Homeಮುಖಪುಟಜನಪರ ಹೋರಾಟಗಳ ಸಂಗಾತಿ ಮೈಸೂರಿನ ಮರಿದಂಡಯ್ಯ ಬುದ್ಧ ನಿಧನ

ಜನಪರ ಹೋರಾಟಗಳ ಸಂಗಾತಿ ಮೈಸೂರಿನ ಮರಿದಂಡಯ್ಯ ಬುದ್ಧ ನಿಧನ

- Advertisement -
- Advertisement -

ಚಳವಳಿಗಳು ನದಿಯಂತೆ. ಕಾಲದ ಅಡೆತಡೆಗಳನ್ನು ಎದುರಿಸುತ್ತ ನಿಲ್ಲದೇ ಹರಿಯುತ್ತಿರಬೇಕು. ಚಳವಳಿ ಎಂದೂ ನಿಂತ ನೀರಲ್ಲ. ಧುಮ್ಮಿಕ್ಕಿ ಹರಿವ ವರ್ಷಧಾರೆ. ನಿರಂತರ ಹರಿವ ಹೋರಾಟದ ನದಿಯಲ್ಲಿ ಸಹಸ್ರ ಸಹಸ್ರ ಮಂದಿ ಈಜಿದ್ದಾರೆ. ಗುರಿ ಮುಟ್ಟುವ ಮುನ್ನವೇ ಅರ್ಧದಲ್ಲಿಯೇ ನಿರ್ಗಮಿಸಿದ ಚಳವಳಿಗಾರರೇ ಬಹುತೇಕರು. ಅಂತವರ ಸಾಲಿಗೆ ಮತ್ತೊಬ್ಬ ಹೋರಾಟಗಾರ ಸೇರಿದ್ದಾರೆ. ಮೂರುವರೆ ದಶಕಗಳು ಸಾಮಾಜಿಕ ಶುದ್ಧೀಕರಣ ಕ್ರಿಯೆಯಲ್ಲಿ ನಿರತರಾಗಿದ್ದ ಮೈಸೂರಿನ ಜನಪರ ಚಳವಳಿಗಳ ಸಂಗಾತಿ ಮರಿದಂಡಯ್ಯ ಬುದ್ಧ, ಮಧ್ಯದಲ್ಲಿಯೇ ನಿರ್ಗಮಿಸಿ ಸಂಗಾತಿಗಳಲ್ಲಿ ಶೂನ್ಯಭಾವ ತುಂಬಿದ್ದಾರೆ.

ಮೈಸೂರಿನ ಎಲ್ಲಾ ಮಾದರಿಯ ಚಳವಳಿಗಳಲ್ಲಿ, ಎಡಪಂಥೀಯ, ಪ್ರಗತಿಪರ ನಿಲುವಿನ ಸಮಾರಂಭಗಳಲ್ಲಿ ಕಾಣುತ್ತಿದ್ದವರು ಮರಿದಂಡಯ್ಯ ಬುದ್ಧ. ಪತ್ರಿಕಾ ಕಚೇರಿಗಳಿಗೆ ಒಂದಿಲ್ಲೊಂದು ಪತ್ರಿಕಾ ಹೇಳಿಕೆ ಹಿಡಿದು ಬರುತ್ತಿದ್ದ ಅವರು ಮಿತಭಾಷಿ. ಸಾರ್ವಜನಿಕ ವೇದಿಕೆಗಳಲ್ಲಿ ಮಾತಾಡಿದ್ದು ಇಲ್ಲವೇ ಇಲ್ಲ. ಪ್ರಚಾರಕ್ಕೆಂದೂ ಹಪಾಹಪಿಸಿದವರಲ್ಲ. ಪ್ರತಿಭಟನೆಗಳಲ್ಲಿ ತಮ್ಮ ಹೆಸರು ಬರೆದುಕೊಳ್ಳುವಂತೆ ಒಮ್ಮೆಯೂ ಹೇಳಿದವರಲ್ಲ. ಆದರೆ ಮೈಸೂರಿನ ಎಲ್ಲಾ ಚಳವಳಿಗಳಲ್ಲಿ ಅವರ ದನಿ ಇದ್ದೇ ಇರುತ್ತಿತ್ತು.

ಎತ್ತರ ನಿಲುವು, ಪೈಲ್ವಾನನ ದೇಹಾಕೃತಿ, ಸದಾ ಬಿಳಿಯ ಜುಬ್ಬಾ ಧರಿಸುತ್ತಿದ್ದ ಅವರ ಹೆಸರೇ ವಿಚಿತ್ರ ಅನಿಸಿತ್ತು. ಮರಿದಂಡಯ್ಯ ಬುದ್ಧ ಅವರ ಹೆಸರು. ಮಾನವತಾವಾದಿ ಬುದ್ಧನ ಹೆಸರನ್ನು ತಮ್ಮ ಹೆಸರ ಜೊತೆ ಇಟ್ಟುಕೊಂಡಿದ್ದ ಅವರು ಸಮಾಜದ ತರತಮಗಳ ಬಗೆಗೆ ನೋಯುತ್ತ ಮೌನಿಯಾಗಿರುವಂತೆ ಕಾಣುತ್ತಿದ್ದರು. ಅನ್ಯಾಯದ ವಿರುದ್ಧದ ಹೆಜ್ಜೆ ಹಾಕುತ್ತಿದ್ದ ಎಲ್ಲರೊಂದಿಗೂ ನಡೆದರು. ನಡೆಯುತ್ತ ನಡೆಯುತ್ತ ದಣಿದು ಅನಾರೋಗ್ಯ ಪೀಡಿತರಾಗಿ ತಮ್ಮ ನಡಿಗೆ ನಿಲ್ಲಿಸಿಬಿಟ್ಟರು.

