Homeಮುಖಪುಟಜನಪರ ಹೋರಾಟಗಳ ಸಂಗಾತಿ ಮೈಸೂರಿನ ಮರಿದಂಡಯ್ಯ ಬುದ್ಧ ನಿಧನ

ಜನಪರ ಹೋರಾಟಗಳ ಸಂಗಾತಿ ಮೈಸೂರಿನ ಮರಿದಂಡಯ್ಯ ಬುದ್ಧ ನಿಧನ

- Advertisement -
- Advertisement -

ಚಳವಳಿಗಳು ನದಿಯಂತೆ. ಕಾಲದ ಅಡೆತಡೆಗಳನ್ನು ಎದುರಿಸುತ್ತ ನಿಲ್ಲದೇ ಹರಿಯುತ್ತಿರಬೇಕು. ಚಳವಳಿ ಎಂದೂ ನಿಂತ ನೀರಲ್ಲ. ಧುಮ್ಮಿಕ್ಕಿ ಹರಿವ ವರ್ಷಧಾರೆ. ನಿರಂತರ ಹರಿವ ಹೋರಾಟದ ನದಿಯಲ್ಲಿ ಸಹಸ್ರ ಸಹಸ್ರ ಮಂದಿ ಈಜಿದ್ದಾರೆ. ಗುರಿ ಮುಟ್ಟುವ ಮುನ್ನವೇ ಅರ್ಧದಲ್ಲಿಯೇ ನಿರ್ಗಮಿಸಿದ ಚಳವಳಿಗಾರರೇ ಬಹುತೇಕರು. ಅಂತವರ ಸಾಲಿಗೆ ಮತ್ತೊಬ್ಬ ಹೋರಾಟಗಾರ ಸೇರಿದ್ದಾರೆ. ಮೂರುವರೆ ದಶಕಗಳು ಸಾಮಾಜಿಕ ಶುದ್ಧೀಕರಣ ಕ್ರಿಯೆಯಲ್ಲಿ ನಿರತರಾಗಿದ್ದ ಮೈಸೂರಿನ ಜನಪರ ಚಳವಳಿಗಳ ಸಂಗಾತಿ ಮರಿದಂಡಯ್ಯ ಬುದ್ಧ, ಮಧ್ಯದಲ್ಲಿಯೇ ನಿರ್ಗಮಿಸಿ ಸಂಗಾತಿಗಳಲ್ಲಿ ಶೂನ್ಯಭಾವ ತುಂಬಿದ್ದಾರೆ.

ಮೈಸೂರಿನ ಎಲ್ಲಾ ಮಾದರಿಯ ಚಳವಳಿಗಳಲ್ಲಿ, ಎಡಪಂಥೀಯ, ಪ್ರಗತಿಪರ ನಿಲುವಿನ ಸಮಾರಂಭಗಳಲ್ಲಿ ಕಾಣುತ್ತಿದ್ದವರು ಮರಿದಂಡಯ್ಯ ಬುದ್ಧ. ಪತ್ರಿಕಾ ಕಚೇರಿಗಳಿಗೆ ಒಂದಿಲ್ಲೊಂದು ಪತ್ರಿಕಾ ಹೇಳಿಕೆ ಹಿಡಿದು ಬರುತ್ತಿದ್ದ ಅವರು ಮಿತಭಾಷಿ. ಸಾರ್ವಜನಿಕ ವೇದಿಕೆಗಳಲ್ಲಿ ಮಾತಾಡಿದ್ದು ಇಲ್ಲವೇ ಇಲ್ಲ. ಪ್ರಚಾರಕ್ಕೆಂದೂ ಹಪಾಹಪಿಸಿದವರಲ್ಲ. ಪ್ರತಿಭಟನೆಗಳಲ್ಲಿ ತಮ್ಮ ಹೆಸರು ಬರೆದುಕೊಳ್ಳುವಂತೆ ಒಮ್ಮೆಯೂ ಹೇಳಿದವರಲ್ಲ. ಆದರೆ ಮೈಸೂರಿನ ಎಲ್ಲಾ ಚಳವಳಿಗಳಲ್ಲಿ ಅವರ ದನಿ ಇದ್ದೇ ಇರುತ್ತಿತ್ತು.

ಎತ್ತರ ನಿಲುವು, ಪೈಲ್ವಾನನ ದೇಹಾಕೃತಿ, ಸದಾ ಬಿಳಿಯ ಜುಬ್ಬಾ ಧರಿಸುತ್ತಿದ್ದ ಅವರ ಹೆಸರೇ ವಿಚಿತ್ರ ಅನಿಸಿತ್ತು. ಮರಿದಂಡಯ್ಯ ಬುದ್ಧ ಅವರ ಹೆಸರು. ಮಾನವತಾವಾದಿ ಬುದ್ಧನ ಹೆಸರನ್ನು ತಮ್ಮ ಹೆಸರ ಜೊತೆ ಇಟ್ಟುಕೊಂಡಿದ್ದ ಅವರು ಸಮಾಜದ ತರತಮಗಳ ಬಗೆಗೆ ನೋಯುತ್ತ ಮೌನಿಯಾಗಿರುವಂತೆ ಕಾಣುತ್ತಿದ್ದರು. ಅನ್ಯಾಯದ ವಿರುದ್ಧದ ಹೆಜ್ಜೆ ಹಾಕುತ್ತಿದ್ದ ಎಲ್ಲರೊಂದಿಗೂ ನಡೆದರು. ನಡೆಯುತ್ತ ನಡೆಯುತ್ತ ದಣಿದು ಅನಾರೋಗ್ಯ ಪೀಡಿತರಾಗಿ ತಮ್ಮ ನಡಿಗೆ ನಿಲ್ಲಿಸಿಬಿಟ್ಟರು.

