Homeಕರ್ನಾಟಕಸುಳ್ಳು ಕೇಸುಗಳಿಂದ ಸಂಪೂರ್ಣ ಖುಲಾಸೆಯಾದ ನೂರ್‌ ಶ್ರೀಧರ್‌ರವರ ಮನದಾಳದ ಮಾತುಗಳು

ಸುಳ್ಳು ಕೇಸುಗಳಿಂದ ಸಂಪೂರ್ಣ ಖುಲಾಸೆಯಾದ ನೂರ್‌ ಶ್ರೀಧರ್‌ರವರ ಮನದಾಳದ ಮಾತುಗಳು

- Advertisement -
- Advertisement -

ಇಲ್ಲಿಗೆ ನಾನು ಹಳೆಯ ಅಜ್ಞಾತದಿಂದ ಹೊರಬಂದು ಹೆಚ್ಚು ಕಡಿಮೆ ಐದು ವರ್ಷಗಳಾಗುತ್ತಿವೆ . 2014ರ ಡಿಸೆಂಬರ್‌ನಲ್ಲಿ ಹೊರಗೆ ಬಂದೆ. ಮುಖ್ಯವಾಗಿ ನಾವು ಮುಖ್ಯವಾಹಿನಿಗೆ ಬರಲು ಪ್ರಮುಖವಾಗಿ ಸರ್ಕಾರ ಮತ್ತು ನಮ್ಮ ಮಧ್ಯೆ ಇದ್ದು ಕೆಲಸ ಮಾಡಿದ ಸ್ವತಂತ್ರ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ಹಿರಿಯರಾದ ನಮ್ಮ ನಡುವೆ ಈಗ ಇಲ್ಲದ ಪತ್ರಕರ್ತೆ ಗೌರಿ ಲಂಕೇಶ್, ಎ.ಕೆ.ಸುಬ್ಬಯ್ಯನವರು ಕಾರಣವಾಗಿದ್ದಾರೆ.

ಇವರು ನಾವು ಮುಖ್ಯವಾಹಿನಿಗೆ ಬರಲು ಮುಖ್ಯಮಂತ್ರಿ ಮತ್ತು ಮಂತ್ರಿಗಳ ಸಭೆಯಲ್ಲಿ ಬಹಳ ಸಮರ್ಥವಾಗಿ ನಮ್ಮ ಮೇಲೆ ಹಾಕಿದ ಕೇಸುಗಳು ಸುಳ್ಳು ಕೇಸುಗಳು ಎಂದು ವಾದಿಸಿದ್ದರು. ನಮ್ಮ ಮೇಲೆ ಹಾಕಿರುವಂತಹ ಕೇಸುಗಳು 2006ರ ನಂತರದ್ದಾಗಿದೆ. ಆದರೆ ಅಷ್ಟೋತ್ತಿಗಾಗಲೆ ನಾವು ಸಂಘಟನೆ ತೊರೆದಿದ್ದೆವು. ನಾವು ಇದ್ದ ಪಕ್ಷವು ಸಹ ನಾವು ಪಕ್ಷ ಬಿಟ್ಟು ಬಂದ ಬಗ್ಗೆ ಅಧಿಕೃತ ಹೇಳಿಕೆ ಪ್ರಕಟಿಸಿತ್ತು. ಆದರೆ ಪೋಲಿಸರು ಮಾತ್ರ ಬೇರೆ ಬೇರೆ ಕೇಸುಗಳಲ್ಲಿ ನಮ್ಮ ಹೆಸರನ್ನು ಸುಮ್ಮನೆ ಸೇರಿಸಿತ್ತು.

ಸಾಕೇತ್ ರಾಜನ್ ಹತ್ಯೆಯಾದ ನಂತರ ರಾಜ್ಯ ಸಮಿತಿಯ ನಾಯಕತ್ವವನ್ನು ನಾನು ವಹಿಸಬೇಕೆಂಬ ಮಾತು ಬಂದಾಗ ನಾನು ಈ ಹೋರಾಟದಲ್ಲಿ ಭಿನ್ನಾಭಿಪ್ರಾಯವಿದ್ದುದರಿಂದ ಅದಕ್ಕೆ ಒಪ್ಪಲಿಲ್ಲ. ಇದು ಹೇಗೋ ಮಾಹಿತಿ ಮಾಧ್ಯಮಗಳವರೆಗೂ ಬಂದು ಆಗಲೇ ನೂರ್ ಶ್ರೀಧರ್ ಎಂಬ ವ್ಯಕ್ತಿ ಇದಾನೆ ಅನ್ನುವುದು ಗೊತ್ತಾಗಿದ್ದು. ಅಲ್ಲಿಯವರೆಗೂ ಪೋಲಿಸರಿಗೂ ಸಹ ಈ ವಿಷಯ ಗೊತ್ತಿರಲಿಲ್ಲ. ನಾನು ಪಕ್ಷ ಬಿಟ್ಟರೂ ಕೂಡ ಹೇಗೆ ನನ್ನ ಸುಳ್ಳು ಕೇಸ್‍ಗಳು ದಾಖಲಾಗುತ್ತವೆ ಎನ್ನುವುದನ್ನು ಈ ಪ್ರಕರಣ ಸೂಚಿಸುತ್ತದೆ.

ಒಬ್ಬ ಯಾವುದೋ ಪ್ರಕರಣದಲ್ಲಿ ಕಾಣಿಸಿಕೊಂಡರೆ ಸಾಕು ಏನಾದರೂ ಘಟನೆ ನಡೆದಾಗ ಮನಸೋ ಇಚ್ಚೆ ಪೋಲಿಸರು ಇಂತಹ ಕೇಸುಗಳಲ್ಲಿ ಅನುಮಾನ ಬಂದವರನ್ನೆಲ್ಲ ಸೇರಿಸುತ್ತಾ ಹೋಗುತ್ತಾರೆ. ಈ ಮಾದರಿ ಬದಲಾಗಬೇಕಿದೆ. ನಮ್ಮ ಸ್ನೇಹಿತ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಕೇಸು ಕೂಡ ಹಾಗೆ ಆಗಿದೆ.

