Homeಮುಖಪುಟಜನಪರ ಹೋರಾಟಗಳ ಸಂಗಾತಿ ಮೈಸೂರಿನ ಮರಿದಂಡಯ್ಯ ಬುದ್ಧ ನಿಧನ

ಜನಪರ ಹೋರಾಟಗಳ ಸಂಗಾತಿ ಮೈಸೂರಿನ ಮರಿದಂಡಯ್ಯ ಬುದ್ಧ ನಿಧನ

- Advertisement -
- Advertisement -

ಚಳವಳಿಗಳು ನದಿಯಂತೆ. ಕಾಲದ ಅಡೆತಡೆಗಳನ್ನು ಎದುರಿಸುತ್ತ ನಿಲ್ಲದೇ ಹರಿಯುತ್ತಿರಬೇಕು. ಚಳವಳಿ ಎಂದೂ ನಿಂತ ನೀರಲ್ಲ. ಧುಮ್ಮಿಕ್ಕಿ ಹರಿವ ವರ್ಷಧಾರೆ. ನಿರಂತರ ಹರಿವ ಹೋರಾಟದ ನದಿಯಲ್ಲಿ ಸಹಸ್ರ ಸಹಸ್ರ ಮಂದಿ ಈಜಿದ್ದಾರೆ. ಗುರಿ ಮುಟ್ಟುವ ಮುನ್ನವೇ ಅರ್ಧದಲ್ಲಿಯೇ ನಿರ್ಗಮಿಸಿದ ಚಳವಳಿಗಾರರೇ ಬಹುತೇಕರು. ಅಂತವರ ಸಾಲಿಗೆ ಮತ್ತೊಬ್ಬ ಹೋರಾಟಗಾರ ಸೇರಿದ್ದಾರೆ. ಮೂರುವರೆ ದಶಕಗಳು ಸಾಮಾಜಿಕ ಶುದ್ಧೀಕರಣ ಕ್ರಿಯೆಯಲ್ಲಿ ನಿರತರಾಗಿದ್ದ ಮೈಸೂರಿನ ಜನಪರ ಚಳವಳಿಗಳ ಸಂಗಾತಿ ಮರಿದಂಡಯ್ಯ ಬುದ್ಧ, ಮಧ್ಯದಲ್ಲಿಯೇ ನಿರ್ಗಮಿಸಿ ಸಂಗಾತಿಗಳಲ್ಲಿ ಶೂನ್ಯಭಾವ ತುಂಬಿದ್ದಾರೆ.

ಮೈಸೂರಿನ ಎಲ್ಲಾ ಮಾದರಿಯ ಚಳವಳಿಗಳಲ್ಲಿ, ಎಡಪಂಥೀಯ, ಪ್ರಗತಿಪರ ನಿಲುವಿನ ಸಮಾರಂಭಗಳಲ್ಲಿ ಕಾಣುತ್ತಿದ್ದವರು ಮರಿದಂಡಯ್ಯ ಬುದ್ಧ. ಪತ್ರಿಕಾ ಕಚೇರಿಗಳಿಗೆ ಒಂದಿಲ್ಲೊಂದು ಪತ್ರಿಕಾ ಹೇಳಿಕೆ ಹಿಡಿದು ಬರುತ್ತಿದ್ದ ಅವರು ಮಿತಭಾಷಿ. ಸಾರ್ವಜನಿಕ ವೇದಿಕೆಗಳಲ್ಲಿ ಮಾತಾಡಿದ್ದು ಇಲ್ಲವೇ ಇಲ್ಲ. ಪ್ರಚಾರಕ್ಕೆಂದೂ ಹಪಾಹಪಿಸಿದವರಲ್ಲ. ಪ್ರತಿಭಟನೆಗಳಲ್ಲಿ ತಮ್ಮ ಹೆಸರು ಬರೆದುಕೊಳ್ಳುವಂತೆ ಒಮ್ಮೆಯೂ ಹೇಳಿದವರಲ್ಲ. ಆದರೆ ಮೈಸೂರಿನ ಎಲ್ಲಾ ಚಳವಳಿಗಳಲ್ಲಿ ಅವರ ದನಿ ಇದ್ದೇ ಇರುತ್ತಿತ್ತು.

ಎತ್ತರ ನಿಲುವು, ಪೈಲ್ವಾನನ ದೇಹಾಕೃತಿ, ಸದಾ ಬಿಳಿಯ ಜುಬ್ಬಾ ಧರಿಸುತ್ತಿದ್ದ ಅವರ ಹೆಸರೇ ವಿಚಿತ್ರ ಅನಿಸಿತ್ತು. ಮರಿದಂಡಯ್ಯ ಬುದ್ಧ ಅವರ ಹೆಸರು. ಮಾನವತಾವಾದಿ ಬುದ್ಧನ ಹೆಸರನ್ನು ತಮ್ಮ ಹೆಸರ ಜೊತೆ ಇಟ್ಟುಕೊಂಡಿದ್ದ ಅವರು ಸಮಾಜದ ತರತಮಗಳ ಬಗೆಗೆ ನೋಯುತ್ತ ಮೌನಿಯಾಗಿರುವಂತೆ ಕಾಣುತ್ತಿದ್ದರು. ಅನ್ಯಾಯದ ವಿರುದ್ಧದ ಹೆಜ್ಜೆ ಹಾಕುತ್ತಿದ್ದ ಎಲ್ಲರೊಂದಿಗೂ ನಡೆದರು. ನಡೆಯುತ್ತ ನಡೆಯುತ್ತ ದಣಿದು ಅನಾರೋಗ್ಯ ಪೀಡಿತರಾಗಿ ತಮ್ಮ ನಡಿಗೆ ನಿಲ್ಲಿಸಿಬಿಟ್ಟರು.

