Homeಮುಖಪುಟಜನಪರ ಹೋರಾಟಗಳ ಸಂಗಾತಿ ಮೈಸೂರಿನ ಮರಿದಂಡಯ್ಯ ಬುದ್ಧ ನಿಧನ

ಜನಪರ ಹೋರಾಟಗಳ ಸಂಗಾತಿ ಮೈಸೂರಿನ ಮರಿದಂಡಯ್ಯ ಬುದ್ಧ ನಿಧನ

- Advertisement -
- Advertisement -

ಚಳವಳಿಗಳು ನದಿಯಂತೆ. ಕಾಲದ ಅಡೆತಡೆಗಳನ್ನು ಎದುರಿಸುತ್ತ ನಿಲ್ಲದೇ ಹರಿಯುತ್ತಿರಬೇಕು. ಚಳವಳಿ ಎಂದೂ ನಿಂತ ನೀರಲ್ಲ. ಧುಮ್ಮಿಕ್ಕಿ ಹರಿವ ವರ್ಷಧಾರೆ. ನಿರಂತರ ಹರಿವ ಹೋರಾಟದ ನದಿಯಲ್ಲಿ ಸಹಸ್ರ ಸಹಸ್ರ ಮಂದಿ ಈಜಿದ್ದಾರೆ. ಗುರಿ ಮುಟ್ಟುವ ಮುನ್ನವೇ ಅರ್ಧದಲ್ಲಿಯೇ ನಿರ್ಗಮಿಸಿದ ಚಳವಳಿಗಾರರೇ ಬಹುತೇಕರು. ಅಂತವರ ಸಾಲಿಗೆ ಮತ್ತೊಬ್ಬ ಹೋರಾಟಗಾರ ಸೇರಿದ್ದಾರೆ. ಮೂರುವರೆ ದಶಕಗಳು ಸಾಮಾಜಿಕ ಶುದ್ಧೀಕರಣ ಕ್ರಿಯೆಯಲ್ಲಿ ನಿರತರಾಗಿದ್ದ ಮೈಸೂರಿನ ಜನಪರ ಚಳವಳಿಗಳ ಸಂಗಾತಿ ಮರಿದಂಡಯ್ಯ ಬುದ್ಧ, ಮಧ್ಯದಲ್ಲಿಯೇ ನಿರ್ಗಮಿಸಿ ಸಂಗಾತಿಗಳಲ್ಲಿ ಶೂನ್ಯಭಾವ ತುಂಬಿದ್ದಾರೆ.

ಮೈಸೂರಿನ ಎಲ್ಲಾ ಮಾದರಿಯ ಚಳವಳಿಗಳಲ್ಲಿ, ಎಡಪಂಥೀಯ, ಪ್ರಗತಿಪರ ನಿಲುವಿನ ಸಮಾರಂಭಗಳಲ್ಲಿ ಕಾಣುತ್ತಿದ್ದವರು ಮರಿದಂಡಯ್ಯ ಬುದ್ಧ. ಪತ್ರಿಕಾ ಕಚೇರಿಗಳಿಗೆ ಒಂದಿಲ್ಲೊಂದು ಪತ್ರಿಕಾ ಹೇಳಿಕೆ ಹಿಡಿದು ಬರುತ್ತಿದ್ದ ಅವರು ಮಿತಭಾಷಿ. ಸಾರ್ವಜನಿಕ ವೇದಿಕೆಗಳಲ್ಲಿ ಮಾತಾಡಿದ್ದು ಇಲ್ಲವೇ ಇಲ್ಲ. ಪ್ರಚಾರಕ್ಕೆಂದೂ ಹಪಾಹಪಿಸಿದವರಲ್ಲ. ಪ್ರತಿಭಟನೆಗಳಲ್ಲಿ ತಮ್ಮ ಹೆಸರು ಬರೆದುಕೊಳ್ಳುವಂತೆ ಒಮ್ಮೆಯೂ ಹೇಳಿದವರಲ್ಲ. ಆದರೆ ಮೈಸೂರಿನ ಎಲ್ಲಾ ಚಳವಳಿಗಳಲ್ಲಿ ಅವರ ದನಿ ಇದ್ದೇ ಇರುತ್ತಿತ್ತು.

ಎತ್ತರ ನಿಲುವು, ಪೈಲ್ವಾನನ ದೇಹಾಕೃತಿ, ಸದಾ ಬಿಳಿಯ ಜುಬ್ಬಾ ಧರಿಸುತ್ತಿದ್ದ ಅವರ ಹೆಸರೇ ವಿಚಿತ್ರ ಅನಿಸಿತ್ತು. ಮರಿದಂಡಯ್ಯ ಬುದ್ಧ ಅವರ ಹೆಸರು. ಮಾನವತಾವಾದಿ ಬುದ್ಧನ ಹೆಸರನ್ನು ತಮ್ಮ ಹೆಸರ ಜೊತೆ ಇಟ್ಟುಕೊಂಡಿದ್ದ ಅವರು ಸಮಾಜದ ತರತಮಗಳ ಬಗೆಗೆ ನೋಯುತ್ತ ಮೌನಿಯಾಗಿರುವಂತೆ ಕಾಣುತ್ತಿದ್ದರು. ಅನ್ಯಾಯದ ವಿರುದ್ಧದ ಹೆಜ್ಜೆ ಹಾಕುತ್ತಿದ್ದ ಎಲ್ಲರೊಂದಿಗೂ ನಡೆದರು. ನಡೆಯುತ್ತ ನಡೆಯುತ್ತ ದಣಿದು ಅನಾರೋಗ್ಯ ಪೀಡಿತರಾಗಿ ತಮ್ಮ ನಡಿಗೆ ನಿಲ್ಲಿಸಿಬಿಟ್ಟರು.