ಇತ್ತೀಚೆಗೆ ಗುರುಗಳಾದ ನಾ.ದಿವಾಕರ ಅವರು ‘ಮರಿದಂಡಯ್ಯ ಬುದ್ಧ ತೀವ್ರ ಅನಾರೋಗ್ಯದಲ್ಲಿದ್ದಾರೆ ಎಂದು ತಿಳಿಸಿದ್ದರು. ಅದಾಗಿ ಎರಡು ದಿನಗಳಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ. ಸಮಾಜದ ತರಮತಗಳ ವಿರುದ್ಧ ಹೋರಾಡುತ್ತಿದ್ದ ಅವರು ತಮ್ಮ ದೇಹದ ವಿರುದ್ಧ ಹೋರಾಡಿ ಗೆಲ್ಲಲಾಗದಿದ್ದು ನೋವಿನ ಸಂಗತಿ.

“ದಲಿತ ಚಳುವಳಿಯಲ್ಲಿ, ಕಮ್ಯುನಿಸ್ಟ್ ಚಳುವಳಿಯಲ್ಲಿ, ಮಾನವ ಹಕ್ಕು ಹೋರಾಟಗಳಲ್ಲಿ, ಎಲ್ಲ ರೀತಿಯ ಸಾಮಾಜಿಕ ಚಳುವಳಿಗಳಲ್ಲಿ ಸಕ್ರಿಯವಾಗಿದ್ದ ಮರಿದಂಡಯ್ಯ ಬುದ್ಧ ತಮ್ಮ ಸರಳ ಜೀವನದಿಂದಲೇ ಜನಾನುರಾಗಿಯಾಗಿದ್ದರು. ಕೂಲಿಕಾರ್ಮಿಕ ಸಂಘದ ಮೂಲಕ ಮೈಸೂರಿನ ಸಾವಿರಾರು ಕೂಲಿ ಕಾರ್ಮಿಕರಿಗೆ, ಪೌರ ಕಾರ್ಮಿಕರಿಗೆ ಆಸರೆಯಾಗಿದ್ದ ಮರಿದಂಡಯ್ಯ ಬುದ್ಧ ಕಾಯಕ ಜೀವಿ. ನಡೆದಾಡುವ ಚೇತನ. ಸ್ವಂತ ವಾಹನ ಇಲ್ಲದೆಯೇ ಅಗತ್ಯವಿದ್ದೆಡೆ, ಅವಶ್ಯಕತೆ ಇದ್ದವರಿಗೆ ಸಹಾಯ ಹಸ್ತ ನೀಡುತ್ತಲೇ ತಮ್ಮ ಬದುಕು ಸವೆಸಿದ ಬುದ್ಧ ಸಾಂಸಾರಿಕ ಜೀವನಕ್ಕಿಂತಲೂ ಸಮಾಜಮುಖಿಯಾಗಿಯೇ ಬದುಕಲು ಇಚ್ಚಿಸಿದವರು” ಎಂದು ಚಿಂತಕರಾದ ನಾ ದಿವಾಕರ್‌ರವರು ನುಡಿನಮನ ಸಲ್ಲಿಸಿದ್ದಾರೆ.

‘ಓಹೊ… ದಿನಾ ನೋಡ್ತಾ ಇದ್ದೆ ಇವರನ್ನ ಒಂದು ಜುಬ್ಬ ಹಾಕೊಂಡು ಓಡಾಡೋರು, ಪ್ರತಿಭಟನೆಗಳಲ್ಲಿ ಕಾಣಿಸಿಕೊಳ್ಳುವವರು’ ಎಂದು ಗೆಳೆಯ ರಂಗಕರ್ಮಿ ಶಿರಾ ಸೋಮಶೇಖರ್ ನೆನಪಿಸಿಕೊಳ್ಳುತ್ತಾನೆ. ಅವರನ್ನು ಮೈಸೂರಿನ ರಸ್ತೆಗಳಲ್ಲಿ ಮುಂದೆ ಎಂದೆಂದೂ ಕಾಣಲಾಗುವುದಿಲ್ಲ. ಹೋರಾಟಗಾರರ ಎದೆಯಲ್ಲಿ ಅವರು ಸದಾ ಜೀವಂತ.

ವಿನೋದ್ ಮಹದೇವಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....