Homeಮುಖಪುಟಜನಪರ ಹೋರಾಟಗಳ ಸಂಗಾತಿ ಮೈಸೂರಿನ ಮರಿದಂಡಯ್ಯ ಬುದ್ಧ ನಿಧನ

ಜನಪರ ಹೋರಾಟಗಳ ಸಂಗಾತಿ ಮೈಸೂರಿನ ಮರಿದಂಡಯ್ಯ ಬುದ್ಧ ನಿಧನ

- Advertisement -
- Advertisement -

ಚಳವಳಿಗಳು ನದಿಯಂತೆ. ಕಾಲದ ಅಡೆತಡೆಗಳನ್ನು ಎದುರಿಸುತ್ತ ನಿಲ್ಲದೇ ಹರಿಯುತ್ತಿರಬೇಕು. ಚಳವಳಿ ಎಂದೂ ನಿಂತ ನೀರಲ್ಲ. ಧುಮ್ಮಿಕ್ಕಿ ಹರಿವ ವರ್ಷಧಾರೆ. ನಿರಂತರ ಹರಿವ ಹೋರಾಟದ ನದಿಯಲ್ಲಿ ಸಹಸ್ರ ಸಹಸ್ರ ಮಂದಿ ಈಜಿದ್ದಾರೆ. ಗುರಿ ಮುಟ್ಟುವ ಮುನ್ನವೇ ಅರ್ಧದಲ್ಲಿಯೇ ನಿರ್ಗಮಿಸಿದ ಚಳವಳಿಗಾರರೇ ಬಹುತೇಕರು. ಅಂತವರ ಸಾಲಿಗೆ ಮತ್ತೊಬ್ಬ ಹೋರಾಟಗಾರ ಸೇರಿದ್ದಾರೆ. ಮೂರುವರೆ ದಶಕಗಳು ಸಾಮಾಜಿಕ ಶುದ್ಧೀಕರಣ ಕ್ರಿಯೆಯಲ್ಲಿ ನಿರತರಾಗಿದ್ದ ಮೈಸೂರಿನ ಜನಪರ ಚಳವಳಿಗಳ ಸಂಗಾತಿ ಮರಿದಂಡಯ್ಯ ಬುದ್ಧ, ಮಧ್ಯದಲ್ಲಿಯೇ ನಿರ್ಗಮಿಸಿ ಸಂಗಾತಿಗಳಲ್ಲಿ ಶೂನ್ಯಭಾವ ತುಂಬಿದ್ದಾರೆ.

ಮೈಸೂರಿನ ಎಲ್ಲಾ ಮಾದರಿಯ ಚಳವಳಿಗಳಲ್ಲಿ, ಎಡಪಂಥೀಯ, ಪ್ರಗತಿಪರ ನಿಲುವಿನ ಸಮಾರಂಭಗಳಲ್ಲಿ ಕಾಣುತ್ತಿದ್ದವರು ಮರಿದಂಡಯ್ಯ ಬುದ್ಧ. ಪತ್ರಿಕಾ ಕಚೇರಿಗಳಿಗೆ ಒಂದಿಲ್ಲೊಂದು ಪತ್ರಿಕಾ ಹೇಳಿಕೆ ಹಿಡಿದು ಬರುತ್ತಿದ್ದ ಅವರು ಮಿತಭಾಷಿ. ಸಾರ್ವಜನಿಕ ವೇದಿಕೆಗಳಲ್ಲಿ ಮಾತಾಡಿದ್ದು ಇಲ್ಲವೇ ಇಲ್ಲ. ಪ್ರಚಾರಕ್ಕೆಂದೂ ಹಪಾಹಪಿಸಿದವರಲ್ಲ. ಪ್ರತಿಭಟನೆಗಳಲ್ಲಿ ತಮ್ಮ ಹೆಸರು ಬರೆದುಕೊಳ್ಳುವಂತೆ ಒಮ್ಮೆಯೂ ಹೇಳಿದವರಲ್ಲ. ಆದರೆ ಮೈಸೂರಿನ ಎಲ್ಲಾ ಚಳವಳಿಗಳಲ್ಲಿ ಅವರ ದನಿ ಇದ್ದೇ ಇರುತ್ತಿತ್ತು.

ಎತ್ತರ ನಿಲುವು, ಪೈಲ್ವಾನನ ದೇಹಾಕೃತಿ, ಸದಾ ಬಿಳಿಯ ಜುಬ್ಬಾ ಧರಿಸುತ್ತಿದ್ದ ಅವರ ಹೆಸರೇ ವಿಚಿತ್ರ ಅನಿಸಿತ್ತು. ಮರಿದಂಡಯ್ಯ ಬುದ್ಧ ಅವರ ಹೆಸರು. ಮಾನವತಾವಾದಿ ಬುದ್ಧನ ಹೆಸರನ್ನು ತಮ್ಮ ಹೆಸರ ಜೊತೆ ಇಟ್ಟುಕೊಂಡಿದ್ದ ಅವರು ಸಮಾಜದ ತರತಮಗಳ ಬಗೆಗೆ ನೋಯುತ್ತ ಮೌನಿಯಾಗಿರುವಂತೆ ಕಾಣುತ್ತಿದ್ದರು. ಅನ್ಯಾಯದ ವಿರುದ್ಧದ ಹೆಜ್ಜೆ ಹಾಕುತ್ತಿದ್ದ ಎಲ್ಲರೊಂದಿಗೂ ನಡೆದರು. ನಡೆಯುತ್ತ ನಡೆಯುತ್ತ ದಣಿದು ಅನಾರೋಗ್ಯ ಪೀಡಿತರಾಗಿ ತಮ್ಮ ನಡಿಗೆ ನಿಲ್ಲಿಸಿಬಿಟ್ಟರು.

