Homeಕರ್ನಾಟಕಹೋರಾಟಗಾರ ದೊಡ್ಡಿಪಾಳ್ಯ ನರಸಿಂಹಮೂರ್ತಿ ವಿರುದ್ಧದ ಎಲ್ಲಾ ಕೇಸುಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಹೋರಾಟಗಾರ ದೊಡ್ಡಿಪಾಳ್ಯ ನರಸಿಂಹಮೂರ್ತಿ ವಿರುದ್ಧದ ಎಲ್ಲಾ ಕೇಸುಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

"ನಾನಿನ್ನೂ ಕೋರ್ಟ್ ಆವರಣದಲ್ಲಿದ್ದೇನೆ. ಎಲ್ಲಾ ಕೇಸುಗಳಿಂದ ಮುಕ್ತ ಆಗಿದ್ದೇನೆಂದು ಜಡ್ಜ್ ಸಾಹೇಬರು ಹೇಳಿದರು. ಬಹಳಷ್ಟು ಜನ ವಾಟ್ಸಾಪ್‌ನಲ್ಲಿ ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ" ಎಂದು ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

ನಕ್ಸಲ್ ಆರೋಪದಲ್ಲಿ ಕಳೆದ ವರ್ಷ ಅಕ್ಟೋಬರ್ 24 ರಂದು ಬಂಧಿತರಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಹೋರಾಟಗಾರ, ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹಮೂರ್ತಿ ವಿರುದ್ಧದ ಎಲ್ಲಾ ಕೇಸುಗಳನ್ನು ರಾಯಚೂರು ಜಿಲ್ಲಾ ನ್ಯಾಯಾಲಯ ಖುಲಾಸೆಗೊಳಿಸಿದೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ವಿನೋದ ಎಂಬ ಹೆಸರಿನ ನಕ್ಸಲ್ ಎಂದು ಆರೋಪಿಸಿದ್ದ ರಾಯಚೂರು ಪೊಲೀಸರು 1994ರ ರಾಯಚೂರು ಗ್ರಾಮೀಣ (ಯಾಪಲದಿನ್ನಿ) ಪೊಲೀಸ್ ಠಾಣೆಯಲ್ಲಿ ಮೂರು ಕೇಸುಗಳನ್ನು, ರಾಯಚೂರು ನೇತಾಜಿ ನಗರ ಠಾಣೆಯಲ್ಲಿ ದಾಖಲಾಗಿದ್ದ 25 ವರ್ಷಗಳಷ್ಟು ಹಿಂದಿನ ಪ್ರಕರಣದ ಆಧಾರದಲ್ಲಿ ಬಂಧಿಸಿದ್ದರು. ಕಲಂ 143, 147, 148, 307, 355, 385, 120(ಬಿ) 124(ಎ) ಸೇರಿದಂತೆ ಸುಮಾರು 21 ಸೆಕ್ಷನ್ ಗಳನ್ನು ಹಾಕಿದ್ದಲ್ಲದೇ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಆರೋಪಿಸಿದ್ದರು.


ಇದನ್ನೂ ಓದಿ: ಸುಳ್ಳು ಕೇಸಿನಲ್ಲಿ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ: ಎಲ್ಲೆಡೆ ತೀವ್ರ ಖಂಡನೆ


ಅಕ್ಟೋಬರ್ 24ರ ಗುರುವಾರ ರಾಯಚೂರಿನಲ್ಲಿ ನಡೆದ ಗೌರಿಲಂಕೇಶ್ ಬಳಗದ ವಿಚಾರಸಂಕಿರಣದಲ್ಲಿ ಭಾಗವಹಿಸಿದ ನಂತರ ದೊಡ್ಡಿಪಾಳ್ಯರವರನ್ನು ವಶಕ್ಕೆ ಪಡೆದಿದ್ದರು. ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಮತ್ತು ಡಿವೈಎಸ್ಪಿ ಶೀಲವಂತರ್ ಸೇರಿದಂತೆ ಹಲವು ಪೊಲೀಸರು ಒಂದು ದಿನಗಳ ಕಾಲ ಸತತ ವಿಚಾರಣೆ ನಡೆಸಿದ್ದರು. ಆದರೆ ಅವರ ಮೇಲಿನ ಎಲ್ಲಾ ಆರೋಪಗಳನ್ನು ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರು ನಿರಾಕರಿಸಿದ್ದರು.

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಬಂಧನಕ್ಕೆ ರಾಜ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿತ್ತು. ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆದಿತ್ತು. ಅವರ ಬಿಡುಗಡೆಗೆ ಒತ್ತಾಯಿಸಿ ಹಲವು ಗಣ್ಯರು ದನಿಯೆತ್ತಿದ್ದರು.

ಸುಮಾರು 77 ದಿನಗಳ ಕಾಲ ರಾಯಚೂರು ಜೈಲಿನಲ್ಲಿ ವಿಚಾರಣಾಧೀನ ಖೈದಿಯಾಗಿ ಬಂಧಿಯಾಗಿದ್ದ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರು 2020ರ ಜನವರಿಲ್ಲಿ ಜಾಮೀನು ಪಡೆದು ಹೊರಬಂದಿದ್ದರು. ನಂತರದ ವಿಚಾರಣೆಯಲ್ಲಿ ಅವರ ವಿರುದ್ಧ ಯಾವುದೇ ಸಾಕ್ಷ್ಯವಿಲ್ಲದ ಕಾರಣ ಅವರನ್ನು ವಿನೋದ್ ಎಂದು ಅಭಿಪ್ರಾಯಪಡುವುದು ಸರಿಯಲ್ಲ ಎಂದು ನ್ಯಾಯಾಲಯ ಹೇಳಿದೆ. ಅಲ್ಲದೇ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ನಿರ್ದೋಷಿ ಎಂದು ಘೋಷಿಸಿದ ನ್ಯಾಯಾಲಯ ಅವರ ಮೇಲಿದ್ದ ಎಲ್ಲಾ ಪ್ರಕರಣಗಳನ್ನು ಖುಲಾಸೆಗೊಳಿಸಿದೆ.

“ನಾನಿನ್ನೂ ಕೋರ್ಟ್ ಆವರಣದಲ್ಲಿದ್ದೇನೆ. ಎಲ್ಲಾ ಕೇಸುಗಳಿಂದ ಮುಕ್ತ ಆಗಿದ್ದೇನೆಂದು ಜಡ್ಜ್ ಸಾಹೇಬರು ಹೇಳಿದರು. ಬಹಳಷ್ಟು ಜನ ವಾಟ್ಸಾಪ್‌ನಲ್ಲಿ ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ” ಎಂದು ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ.


ಇದನ್ನೂ ಓದಿ: ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿದ ಕರ್ನಾಟಕದ ಹಿರಿಯ ಗಣ್ಯರು : ಜಂಟಿ ಹೇಳಿಕೆ ಬಿಡುಗಡೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...