Homeಮುಖಪುಟ’ಮೊದಲು ಆಲೋಚನೆ ಬದಲಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶವೂ ಬದಲಾಗುತ್ತದೆ’

’ಮೊದಲು ಆಲೋಚನೆ ಬದಲಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶವೂ ಬದಲಾಗುತ್ತದೆ’

- Advertisement -
- Advertisement -

ಮಹಿಳೆಯರ ಉಡುಪಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಉತ್ತರಾಖಂಡದ ಹೊಸ ಮುಖ್ಯಮಂತ್ರಿ ವಿರುದ್ಧ ವಿರೋಧ ಪಕ್ಷಗಳು ಸೇರಿದಂತೆ ಟ್ವಿಟರ್‌ನಲ್ಲಿ ಹಲವು ಮಂದಿ ವಿರೋಧ ವ್ಯಕ್ತಪಡಿಸಿದ್ದಾರೆ. ಹರಿದ ಡೆನಿಮ್‌ ಜೀನ್ಸ್‌ಗಳನ್ನು ಧರಿಸಿದ ಚಿತ್ರಗಳನ್ನು ಪೋಸ್ಟ್ ಮಾಡಿ ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ’ಮೊದಲು ಆಲೋಚನೆ ಬದಲಾಯಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶ ಬದಲಾಗುತ್ತದೆ’ ಎಂದಿದ್ದಾರೆ.

ಡೆಹ್ರಾಡೂನ್‌ನಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ಉತ್ತರಾಖಂಡ ರಾಜ್ಯ ಆಯೋಗ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮುಖ್ಯಮಂತ್ರಿ ತಿರಥ್ ​​ಸಿಂಗ್ ರಾವತ್, ಹರಿದ ಬಟ್ಟೆ ಧರಿಸಿದ ಮಹಿಳೆಯರಿಂದ ಮಕ್ಕಳಿಗೆ ಸಂಸ್ಕಾರ ಕಲಿಸಲು ಸಾಧ್ಯವೆ..? ಮಕ್ಕಳು ಪೋಷಕರಿಂದ ಮನೆಯಲ್ಲಿಯೇ ಹಾಳಾಗುತ್ತಾರೆ. ಇದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ. ಇವರು ಸಮಾಜಕ್ಕೆ ನೀಡುತ್ತಿರುವ ಸಂದೇಶವೇನು’ ಎಂದಿದ್ದರು.

ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್‌ರ ಈ ಹೇಳಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಹೇಳಿಕೆಗೆ ವಿರೋಧ ವ್ಯಕ್ತ ಪಡಿಸಿದವರಲ್ಲಿ ಮೊದಲಿಗರು ಕಾಂಗ್ರೆಸ್ ನಾಯಕ ಸಂಜಯ್ ಝಾ. ತಿರಥ್ ಸಿಂಗ್ ರಾವತ್ ಮಾತನ್ನು ನೀವು ಅನುಮೋದಿಸುತ್ತಿರಾ ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದರು.

ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ತಿರಥ್ ಸಿಂಗ್ ರಾವತ್ ಹೇಳಿಕೆಗೆ ನಿನ್ನೆಯಿಂದಲೇ ಟ್ವಿಟರ್ ತುಂಬಾ ಹರಿದ ಜೀನ್ಸ್ ಧರಿಸಿದ್ದ ಚಿತ್ರಗಳನ್ನು ಹಂಚಿಕೊಂಡು ಅನೇಕ ಮಂದಿ ಪೋಸ್ಟ್ ಮಾಡುತ್ತಿದದ್ರು. ಗುರುವಾರ #RippedJeansTwitter ಹ್ಯಾಶ್‌ಟ್ಯಾಗ್‌ ಬಳಸಿ ಸಾವಿರಾರು ಮಂದಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯಸಭಾ ಸಂಸದೆ ಮತ್ತು ಶಿವಸೇನೆ ಮುಖಂಡ ಪ್ರಿಯಾಂಕಾ ಚತುರ್ವೇದಿ ತಮ್ಮ ಟ್ವಿಟರ್‌ನಲ್ಲಿ, “ದೇಶದ ‘ಸಂಸ್ಕೃತಿ’ ಮತ್ತು ‘ಸಂಸ್ಕಾರ’ ಮಹಿಳೆಯರನ್ನು ಮತ್ತು ಅವರ ಆಯ್ಕೆಗಳ ಬಗ್ಗೆ ಕುಳಿತು ನಿರ್ಣಯಿಸುವ ಪುರುಷರಿಂದ ಪ್ರಭಾವಿತವಾಗಿದೆ. ಮೊದಲು ಆಲೋಚನೆ ಬದಲಾಯಿಸಿಕೊಳ್ಳಿ ಮುಖ್ಯಮಂತ್ರಿಗಳೇ, ಆಗಲೇ ದೇಶ ಬದಲಾಗುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮತ ನೀಡಿದರೆ ‘ಜೈ ಸಿಯಾ ರಾಂ’ ಎನ್ನಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ನಟಿ ಗುಲ್ ಪನಾಗ್ ಮಗುವನ್ನು ಹಿಡಿದುಕೊಂಡು ಹರಿದ ಡೆನಿಮ್ ಧರಿಸಿದ ಸೆಲ್ಫಿ ಹಂಚಿಕೊಂಡಿದ್ದು, #RippedJeansTwitter ಬಳಸಿದ್ದಾರೆ.

ರೇಡಿಯೊ ಜಾಕಿ ಆಗಿರುವ ನಿಮಿ ಎಂಬುವವರು ತಮ್ಮ ಫೋಟೋವನ್ನು ಶೇರ್ ಮಾಡಿದ್ದು, ಹರಿದ ಜೀನ್ಸ್ ಸತ್ತುಹೋಗಿರುವ ಮನಸ್ಥಿತಿಯ ವಿರುದ್ಧದ ಹೋರಾಟ ಎಂದಿದ್ದಾರೆ.

ಮಾಜಿ ಫೆಮಿನಾ ಮಿಸ್ ಇಂಡಿಯಾ, ನಟಿ ಸಿಮ್ರಾನ್ ಕೌರ್ ಕೂಡ ತಮ್ಮ ಟ್ವಿಟರ್‌ ಪೇಜ್‌ನಲ್ಲಿ ಹರಿದ ಜೀನ್ಸ್ ಧರಿಸಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಟ್ವಿಟರ್‌ ಬಳಕೆದಾರರೊಬ್ಬರು ನಟಿ ಕಂಗನಾ ಅವರ ಚಿತ್ರಗಳನ್ನು ಹಂಚಿಕೊಂಡಿದ್ದು, ಈ ಅಭಿಯಾನಕ್ಕೆ ಕೈ ಜೋಡಿಸಿದಕ್ಕೆ ಧನ್ಯವಾದಗಳು ಎಂದಿದ್ದಾರೆ.

ಕೆಲ ದಿನಗಳ ಹಿಂದೆ ನಟಿ ಕಂಗನಾ ಕೂಡ ಹರಿದ ಡೆನಿಮ್ ಜೀನ್ಸ್‌ ವಿರುದ್ಧ ಮಾತನಾಡಿದ್ದರು. ’ಪ್ರಸ್ತುತ ಸಾಧಕರನ್ನು ಗುರುತಿಸಲು ಹೊರಟಾಗ ಅವರೆಲ್ಲಾ ಹರಿದ, ಟೋನ್ಡ್ ಅಮೆರಿಕನ್ ಜೀನ್ಸ್‌ಗಳನ್ನು ಧರಿಸಿರುತ್ತಾರೆ ಎಂದು, ಟೋನ್ಡ್ ಅಮೆರಿಕನ್ ಜೀನ್ಸ್ ಧರಿಸಿಸುವವರನ್ನು ಪರೋಕ್ಷವಾಗಿ ಟೀಕಿಸಿದ್ದರು. ಆಗ ನಟಿ ಕಂಗನಾ ರಣಾವತ್ ಅವರನ್ನು ನೆಟ್ಟಿಗರು ಅವರದ್ದೇ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಕಾಲೆಳೆದಿದ್ದರು.


ಇದನ್ನೂ ಓದಿ: ಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...