Homeಮುಖಪುಟ’ಮೊದಲು ಆಲೋಚನೆ ಬದಲಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶವೂ ಬದಲಾಗುತ್ತದೆ’

’ಮೊದಲು ಆಲೋಚನೆ ಬದಲಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶವೂ ಬದಲಾಗುತ್ತದೆ’

- Advertisement -
- Advertisement -

ಮಹಿಳೆಯರ ಉಡುಪಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಉತ್ತರಾಖಂಡದ ಹೊಸ ಮುಖ್ಯಮಂತ್ರಿ ವಿರುದ್ಧ ವಿರೋಧ ಪಕ್ಷಗಳು ಸೇರಿದಂತೆ ಟ್ವಿಟರ್‌ನಲ್ಲಿ ಹಲವು ಮಂದಿ ವಿರೋಧ ವ್ಯಕ್ತಪಡಿಸಿದ್ದಾರೆ. ಹರಿದ ಡೆನಿಮ್‌ ಜೀನ್ಸ್‌ಗಳನ್ನು ಧರಿಸಿದ ಚಿತ್ರಗಳನ್ನು ಪೋಸ್ಟ್ ಮಾಡಿ ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ’ಮೊದಲು ಆಲೋಚನೆ ಬದಲಾಯಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶ ಬದಲಾಗುತ್ತದೆ’ ಎಂದಿದ್ದಾರೆ.

ಡೆಹ್ರಾಡೂನ್‌ನಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ಉತ್ತರಾಖಂಡ ರಾಜ್ಯ ಆಯೋಗ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮುಖ್ಯಮಂತ್ರಿ ತಿರಥ್ ​​ಸಿಂಗ್ ರಾವತ್, ಹರಿದ ಬಟ್ಟೆ ಧರಿಸಿದ ಮಹಿಳೆಯರಿಂದ ಮಕ್ಕಳಿಗೆ ಸಂಸ್ಕಾರ ಕಲಿಸಲು ಸಾಧ್ಯವೆ..? ಮಕ್ಕಳು ಪೋಷಕರಿಂದ ಮನೆಯಲ್ಲಿಯೇ ಹಾಳಾಗುತ್ತಾರೆ. ಇದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ. ಇವರು ಸಮಾಜಕ್ಕೆ ನೀಡುತ್ತಿರುವ ಸಂದೇಶವೇನು’ ಎಂದಿದ್ದರು.

ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್‌ರ ಈ ಹೇಳಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಹೇಳಿಕೆಗೆ ವಿರೋಧ ವ್ಯಕ್ತ ಪಡಿಸಿದವರಲ್ಲಿ ಮೊದಲಿಗರು ಕಾಂಗ್ರೆಸ್ ನಾಯಕ ಸಂಜಯ್ ಝಾ. ತಿರಥ್ ಸಿಂಗ್ ರಾವತ್ ಮಾತನ್ನು ನೀವು ಅನುಮೋದಿಸುತ್ತಿರಾ ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದರು.

ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ತಿರಥ್ ಸಿಂಗ್ ರಾವತ್ ಹೇಳಿಕೆಗೆ ನಿನ್ನೆಯಿಂದಲೇ ಟ್ವಿಟರ್ ತುಂಬಾ ಹರಿದ ಜೀನ್ಸ್ ಧರಿಸಿದ್ದ ಚಿತ್ರಗಳನ್ನು ಹಂಚಿಕೊಂಡು ಅನೇಕ ಮಂದಿ ಪೋಸ್ಟ್ ಮಾಡುತ್ತಿದದ್ರು. ಗುರುವಾರ #RippedJeansTwitter ಹ್ಯಾಶ್‌ಟ್ಯಾಗ್‌ ಬಳಸಿ ಸಾವಿರಾರು ಮಂದಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯಸಭಾ ಸಂಸದೆ ಮತ್ತು ಶಿವಸೇನೆ ಮುಖಂಡ ಪ್ರಿಯಾಂಕಾ ಚತುರ್ವೇದಿ ತಮ್ಮ ಟ್ವಿಟರ್‌ನಲ್ಲಿ, “ದೇಶದ ‘ಸಂಸ್ಕೃತಿ’ ಮತ್ತು ‘ಸಂಸ್ಕಾರ’ ಮಹಿಳೆಯರನ್ನು ಮತ್ತು ಅವರ ಆಯ್ಕೆಗಳ ಬಗ್ಗೆ ಕುಳಿತು ನಿರ್ಣಯಿಸುವ ಪುರುಷರಿಂದ ಪ್ರಭಾವಿತವಾಗಿದೆ. ಮೊದಲು ಆಲೋಚನೆ ಬದಲಾಯಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶ ಬದಲಾಗುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮತ ನೀಡಿದರೆ ‘ಜೈ ಸಿಯಾ ರಾಂ’ ಎನ್ನಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ನಟಿ ಗುಲ್ ಪನಾಗ್ ಮಗುವನ್ನು ಹಿಡಿದುಕೊಂಡು ಹರಿದ ಡೆನಿಮ್ ಧರಿಸಿದ ಸೆಲ್ಫಿ ಹಂಚಿಕೊಂಡಿದ್ದು, #RippedJeansTwitter ಬಳಸಿದ್ದಾರೆ.

ರೇಡಿಯೊ ಜಾಕಿ ಆಗಿರುವ ನಿಮಿ ಎಂಬುವವರು ತಮ್ಮ ಫೋಟೋವನ್ನು ಶೇರ್ ಮಾಡಿದ್ದು, ಹರಿದ ಜೀನ್ಸ್ ಸತ್ತುಹೋಗಿರುವ ಮನಸ್ಥಿತಿಯ ವಿರುದ್ಧದ ಹೋರಾಟ ಎಂದಿದ್ದಾರೆ.

ಮಾಜಿ ಫೆಮಿನಾ ಮಿಸ್ ಇಂಡಿಯಾ, ನಟಿ ಸಿಮ್ರಾನ್ ಕೌರ್ ಕೂಡ ತಮ್ಮ ಟ್ವಿಟರ್‌ ಪೇಜ್‌ನಲ್ಲಿ ಹರಿದ ಜೀನ್ಸ್ ಧರಿಸಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಟ್ವಿಟರ್‌ ಬಳಕೆದಾರರೊಬ್ಬರು ನಟಿ ಕಂಗನಾ ಅವರ ಚಿತ್ರಗಳನ್ನು ಹಂಚಿಕೊಂಡಿದ್ದು, ಈ ಅಭಿಯಾನಕ್ಕೆ ಕೈ ಜೋಡಿಸಿದಕ್ಕೆ ಧನ್ಯವಾದಗಳು ಎಂದಿದ್ದಾರೆ.

ಕೆಲ ದಿನಗಳ ಹಿಂದೆ ನಟಿ ಕಂಗನಾ ಕೂಡ ಹರಿದ ಡೆನಿಮ್ ಜೀನ್ಸ್‌ ವಿರುದ್ಧ ಮಾತನಾಡಿದ್ದರು. ’ಪ್ರಸ್ತುತ ಸಾಧಕರನ್ನು ಗುರುತಿಸಲು ಹೊರಟಾಗ ಅವರೆಲ್ಲಾ ಹರಿದ, ಟೋನ್ಡ್ ಅಮೆರಿಕನ್ ಜೀನ್ಸ್‌ಗಳನ್ನು ಧರಿಸಿರುತ್ತಾರೆ ಎಂದು, ಟೋನ್ಡ್ ಅಮೆರಿಕನ್ ಜೀನ್ಸ್ ಧರಿಸಿಸುವವರನ್ನು ಪರೋಕ್ಷವಾಗಿ ಟೀಕಿಸಿದ್ದರು. ಆಗ ನಟಿ ಕಂಗನಾ ರಣಾವತ್ ಅವರನ್ನು ನೆಟ್ಟಿಗರು ಅವರದ್ದೇ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಕಾಲೆಳೆದಿದ್ದರು.


ಇದನ್ನೂ ಓದಿ: ಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...