ನರಸಿಂಹ ಮೂರ್ತಿಯವರು ಎಲ್ಲಾ ಸಂಘಟನೆಗಳ ಹೋರಾಟಗಳಿಗೂ ಬೆಂಬಲಿಸುತ್ತಿದ್ದರು. ಆದರೆ ಅವರಿಗೂ ನಕ್ಸಲ್ ಹೋರಾಟಕ್ಕೂ ನಂಟೇ ಇರಲಿಲ್ಲ. ಆದರೆ ನರಸಿಂಹ ಮೂರ್ತಿಯವರನ್ನು ಈಗ ಈ ರೀತಿ ಅನುಮಾನಿಸಲಾಗುತಿದೆ. ನರಸಿಂಹಮೂರ್ತಿಯವರು ಎಲ್ಲರ ಕಣ್ಣಮುಂದೆಯೇ ದೊಡ್ಡ ಹೋರಾಟಗಳಲ್ಲಿ ಭಾಗವಹಿಸುತ್ತಿದ್ದರು. ಆದರೂ ಅವರನ್ನು ತಲೆಮರೆಸಿಕೊಂಡಿದ್ದವರು ಎಂದು ಪೋಲಿಸರು ಅರೆಸ್ಟ್ ಮಾಡಿದ್ದಾರೆ. ಇದೆಲ್ಲ ಸರ್ಕಾರ ನಡೆದುಕೊಳ್ಳುತ್ತಿರುವ ತಪ್ಪು ಮಾದರಿಯಾಗಿದೆ.

ನರಸಿಂಹ ಮೂರ್ತಿಯವರಿಗೆ ಒಂದು ಕುಟುಂಬವಿದೆ. ಆತನ ವ್ಯಾಪಾರ ವಹಿವಾಟು ಆರ್ಥಿಕ ಬಿಕ್ಕಟ್ಟನ್ನ ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರದಿಂದ ಈ ರೀತಿ ಮಾಡುವುದು ಬರಿ ತಪ್ಪಲ್ಲ ದೊಡ್ಡ ಅಫರಾದವಾಗಿದೆ. ಇದ್ಕಕ್ಕೆ ಕರ್ನಾಟಕದ ನೆಲದಲ್ಲಿ ಬರುತ್ತಿರುವ ಪ್ರತಿರೋಧ, ಹೋರಾಟ ಎಲ್ಲಾ ಪ್ರಜಾತಾಂತ್ರಿಕ ದನಿಗಳು ನರಸಿಂಹಮೂರ್ತಿಯವರ ಜೊತೆ ನಿಂತುಕೊಂಡಿವೆ. ಈ ದನಿಯೇ ನಾವು ಮುಖ್ಯವಾಹಿನಿಗೆ ಬರಲು ಕೂಡ ಕಾರಣವಾದದ್ದು.

ಪ್ರಜಾತಾಂತ್ರಿಕ ಅವಕಾಶಗಳನ್ನ ಉಳಿಸಿಕೊಳ್ಳಲಿಕ್ಕೆ ಸುಧೀರ್ಘವಾದ ಸಂಘರ್ಷ ಮಾಡಲು ನಾವು ಸಿದ್ದರಿದ್ದೇವೆ. ನನ್ನ ಮೇಲೂ ಕೂಡ ಮುಂದೆ ಸುಳ್ಳು ಕೇಸುಗಳು ಮತ್ತೆ ಬೀಳಬಹುದು. ಅದರ ಬಗ್ಗೆ ನನಗೆ ಅನುಮಾನವೇ ಇಲ್ಲ. ಆದರೆ ಪ್ರಜಾತಾಂತ್ರಿಕ ದನಿ ಕರ್ನಾಟಕದಲ್ಲಿದೆ ಇದೇ ಹಾದಿಯೇಲ್ಲಿ ದಿಟ್ಟವಾದ ಹೋರಾಟವನ್ನು ಮುಂದುವರೆಸಬೇಕು ಅಂದುಕೊಂಡಿದ್ದೇನೆ.

ಸಾಕಷ್ಟು ಜನಕ್ಕೆ ಈ ಸಂಧರ್ಭದಲ್ಲಿ ಕೃತಜ್ಞತೆ ಹೇಳಬೇಕು, ಪಟ್ಟಿ ದೊಡ್ಡದಿದೆ. ಜಿ,ರಾಜಶೇಖರ್ ಅಂತಹವರು ಸಹ ನನ್ನ ಬೆಂಬಲಕ್ಕೆ ನಿಂತು ಪ್ರತಿ ಕೇಸಿದ್ದಾಗಲೂ ನಮ್ಮ ಜೊತೆ ಆರೋಪಿಯ ರೀತಿ ಬಂದು ಕೋರ್ಟ್‍ಲ್ಲಿ ನಿಂತಿದ್ದಾರೆ, ನನ್ನ ಕೇಸಿಗೆ ಬೇಲ್‌ ಕೊಟ್ಟಿದ್ದಾರೆ. ತುಂಬಾ ಜನ ನಮ್ಮ ಜೊತೆಗೆ ನಿಂತಿದ್ದಾರೆ ಈ ಎಲ್ಲರಿಗೂ ನನ್ನ ಮನದಾಳದ ಧನ್ಯವಾದಗಳು ಮತ್ತು ಒಂದು ದೊಡ್ಡ ಸಲಾಂ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...