ಇತ್ತೀಚೆಗೆ ಗುರುಗಳಾದ ನಾ.ದಿವಾಕರ ಅವರು ‘ಮರಿದಂಡಯ್ಯ ಬುದ್ಧ ತೀವ್ರ ಅನಾರೋಗ್ಯದಲ್ಲಿದ್ದಾರೆ ಎಂದು ತಿಳಿಸಿದ್ದರು. ಅದಾಗಿ ಎರಡು ದಿನಗಳಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ. ಸಮಾಜದ ತರಮತಗಳ ವಿರುದ್ಧ ಹೋರಾಡುತ್ತಿದ್ದ ಅವರು ತಮ್ಮ ದೇಹದ ವಿರುದ್ಧ ಹೋರಾಡಿ ಗೆಲ್ಲಲಾಗದಿದ್ದು ನೋವಿನ ಸಂಗತಿ.

“ದಲಿತ ಚಳುವಳಿಯಲ್ಲಿ, ಕಮ್ಯುನಿಸ್ಟ್ ಚಳುವಳಿಯಲ್ಲಿ, ಮಾನವ ಹಕ್ಕು ಹೋರಾಟಗಳಲ್ಲಿ, ಎಲ್ಲ ರೀತಿಯ ಸಾಮಾಜಿಕ ಚಳುವಳಿಗಳಲ್ಲಿ ಸಕ್ರಿಯವಾಗಿದ್ದ ಮರಿದಂಡಯ್ಯ ಬುದ್ಧ ತಮ್ಮ ಸರಳ ಜೀವನದಿಂದಲೇ ಜನಾನುರಾಗಿಯಾಗಿದ್ದರು. ಕೂಲಿಕಾರ್ಮಿಕ ಸಂಘದ ಮೂಲಕ ಮೈಸೂರಿನ ಸಾವಿರಾರು ಕೂಲಿ ಕಾರ್ಮಿಕರಿಗೆ, ಪೌರ ಕಾರ್ಮಿಕರಿಗೆ ಆಸರೆಯಾಗಿದ್ದ ಮರಿದಂಡಯ್ಯ ಬುದ್ಧ ಕಾಯಕ ಜೀವಿ. ನಡೆದಾಡುವ ಚೇತನ. ಸ್ವಂತ ವಾಹನ ಇಲ್ಲದೆಯೇ ಅಗತ್ಯವಿದ್ದೆಡೆ, ಅವಶ್ಯಕತೆ ಇದ್ದವರಿಗೆ ಸಹಾಯ ಹಸ್ತ ನೀಡುತ್ತಲೇ ತಮ್ಮ ಬದುಕು ಸವೆಸಿದ ಬುದ್ಧ ಸಾಂಸಾರಿಕ ಜೀವನಕ್ಕಿಂತಲೂ ಸಮಾಜಮುಖಿಯಾಗಿಯೇ ಬದುಕಲು ಇಚ್ಚಿಸಿದವರು” ಎಂದು ಚಿಂತಕರಾದ ನಾ ದಿವಾಕರ್‌ರವರು ನುಡಿನಮನ ಸಲ್ಲಿಸಿದ್ದಾರೆ.

‘ಓಹೊ… ದಿನಾ ನೋಡ್ತಾ ಇದ್ದೆ ಇವರನ್ನ ಒಂದು ಜುಬ್ಬ ಹಾಕೊಂಡು ಓಡಾಡೋರು, ಪ್ರತಿಭಟನೆಗಳಲ್ಲಿ ಕಾಣಿಸಿಕೊಳ್ಳುವವರು’ ಎಂದು ಗೆಳೆಯ ರಂಗಕರ್ಮಿ ಶಿರಾ ಸೋಮಶೇಖರ್ ನೆನಪಿಸಿಕೊಳ್ಳುತ್ತಾನೆ. ಅವರನ್ನು ಮೈಸೂರಿನ ರಸ್ತೆಗಳಲ್ಲಿ ಮುಂದೆ ಎಂದೆಂದೂ ಕಾಣಲಾಗುವುದಿಲ್ಲ. ಹೋರಾಟಗಾರರ ಎದೆಯಲ್ಲಿ ಅವರು ಸದಾ ಜೀವಂತ.

ವಿನೋದ್ ಮಹದೇವಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...