿದ ಮಹಿಳೆಯರಿಂದ ಮಕ್ಕಳಿಗೆ ಸಂಸ್ಕಾರ ಕಲಿಸಲು ಸಾಧ್ಯವೆ..? ಮಕ್ಕಳು ಪೋಷಕರಿಂದ ಮನೆಯಲ್ಲಿಯೇ ಹಾಳಾಗುತ್ತಾರೆ. ಇದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ. ಇವರು ಸಮಾಜಕ್ಕೆ ನೀಡುತ್ತಿರುವ ಸಂದೇಶವೇನು’ ಎಂದಿದ್ದರು.

ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್‌ರ ಈ ಹೇಳಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಹೇಳಿಕೆಗೆ ವಿರೋಧ ವ್ಯಕ್ತ ಪಡಿಸಿದವರಲ್ಲಿ ಮೊದಲಿಗರು ಕಾಂಗ್ರೆಸ್ ನಾಯಕ ಸಂಜಯ್ ಝಾ. ತಿರಥ್ ಸಿಂಗ್ ರಾವತ್ ಮಾತನ್ನು ನೀವು ಅನುಮೋದಿಸುತ್ತಿರಾ ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದರು.

ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ತಿರಥ್ ಸಿಂಗ್ ರಾವತ್ ಹೇಳಿಕೆಗೆ ನಿನ್ನೆಯಿಂದಲೇ ಟ್ವಿಟರ್ ತುಂಬಾ ಹರಿದ ಜೀನ್ಸ್ ಧರಿಸಿದ್ದ ಚಿತ್ರಗಳನ್ನು ಹಂಚಿಕೊಂಡು ಅನೇಕ ಮಂದಿ ಪೋಸ್ಟ್ ಮಾಡುತ್ತಿದದ್ರು. ಗುರುವಾರ #RippedJeansTwitter ಹ್ಯಾಶ್‌ಟ್ಯಾಗ್‌ ಬಳಸಿ ಸಾವಿರಾರು ಮಂದಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯಸಭಾ ಸಂಸದೆ ಮತ್ತು ಶಿವಸೇನೆ ಮುಖಂಡ ಪ್ರಿಯಾಂಕಾ ಚತುರ್ವೇದಿ ತಮ್ಮ ಟ್ವಿಟರ್‌ನಲ್ಲಿ, “ದೇಶದ ‘ಸಂಸ್ಕೃತಿ’ ಮತ್ತು ‘ಸಂಸ್ಕಾರ’ ಮಹಿಳೆಯರನ್ನು ಮತ್ತು ಅವರ ಆಯ್ಕೆಗಳ ಬಗ್ಗೆ ಕುಳಿತು ನಿರ್ಣಯಿಸುವ ಪುರುಷರಿಂದ ಪ್ರಭಾವಿತವಾಗಿದೆ. ಮೊದಲು ಆಲೋಚನೆ ಬದಲಾಯಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶ ಬದಲಾಗುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮತ ನೀಡಿದರೆ ‘ಜೈ ಸಿಯಾ ರಾಂ’ ಎನ್ನಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ನಟಿ ಗುಲ್ ಪನಾಗ್ ಮಗುವನ್ನು ಹಿಡಿದುಕೊಂಡು ಹರಿದ ಡೆನಿಮ್ ಧರಿಸಿದ ಸೆಲ್ಫಿ ಹಂಚಿಕೊಂಡಿದ್ದು, #RippedJeansTwitter ಬಳಸಿದ್ದಾರೆ.

ರೇಡಿಯೊ ಜಾಕಿ ಆಗಿರುವ ನಿಮಿ ಎಂಬುವವರು ತಮ್ಮ ಫೋಟೋವನ್ನು ಶೇರ್ ಮಾಡಿದ್ದು, ಹರಿದ ಜೀನ್ಸ್ ಸತ್ತುಹೋಗಿರುವ ಮನಸ್ಥಿತಿಯ ವಿರುದ್ಧದ ಹೋರಾಟ ಎಂದಿದ್ದಾರೆ.

ಮಾಜಿ ಫೆಮಿನಾ ಮಿಸ್ ಇಂಡಿಯಾ, ನಟಿ ಸಿಮ್ರಾನ್ ಕೌರ್ ಕೂಡ ತಮ್ಮ ಟ್ವಿಟರ್‌ ಪೇಜ್‌ನಲ್ಲಿ ಹರಿದ ಜೀನ್ಸ್ ಧರಿಸಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಟ್ವಿಟರ್‌ ಬಳಕೆದಾರರೊಬ್ಬರು ನಟಿ ಕಂಗನಾ ಅವರ ಚಿತ್ರಗಳನ್ನು ಹಂಚಿಕೊಂಡಿದ್ದು, ಈ ಅಭಿಯಾನಕ್ಕೆ ಕೈ ಜೋಡಿಸಿದಕ್ಕೆ ಧನ್ಯವಾದಗಳು ಎಂದಿದ್ದಾರೆ.

ಕೆಲ ದಿನಗಳ ಹಿಂದೆ ನಟಿ ಕಂಗನಾ ಕೂಡ ಹರಿದ ಡೆನಿಮ್ ಜೀನ್ಸ್‌ ವಿರುದ್ಧ ಮಾತನಾಡಿದ್ದರು. ’ಪ್ರಸ್ತುತ ಸಾಧಕರನ್ನು ಗುರುತಿಸಲು ಹೊರಟಾಗ ಅವರೆಲ್ಲಾ ಹರಿದ, ಟೋನ್ಡ್ ಅಮೆರಿಕನ್ ಜೀನ್ಸ್‌ಗಳನ್ನು ಧರಿಸಿರುತ್ತಾರೆ ಎಂದು, ಟೋನ್ಡ್ ಅಮೆರಿಕನ್ ಜೀನ್ಸ್ ಧರಿಸಿಸುವವರನ್ನು ಪರೋಕ್ಷವಾಗಿ ಟೀಕಿಸಿದ್ದರು. ಆಗ ನಟಿ ಕಂಗನಾ ರಣಾವತ್ ಅವರನ್ನು ನೆಟ್ಟಿಗರು ಅವರದ್ದೇ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಕಾಲೆಳೆದಿದ್ದರು.


ಇದನ್ನೂ ಓದಿ: ಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...