ಇತ್ತೀಚೆಗೆ ಗುರುಗಳಾದ ನಾ.ದಿವಾಕರ ಅವರು ‘ಮರಿದಂಡಯ್ಯ ಬುದ್ಧ ತೀವ್ರ ಅನಾರೋಗ್ಯದಲ್ಲಿದ್ದಾರೆ ಎಂದು ತಿಳಿಸಿದ್ದರು. ಅದಾಗಿ ಎರಡು ದಿನಗಳಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ. ಸಮಾಜದ ತರಮತಗಳ ವಿರುದ್ಧ ಹೋರಾಡುತ್ತಿದ್ದ ಅವರು ತಮ್ಮ ದೇಹದ ವಿರುದ್ಧ ಹೋರಾಡಿ ಗೆಲ್ಲಲಾಗದಿದ್ದು ನೋವಿನ ಸಂಗತಿ.

“ದಲಿತ ಚಳುವಳಿಯಲ್ಲಿ, ಕಮ್ಯುನಿಸ್ಟ್ ಚಳುವಳಿಯಲ್ಲಿ, ಮಾನವ ಹಕ್ಕು ಹೋರಾಟಗಳಲ್ಲಿ, ಎಲ್ಲ ರೀತಿಯ ಸಾಮಾಜಿಕ ಚಳುವಳಿಗಳಲ್ಲಿ ಸಕ್ರಿಯವಾಗಿದ್ದ ಮರಿದಂಡಯ್ಯ ಬುದ್ಧ ತಮ್ಮ ಸರಳ ಜೀವನದಿಂದಲೇ ಜನಾನುರಾಗಿಯಾಗಿದ್ದರು. ಕೂಲಿಕಾರ್ಮಿಕ ಸಂಘದ ಮೂಲಕ ಮೈಸೂರಿನ ಸಾವಿರಾರು ಕೂಲಿ ಕಾರ್ಮಿಕರಿಗೆ, ಪೌರ ಕಾರ್ಮಿಕರಿಗೆ ಆಸರೆಯಾಗಿದ್ದ ಮರಿದಂಡಯ್ಯ ಬುದ್ಧ ಕಾಯಕ ಜೀವಿ. ನಡೆದಾಡುವ ಚೇತನ. ಸ್ವಂತ ವಾಹನ ಇಲ್ಲದೆಯೇ ಅಗತ್ಯವಿದ್ದೆಡೆ, ಅವಶ್ಯಕತೆ ಇದ್ದವರಿಗೆ ಸಹಾಯ ಹಸ್ತ ನೀಡುತ್ತಲೇ ತಮ್ಮ ಬದುಕು ಸವೆಸಿದ ಬುದ್ಧ ಸಾಂಸಾರಿಕ ಜೀವನಕ್ಕಿಂತಲೂ ಸಮಾಜಮುಖಿಯಾಗಿಯೇ ಬದುಕಲು ಇಚ್ಚಿಸಿದವರು” ಎಂದು ಚಿಂತಕರಾದ ನಾ ದಿವಾಕರ್‌ರವರು ನುಡಿನಮನ ಸಲ್ಲಿಸಿದ್ದಾರೆ.

‘ಓಹೊ… ದಿನಾ ನೋಡ್ತಾ ಇದ್ದೆ ಇವರನ್ನ ಒಂದು ಜುಬ್ಬ ಹಾಕೊಂಡು ಓಡಾಡೋರು, ಪ್ರತಿಭಟನೆಗಳಲ್ಲಿ ಕಾಣಿಸಿಕೊಳ್ಳುವವರು’ ಎಂದು ಗೆಳೆಯ ರಂಗಕರ್ಮಿ ಶಿರಾ ಸೋಮಶೇಖರ್ ನೆನಪಿಸಿಕೊಳ್ಳುತ್ತಾನೆ. ಅವರನ್ನು ಮೈಸೂರಿನ ರಸ್ತೆಗಳಲ್ಲಿ ಮುಂದೆ ಎಂದೆಂದೂ ಕಾಣಲಾಗುವುದಿಲ್ಲ. ಹೋರಾಟಗಾರರ ಎದೆಯಲ್ಲಿ ಅವರು ಸದಾ ಜೀವಂತ.

ವಿನೋದ್ ಮಹದೇವಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...