ಇತ್ತೀಚೆಗೆ ಗುರುಗಳಾದ ನಾ.ದಿವಾಕರ ಅವರು ‘ಮರಿದಂಡಯ್ಯ ಬುದ್ಧ ತೀವ್ರ ಅನಾರೋಗ್ಯದಲ್ಲಿದ್ದಾರೆ ಎಂದು ತಿಳಿಸಿದ್ದರು. ಅದಾಗಿ ಎರಡು ದಿನಗಳಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ. ಸಮಾಜದ ತರಮತಗಳ ವಿರುದ್ಧ ಹೋರಾಡುತ್ತಿದ್ದ ಅವರು ತಮ್ಮ ದೇಹದ ವಿರುದ್ಧ ಹೋರಾಡಿ ಗೆಲ್ಲಲಾಗದಿದ್ದು ನೋವಿನ ಸಂಗತಿ.

“ದಲಿತ ಚಳುವಳಿಯಲ್ಲಿ, ಕಮ್ಯುನಿಸ್ಟ್ ಚಳುವಳಿಯಲ್ಲಿ, ಮಾನವ ಹಕ್ಕು ಹೋರಾಟಗಳಲ್ಲಿ, ಎಲ್ಲ ರೀತಿಯ ಸಾಮಾಜಿಕ ಚಳುವಳಿಗಳಲ್ಲಿ ಸಕ್ರಿಯವಾಗಿದ್ದ ಮರಿದಂಡಯ್ಯ ಬುದ್ಧ ತಮ್ಮ ಸರಳ ಜೀವನದಿಂದಲೇ ಜನಾನುರಾಗಿಯಾಗಿದ್ದರು. ಕೂಲಿಕಾರ್ಮಿಕ ಸಂಘದ ಮೂಲಕ ಮೈಸೂರಿನ ಸಾವಿರಾರು ಕೂಲಿ ಕಾರ್ಮಿಕರಿಗೆ, ಪೌರ ಕಾರ್ಮಿಕರಿಗೆ ಆಸರೆಯಾಗಿದ್ದ ಮರಿದಂಡಯ್ಯ ಬುದ್ಧ ಕಾಯಕ ಜೀವಿ. ನಡೆದಾಡುವ ಚೇತನ. ಸ್ವಂತ ವಾಹನ ಇಲ್ಲದೆಯೇ ಅಗತ್ಯವಿದ್ದೆಡೆ, ಅವಶ್ಯಕತೆ ಇದ್ದವರಿಗೆ ಸಹಾಯ ಹಸ್ತ ನೀಡುತ್ತಲೇ ತಮ್ಮ ಬದುಕು ಸವೆಸಿದ ಬುದ್ಧ ಸಾಂಸಾರಿಕ ಜೀವನಕ್ಕಿಂತಲೂ ಸಮಾಜಮುಖಿಯಾಗಿಯೇ ಬದುಕಲು ಇಚ್ಚಿಸಿದವರು” ಎಂದು ಚಿಂತಕರಾದ ನಾ ದಿವಾಕರ್‌ರವರು ನುಡಿನಮನ ಸಲ್ಲಿಸಿದ್ದಾರೆ.

‘ಓಹೊ… ದಿನಾ ನೋಡ್ತಾ ಇದ್ದೆ ಇವರನ್ನ ಒಂದು ಜುಬ್ಬ ಹಾಕೊಂಡು ಓಡಾಡೋರು, ಪ್ರತಿಭಟನೆಗಳಲ್ಲಿ ಕಾಣಿಸಿಕೊಳ್ಳುವವರು’ ಎಂದು ಗೆಳೆಯ ರಂಗಕರ್ಮಿ ಶಿರಾ ಸೋಮಶೇಖರ್ ನೆನಪಿಸಿಕೊಳ್ಳುತ್ತಾನೆ. ಅವರನ್ನು ಮೈಸೂರಿನ ರಸ್ತೆಗಳಲ್ಲಿ ಮುಂದೆ ಎಂದೆಂದೂ ಕಾಣಲಾಗುವುದಿಲ್ಲ. ಹೋರಾಟಗಾರರ ಎದೆಯಲ್ಲಿ ಅವರು ಸದಾ ಜೀವಂತ.

ವಿನೋದ್ ಮಹದೇವಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...