ಇತ್ತೀಚೆಗೆ ಗುರುಗಳಾದ ನಾ.ದಿವಾಕರ ಅವರು ‘ಮರಿದಂಡಯ್ಯ ಬುದ್ಧ ತೀವ್ರ ಅನಾರೋಗ್ಯದಲ್ಲಿದ್ದಾರೆ ಎಂದು ತಿಳಿಸಿದ್ದರು. ಅದಾಗಿ ಎರಡು ದಿನಗಳಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ. ಸಮಾಜದ ತರಮತಗಳ ವಿರುದ್ಧ ಹೋರಾಡುತ್ತಿದ್ದ ಅವರು ತಮ್ಮ ದೇಹದ ವಿರುದ್ಧ ಹೋರಾಡಿ ಗೆಲ್ಲಲಾಗದಿದ್ದು ನೋವಿನ ಸಂಗತಿ.

“ದಲಿತ ಚಳುವಳಿಯಲ್ಲಿ, ಕಮ್ಯುನಿಸ್ಟ್ ಚಳುವಳಿಯಲ್ಲಿ, ಮಾನವ ಹಕ್ಕು ಹೋರಾಟಗಳಲ್ಲಿ, ಎಲ್ಲ ರೀತಿಯ ಸಾಮಾಜಿಕ ಚಳುವಳಿಗಳಲ್ಲಿ ಸಕ್ರಿಯವಾಗಿದ್ದ ಮರಿದಂಡಯ್ಯ ಬುದ್ಧ ತಮ್ಮ ಸರಳ ಜೀವನದಿಂದಲೇ ಜನಾನುರಾಗಿಯಾಗಿದ್ದರು. ಕೂಲಿಕಾರ್ಮಿಕ ಸಂಘದ ಮೂಲಕ ಮೈಸೂರಿನ ಸಾವಿರಾರು ಕೂಲಿ ಕಾರ್ಮಿಕರಿಗೆ, ಪೌರ ಕಾರ್ಮಿಕರಿಗೆ ಆಸರೆಯಾಗಿದ್ದ ಮರಿದಂಡಯ್ಯ ಬುದ್ಧ ಕಾಯಕ ಜೀವಿ. ನಡೆದಾಡುವ ಚೇತನ. ಸ್ವಂತ ವಾಹನ ಇಲ್ಲದೆಯೇ ಅಗತ್ಯವಿದ್ದೆಡೆ, ಅವಶ್ಯಕತೆ ಇದ್ದವರಿಗೆ ಸಹಾಯ ಹಸ್ತ ನೀಡುತ್ತಲೇ ತಮ್ಮ ಬದುಕು ಸವೆಸಿದ ಬುದ್ಧ ಸಾಂಸಾರಿಕ ಜೀವನಕ್ಕಿಂತಲೂ ಸಮಾಜಮುಖಿಯಾಗಿಯೇ ಬದುಕಲು ಇಚ್ಚಿಸಿದವರು” ಎಂದು ಚಿಂತಕರಾದ ನಾ ದಿವಾಕರ್‌ರವರು ನುಡಿನಮನ ಸಲ್ಲಿಸಿದ್ದಾರೆ.

‘ಓಹೊ… ದಿನಾ ನೋಡ್ತಾ ಇದ್ದೆ ಇವರನ್ನ ಒಂದು ಜುಬ್ಬ ಹಾಕೊಂಡು ಓಡಾಡೋರು, ಪ್ರತಿಭಟನೆಗಳಲ್ಲಿ ಕಾಣಿಸಿಕೊಳ್ಳುವವರು’ ಎಂದು ಗೆಳೆಯ ರಂಗಕರ್ಮಿ ಶಿರಾ ಸೋಮಶೇಖರ್ ನೆನಪಿಸಿಕೊಳ್ಳುತ್ತಾನೆ. ಅವರನ್ನು ಮೈಸೂರಿನ ರಸ್ತೆಗಳಲ್ಲಿ ಮುಂದೆ ಎಂದೆಂದೂ ಕಾಣಲಾಗುವುದಿಲ್ಲ. ಹೋರಾಟಗಾರರ ಎದೆಯಲ್ಲಿ ಅವರು ಸದಾ ಜೀವಂತ.

ವಿನೋದ್ ಮಹದೇವಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...